"ಭಾರತವನ್ನು ಅಭಿವೃದ್ಧಿ ಮಾಡಲು, ಅದರ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವುದು ಅಷ್ಟೇ ಮುಖ್ಯ"
"ಕಳೆದ ಎಂಟು ವರ್ಷಗಳಲ್ಲಿ ದೇಶದ ಪ್ರಮುಖ ಆದ್ಯತೆಗಳಲ್ಲಿ ಸಮಗ್ರ ಆರೋಗ್ಯ ರಕ್ಷಣೆಯನ್ನು ಸೇರಿಸಲಾಗಿದೆ"
"ಕಳೆದ 8 ವರ್ಷಗಳಲ್ಲಿ, ದೇಶದಲ್ಲಿ 200 ಕ್ಕೂ ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ"
"ಪ್ರಗತಿಶೀಲ ಸಮಾಜವಾಗಿ, ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ಆಲೋಚನೆಯಲ್ಲಿ ಬದಲಾವಣೆ ಮತ್ತು ಮುಕ್ತತೆಯನ್ನು ತರುವುದು ಸಹ ನಮ್ಮ ಜವಾಬ್ದಾರಿಯಾಗಿದೆ"
"ಮೇಡ್ ಇನ್ ಇಂಡಿಯಾ 5 ಜಿ ಸೇವೆಗಳು ದೂರ ಪ್ರದೇಶದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಲಿವೆ"

ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿ ಲಾಲ್ ಪುರೋಹಿತ್ ಜೀ, ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮನೀಶ್ ತಿವಾರಿ ಜೀ, ಎಲ್ಲಾ ವೈದ್ಯರು, ಸಂಶೋಧಕರು, ಅರೆವೈದ್ಯಕೀಯ ಸಿಬ್ಬಂದಿ, ಇತರ ಉದ್ಯೋಗಿಗಳು ಮತ್ತು ಪಂಜಾಬ್ ನ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಪ್ರೀತಿಯ ಸಹೋದರಿಯರು ಮತ್ತು ಸಹೋದರರೇ!

ದೇಶವು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಹೊಸ ನಿರ್ಣಯಗಳನ್ನು ಕೈಗೊಂಡು ಸಾಧಿಸುವತ್ತ ಸಾಗುತ್ತಿದೆ. ಇಂದಿನ ಕಾರ್ಯಕ್ರಮವು ದೇಶದ ಆರೋಗ್ಯ ಸೇವೆಗಳ ಸುಧಾರಣೆಯ ಪ್ರತಿಬಿಂಬವಾಗಿದೆ. ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದ ಜನರಿಗೆ ಪ್ರಯೋಜನಕಾರಿಯಾಗಲಿದೆ. ಇಂದು ನಾನು ಮತ್ತೊಂದು ಕಾರಣಕ್ಕಾಗಿ ಈ ಭೂಮಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಪಂಜಾಬ್ ಸ್ವಾತಂತ್ರ್ಯ ಹೋರಾಟಗಾರರ, ಕ್ರಾಂತಿಕಾರಿಗಳ ಮತ್ತು ದೇಶಭಕ್ತಿಯ ಪವಿತ್ರ ಭೂಮಿಯಾಗಿದೆ. 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿಯೂ ಪಂಜಾಬ್ ಈ ಸಂಪ್ರದಾಯವನ್ನು ಬಹಳ ಉಲ್ಲಾಸದಿಂದ ಉಳಿಸಿಕೊಂಡು ಪಾಲಿಸಿದೆ. ಇಂದು, 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ನಾನು ಪಂಜಾಬ್ ಜನತೆಗೆ, ವಿಶೇಷವಾಗಿ ಪಂಜಾಬಿನ ಯುವಜನತೆಗೆ  ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಸ್ನೇಹಿತರೇ,

ಕೆಲವು ದಿನಗಳ ಹಿಂದೆ, ನಾವೆಲ್ಲರೂ ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಕೆಂಪು ಕೋಟೆಯಿಂದ ಪ್ರತಿಜ್ಞೆ ತೆಗೆದುಕೊಂಡಿದ್ದೇವೆ. ಭಾರತವನ್ನು ಅಭಿವೃದ್ಧಿಗೊಳಿಸಲು, ಅದರ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವುದು ಅಷ್ಟೇ ಮುಖ್ಯವಾಗಿದೆ. ಭಾರತದ ಜನರು ಚಿಕಿತ್ಸೆಗಾಗಿ ಆಧುನಿಕ ಆಸ್ಪತ್ರೆಗಳು ಮತ್ತು ಸೌಲಭ್ಯಗಳನ್ನು ಪಡೆದಾಗ, ಅವರು ಬೇಗನೆ ಗುಣಮುಖರಾಗುತ್ತಾರೆ, ಅವರ ಶಕ್ತಿ ಸರಿಯಾದ ದಿಕ್ಕಿನಲ್ಲಿ ವ್ಯಯವಾಗುತ್ತದೆ ಮತ್ತು ಅವರ ಉತ್ಪಾದಕತೆ ಹೆಚ್ಚುತ್ತದೆ. ಇಂದು ದೇಶವು ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೂಪದಲ್ಲಿ ಆಧುನಿಕ ಆಸ್ಪತ್ರೆಯನ್ನು ಪಡೆದಿದೆ. ಈ ಆಧುನಿಕ ಸೌಲಭ್ಯವನ್ನು ಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರದ ಟಾಟಾ ಮೆಮೋರಿಯಲ್ ಸೆಂಟರ್ ಪ್ರಮುಖ ಪಾತ್ರ ವಹಿಸಿದೆ. ಈ ಕೇಂದ್ರವು ದೇಶ ಮತ್ತು ವಿದೇಶಗಳಲ್ಲಿ ತನ್ನ ಸೇವೆಗಳನ್ನು ಒದಗಿಸುವ ಮೂಲಕ ಕ್ಯಾನ್ಸರ್ ರೋಗಿಗಳ ಜೀವವನ್ನು ಉಳಿಸುತ್ತಿದೆ. ದೇಶದಲ್ಲಿ ಆಧುನಿಕ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಸೃಷ್ಟಿಸುವಲ್ಲಿ ಭಾರತ ಸರ್ಕಾರವು ಪ್ರಮುಖ ಪಾತ್ರ ವಹಿಸುತ್ತಿದೆ. ಟಾಟಾ ಮೆಮೋರಿಯಲ್ ಸೆಂಟರ್ ಈಗ ಪ್ರತಿ ವರ್ಷ 1.5 ಲಕ್ಷ ಹೊಸ ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯವನ್ನು ಹೊಂದಿದೆ ಎಂದು ನನಗೆ ತಿಳಿಸಲಾಗಿದೆ. ಇದು ಕ್ಯಾನ್ಸರ್ ರೋಗಿಗಳಿಗೆ ಬಹಳ ದೊಡ್ಡ ಸಮಾಧಾನ ತರುವ ಸಂಗತಿಯಾಗಿದೆ. ಹಿಮಾಚಲದ ದೂರದ ಪ್ರದೇಶಗಳಿಂದ ಜನರು ಕ್ಯಾನ್ಸರ್ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳ ಚಿಕಿತ್ಸೆಗಾಗಿ ಚಂಡೀಗಢದ ಪಿಜಿಐಗೆ ಬರುತ್ತಿದ್ದರು ಎಂಬುದು ನನಗೆ ನೆನಪಿನಲ್ಲಿದೆ. ಪಿಜಿಐನಲ್ಲಿ ಭಾರಿ ಜನಸಂದಣಿಯಿಂದಾಗಿ, ರೋಗಿ ಮತ್ತು ಅವರ ಕುಟುಂಬ ಸದಸ್ಯರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿತ್ತು. ಈಗ ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಏಮ್ಸ್  (ಎ.ಐ.ಐ.ಎಂ.ಎಸ್.) ನ್ನು ಸ್ಥಾಪಿಸಲಾಗಿದೆ ಮತ್ತು ಕ್ಯಾನ್ಸರ್ ಚಿಕಿತ್ಸೆಗಾಗಿ ಇಷ್ಟು ದೊಡ್ಡ ಸೌಲಭ್ಯವನ್ನು ನಿರ್ಮಾಣ ಮಾಡಲಾಗಿದೆ. ಬಿಲಾಸ್ಪುರವನ್ನು ಹತ್ತಿರ ಎಂದು ಭಾವಿಸುವವರು  ಅಲ್ಲಿಗೆ ಹೋಗುತ್ತಾರೆ ಮತ್ತು ಮೊಹಾಲಿಗೆ ಹತ್ತಿರದಲ್ಲಿರುವವರು ಇಲ್ಲಿಗೆ ಬರುತ್ತಾರೆ.

