ಜಮ್ಮು-ಕಾಶ್ಮೀರ, ತೆಲಂಗಾಣ ಮತ್ತು ಒಡಿಶಾದಲ್ಲಿ ರೈಲು ಮೂಲಸೌಕರ್ಯ ಯೋಜನೆಗಳ ಪ್ರಾರಂಭವು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಈ ಪ್ರದೇಶಗಳಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ: ಪ್ರಧಾನಮಂತ್ರಿ
ಇಂದು, ದೇಶವು ವಿಕಸಿತ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ತೊಡಗಿದೆ ಮತ್ತು ಇದಕ್ಕಾಗಿ ಭಾರತೀಯ ರೈಲ್ವೇಯ ಅಭಿವೃದ್ಧಿ ಬಹಳ ಮುಖ್ಯವಾಗಿದೆ: ಪ್ರಧಾನಮಂತ್ರಿ
ನಾವು ಭಾರತದಲ್ಲಿ ರೈಲ್ವೇ ಅಭಿವೃದ್ಧಿಯನ್ನು ನಾಲ್ಕು ನಿಯತಾಂಕಗಳಲ್ಲಿ ಮುಂದಕ್ಕೆ ಕೊಂಡೊಯ್ಯುತ್ತಿದ್ದೇವೆ. ಮೊದಲನೆಯದು- ರೈಲ್ವೇ ಮೂಲಸೌಕರ್ಯಗಳ ಆಧುನೀಕರಣ, ಎರಡನೆಯದು- ರೈಲು ಪ್ರಯಾಣಿಕರಿಗೆ ಆಧುನಿಕ ಸೌಲಭ್ಯಗಳು, ಮೂರನೆಯದು- ದೇಶದ ಮೂಲೆ ಮೂಲೆಗೆ ರೈಲು ಸಂಪರ್ಕ, ನಾಲ್ಕನೆಯದು- ಉದ್ಯೋಗಗಳ ಸೃಷ್ಟಿ, ಕೈಗಾರಿಕೆಗಳನ್ನು ಬೆಂಬಲಿಸಲು ರೈಲ್ವೆ: ಪ್ರಧಾನಮಂತ್ರಿ
ಇಂದು ಭಾರತವು ರೈಲು ಮಾರ್ಗಗಳ 100 ಪ್ರತಿಶತ ವಿದ್ಯುದ್ದೀಕರಣದ ಸಮೀಪದಲ್ಲಿದೆ, ನಾವು ನಿರಂತರವಾಗಿ ರೈಲ್ವೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದೇವೆ: ಪ್ರಧಾನಮಂತ್ರಿ

ನಮಸ್ಕಾರ!

ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಇಂದು ಗುರು ಗೋವಿಂದ ಸಿಂಗ್ ಜಿ ಅವರ ಜನ್ಮದಿನವಾಗಿದೆ. ಅವರ ಬೋಧನೆಗಳು ಮತ್ತು ಆದರ್ಶಪ್ರಾಯ ಜೀವನವು ಸಮೃದ್ಧ ಮತ್ತು ಬಲವಾದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನಮಗೆ ಸ್ಫೂರ್ತಿ ನೀಡುತ್ತಲೇ ಇದೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ.

ಸ್ನೇಹಿತರೇ,

2025ರ ಆರಂಭದಿಂದಲೂ ಭಾರತವು ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಗಣನೀಯ ಪ್ರಗತಿ ಸಾಧಿಸುತ್ತಿದೆ. ನಿನ್ನೆಯಷ್ಟೇ, ದೆಹಲಿ-ಎನ್‌ ಸಿ ಆರ್‌ ನಲ್ಲಿ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸುವ ಮತ್ತು ದೆಹಲಿ ಮೆಟ್ರೋದ ಪ್ರಮುಖ ಯೋಜನೆಗಳ ಉದ್ಘಾಟನೆಯಲ್ಲಿ ಭಾಗವಹಿಸುವ ಅವಕಾಶ ನನಗೆ ಲಭಿಸಿತು. ನಿನ್ನೆ ಭಾರತವು ಒಂದು ಅಸಾಧಾರಣ ಮೈಲಿಗಲ್ಲನ್ನು ತಲುಪಿದೆ - ನಮ್ಮ ದೇಶದ ಮೆಟ್ರೋ ಜಾಲವು ಈಗ ಸಾವಿರ ಕಿಲೋಮೀಟರ್‌ಗಳಿಗೂ ಮೀರಿ ವಿಸ್ತರಿಸಿದೆ. ಇಂದು, ಹಲವು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಭವಿಷ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಉತ್ತರದಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಪೂರ್ವದಲ್ಲಿ ಒಡಿಶಾ ಮತ್ತು ದಕ್ಷಿಣದಲ್ಲಿ ತೆಲಂಗಾಣದವರೆಗೆ, ಇಂದು ದೇಶದ ಬಹುಭಾಗದಲ್ಲಿ 'ನವಯುಗದ ಸಂಪರ್ಕ'ಕ್ಕೆ ಒಂದು ಮಹತ್ವದ ದಿನವಾಗಿದೆ. ಈ ಮೂರು ರಾಜ್ಯಗಳಲ್ಲಿ ಆಧುನಿಕ ಅಭಿವೃದ್ಧಿ ಯೋಜನೆಗಳ ಆರಂಭವು ಇಡೀ ದೇಶದ ಏಕೀಕೃತ ಪ್ರಗತಿಯ ಸಂಕೇತವಾಗಿದೆ. 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಎಂಬ ಮಂತ್ರವು ಆತ್ಮವಿಶ್ವಾಸವನ್ನು ತುಂಬುತ್ತಿದೆ ಮತ್ತು ವಿಕಸಿತ ಭಾರತದ (ಅಭಿವೃದ್ಧಿ ಹೊಂದಿದ ಭಾರತ) ಕನಸನ್ನು ನನಸಾಗಿಸುತ್ತಿದೆ. ಈ ಸಂದರ್ಭದಲ್ಲಿ, ಈ ಮೂರು ರಾಜ್ಯಗಳ ಜನತೆ ಮತ್ತು ಎಲ್ಲಾ ಭಾರತೀಯರಿಗೆ ಈ ಯೋಜನೆಗಳ ಉದ್ಘಾಟನೆಗಾಗಿ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇಂದು ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರ ಜನ್ಮದಿನವೂ ಆಗಿದೆ. ಎಲ್ಲರ ಪರವಾಗಿ, ಅವರಿಗೂ ನನ್ನ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.

