"ಮೂರು ಪ್ರಮುಖ ಬಂದರುಗಳು ಮತ್ತು ಹದಿನೇಳು ಪ್ರಮುಖವಲ್ಲದ ಬಂದರುಗಳೊಂದಿಗೆ, ತಮಿಳುನಾಡು ಸಾಗರ ವ್ಯಾಪಾರಕ್ಕೆ ಪ್ರಮುಖ ಕೇಂದ್ರವಾಗಿದೆ"
"ಭಾರತವು ಸುಸ್ಥಿರ ಮತ್ತು ಮುಂದಾಲೋಚನೆಯ ಅಭಿವೃದ್ಧಿ ಹಾದಿಯನ್ನು ಜಗತ್ತಿಗೆ ತೋರಿಸುತ್ತಿದೆ"
"ಅಭಿವೃದ್ಧಿ ಪಯಣದಲ್ಲಿ ನಾವೀನ್ಯತೆ ಮತ್ತು ಸಹಯೋಗವು ಭಾರತದ ಅತಿದೊಡ್ಡ ಶಕ್ತಿಯಾಗಿದೆ"
"ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವು ಪ್ರಮುಖ ಪಾಲುದಾರನಾಗುತ್ತಿದೆ ಮತ್ತು ಈ ಬೆಳೆಯುತ್ತಿರುವ ಸಾಮರ್ಥ್ಯವು ನಮ್ಮ ಆರ್ಥಿಕ ಬೆಳವಣಿಗೆಗೆ ಬುನಾದಿಯಾಗಿದೆ"

ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ಸರ್ಬಾನಂದ ಸೋನೋವಾಲ್ ಜೀ, ಶಾಂತನು ಠಾಕೂರ್ ಜೀ, ತೂತ್ತುಕೋಡಿ ಬಂದರಿನ ಅಧಿಕಾರಿಗಳು ಮತ್ತು ಉದ್ಯೋಗಿಗಳು, ಇತರ ಗೌರವಾನ್ವಿತ ಅತಿಥಿಗಳು ,  ಸಹೋದರರು ಮತ್ತು ಸಹೋದರಿಯರೇ,

ಇಂದು ‘ವಿಕಸಿತ ಭಾರತ’ದ ಪ್ರಯಾಣದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಈ ಹೊಸ ತುಟ್ಟಿಕೋರಿನ್ ಅಂತರಾಷ್ಟ್ರೀಯ ಕಂಟೇನರ್ ಟರ್ಮಿನಲ್ ಭಾರತದ ಸಮುದ್ರ  ಮೂಲಸೌಕರ್ಯದ ಹೊಸ ನಕ್ಷತ್ರವಾಗಿದೆ. ಈ ಟರ್ಮಿನಲ್ ವಿ.ಓ.ಚಿದಂಬರನಾರ್ ಬಂದರಿನ ಸಾಮರ್ಥ್ಯವನ್ನು ವಿಸ್ತರಿಸುತ್ತದೆ. ಹದಿನಾಲ್ಕು ಮೀಟರ್ ಗಿಂತ ಹೆಚ್ಚಿನ ಆಳ ಮತ್ತು 300 ಮೀಟರ್ ಗಿಂತ ಉದ್ದವಾದ ಬರ್ತ್ನೊಂದಿಗೆ, ಈ ಹೊಸ ಟರ್ಮಿನಲ್ ಈ ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ವಿ.ಓ.ಸಿ. ಬಂದರಿನಲ್ಲಿ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಭಾರತದ ವಿದೇಶಿ ವಿನಿಮಯವನ್ನು ಉಳಿಸುತ್ತದೆ. ನಿಮಗೆಲ್ಲರಿಗೂ ಮತ್ತು ತಮಿಳುನಾಡಿನ ಜನರಿಗೆ ನನ್ನ  ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

 

ಎರಡು ವರ್ಷಗಳ ಹಿಂದೆ ವಿ.ಓ.ಸಿ. ಬಂದರಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತ್ತು. ಆ ಸಮಯದಲ್ಲಿ ಈ ಬಂದರಿನ ಸರಕು ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಹಲವು ಕಾಮಗಾರಿಗಳನ್ನು ಆರಂಭಿಸಲಾಗಿತ್ತು. ಈ ಫೆಬ್ರವರಿಯಲ್ಲಿ ಟುಟಿಕೋರಿನ್  ಗೆ ಭೇಟಿ ನೀಡಿದಾಗ, ಇನ್ನೂ ಹಲವು ಬಂದರು ಸಂಬಂಧಿತ ಕೆಲಸಗಳೂ ಪ್ರಾರಂಭವಾಗಿದ್ದವು. ಈ ಕೆಲಸಗಳು ಇಂದು ವೇಗವಾಗಿ ನಡೆಯುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ.  ಈ ಹೊಸ ಟರ್ಮಿನಲ್ ನಲ್ಲಿ 40% ಉದ್ಯೋಗಿಗಳು ಮಹಿಳೆಯರಾಗಿರುವುದು ನನಗೆ ಸಂತೋಷವಾಗಿದೆ. ಇದರರ್ಥ ಈ ಟರ್ಮಿನಲ್ ಸಮುದ್ರ ವಲಯದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಯ ಸಂಕೇತವಾಗಿದೆ.