ಸ್ನೇಹಿತರೇ,

ಕಡುಬಡವರನ್ನು ನೋಡಿಕೊಳ್ಳುವ ಇಂತಹ ಆರೋಗ್ಯ ರಕ್ಷಣೆಯ ವ್ಯವಸ್ಥೆಯನ್ನು ದೇಶವು ಬಹಳ ಹಿಂದಿನಿಂದಲೂ ಬಯಸುತ್ತಿತ್ತು. ಬಡವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ, ರೋಗಗಳಿಂದ ಬಡವರನ್ನು ರಕ್ಷಿಸುವ ಮತ್ತು ಅವರು ಅನಾರೋಗ್ಯಕ್ಕೆ ಒಳಗಾದರೆ ಅವರಿಗೆ ಅತ್ಯುತ್ತಮ ಚಿಕಿತ್ಸೆಯನ್ನು ಒದಗಿಸುವ ಆರೋಗ್ಯ ವ್ಯವಸ್ಥೆ ಅವಶ್ಯವಿತ್ತು. ಉತ್ತಮ ಆರೋಗ್ಯ ವ್ಯವಸ್ಥೆ ಎಂದರೆ ಕೇವಲ ನಾಲ್ಕು ಗೋಡೆಗಳನ್ನು ನಿರ್ಮಿಸುವುದು ಎಂದರ್ಥವಲ್ಲ. ಯಾವುದೇ ದೇಶದ ಆರೋಗ್ಯ ವ್ಯವಸ್ಥೆಯು ಎಲ್ಲಾ ರೀತಿಯಲ್ಲೂ ಪರಿಹಾರಗಳನ್ನು ಒದಗಿಸಿದಾಗ ಮತ್ತು ಹಂತ ಹಂತವಾಗಿ ಅದನ್ನು ಬೆಂಬಲಿಸಿದಾಗ ಮಾತ್ರ ಅದು ಬಲಗೊಳ್ಳುತ್ತದೆ. ಆದ್ದರಿಂದ, ಕಳೆದ ಎಂಟು ವರ್ಷಗಳಲ್ಲಿ ಸಮಗ್ರ ಆರೋಗ್ಯ ರಕ್ಷಣೆಯನ್ನು ದೇಶದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿಸಲಾಗಿದೆ. ಕಳೆದ 7-8 ವರ್ಷಗಳಲ್ಲಿ ಭಾರತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ  ಕೆಲಸದ ಪ್ರಮಾಣವು ಕಳೆದ 70 ವರ್ಷಗಳಲ್ಲಿ ನಡೆದಿಲ್ಲ. ಇಂದು, ಕಡುಬಡವರ ಆರೋಗ್ಯಕ್ಕಾಗಿ ಒಂದಲ್ಲ, ಎರಡಲ್ಲ, ಆರು ರಂಗಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶದ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲಾಗುತ್ತಿದೆ ಮತ್ತು ಬಲಪಡಿಸಲಾಗುತ್ತಿದೆ. ರೋಗವನ್ನು ಪ್ರತಿಬಂಧಿಸುವ, ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ಉತ್ತೇಜಿಸುವುದು ಮೊದಲ ರಂಗವಾದರೆ. ಹಳ್ಳಿಗಳಲ್ಲಿ ಸಣ್ಣ ಮತ್ತು ಆಧುನಿಕ ಆಸ್ಪತ್ರೆಗಳನ್ನು ತೆರೆಯುವುದು ಎರಡನೇ ಕೋನವಾಗಿದೆ. ನಗರಗಳಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವೈದ್ಯಕೀಯ ಸಂಶೋಧನೆಯ ದೊಡ್ಡ ಸಂಸ್ಥೆಗಳನ್ನು ತೆರೆಯುವುದು. ದೇಶಾದ್ಯಂತ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಮೂರನೆಯ ಮತ್ತು ನಾಲ್ಕನೇ ರಂಗವಾಗಿದೆ. ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ಮತ್ತು ಸಲಕರಣೆಗಳನ್ನು ಒದಗಿಸುವುದು ಐದನೇ ರಂಗವಾಗಿದೆ. ಮತ್ತು ತಂತ್ರಜ್ಞಾನವನ್ನು ಬಳಸುವ ಮೂಲಕ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸುಧಾರಿಸುವುದು ಆರನೇ ಹಂತವಾಗಿದೆ. ಕೇಂದ್ರ ಸರ್ಕಾರವು ಇಂದು ಈ ಆರು ರಂಗಗಳಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡುವ ಮೂಲಕ ದಾಖಲೆಯ ಹೂಡಿಕೆ ಮಾಡುತ್ತಿದೆ.