 

ಸ್ನೇಹಿತರೇ,

ವಿಕಸಿತ ಭಾರತದ ದೃಷ್ಟಿಯನ್ನು ನನಸಾಗಿಸಲು ನಮ್ಮ ದೇಶವು ಅವಿರತವಾಗಿ ಶ್ರಮಿಸುತ್ತಿದೆ. ಈ ಗುರಿಯನ್ನು ಸಾಧಿಸುವಲ್ಲಿ ಭಾರತೀಯ ರೈಲ್ವೆಯ ಅಭಿವೃದ್ಧಿಯು ಪ್ರಮುಖ ಪಾತ್ರ ವಹಿಸುತ್ತದೆ. ಕಳೆದ ದಶಕದಲ್ಲಿ, ಭಾರತೀಯ ರೈಲ್ವೆ ಐತಿಹಾಸಿಕ ಪರಿವರ್ತನೆಗೆ ಒಳಗಾಗಿದೆ. ರೈಲ್ವೆ ಮೂಲಸೌಕರ್ಯದಲ್ಲಿನ ಪ್ರಗತಿ ಅಸಾಧಾರಣವಾಗಿದ್ದು, ದೇಶದ ಚಿತ್ರಣವನ್ನೇ ಬದಲಿಸಿ, ನಾಗರಿಕರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ.

ಸ್ನೇಹಿತರೇ, 

ನಾವು ನಾಲ್ಕು ಪ್ರಮುಖ ಮಾನದಂಡಗಳ ಮೇಲೆ ಭಾರತೀಯ ರೈಲ್ವೆಯ ಅಭಿವೃದ್ಧಿಯನ್ನು ಮುಂದುವರಿಸುತ್ತಿದ್ದೇವೆ. ಮೊದಲನೆಯದಾಗಿ, ರೈಲ್ವೆ ಮೂಲಸೌಕರ್ಯದ ಆಧುನೀಕರಣ; ಎರಡನೆಯದಾಗಿ, ಪ್ರಯಾಣಿಕರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುವುದು; ಮೂರನೆಯದಾಗಿ, ದೇಶದ ಮೂಲೆ ಮೂಲೆಗಳಿಗೆ ರೈಲ್ವೆ ಸಂಪರ್ಕವನ್ನು ವಿಸ್ತರಿಸುವುದು; ಮತ್ತು ನಾಲ್ಕನೆಯದಾಗಿ, ರೈಲ್ವೆಯ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಕೈಗಾರಿಕೆಗಳಿಗೆ ಬೆಂಬಲ ನೀಡುವುದು. ಇಂದಿನ ಕಾರ್ಯಕ್ರಮವು ಈ ದೃಷ್ಟಿಕೋನಕ್ಕೆ ಸಾಕ್ಷಿಯಾಗಿದೆ. ಹೊಸ ವಿಭಾಗಗಳು ಮತ್ತು ರೈಲ್ವೆ ಟರ್ಮಿನಲ್ ಗಳ ಸ್ಥಾಪನೆಯು ಭಾರತೀಯ ರೈಲ್ವೆಯನ್ನು 21ನೇ ಶತಮಾನದ ಆಧುನಿಕ ಜಾಲವಾಗಿ ಪರಿವರ್ತಿಸಲು ಗಮನಾರ್ಹ ಕೊಡುಗೆ ನೀಡುತ್ತದೆ. ಈ ಬೆಳವಣಿಗೆಗಳು ಆರ್ಥಿಕ ಸಮೃದ್ಧಿಯ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತವೆ, ರೈಲ್ವೆ ಕಾರ್ಯಾಚರಣೆಗಳನ್ನು ಹೆಚ್ಚಿಸುತ್ತವೆ, ಹೆಚ್ಚಿನ ಹೂಡಿಕೆ ಅವಕಾಶಗಳನ್ನು ಸೃಷ್ಟಿಸುತ್ತವೆ ಮತ್ತು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ.