 

ಸ್ನೇಹಿತರೇ,

ತಮಿಳುನಾಡಿನ ಕರಾವಳಿಗಳು ದೇಶದ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇಲ್ಲಿನ ಬಂದರು ಮೂಲಸೌಕರ್ಯವು ಮೂರು ಪ್ರಮುಖ ಬಂದರುಗಳು ಮತ್ತು ಹದಿನೇಳು ಪ್ರಮುಖವಲ್ಲದ ಬಂದರುಗಳನ್ನು ಒಳಗೊಂಡಿದೆ. ಈ ಸಾಮರ್ಥ್ಯದಿಂದಾಗಿ ತಮಿಳುನಾಡು ಈಗ ಕಡಲ ವ್ಯಾಪಾರ ಜಾಲದ ಮಹತ್ವದ ಕೇಂದ್ರವಾಗಿದೆ. ಬಂದರು-ನೇತೃತ್ವದ ಅಭಿವೃದ್ಧಿಯ  ಧ್ಯೇಯವನ್ನು ಮತ್ತಷ್ಟು ವೇಗಗೊಳಿಸಲು, ನಾವು ಹೊರ ಬಂದರಿನ ಕಂಟೈನರ್ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಇದರಲ್ಲಿ ಏಳು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಲಾಗುತ್ತಿದೆ. ನಾವು V.O.C ಯ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದೇವೆ. ಬಂದರು, ಅಂದರೆ V.O.C. ದೇಶದ ಕಡಲ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಬರೆಯಲು ಬಂದರು ಸಿದ್ಧವಾಗಿದೆ.

ಸ್ನೇಹಿತರೇ,

ಭಾರತದ ಸಮುದ್ರ ಮಿಷನ್ ಇಂದು ಕೇವಲ ಮೂಲಸೌಕರ್ಯ ಅಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ಭಾರತವು ಈಗ ಸುಸ್ಥಿರ ಮತ್ತು ಮುಂದಾಲೋಚನೆಯ ಅಭಿವೃದ್ಧಿಯ ಮಾರ್ಗವನ್ನು ಜಗತ್ತಿಗೆ ತೋರಿಸುತ್ತಿದೆ ಮತ್ತು ಇದು ನಮ್ಮ V.O.C ನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಬಂದರು ಹಸಿರು ಹೈಡ್ರೋಜನ್ ಹಬ್ ಮತ್ತು ಕಡಲಾಚೆಯ ಗಾಳಿಗಾಗಿ ನೋಡಲ್ ಬಂದರು ಎಂದು ಗುರುತಿಸಲ್ಪಟ್ಟಿದೆ. ಪ್ರಪಂಚವು ಪ್ರಸ್ತುತ ಎದುರಿಸುತ್ತಿರುವ ಹವಾಮಾನ  ಬದಲಾವಣೆಯ ಸವಾಲುಗಳನ್ನು  ಎದುರಿಸುವಲ್ಲಿ ನಮ್ಮ ಕಾರ್ಯಕ್ರಮಗಳು  ಹೆಚ್ಚು ಪರಿಣಾಮಕಾರಿಯಾಗಿವೆ ಎಂಬುದನ್ನು ಇದು ಸಾಬೀತುಪಡಿಸುತ್ತದೆ .

 

ಸ್ನೇಹಿತರೇ,

ಭಾರತದ ಅಭಿವೃದ್ಧಿ ಪಯಣದಲ್ಲಿ ಹೊಸತನ ಮತ್ತು ಕೊಲಬ್ರೇಷನ್ ನಮ್ಮ ದೊಡ್ಡ ಶಕ್ತಿಯಾಗಿದೆ. ಇಂದು ಉದ್ಘಾಟನೆಗೊಂಡಿರುವ ಹೊಸ ಟರ್ಮಿನಲ್ ಕೂಡ ಈ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.. ಸಾಮೂಹಿಕ ಪ್ರಯತ್ನಗಳ ಮೂಲಕ ಉತ್ತಮ ಸಂಪರ್ಕ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ಇಂದು, ರಸ್ತೆ, ಹೆದ್ದಾರಿಗಳು, ಜಲಮಾರ್ಗಗಳು ಮತ್ತು ವಾಯುಮಾರ್ಗಗಳ ವಿಸ್ತರಣೆಯಿಂದಾಗಿ ದೇಶದ ಮೂಲೆ ಮೂಲೆಗಳಲ್ಲಿ ಸಂಪರ್ಕವು ಹೆಚ್ಚಾಗಿದೆ. ಇದರೊಂದಿಗೆ ಜಾಗತಿಕ ವ್ಯಾಪಾರದಲ್ಲಿ ಭಾರತ ತನ್ನ ಸ್ಥಾನವನ್ನು ಹೆಚ್ಚು ಬಲಪಡಿಸಿಕೊಂಡಿದೆ. ಇಂದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವೂ ಪ್ರಮುಖ ಪಾಲುದಾರನಾಗುತ್ತಿದೆ. ಭಾರತದ ಈ ಬೆಳೆಯುತ್ತಿರುವ ಸಾಮರ್ಥ್ಯವೇ ನಮ್ಮ ಆರ್ಥಿಕ ಬೆಳವಣಿಗೆಯ ಅಡಿಪಾಯ.. ಈ ಸಾಮರ್ಥ್ಯವು ಭಾರತವನ್ನು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುತ್ತದೆ. ತಮಿಳುನಾಡು ಭಾರತದ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸುತ್ತಿರುವುದಕ್ಕೆ  ನನಗೆ ಸಂತೋಷವಾಗಿದೆ.  VOC ಪೋರ್ಟ್ ನ ಹೊಸ  ಟರ್ಮಿನಲ್ನಲ್ಲಿ ನಿಮ್ಮೆಲ್ಲರಿಗೂ ಮತ್ತೊಮ್ಮೆ ಅಭಿನಂದನೆಗಳು. ಧನ್ಯವಾದಗಳು. 

 

ವನಕ್ಕಮ್.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.