ಸ್ನೇಹಿತರೇ,

ರೋಗ ಬಾರದಂತೆ  ತಡೆಗಟ್ಟುವುದು ಅತ್ಯುತ್ತಮ ಚಿಕಿತ್ಸೆ ಎಂದು ನಮಗೆ ಯಾವಾಗಲೂ ಹೇಳಲಾಗುತ್ತದೆ. ಈ ಆಲೋಚನೆಯೊಂದಿಗೆ, ದೇಶದಲ್ಲಿ ರೋಗ ಬಾರದಂತೆ ತಡೆಗಟ್ಟುವಂತಹ  ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಜಲ ಜೀವನ್ ಮಿಷನ್ ನಿಂದಾಗಿ ನೀರಿನಿಂದ ಹರಡುವ ರೋಗಗಳಲ್ಲಿ ಭಾರಿ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿತ್ತು. ಅಂದರೆ, ನಾವು ರೋಗ ಬಾರದಂತೆ ನೋಡಿಕೊಂಡಾಗ ಮತ್ತು ಆ ನಿಟ್ಟಿನಲ್ಲಿ ಕೆಲಸ ಮಾಡಿದಾಗ, ರೋಗಗಳು ಕಡಿಮೆಯಾಗುತ್ತವೆ. ಹಿಂದಿನ ಸರ್ಕಾರಗಳು ಈ ವಿಧಾನದಲ್ಲಿ, ಧೋರಣೆಯಲ್ಲಿ  ಕೆಲಸ ಮಾಡಲಿಲ್ಲ. ಆದರೆ ಇಂದು ನಮ್ಮ ಸರ್ಕಾರವು ಅನೇಕ ಅಭಿಯಾನಗಳನ್ನು ನಡೆಸುವ ಮೂಲಕ ಮತ್ತು ಜನತೆಯಲ್ಲಿ ಜನಜಾಗೃತಿಯನ್ನು ಮೂಡಿಸುವ ಮೂಲಕ ಮತ್ತು ಅನಾರೋಗ್ಯಕ್ಕೆ ಒಳಗಾಗದಂತೆ ಅವರನ್ನು ರಕ್ಷಿಸುವ ಮೂಲಕ ಜನರಿಗೆ ತಿಳುವಳಿಕೆ  ನೀಡುತ್ತಿದೆ. ಯೋಗ ಮತ್ತು ಆಯುಷ್ ಬಗ್ಗೆ ದೇಶದಲ್ಲಿ ಅಭೂತಪೂರ್ವ ಜಾಗೃತಿ ಮೂಡಿದೆ. ವಿಶ್ವದಲ್ಲಿ ಯೋಗದ ಆಕರ್ಷಣೆ ಹೆಚ್ಚಾಗಿದೆ. ಫಿಟ್ ಇಂಡಿಯಾ ಅಭಿಯಾನವು ದೇಶದ ಯುವಜನರಲ್ಲಿ ಜನಪ್ರಿಯವಾಗುತ್ತಿದೆ. ಸ್ವಚ್ಛ ಭಾರತ ಅಭಿಯಾನವು ಅನೇಕ ರೋಗಗಳನ್ನು ತಡೆಗಟ್ಟುವಲ್ಲಿ ಸಹಾಯ ಮಾಡಿದೆ. ಪೋಷಣ್ ಅಭಿಯಾನ್ ಮತ್ತು ಜಲ ಜೀವನ್ ಮಿಷನ್ ಅಪೌಷ್ಟಿಕತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತಿವೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಅಡುಗೆ ಅನಿಲ ಸಂಪರ್ಕವನ್ನು ಒದಗಿಸುವ ಮೂಲಕ, ನಾವು ಅವರನ್ನು ಹೊಗೆಯಿಂದ ಹರಡುವ ರೋಗಗಳು ಮತ್ತು ಕ್ಯಾನ್ಸರ್ ನಂತಹ ಅಪಾಯಗಳಿಂದ ರಕ್ಷಿಸಿದ್ದೇವೆ.

ಸ್ನೇಹಿತರೇ,

ನಮ್ಮ ಹಳ್ಳಿಗಳಲ್ಲಿ ಪರೀಕ್ಷೆಗೆ ಉತ್ತಮ ಆಸ್ಪತ್ರೆಗಳು ಮತ್ತು ಹೆಚ್ಚಿನ ಸೌಲಭ್ಯಗಳಿದ್ದರೆ, ಶೀಘ್ರದಲ್ಲೇ ರೋಗಗಳನ್ನು ಪತ್ತೆ ಮಾಡುವುದು ಸಾಧ್ಯವಾಗುತ್ತದೆ. ನಮ್ಮ ಸರ್ಕಾರವು ಈ ಇನ್ನೊಂದು ರಂಗದಲ್ಲೂ ದೇಶಾದ್ಯಂತ ವೇಗವಾಗಿ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರವು ಹಳ್ಳಿಗಳನ್ನು ಆಧುನಿಕ ಆರೋಗ್ಯ ಸೌಲಭ್ಯಗಳೊಂದಿಗೆ ಸಂಪರ್ಕಿಸಲು 1.5 ಲಕ್ಷಕ್ಕೂ ಹೆಚ್ಚು ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ. ಸುಮಾರು 1.25 ಲಕ್ಷ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳು ಈಗಾಗಲೇ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಇದು ನನಗೆ ಸಂತೋಷದ ಸಂಗತಿಯಾಗಿದೆ. ಪಂಜಾಬ್ ನಲ್ಲಿ ಈಗಾಗಲೇ ಸುಮಾರು 3,000 ಆರೋಗ್ಯ ಮತ್ತು ಸ್ವಾಸ್ಥ್ಯ(ಯೋಗಕ್ಷೇಮ)  ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದುವರೆಗೆ, ದೇಶಾದ್ಯಂತದ ಈ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳಲ್ಲಿ ಸುಮಾರು 22 ಕೋಟಿ ಜನರನ್ನು ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿ ಪರೀಕ್ಷಿಸಲಾಗಿದೆ, ಅದರಲ್ಲಿ ಸುಮಾರು 60 ಲಕ್ಷ ತಪಾಸಣೆಗಳನ್ನು ಪಂಜಾಬಿನಲ್ಲಿಯೇ ಮಾಡಲಾಗಿದೆ. ಆರಂಭಿಕ ಹಂತಗಳಲ್ಲಿ ಕ್ಯಾನ್ಸರ್ ಪತ್ತೆಯಾದರೆ ಗಂಭೀರ ಸಮಸ್ಯೆಗಳಿಂದ ಎಲ್ಲಾ ಸ್ನೇಹಿತರನ್ನು ಉಳಿಸಲು ಸಾಧ್ಯವಾಗುತ್ತದೆ.