ಸ್ನೇಹಿತರೇ,

2014ರಲ್ಲಿ, ನಾವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ವಂದೇ ಭಾರತ್ ರೈಲುಗಳು, ಅಮೃತ ಭಾರತ್ ನಿಲ್ದಾಣಗಳು ಮತ್ತು ನಮೋ ಭಾರತ್ ರೈಲಿನಂತಹ ಸೌಲಭ್ಯಗಳು ಭಾರತೀಯ ರೈಲ್ವೆಗೆ ಹೊಸ ಮಾನದಂಡಗಳನ್ನು ಸ್ಥಾಪಿಸಿವೆ. ಮಹತ್ವಾಕಾಂಕ್ಷೆಯ ಭಾರತ ಇಂದು ಕಡಿಮೆ ಸಮಯದಲ್ಲಿ ಹೆಚ್ಚಿನದನ್ನು ಸಾಧಿಸಲು ಪ್ರಯತ್ನಿಸುತ್ತಿದೆ. ಜನರು ಈಗ ದೂರದ ಪ್ರಯಾಣವನ್ನು ಸಹ ವೇಗವಾಗಿ ಕೈಗೊಳ್ಳಲು ಬಯಸುತ್ತಾರೆ. ಇದು ದೇಶಾದ್ಯಂತ ಹೈಸ್ಪೀಡ್ ರೈಲುಗಳಿಗೆ ಹೆಚ್ಚುತ್ತಿರುವ ಬೇಡಿಕೆಗೆ ಕಾರಣವಾಗುತ್ತದೆ. ಪ್ರಸ್ತುತ, ವಂದೇ ಭಾರತ್ ರೈಲುಗಳು 50 ಕ್ಕೂ ಹೆಚ್ಚು ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, 136 ಸೇವೆಗಳು ಪ್ರಯಾಣಿಕರಿಗೆ ಆಹ್ಲಾದಕರ ಪ್ರಯಾಣದ ಅನುಭವವನ್ನು ನೀಡುತ್ತಿವೆ. ಕೆಲವು ದಿನಗಳ ಹಿಂದೆ, ವಂದೇ ಭಾರತ್ ರೈಲಿನ ಹೊಸ ಸ್ಲೀಪರ್ ಆವೃತ್ತಿಯು ತನ್ನ ಪ್ರಾಯೋಗಿಕ ಓಟದ ಸಮಯದಲ್ಲಿ ಗಂಟೆಗೆ 180 ಕಿಲೋಮೀಟರ್ ವೇಗದಲ್ಲಿ ಓಡುತ್ತಿರುವುದನ್ನು ತೋರಿಸುವ ವೀಡಿಯೊವನ್ನು ನಾನು ನೋಡಿದೆ. ಇಂತಹ ಮೈಲಿಗಲ್ಲುಗಳು ಪ್ರತಿಯೊಬ್ಬ ಭಾರತೀಯನನ್ನೂ ಹೆಮ್ಮೆಯಿಂದ ತುಂಬಿಸುತ್ತವೆ. ಈ ಸಾಧನೆಗಳು ಕೇವಲ ಪ್ರಾರಂಭವಾಗಿವೆ ಮತ್ತು ಭಾರತವು ತನ್ನ ಮೊದಲ ಬುಲೆಟ್ ರೈಲಿನ ಕಾರ್ಯಾಚರಣೆಗೆ ಸಾಕ್ಷಿಯಾಗಲು ಹೆಚ್ಚು ಸಮಯವಿರುವುದಿಲ್ಲ.

 

ಸ್ನೇಹಿತರೇ,

ಪ್ರಯಾಣ ಆರಂಭಿಕ ನಿಲ್ದಾಣದಿಂದ ಅಂತಿಮ ಗಮ್ಯಸ್ಥಾನದವರೆಗೆ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸುವುದನ್ನು ಸ್ಮರಣೀಯ ಅನುಭವವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ, ದೇಶಾದ್ಯಂತ 1,300 ಕ್ಕೂ ಹೆಚ್ಚು ಅಮೃತ್ ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ. ಕಳೆದ ದಶಕದಲ್ಲಿ ರೈಲು ಸಂಪರ್ಕವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 2014 ರಲ್ಲಿ, ದೇಶದಲ್ಲಿ ಕೇವಲ 35% ರೈಲು ಮಾರ್ಗಗಳು ವಿದ್ಯುದ್ದೀಕರಣಗೊಂಡಿವೆ. ಇಂದು, ಭಾರತವು ರೈಲು ಮಾರ್ಗಗಳ 100% ವಿದ್ಯುದ್ದೀಕರಣವನ್ನು ಸಾಧಿಸುವ ಹಂತದಲ್ಲಿದೆ. ಹೆಚ್ಚುವರಿಯಾಗಿ, ನಾವು ರೈಲ್ವೆಗಳ ವ್ಯಾಪ್ತಿಯನ್ನು ಗಣನೀಯವಾಗಿ ವಿಸ್ತರಿಸಿದ್ದೇವೆ. ಕಳೆದ 10 ವರ್ಷಗಳಲ್ಲಿ, 30,000 ಕಿಲೋಮೀಟರ್‌ ಗಳಿಗಿಂತ ಹೆಚ್ಚು ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಮತ್ತು ನೂರಾರು ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ. ಬ್ರಾಡ್ ಗೇಜ್ ಮಾರ್ಗಗಳಲ್ಲಿ ಮಾನವರಹಿತ ಕ್ರಾಸಿಂಗ್‌ ಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ, ಇದರಿಂದಾಗಿ ಅಪಘಾತಗಳನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಮೀಸಲಾದ ಸರಕು ಕಾರಿಡಾರ್‌ ಗಳಂತಹ ಆಧುನಿಕ ರೈಲು ಜಾಲಗಳ ಅಭಿವೃದ್ಧಿಯು ವೇಗವಾಗಿ ಪ್ರಗತಿಯಲ್ಲಿದೆ. ಈ ವಿಶೇಷ ಕಾರಿಡಾರ್‌ ಗಳು ಸಾಮಾನ್ಯ ಹಳಿಗಳ ಮೇಲಿನ ಹೊರೆ ಕಡಿಮೆ ಮಾಡುತ್ತದೆ, ಹೆಚ್ಚಿನ ವೇಗದ ರೈಲು ಕಾರ್ಯಾಚರಣೆಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುತ್ತದೆ.