ಸ್ನೇಹಿತರೇ,

ಒಮ್ಮೆ ರೋಗವನ್ನು ಪತ್ತೆಹಚ್ಚಿದ ನಂತರ, ಗಂಭೀರ ಕಾಯಿಲೆಗಳಿಗೆ ಸರಿಯಾದ ಚಿಕಿತ್ಸೆ ನೀಡಬಲ್ಲ ಆಸ್ಪತ್ರೆಗಳ ಅಗತ್ಯವಿದೆ. ಈ ಚಿಂತನೆಯೊಂದಿಗೆ, ಕೇಂದ್ರ ಸರ್ಕಾರವು ದೇಶದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಆಯುಷ್ಮಾನ್ ಭಾರತ್  ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ, ಜಿಲ್ಲಾ ಮಟ್ಟದಲ್ಲಿ ಆಧುನಿಕ ಆರೋಗ್ಯ ಸೌಲಭ್ಯಗಳನ್ನು ಸೃಷ್ಟಿಸಲು 64,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಒಂದು ಸಮಯದಲ್ಲಿ, ದೇಶದಲ್ಲಿ ಕೇವಲ 7 ಏಮ್ಸ್ ಗಳು ಮಾತ್ರ ಇದ್ದವು. ಇಂದು ಈ ಸಂಖ್ಯೆಯೂ 21 ಕ್ಕೆ ಏರಿದೆ. ಏಮ್ಸ್ ಪಂಜಾಬ್ ನ ಬಟಿಂಡಾದಲ್ಲಿ ಅತ್ಯುತ್ತಮ ಸೇವೆಗಳನ್ನು ಒದಗಿಸುತ್ತಿದೆ. ನಾನು ಕ್ಯಾನ್ಸರ್ ಆಸ್ಪತ್ರೆಗಳ ಬಗ್ಗೆ ಮಾತ್ರ ಮಾತನಾಡುವುದಾದರೆ ದೇಶದ ಮೂಲೆ ಮೂಲೆಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಆಧುನಿಕ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪಂಜಾಬಿನಲ್ಲಿ ಇದು ಅಂತಹ ದೊಡ್ಡ ಕೇಂದ್ರವಾಗಿದೆ. ಹರಿಯಾಣದ ಝಜ್ಜರ್ ನಲ್ಲಿ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯನ್ನು ಸಹ ಸ್ಥಾಪಿಸಲಾಗಿದೆ. ನಾವು ಪೂರ್ವ ಭಾರತದ ಕಡೆಗೆ ಹೋದರೆ, ವಾರಣಾಸಿ ಈಗ ಕ್ಯಾನ್ಸರ್ ಚಿಕಿತ್ಸೆಯ ಕೇಂದ್ರವಾಗುತ್ತಿದೆ. ಕೋಲ್ಕತಾದ ನ್ಯಾಷನಲ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನ  ಎರಡನೇ ಕ್ಯಾಂಪಸ್  ಕೂಡಾ  ಕೆಲಸವನ್ನು ಪ್ರಾರಂಭಿಸಿದೆ. ಕೆಲವು ದಿನಗಳ ಹಿಂದೆ, ಅಸ್ಸಾಂನ ದಿಬ್ರುಗಢದಿಂದ ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳನ್ನು ಏಕಕಾಲದಲ್ಲಿ ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತ್ತು. ನಮ್ಮ ಸರ್ಕಾರವು ದೇಶಾದ್ಯಂತ ಸುಮಾರು 40 ವಿಶೇಷ ಕ್ಯಾನ್ಸರ್ ಚಿಕಿತ್ಸಾ  ಸಂಸ್ಥೆಗಳಿಗೆ ಅನುಮೋದನೆ ನೀಡಿದೆ, ಅವುಗಳಲ್ಲಿ ಅನೇಕ ಆಸ್ಪತ್ರೆಗಳು ಈಗಾಗಲೇ ಸೇವೆಗಳನ್ನು ಒದಗಿಸಲು ಪ್ರಾರಂಭಿಸಿವೆ.

ಸ್ನೇಹಿತರೇ,

ಆಸ್ಪತ್ರೆಯನ್ನು ನಿರ್ಮಿಸುವುದು ಎಷ್ಟು ಮುಖ್ಯವೋ, ಸಾಕಷ್ಟು ಸಂಖ್ಯೆಯ ಉತ್ತಮ ವೈದ್ಯರು ಮತ್ತು ಇತರ ಅರೆವೈದ್ಯಕೀಯ ಸಿಬ್ಬಂದಿಯನ್ನು ಹೊಂದಿರುವುದು ಅಷ್ಟೇ ಮುಖ್ಯ. ದೇಶದಲ್ಲಿ ಈ ನಿಟ್ಟಿನಲ್ಲಿ ಆಂದೋಲನದೋಪಾದಿಯಲ್ಲಿ  ಕೆಲಸ ಮಾಡಲಾಗುತ್ತಿದೆ. 2014 ಕ್ಕಿಂತ ಮೊದಲು ದೇಶದಲ್ಲಿ 400 ಕ್ಕಿಂತ ಕಡಿಮೆ ವೈದ್ಯಕೀಯ ಕಾಲೇಜುಗಳು ಇದ್ದವು. ಅಂದರೆ, 70 ವರ್ಷಗಳಲ್ಲಿ 400 ಕ್ಕಿಂತ ಕಡಿಮೆ ವೈದ್ಯಕೀಯ ಕಾಲೇಜುಗಳು. ಅದೇ ಸಮಯದಲ್ಲಿ, ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ 200 ಕ್ಕೂ ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ವೈದ್ಯಕೀಯ ಕಾಲೇಜುಗಳ ವಿಸ್ತರಣೆ ಎಂದರೆ ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಾಗಿದೆ ಎಂದರ್ಥ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಅವಕಾಶಗಳು ಹೆಚ್ಚಾಗಿವೆ. ಮತ್ತು ದೇಶದ ಆರೋಗ್ಯವನ್ನು ನೋಡಿಕೊಳ್ಳುವ ಆರೋಗ್ಯ ವೃತ್ತಿಪರರ ಸಂಖ್ಯೆ ಹೆಚ್ಚಾಗಿದೆ. ಅಂದರೆ, ಆರೋಗ್ಯ ಕ್ಷೇತ್ರದಲ್ಲಿ ಅನೇಕ ಉದ್ಯೋಗಾವಕಾಶಗಳನ್ನು ಸಹ ಸೃಷ್ಟಿಸಲಾಗುತ್ತಿದೆ. ನಮ್ಮ ಸರ್ಕಾರವು ಐದು ಲಕ್ಷಕ್ಕೂ ಹೆಚ್ಚು ಆಯುಷ್ ವೈದ್ಯರನ್ನು ಅಲೋಪಥಿ ವೈದ್ಯರೆಂದು ಮಾನ್ಯ ಮಾಡಿದೆ. ಇದರಿಂದ ಭಾರತದಲ್ಲಿ ವೈದ್ಯರು ಮತ್ತು ರೋಗಿಗಳ ಅನುಪಾತದಲ್ಲಿ  ಸುಧಾರಣೆಯಾಗಿದೆ.