ಸ್ನೇಹಿತರೇ,

ಭಾರತೀಯ ರೈಲ್ವೆಯಲ್ಲಿ ನಡೆಯುತ್ತಿರುವ ಪರಿವರ್ತನೆಯು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತಿದೆ. ಮೇಡ್-ಇನ್-ಇಂಡಿಯಾ ಉಪಕ್ರಮಗಳ ಪ್ರಚಾರ, ಮೆಟ್ರೋ ಮತ್ತು ರೈಲ್ವೆಗೆ ಆಧುನಿಕ ಬೋಗಿಗಳ ಉತ್ಪಾದನೆ, ನಿಲ್ದಾಣಗಳ ಪುನರಾಭಿವೃದ್ಧಿ, ಸೌರ ಫಲಕಗಳ ಸ್ಥಾಪನೆ ಮತ್ತು 'ಒಂದು ನಿಲ್ದಾಣ, ಒಂದು ಉತ್ಪನ್ನ' ದಂತಹ ಉಪಕ್ರಮಗಳ ಅನುಷ್ಠಾನವು ಲಕ್ಷಾಂತರ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ. ಕಳೆದ ದಶಕದಲ್ಲಿ, ಲಕ್ಷಾಂತರ ಯುವಕರು ರೈಲ್ವೆಯಲ್ಲಿ ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ಪಡೆದಿದ್ದಾರೆ. ಹೊಸ ರೈಲು ಬೋಗಿಗಳನ್ನು ತಯಾರಿಸಲು ಕಚ್ಚಾ ವಸ್ತುಗಳು ಇತರ ಕಾರ್ಖಾನೆಗಳಿಂದ ಬರುತ್ತವೆ ಮತ್ತು ಈ ಕೈಗಾರಿಕೆಗಳಲ್ಲಿ ಹೆಚ್ಚುತ್ತಿರುವ ಬೇಡಿಕೆಯು ಹೆಚ್ಚಿನ ಉದ್ಯೋಗಾವಕಾಶಗಳಿಗೆ ಕಾರಣವಾಗುತ್ತದೆ ಎಂಬುದನ್ನು ನೆನಪಿನಲ್ಲಿಡುವುದು ಮುಖ್ಯವಾಗಿದೆ. ರೈಲ್ವೆ-ನಿರ್ದಿಷ್ಟ ಕೌಶಲ್ಯಗಳನ್ನು ಮತ್ತಷ್ಟು ಬಲಪಡಿಸಲು, ಭಾರತ್ ತನ್ನ ಮೊದಲ ಗತಿ ಶಕ್ತಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ, ಇದು ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಸ್ನೇಹಿತರೇ,

ರೈಲ್ವೇ ಜಾಲವು ವಿಸ್ತರಿಸಿದಂತೆ, ಅದಕ್ಕೆ ಅನುಗುಣವಾಗಿ ಹೊಸ ಪ್ರಧಾನ ಕಛೇರಿಗಳು ಮತ್ತು ವಿಭಾಗಗಳನ್ನು ಸ್ಥಾಪಿಸಲಾಗುತ್ತಿದೆ. ಜಮ್ಮು ವಿಭಾಗವು ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರವಲ್ಲದೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನ ಹಲವಾರು ನಗರಗಳಿಗೆ ಪ್ರಯೋಜನವನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಇದು ಲೇಹ್-ಲಡಾಖ್ ಜನರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ.

 

ಸ್ನೇಹಿತರೇ,

ಜಮ್ಮು ಮತ್ತು ಕಾಶ್ಮೀರವು ರೈಲು ಮೂಲಸೌಕರ್ಯದಲ್ಲಿ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಉಧಂಪುರ್-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗವು ದೇಶಾದ್ಯಂತ ವ್ಯಾಪಕವಾಗಿ ಚರ್ಚಿಸಲ್ಪಡುತ್ತಿದೆ. ಈ ಯೋಜನೆಯು ಭಾರತದ ಉಳಿದ ಭಾಗಗಳೊಂದಿಗೆ ಜಮ್ಮು ಮತ್ತು ಕಾಶ್ಮೀರದ ಸಂಪರ್ಕವನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಈ ಉಪಕ್ರಮದ ಭಾಗವಾಗಿ, ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆ, ಚೆನಾಬ್ ಸೇತುವೆಯನ್ನು ಪೂರ್ಣಗೊಳಿಸಲಾಗಿದೆ. ಇದಲ್ಲದೆ, ಭಾರತದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯಾದ ಅಂಜಿ ಖಾದ್ ಸೇತುವೆಯೂ ಸಹ ಈ ಯೋಜನೆಯ ಒಂದು ಭಾಗವಾಗಿದೆ. ಈ ಎರಡೂ ಅಭೂತಪೂರ್ವ ಎಂಜಿನಿಯರಿಂಗ್ ಸಾಧನೆಗಳಾಗಿದ್ದು, ಈ ಪ್ರದೇಶಕ್ಕೆ ಆರ್ಥಿಕ ಪ್ರಗತಿ ಮತ್ತು ಸಮೃದ್ಧಿಯನ್ನು ತರಲು ಸಿದ್ಧವಾಗಿವೆ.

ಸ್ನೇಹಿತರೇ,

ಶ್ರೀ ಜಗನ್ನಾಥನ ಆಶೀರ್ವಾದದೊಂದಿಗೆ, ಒಡಿಶಾವು ಹೇರಳವಾದ ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ವಿಶಾಲವಾದ ಕರಾವಳಿಯನ್ನು ಹೊಂದಿದ್ದು, ಅಂತರರಾಷ್ಟ್ರೀಯ ವ್ಯಾಪಾರಕ್ಕೆ ಅಪಾರ ಸಾಮರ್ಥ್ಯವನ್ನು ಒದಗಿಸುತ್ತದೆ. ಪ್ರಸ್ತುತ, ಒಡಿಶಾದಲ್ಲಿ ಹೊಸ ರೈಲು ಹಳಿಗಳ ಮೇಲೆ ಕೇಂದ್ರೀಕರಿಸಿದ ಹಲವಾರು ಯೋಜನೆಗಳು ನಡೆಯುತ್ತಿವೆ, ₹70,000 ಕೋಟಿಗೂ ಹೆಚ್ಚು ಹೂಡಿಕೆಯೊಂದಿಗೆ. ಏಳು ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ ಗಳನ್ನು ಈಗಾಗಲೇ ರಾಜ್ಯದಲ್ಲಿ ಉದ್ಘಾಟಿಸಲಾಗಿದ್ದು, ವ್ಯಾಪಾರ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇಂದು, ಒಡಿಶಾದಲ್ಲಿ ರಾಯಗಡ ರೈಲ್ವೆ ವಿಭಾಗಕ್ಕೆ ಅಡಿಪಾಯ ಹಾಕಲಾಗಿದ್ದು, ಇದು ರಾಜ್ಯದ ರೈಲ್ವೆ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಈ ಬೆಳವಣಿಗೆಯು ಒಡಿಶಾದಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಗಣನೀಯ ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ದಕ್ಷಿಣ ಒಡಿಶಾವು ಅಪಾರವಾಗಿ ಪ್ರಯೋಜನ ಪಡೆಯುತ್ತದೆ. ಜನ್ಮನ್ ಯೋಜನೆಯಂತಹ ಉಪಕ್ರಮಗಳ ಮೂಲಕ, ನಾವು ಅತ್ಯಂತ ಹಿಂದುಳಿದ ಬುಡಕಟ್ಟು ಪ್ರದೇಶಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸುತ್ತಿದ್ದೇವೆ ಮತ್ತು ಈ ಮೂಲಸೌಕರ್ಯವು ಅವರಿಗೆ ವರದಾನವಾಗಲಿದೆ.

ಸ್ನೇಹಿತರೇ,

ಇಂದು ತೆಲಂಗಾಣದ ಚೆರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಲು ನನಗೆ ಗೌರವವಾಗಿದೆ. ಈ ನಿಲ್ದಾಣವನ್ನು ಹೊರ ವರ್ತುಲ ರಸ್ತೆಗೆ ಸಂಪರ್ಕಿಸುವುದರಿಂದ ಈ ಪ್ರದೇಶದ ಅಭಿವೃದ್ಧಿಗೆ ವೇಗ ದೊರೆಯುತ್ತದೆ. ಈ ನಿಲ್ದಾಣವು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು,  ಅತ್ಯಾಧುನಿಕ ಪ್ಲಾಟ್‌ ಫಾರ್ಮ್‌ಗಳು, ಲಿಫ್ಟ್‌ ಗಳು ಮತ್ತು ಎಸ್ಕಲೇಟರ್‌ ಗಳು ಇದರಲ್ಲಿ ಸೇರಿವೆ. ಈ ನಿಲ್ದಾಣವು ಸೌರಶಕ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದು ಗಮನಾರ್ಹ ಅಂಶವಾಗಿದೆ. ಈ ಹೊಸ ರೈಲ್ವೆ ಟರ್ಮಿನಲ್ ಸಿಕಂದರಾಬಾದ್, ಹೈದರಾಬಾದ್ ಮತ್ತು ಕಾಚಿಗುಡದಂತಹ ಅಸ್ತಿತ್ವದಲ್ಲಿರುವ ನಗರ ಟರ್ಮಿನಲ್‌ ಗಳ ಮೇಲಿನ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರಿಗೆ ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸುತ್ತದೆ. ಈ ಉಪಕ್ರಮವು ಜೀವನವನ್ನು ಸುಲಭಗೊಳಿಸುವುದಲ್ಲದೆ, ವ್ಯಾಪಾರವನ್ನು ಸುಲಭಗೊಳಿಸುತ್ತದೆ.

 

ಸ್ನೇಹಿತರೇ,

ಇಂದು ದೇಶಾದ್ಯಂತ ಆಧುನಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಗಮನಾರ್ಹ ಪ್ರಯತ್ನಗಳು ನಡೆಯುತ್ತಿವೆ. ಭಾರತದ ಎಕ್ಸ್‌ಪ್ರೆಸ್‌ ವೇಗಳು, ಜಲಮಾರ್ಗಗಳು ಮತ್ತು ಮೆಟ್ರೋ ಜಾಲಗಳು ಅಭೂತಪೂರ್ವ ವೇಗದಲ್ಲಿ ವಿಸ್ತರಿಸುತ್ತಿವೆ. ದೇಶದ ವಿಮಾನ ನಿಲ್ದಾಣಗಳು ಈಗ ವಿಶ್ವ ದರ್ಜೆಯ ಸೌಲಭ್ಯಗಳನ್ನು ಒದಗಿಸುತ್ತಿವೆ. 2014ರಲ್ಲಿ, ಭಾರತದಲ್ಲಿ ಕೇವಲ 74 ವಿಮಾನ ನಿಲ್ದಾಣಗಳಿದ್ದವು, ಆದರೆ ಈಗ ಆ ಸಂಖ್ಯೆ ದ್ವಿಗುಣಗೊಂಡು 150ಕ್ಕೂ  ಹೆಚ್ಚಾಗಿದೆ. ಅದೇ ರೀತಿ, 2014ರಲ್ಲಿ, ಕೇವಲ ಐದು ನಗರಗಳಲ್ಲಿ ಮಾತ್ರ ಮೆಟ್ರೋ ಸೇವೆಗಳು ಲಭ್ಯವಿತ್ತು; ಇಂದು, ಅವು 21 ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಅಭಿವೃದ್ಧಿಯ ವೇಗ ಮತ್ತು ವಿಸ್ತಾರಕ್ಕೆ  ತಕ್ಕಂತೆ, ಭಾರತೀಯ ರೈಲ್ವೆ ಕೂಡ ನಿರಂತರ ಆಧುನೀಕರಣಕ್ಕೆ ಒಳಗಾಗುತ್ತಿದೆ.

ಸ್ನೇಹಿತರೇ, 

ಈ ಎಲ್ಲಾ ಅಭಿವೃದ್ಧಿ ಉಪಕ್ರಮಗಳು ವಿಕಸಿತ ಭಾರತದ ಮಾರ್ಗಸೂಚಿಯ ಅವಿಭಾಜ್ಯ ಅಂಗವಾಗಿದ್ದು, ಇದು ಪ್ರತಿಯೊಬ್ಬ ನಾಗರಿಕನ ಸಾಮೂಹಿಕ ಆಕಾಂಕ್ಷೆಯಾಗಿದೆ. ನಾವೆಲ್ಲರೂ ಒಟ್ಟಾಗಿ ಈ ದಿಕ್ಕಿನಲ್ಲಿ ಇನ್ನೂ ಹೆಚ್ಚಿನ ವೇಗದಲ್ಲಿ ಮುನ್ನಡೆಯುತ್ತೇವೆ ಎಂದು ನನಗೆ ವಿಶ್ವಾಸವಿದೆ. ಮತ್ತೊಮ್ಮೆ, ಈ ಸಾಧನೆಗಳಿಗಾಗಿ ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಧನ್ಯವಾದಗಳು.