ಸ್ನೇಹಿತರೇ,

ಇಲ್ಲಿ ಕುಳಿತವರೆಲ್ಲರೂ ಸಾಮಾನ್ಯ ಕುಟುಂಬಗಳಿಂದ ಬಂದವರು. ರೋಗಗಳ  ಸಂದರ್ಭದಲ್ಲಿ ಬಡವರು ತಮ್ಮ ಮನೆ ಅಥವಾ ಭೂಮಿಯನ್ನು ಮಾರಾಟ ಮಾಡುವಂತಹ ಸ್ಥಿತಿ ಉಂಟಾಗುತ್ತದೆ ಎಂಬುದರ ಅನುಭವ  ನಮಗೆಲ್ಲರಿಗೂ ಇದೆ. ಆದ್ದರಿಂದ, ನಮ್ಮ ಸರ್ಕಾರವು ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳು ಮತ್ತು ಚಿಕಿತ್ಸೆಯನ್ನು ಒದಗಿಸಲು ಸಮಾನ ಒತ್ತು ನೀಡಿದೆ. ಆಯುಷ್ಮಾನ್ ಭಾರತ್ ಬಡವರಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆಯನ್ನು ಒದಗಿಸಿದೆ. ಇದರ ಅಡಿಯಲ್ಲಿ, ಇಲ್ಲಿಯವರೆಗೆ 3.5 ಕೋಟಿ ರೋಗಿಗಳು ತಮ್ಮ ಚಿಕಿತ್ಸೆಯನ್ನು ಪಡೆದಿದ್ದಾರೆ ಮತ್ತು ಅವರು ಇದಕ್ಕಾಗಿ ಒಂದು ರೂಪಾಯಿಯನ್ನು ಖರ್ಚು ಮಾಡಬೇಕಾಗಿರಲಿಲ್ಲ. ಮತ್ತು ಇವರಲ್ಲಿ  ಅನೇಕ ಕ್ಯಾನ್ಸರ್ ರೋಗಿಗಳೂ ಸೇರಿದ್ದಾರೆ. ಆಯುಷ್ಮಾನ್ ಭಾರತ್ ಸೌಲಭ್ಯ ಇಲ್ಲದಿದ್ದರೆ, ಬಡವರು ತಮ್ಮ ಜೇಬಿನಿಂದ 40,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಗಿತ್ತು. ನಿಮ್ಮಂತಹ ಕುಟುಂಬಗಳಿಗೆ 40,000 ಕೋಟಿ ರೂ.ಗಳ ಉಳಿತಾಯವಾಗಿದೆ. ಇಷ್ಟೇ ಅಲ್ಲ, ಪಂಜಾಬ್ ಸೇರಿದಂತೆ ದೇಶಾದ್ಯಂತ ಜನೌಷಧಿ ಕೇಂದ್ರಗಳ ಜಾಲವಿದೆ, ಅಲ್ಲಿ ಕ್ಯಾನ್ಸರ್ ಔಷಧಿಗಳು ಅತ್ಯಂತ ಕಡಿಮೆ ದರದಲ್ಲಿ ಲಭ್ಯವಿವೆ. ಈ ಹಿಂದೆ ಬಹಳ ದುಬಾರಿಯಾಗಿದ್ದ 500 ಕ್ಕೂ ಹೆಚ್ಚು ಕ್ಯಾನ್ಸರ್ ಔಷಧಿಗಳ ಬೆಲೆಯನ್ನು ಸುಮಾರು 90 ಪ್ರತಿಶತದಷ್ಟು ಕಡಿಮೆ ಮಾಡಲಾಗಿದೆ. ಅಂದರೆ, ಈ ಮೊದಲು 100 ರೂಪಾಯಿಗಳ ಬೆಲೆ ಬಾಳುತ್ತಿದ್ದ ಔಷಧಿಯನ್ನು ಈಗ ಜನೌಷಧಿ ಕೇಂದ್ರದಲ್ಲಿ 10 ರೂ.ಗಳಿಗೆ ಒದಗಿಸಲಾಗಿದೆ. ರೋಗಿಗಳು ಪ್ರತಿ ವರ್ಷ ಸರಾಸರಿ 1,000 ಕೋಟಿ ರೂ.ಗಳನ್ನು ಉಳಿತಾಯ ಮಾಡುತ್ತಿದ್ದಾರೆ. ದೇಶಾದ್ಯಂತ ಸುಮಾರು 9,000 ಜನೌಷಧಿ ಕೇಂದ್ರಗಳಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಸಮಸ್ಯೆಗಳನ್ನು ನಿವಾರಿಸಲು  ಕೈಗೆಟುಕುವ ದರದಲ್ಲಿ ಔಷಧಿಗಳು ದೊರೆಯುತ್ತಿವೆ.