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
'Operation Sindoor on, if they fire, we fire': India's big message to Pakistan

Media Coverage

'Operation Sindoor on, if they fire, we fire': India's big message to Pakistan
NM on the go

Nm on the go

Always be the first to hear from the PM. Get the App Now!
...
PM Modi's address to the nation
May 12, 2025
Today, every terrorist knows the consequences of wiping Sindoor from the foreheads of our sisters and daughters: PM
Operation Sindoor is an unwavering pledge for justice: PM
Terrorists dared to wipe the Sindoor from the foreheads of our sisters; that's why India destroyed the very headquarters of terror: PM
Pakistan had prepared to strike at our borders,but India hit them right at their core: PM
Operation Sindoor has redefined the fight against terror, setting a new benchmark, a new normal: PM
This is not an era of war, but it is not an era of terrorism either: PM
Zero tolerance against terrorism is the guarantee of a better world: PM
Any talks with Pakistan will focus on terrorism and PoK: PM

ಪ್ರಿಯ ದೇಶವಾಸಿಗಳೇ,

ನಮಸ್ಕಾರ !...

ಕಳೆದ ಕೆಲ ದಿನಗಳಲ್ಲಿ ದೇಶದ ಶಕ್ತಿ ಮತ್ತು ಸಂಯಮ ಎರಡನ್ನೂ ನಾವೆಲ್ಲರೂ ನೋಡಿದ್ದೇವೆ. ಮೊದಲನೆಯದಾಗಿ, ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಭಾರತದ ಬಲಿಷ್ಠ ಪಡೆಗಳಿಗೆ, ನಮ್ಮ ಸಶಸ್ತ್ರ ಪಡೆಗಳಿಗೆ, ನಮ್ಮ ಗುಪ್ತಚರ ಸಂಸ್ಥೆಗಳಿಗೆ ಮತ್ತು ನಮ್ಮ ವಿಜ್ಞಾನಿಗಳಿಗೆ ನಮಸ್ಕರಿಸುತ್ತೇನೆ.

ಆಪರೇಷನ್ ಸಿಂಧೂರದ ಉದ್ದೇಶಗಳನ್ನು ಸಾಧಿಸಲು ನಮ್ಮ ವೀರ ಸೈನಿಕರು ಅಪಾರ ಧೈರ್ಯವನ್ನು ಪ್ರದರ್ಶಿಸಿದರು.

ಇಂದು ನಾನು ಅವರ ಧೈರ್ಯಕ್ಕೆ, ಅವರ ಪರಾಕ್ರಮಕ್ಕೆ, ಅವರ ಶೌರ್ಯಕ್ಕೆ... ನಮ್ಮ ದೇಶದ ಪ್ರತಿಯೊಬ್ಬ ತಾಯಿಗೆ, ದೇಶದ ಪ್ರತಿಯೊಬ್ಬ ಸಹೋದರಿಗೆ ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನಾನು ಈ ಶೌರ್ಯವನ್ನು ದೇಶದ ಪ್ರತಿಯೊಬ್ಬ ಮಗಳಿಗೂ ಅರ್ಪಿಸುತ್ತೇನೆ.

ಸ್ನೇಹಿತರೇ,

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ತೋರಿಸಿದ ಬರ್ಬರತೆ ದೇಶ ಮತ್ತು ಜಗತ್ತನ್ನು ಬೆಚ್ಚಿಬೀಳಿಸಿತ್ತು. ಮುಗ್ಧ ನಾಗರಿಕರು ರಜಾದಿನಗಳನ್ನು ಆಚರಿಸುತ್ತಾ ಅವರ ಕುಟುಂಬಗಳ ಮುಂದಿದ್ದರು. ಆದರೆ, ಮಕ್ಕಳ ಮುಂದೆ ಕ್ರೂರವಾಗಿ ಕೊಲ್ಲುವುದರೊಂದಿಗೆ ಧರ್ಮದ ಬಗ್ಗೆ ಕೇಳುವುದು ಭಯೋತ್ಪಾದನೆಯ ಅತ್ಯಂತ ಭೀಕರ ಮುಖವಾಗಿತ್ತು. ಅದು ಕ್ರೌರ್ಯ. ಇದು ದೇಶದ ಸಾಮರಸ್ಯವನ್ನು ಮುರಿಯುವ ಪ್ರಯತ್ನವೂ ಆಗಿತ್ತು.

ನನಗೆ ವೈಯಕ್ತಿಕವಾಗಿ, ಈ ನೋವು ಅಪಾರವಾಗಿತ್ತು. ಈ ಭಯೋತ್ಪಾದಕ ದಾಳಿಯ ನಂತರ, ಇಡೀ ರಾಷ್ಟ್ರ, ಪ್ರತಿಯೊಬ್ಬ ನಾಗರಿಕ, ಪ್ರತಿಯೊಂದು ಸಮಾಜ, ಪ್ರತಿಯೊಂದು ವರ್ಗ, ಪ್ರತಿಯೊಂದು ರಾಜಕೀಯ ಪಕ್ಷ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಕ್ಕಾಗಿ ಒಂದೇ ಧ್ವನಿಯಲ್ಲಿ ನಿಂತವು. ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಾವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ.

ಇಂದು ಪ್ರತಿಯೊಬ್ಬ ಭಯೋತ್ಪಾದಕನಿಗೂ, ಪ್ರತಿಯೊಂದು ಭಯೋತ್ಪಾದಕ ಸಂಘಟನೆಗೂ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಹಣೆಯಿಂದ ಸಿಂಧೂರವನ್ನು ತೆಗೆದುಹಾಕುವುದರಿಂದ ಉಂಟಾಗುವ ಪರಿಣಾಮವೇನೆಂದು ತಿಳಿದಿದೆ.