ಸಹೋದರರೇ ಮತ್ತು  ಸಹೋದರಿಯರೇ,

ಆಧುನಿಕ ತಂತ್ರಜ್ಞಾನವು ಸರ್ಕಾರದ ಸಮಗ್ರ ಆರೋಗ್ಯ ಅಭಿಯಾನಕ್ಕೆ ಹೊಸ ಆಯಾಮವನ್ನು ತಂದಿದೆ. ಆರೋಗ್ಯ ಕ್ಷೇತ್ರದಲ್ಲಿ ಮೊದಲ ಬಾರಿಗೆ ಆಧುನಿಕ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್  ಪ್ರತಿಯೊಬ್ಬ ರೋಗಿಯು ಸಮಯಕ್ಕೆ ಸರಿಯಾಗಿ ಮತ್ತು ಕನಿಷ್ಠ ಪ್ರಯತ್ನದೊಂದಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಪಡೆಯುವುದನ್ನು ಖಾತ್ರಿಪಡಿಸುತ್ತಿದೆ.  ಟೆಲಿಮೆಡಿಸಿನ್ ಮತ್ತು ಟೆಲಿಕನ್ಸಲ್ಟೇಶನ್ ಸೌಲಭ್ಯಗಳಿಂದಾಗಿ, ಇಂದು ದೂರದ ಹಳ್ಳಿಯಲ್ಲಿ ವಾಸಿಸುವ ವ್ಯಕ್ತಿಯು ಕೂಡ ನಗರಗಳ ವೈದ್ಯರಿಂದ ಆರಂಭಿಕ ಸಮಾಲೋಚನೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ, ಕೋಟ್ಯಂತರ ಜನರು ಸಂಜೀವಿನಿ ಅಪ್ಲಿಕೇಶನ್ನಿನ  ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಈಗ ಮೇಡ್ ಇನ್ ಇಂಡಿಯಾ 5ಜಿ ಸೇವೆಗಳನ್ನು ದೇಶದಲ್ಲಿ ಪ್ರಾರಂಭಿಸಲಾಗುತ್ತಿದೆ. ಇದು ದೂರ ಪ್ರದೇಶದ  ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ. ಇದರೊಂದಿಗೆ, ಹಳ್ಳಿಗಳ ಬಡ ಕುಟುಂಬಗಳ ರೋಗಿಗಳು ಆಗಾಗ್ಗೆ ಪ್ರಮುಖ ಆಸ್ಪತ್ರೆಗಳಿಗೆ ಭೇಟಿ ನೀಡುವ ಅನಿವಾರ್ಯತೆಯೂ  ಕಡಿಮೆಯಾಗಲಿದೆ.

ಸ್ನೇಹಿತರೇ,

ದೇಶದಲ್ಲಿ ಕ್ಯಾನ್ಸರ್ ನಿಂದ ಮುಕ್ತರಾದ ಪ್ರತಿಯೊಬ್ಬರಿಗೂ  ಮತ್ತು ಅವರ ಕುಟುಂಬಕ್ಕೆ ನಾನು ಒಂದು ಮಾತನ್ನು ಹೇಳಲು ಬಯಸುತ್ತೇನೆ. ನಿಮ್ಮ ನೋವನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲೆ. ಆದರೆ ಕ್ಯಾನ್ಸರ್ ವಿರುದ್ಧ ಹೋರಾಡುವ ಅವಶ್ಯಕತೆಯಿದೆ ಮತ್ತು ಅದಕ್ಕೆ ಹೆದರಬಾರದು. ಅದರ ಚಿಕಿತ್ಸೆ ಸಾಧ್ಯವಿದೆ. ಕ್ಯಾನ್ಸರ್ ವಿರುದ್ಧದ ಯುದ್ಧದಲ್ಲಿ ಗೆದ್ದ ನಂತರ ಇಂದು ಸಂತೋಷದಿಂದ ಜೀವನ ನಡೆಸುತ್ತಿರುವಂತಹ ಅನೇಕ ಜನರನ್ನು ನಾನು ಬಲ್ಲೆ. ಈ ಹೋರಾಟದಲ್ಲಿ ನಿಮಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಕ್ಯಾನ್ಸರ್ ನಿಂದ ಉಂಟಾಗುವ ಖಿನ್ನತೆಯ ವಿರುದ್ಧ ಹೋರಾಡಲು ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನಾವು ಸಹಾಯ ಮಾಡಬೇಕು ಎಂದು ಈ ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ಸಹೋದ್ಯೋಗಿಗಳಿಗೆ ನಾನು ವಿಶೇಷ ವಿನಂತಿಯನ್ನು ಮಾಡಲು ಬಯಸುತ್ತೇನೆ. ಪ್ರಗತಿಶೀಲ ಸಮಾಜವಾಗಿ, ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ಆಲೋಚನೆಯಲ್ಲಿ ಬದಲಾವಣೆ ಮತ್ತು ಮುಕ್ತತೆಯನ್ನು ತರುವುದು ನಮ್ಮ ಜವಾಬ್ದಾರಿಯಾಗಿದೆ. ಆಗ ಮಾತ್ರ ಈ ಸಮಸ್ಯೆಗೆ ಸರಿಯಾದ ಪರಿಹಾರ ಸಿಗುತ್ತದೆ. ಹಳ್ಳಿಗಳಲ್ಲಿ ಶಿಬಿರಗಳನ್ನು ಆಯೋಜಿಸುವಾಗ ಖಂಡಿತವಾಗಿಯೂ ಈ ಸಮಸ್ಯೆಯ ಬಗ್ಗೆ ಗಮನ ಹರಿಸುವಂತೆ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ನನ್ನ ಸಹೋದ್ಯೋಗಿಗಳನ್ನು ನಾನು ವಿನಂತಿಸುತ್ತೇನೆ. 'ಸಬ್ಕಾ ಪ್ರಯಾಸ್' (ಎಲ್ಲರ ಪ್ರಯತ್ನ) ಮೂಲಕ, ನಾವು ಕ್ಯಾನ್ಸರ್ ವಿರುದ್ಧದ ದೇಶದ ಹೋರಾಟವನ್ನು ಬಲಪಡಿಸುತ್ತೇವೆ. ಈ ನಂಬಿಕೆಯೊಂದಿಗೆ, ಪಂಜಾಬ್ ಮತ್ತು ಹಿಮಾಚಲದ ಜನರಿಗೆ ಪ್ರಯೋಜನವಾಗುವ ಈ ಬೃಹತ್ ಉಡುಗೊರೆಯನ್ನು ಸಮರ್ಪಿಸಲು ನನಗೆ ತೃಪ್ತಿ ಇದೆ ಮತ್ತು ಹೆಮ್ಮೆಯ ಭಾವನೆಯೂ  ಇದೆ. ನಿಮಗೆಲ್ಲರಿಗೂ ಶುಭಾಶಯಗಳು ಮತ್ತು ನಿಮಗೆ ತುಂಬಾ ಧನ್ಯವಾದಗಳು!