ಸ್ನೇಹಿತರೇ,

ಆಪರೇಷನ್ ಸಿಂಧೂರ... ಇದು ಕೇವಲ ಹೆಸರಲ್ಲ, ಇದು ದೇಶದ ಕೋಟ್ಯಂತರ ಜನರ ಭಾವನೆಗಳ ಪ್ರತಿಬಿಂಬವಾಗಿದೆ.

'ಸಿಂಧೂರ' ಕಾರ್ಯಾಚರಣೆ... ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಿಗ್ಗೆ ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಇಡೀ ಜಗತ್ತು ನೋಡಿದೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳು ಮತ್ತು ಅವರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಪಡೆಗಳು ನಿಖರವಾದ ದಾಳಿ ನಡೆಸಿವೆ.

ಭಾರತ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದೆಂದು ಭಯೋತ್ಪಾದಕರು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ, ದೇಶವು ಒಗ್ಗಟ್ಟಾದಾಗ ದೇಶ ಮೊದಲು ಎಂಬ ಮನೋಭಾವದಿಂದ ತುಂಬಿದಾಗ ರಾಷ್ಟ್ರವು ಸರ್ವೋಚ್ಚವಾಗಿರುತ್ತದೆ, ನಂತರ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ, ಫಲಿತಾಂಶಗಳನ್ನು ಸಾಧಿಸಲಾಗುತ್ತದೆ.

ಭಾರತದ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದಾಗ, ಭಯೋತ್ಪಾದಕ ಸಂಘಟನೆಗಳ ಕಟ್ಟಡಗಳು ನಾಶವಾದವು. ಅಷ್ಟೇ ಅಲ್ಲದೆ, ಅವುಗಳ ನೈತಿಕ ಸ್ಥೈರ್ಯವೂ ಕಂಪನವಾಯಿತು.

ಬಹಾವಲ್ಪುರ್ ಮತ್ತು ಮುರಿಡ್ಕೆಯಂತಹ ಭಯೋತ್ಪಾದಕ ಅಡಗುತಾಣಗಳು ಒಂದು ರೀತಿಯಲ್ಲಿ ಜಾಗತಿಕ ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿವೆ. ಜಗತ್ತಿನ ಎಲ್ಲೆಡೆ ನಡೆದ ಯಾವುದೇ ಪ್ರಮುಖ ಭಯೋತ್ಪಾದಕ ದಾಳಿ... ಅದು ಸೆಪ್ಟೆಂಬರ್ 11 ಆಗಿರಲಿ ಅಥವಾ ಲಂಡನ್ ಟ್ಯೂಬ್ ಬಾಂಬ್ ದಾಳಿಯಾಗಿರಲಿ ಅಥವಾ ದಶಕಗಳಲ್ಲಿ ಭಾರತದಲ್ಲಿ ನಡೆದಿರುವ ಪ್ರಮುಖ ಭಯೋತ್ಪಾದಕ ದಾಳಿಗಳಾಗಿರಲಿ ಅಥವಾ ಎಲ್ಲೋ, ಮತ್ತೊಂದರಲ್ಲೋ , ಈ ಭಯೋತ್ಪಾದಕ ಅಡಗುತಾಣಗಳೊಂದಿಗೆ ಸಂಬಂಧ ಹೊಂದಿವೆ. ಭಯೋತ್ಪಾದಕರು ನಮ್ಮ ಸಹೋದರಿಯರ ಸಿಂಧೂರವನ್ನು ನಾಶಪಡಿಸಿದ್ದರು. ಅದಕ್ಕಾಗಿಯೇ ಭಾರತವು ಈ ಭಯೋತ್ಪಾದನೆಯ ಪ್ರಧಾನ ಕಚೇರಿಗಳನ್ನು ನಾಶಪಡಿಸಿತು.

ಭಾರತ ನಡೆಸಿದ ಈ ದಾಳಿಗಳಲ್ಲಿ 100 ಕ್ಕೂ ಹೆಚ್ಚು ಭೀಕರ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕಳೆದ ಎರಡೂವರೆ ಮೂರು ದಶಕಗಳಿಂದ ಪಾಕಿಸ್ತಾನದಲ್ಲಿ ಮುಕ್ತವಾಗಿ ಸುತ್ತಾಡುತ್ತಿದ್ದ ಮತ್ತು ಭಾರತದ ವಿರುದ್ಧ ಪಿತೂರಿ ನಡೆಸುತ್ತಿದ್ದ ಅನೇಕ ಭಯೋತ್ಪಾದಕ ನಾಯಕರನ್ನು ಭಾರತ ಒಂದೇ ಏಟಿನಲ್ಲಿ ನಿರ್ಮೂಲನೆ ಮಾಡಿತು.

ಸ್ನೇಹಿತರೇ,

ಭಾರತದ ಈ ಕ್ರಮದಿಂದ ಪಾಕಿಸ್ತಾನ ತೀವ್ರ ನಿರಾಶೆಗೊಂಡಿದೆ.

ಅವರು ಹತಾಶೆಯಿಂದ ಸುತ್ತುವರೆದಿದ್ದಾರೆ ಮತ್ತು ಕೋಪಗೊಂಡಿದ್ದಾರೆ ಮತ್ತು ಈ ಹತಾಶೆಯಲ್ಲಿ ಅವರು ಮತ್ತೊಂದು ಧೈರ್ಯಶಾಲಿ ಕೃತ್ಯವನ್ನು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತದ ಕ್ರಮವನ್ನು ಬೆಂಬಲಿಸುವ ಬದಲು, ಪಾಕಿಸ್ತಾನ ಭಾರತದ ಮೇಲೆಯೇ ದಾಳಿ ಮಾಡಲು ಪ್ರಾರಂಭಿಸಿತು.