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Central schemes bring in electricity, infra and jobs at Kondagaon in Bastar

Media Coverage

Central schemes bring in electricity, infra and jobs at Kondagaon in Bastar
NM on the go

Nm on the go

Always be the first to hear from the PM. Get the App Now!
...
This year’s Union Budget reinforces our commitment to sustaining and strengthening economic growth: PM Modi
March 03, 2026
This year’s Union Budget reinforces our commitment to sustaining and strengthening economic growth: PM
Our direction is clear, our resolve is clear,Build more, produce more, connect more, export more: PM
The world is looking for reliable and resilient manufacturing partners, and today India has the opportunity to firmly fulfill this role: PM
India has signed Free Trade Agreements with many countries, a very large door of opportunities has opened for us, and in such a situation, it is our responsibility to never compromise on quality: PM
The Carbon Capture, Utilisation and Storage Mission is an important initiative, integrating sustainability in core business strategy will be essential: PM
The industries that invest in clean technology in time will be able to build better access to new markets in the coming years: PM
A major transformation is happening in the world economy today, as markets now look not only at cost but also at sustainability: PM

नमस्कार !

गत् सप्ताह, बजट वेबिनार सीरीज के पहले वेबिनार का आयोजन हुआ, और मुझे ऐसा बताया गया कि वो बहुत सफल रहा, और बजट प्रावधानों के Implementation को लेकर हर किसी ने काफी उत्तम सुझाव दिए, सबकी सक्रिय भागीदारी का मैं स्वागत करता हूं और आज इस सीरीज के दूसरे वेबिनार का आयोजन हो रहा है। और मुझे बताया गया कि आज हजारों की तादाद में, ढेर सारे विषयों पर अनगिनत लोग अपने सुझाव देने वाले हैं। विषय के जो एक्सपर्ट्स हैं, वे भी हमसे जुड़ने वाले हैं। इतनी बड़ी तादाद में बजट पर चर्चा, ये अपने आप में एक बहुत सफल प्रयोग है। आप सब समय निकाल करके इस वेबिनार में जुड़े। मैं आप सभी का अभिनंदन करता हूं, आपका स्वागत करता हूं। इस वेबिनार की थीम देश की Economic Growth को निरंतर मजबूती देने से जुड़ी हुई है। आज जब भारत अपनी मजबूत economy से पूरे विश्व की उम्मीद बना हुआ है, आज जब ग्लोबल सप्लाई चैन re-shape हो रही है, तब अर्थव्यवस्था की तेज प्रगति विकसित भारत का भी बहुत बड़ा आधार है। हमारी दिशा स्पष्ट है, हमारा संकल्प स्पष्ट है, Build more, produce more, connect more और अब जरूरत है Export more, और निश्चित तौर पर इसमें आज आपके बीच जो मंथन होगा, इस मंथन से जो सुझाव निकलेंगे, उनकी बड़ी भूमिका होगी।

साथियों,

आप सब जानते हैं, मैन्युफैक्चरिंग, लॉजिस्टिक्स, हमारे MSME's, लघु उद्योग, कुटीर उद्योग, इतना ही नहीं, हमारे छोटे-बड़े शहर, ये अर्थव्यवस्था के पिलर्स के तौर पर दिखने में तो अलग-अलग लगते हैं, लेकिन वे सभी interconnected हैं। जैसे, मजबूत मैन्युफैक्चरिंग नए अवसर तैयार करती है, और इससे निर्यात में बढ़ोतरी होती है। Competitive MSMEs से flexibility और इनोवेशन को बढ़ावा मिलता है। बेहतर लॉजिस्टिक्स से लागत कम होती है। Well-planned शहर investment और talent दोनों को अपनी ओर खींचते हैं। इन सभी पिलर्स को इस साल के बजट ने बहुत मजबूती दी है।

लेकिन साथियों,

कोई भी दिशा अपने आप परिणाम नहीं बन जाती, जमीन पर बदलाव तब आता है, जब industry, financial institutions, राज्य सरकारें, मिलकर उसे वास्तविकता बनाते हैं। मेरी अपेक्षा है, इस वेबिनार में आप सभी अपने मंथन में कुछ विषयों को जरूर प्राथमिकता दें, जैसे मैन्युफैक्चरिंग और प्रॉडक्शन, ये कैसे बढ़े, Cost structure को कैसे कंपटीटिव बनाया जा सकता है, निवेश का प्रवाह कैसे तेज हो, और विकास कैसे देश के कोने-कोने तक पहुंचे। इस दिशा में आपके सुझाव बहुत अहम साबित होंगे।

साथियों,

मैन्युफैक्चरिंग के क्षेत्र में आज देश कोर इंडस्ट्रियल क्षमताओं को मजबूत कर रहा है। और इस मार्ग में जो चुनौतियां हैं, उन्हें भी दूर किया जा रहा है। Dedicated Rare Earth Corridors, कंटेनर मैन्युफैक्चरिंग, ऐसे सेक्टर्स पर फोकस करके हम अपने ट्रेड इकोसिस्टम को मजबूत करने का प्रयास कर रहे हैं। बजट में बायोफार्मा शक्ति मिशन की घोषणा भी की गई है। इस मिशन का उद्देश्य है, भारत को biologics और next-generation थेरेपीज के क्षेत्र में ग्लोबल हब बनाना। हम Advanced Biopharma Research और मैन्युफैक्चरिंग में लीडरशिप की ओर बढ़ना चाहते हैं।

साथियों,

आज दुनिया विश्वसनीय और resilient manufacturing partners की तलाश में है। भारत के पास यह अवसर है कि वह इस भूमिका को मजबूती से निभाए। इसके लिए आप सभी स्टेकहोल्डर्स को बहुत आत्मविश्वास के साथ निवेश करना होगा, नई टेक्नोलॉजी अपनानी होगी और रिसर्च में जो कंजूसी करते हैं ना, वो जमाना चला गया, अब हमें रिसर्च में बड़ा इनवेस्टमेंट करना होगा, और ग्लोबल स्टैंडर्ड के अनुरूप क्वालिटी भी सुनिश्चित करनी होगी, और मैं बार-बार कहता हूं कि अब हमें आगे बढ़ने के जब अवसर आए हैं, तो हमारा एक ही मंत्र होना चाहिए, क्वालिटी-क्वालिटी-क्वालिटी।

साथियों,

भारत ने बहुत सारे देशों के साथ फ्री ट्रेड एग्रीमेंट किए हैं। हमारे लिए अवसरों का, यानि अवसरों का बहुत बड़ा द्वार खुला है। ऐसे में हमारी ज़िम्मेदारी है कि हम क्वालिटी पर कभी भी समझौता ना करें, अगर किसी एक चीज पर सबसे ज्यादा ताकत, बुद्धि, शक्ति, समझ लगानी है, तो हमें क्वालिटी पर बहुत ज्यादा जोर देना चाहिए। हमारे प्रोडक्ट्स की क्वालिटी ग्लोबल स्टैंडर्ड, इतना ही नहीं, उससे भी बेहतर हो। और इसके लिए हमें दूसरे देशों की जरूरतों को, वहां के लोगों की अपेक्षाओं को भी, उसका अध्ययन करना पड़ेगा, रिसर्च करनी पड़ेगी, उसे समझना होगा। हमें दूसरे देशों के लोगों की पसंद और उनके कंफर्ट को स्टडी करना, ये सबसे बड़ी आवश्यकता है, और रिसर्च करनी चाहिए। मान लीजिए कोई छोटा पुर्जा मांगता है, और वो बहुत बड़ा जहाज बना रहा है, लेकिन हम पुर्जे में चलो भेज दो, क्या है? तो कौन लेगा आपका पुर्जा? भले आपके लिए वह छोटा पुर्जा है, लेकिन उसकी एक बहुत बड़ी जो मैन्युफैक्चरिंग की यूनिट है, उसमें बहुत बड़ा महत्व रखता है। और इसलिए आज दुनिया में हमारे लिए क्वालिटी ही इस कंपिटिटिव वर्ल्ड के अंदर सुनहरा अवसर बना देती है। हमें उनके हिसाब से यूजर फ्रेंडली प्रोडक्ट बनाने होंगे। तभी हम उन अवसरों का लाभ उठा पाएंगे, और जो फ्री ट्रेड एग्रीमेंट तैयार हो चुका है, अब ये विकास का महामार्ग आपके लिए तैयार है। मैं उम्मीद करता हूं कि इस वेबिनार में इस विषय पर फोकस करते हुए भी आप सब जरूर चर्चा करेंगे।

 

साथियों,

हमने MSME classification में जो Reforms किए, उसका व्यापक प्रभाव दिख रहा है। इससे enterprises का ये डर खत्म हुआ है कि वो अपना विस्तार करेंगे, तो उन्हें सरकार की ओर से मिलने वाले फायदे बंद हो जाएंगे। क्रेडिट तक MSME's की आसान पहुंच बनाने, टेक्नोलॉजी अपग्रेडेशन को बढ़ावा देने और कपैसिटी बिल्डिंग की दिशा में लगातार प्रयास हुए हैं।

लेकिन साथियों,

इन प्रयासों का असर तभी दिखाई देगा, जब MSMEs ज्यादा से ज्यादा कंपटीशन में उतरेंगे, और विजयी होने का लक्ष्य लेकर उतरेंगे। अब समय है कि MSMEs अपनी प्रोडक्टिविटी और बढ़ाएं, क्वालिटी स्टैंडर्ड्स को ऊंचा करें, डिजिटल प्रोसेस और मजबूत वैल्यू चैन से जुड़ें। इस दिशा में, इस वेबिनार में आपके सुझाव बहुत अहम होंगे।

साथियों,

इंफ्रास्ट्रक्चर और लॉजिस्टिक्स हमारी growth strategy के कोर पिलर्स हैं। इस वर्ष के बजट में रिकॉर्ड कैपिटल एक्सपेंडिचर का प्रस्ताव है। High-capacity transport systems का निर्माण, रेलवे, हाइवे, पोर्ट, एयरपोर्ट, वाटरवे के बीच बेहतर तालमेल, अलग-अलग फ्रेट कॉरिडोर और मल्टी-मोडल कनेक्टिविटी का विस्तार, ये सभी कदम खर्च कम करने और efficiency improve करने के लिए आवश्यक है। इसलिए, नए वाटरवेज, शिप रिपेयर फैसिलिटी और Regional Centres of Excellence हमारे लॉजिस्टिक इकोसिस्टम को मजबूत करेंगे। सात नए हाई-स्पीड रेल कॉरिडोर विकास के ग्रोथ कनेक्टर बनने वाले हैं। लेकिन आप भी जानते हैं, इस इंफ्रास्ट्रक्चर का वास्तविक लाभ तभी मिलेगा, जब उद्योग और निवेशक अपनी रणनीतियों को इस विजन के अनुरूप में ढालेंगे। ये रणनीतियां क्या होगी, इस पर भी आपको विस्तार से चर्चा करनी चाहिए, और मुझे पूरा विश्वास है कि आप जरूर इन बातों पर ध्यान देंगे।

 

साथियों,

भारत की विकास यात्रा में अर्बनाइजेशन, शहरीकरण का भी बहुत अहम रोल है। भारत की future growth इस बात पर निर्भर करेगी कि हम अपने शहरों को कितना effectively plan और manage करते हैं। हमारे Tier-II और Tier-III शहर, नए growth anchors कैसे बनें, इसके लिए भी इस बजट वेबिनार में आपके सुझाव बहुत अहम होंगे।

साथियों,

आज दुनिया की अर्थव्यवस्था में एक बड़ा परिवर्तन चल रहा है। बाजार अब केवल लागत नहीं देखते हैं, वे sustainability भी देखते हैं। इस दिशा में Carbon Capture, Utilisation and Storage Mission एक महत्वपूर्ण पहल है। अब sustainability उसको आपको core business strategy का हिस्सा बनाना ही होगा। जो उद्योग समय रहते क्लीन टेक्नोलॉजी में निवेश करेंगे, वे आने वाले वर्षों में नए-नए बाजारों तक बेहतर पहुंच बना पाएंगे। इस साल बजट ने नई दिशा दी है। मेरा आग्रह है कि उद्योग, निवेशक और विभिन्न संस्थान मिलकर इस पर आगे बढ़ें।

साथियों,

विकसित भारत का लक्ष्य collective ownership से ही हासिल किया जा सकता है। ये बजट वेबिनार भी सिर्फ discussion का प्लेटफॉर्म ना बने, सिर्फ अपने ज्ञान को हम बटोरते रहे, ऐसा नहीं होना चाहिए, बल्कि इसमें collective ownership दिखे, ये बहुत जरूरी है। बजट ने framework दिया है, अब आपको मिलकर momentum पैदा करना है। आपको हमारे प्रयासों में सहभागी बनना है। आपका हर सुझाव, हर अनुभव जमीन पर बेहतरीन नतीजें लाने की क्षमता रखता है। आपके सुझाव देश की प्रगति में माइलस्टोन बनें, इसी विश्वास के साथ आपका बहुत-बहुत धन्यवाद।

नमस्कार !