ಪಾಕಿಸ್ತಾನ ನಮ್ಮ ಶಾಲೆಗಳು ಮತ್ತು ಕಾಲೇಜುಗಳನ್ನು ಗುರಿಯಾಗಿಸಿಕೊಂಡಿತು. ಗುರುದ್ವಾರಗಳು, ದೇವಾಲಯಗಳು, ಸಾಮಾನ್ಯ ನಾಗರಿಕರ ಮನೆಗಳು. ಪಾಕಿಸ್ತಾನ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿತು. ಆದರೆ ಇದರಲ್ಲಿ ಪಾಕಿಸ್ತಾನದ ಮನಸ್ಥಿತಿ ಬಹಿರಂಗವಾಯಿತು. ಪಾಕಿಸ್ತಾನದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಭಾರತದ ಮುಂದೆ ಹೇಗೆ ಒಣಹುಲ್ಲಿನಂತೆ ಬಿದ್ದವು ಎಂಬುದನ್ನು ಜಗತ್ತು ನೋಡಿತು.

ಭಾರತದ ಬಲಿಷ್ಠ ವಾಯು ರಕ್ಷಣಾ ವ್ಯವಸ್ಥೆಯು ಅವುಗಳನ್ನು ಆಕಾಶದಲ್ಲಿಯೇ ನಾಶಪಡಿಸಿತು. ಪಾಕಿಸ್ತಾನ ಗಡಿಯಲ್ಲಿ ದಾಳಿ ಮಾಡಲು ಸಿದ್ಧತೆ ನಡೆಸುತ್ತಿತ್ತು. ಆದರೆ ಭಾರತ ಪಾಕಿಸ್ತಾನದ ಎದೆಗೆ ಹೊಡೆದಿದೆ. ಭಾರತೀಯ ಡ್ರೋನ್‌ಗಳು... ಭಾರತೀಯ ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದವು. ಪಾಕಿಸ್ತಾನಿ ವಾಯುಪಡೆಯ ಆ ವಾಯುನೆಲೆಗಳು ಹಾನಿಗೊಳಗಾದವು.

ಅದರ ಬಗ್ಗೆ ಪಾಕಿಸ್ತಾನ ತುಂಬಾ ಹೆಮ್ಮೆಪಡುತ್ತಿತ್ತು. ಮೊದಲ ಮೂರು ದಿನಗಳಲ್ಲಿ ಭಾರತ ಪಾಕಿಸ್ತಾನವನ್ನು ಊಹಿಸಿಯೂ ಇಲ್ಲದಷ್ಟು ನಾಶಮಾಡಿತು.

ಭಾರತದ ಆಕ್ರಮಣಕಾರಿ ಕ್ರಮದ ನಂತರ ಪಾಕಿಸ್ತಾನ ತಪ್ಪಿಸಿಕೊಳ್ಳಲು ದಾರಿಗಳನ್ನು ಹುಡುಕಲು ಪ್ರಾರಂಭಿಸಿತು. ಪಾಕಿಸ್ತಾನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಜಗತ್ತನ್ನು ಬೇಡಿಕೊಳ್ಳುತ್ತಿತ್ತು ಮತ್ತು ಈ ಬಲವಂತದ ಮೇರೆಗೆ, ತೀವ್ರವಾಗಿ ಥಳಿಸಿದ ನಂತರ, ಮೇ 10 ರ ಮಧ್ಯಾಹ್ನ, ಪಾಕಿಸ್ತಾನಿ ಸೇನೆಯು ನಮ್ಮ ಡಿಜಿಎಂಒಗಳು ಅವರನ್ನು ಸಂಪರ್ಕಿಸಿತು.

ಆ ಹೊತ್ತಿಗೆ ನಾವು ಭಯೋತ್ಪಾದನೆಯ ಮೂಲಸೌಕರ್ಯವನ್ನು ದೊಡ್ಡ ಪ್ರಮಾಣದಲ್ಲಿ ನಾಶಪಡಿಸಿದ್ದೆವು. ಭಯೋತ್ಪಾದಕರು ಕೊಲ್ಲಲ್ಪಟ್ಟರು. ನಾವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡಿದ್ದೆವು. ಹಾಗಾಗಿ, ಪಾಕಿಸ್ತಾನದಿಂದ ಮನವಿ ಬಂದಾಗ, ಇದನ್ನು ಪಾಕಿಸ್ತಾನದಿಂದ ಹೇಳಿದಾಗ, ಅವರ ಕಡೆಯಿಂದ ಇನ್ನು ಮುಂದೆ ಯಾವುದೇ ಭಯೋತ್ಪಾದಕ ಚಟುವಟಿಕೆ ಮತ್ತು ಮಿಲಿಟರಿ ಸಾಹಸ ಇರುವುದಿಲ್ಲ ಎಂದು ಹೇಳಿದ್ದರಿಂದ ಭಾರತವೂ ಅದನ್ನು ಪರಿಗಣಿಸಿತು.

ಮತ್ತು ನಾನು ಮತ್ತೊಮ್ಮೆ ಪುನರಾವರ್ತಿಸುತ್ತೇನೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಮತ್ತು ಸೇನಾ ನೆಲೆಗಳ ವಿರುದ್ಧದ ನಮ್ಮ ಪ್ರತೀಕಾರದ ಕ್ರಮವನ್ನು ನಾವು ಮುಂದೂಡಿದ್ದೇವೆ.

ಮುಂದಿನ ದಿನಗಳಲ್ಲಿ ಈ ಮಾನದಂಡದ ಆಧಾರದ ಮೇಲೆ ನಾವು ಪಾಕಿಸ್ತಾನದ ಪ್ರತಿಯೊಂದು ಹೆಜ್ಜೆಯನ್ನೂ ಅಳೆಯುತ್ತೇವೆ.

ದೇಶವಾಸಿಗಳೇ,

ಭಾರತದ ಮೂರೂ ಸೇನೆಗಳು, ನಮ್ಮ ವಾಯುಪಡೆ, ನಮ್ಮ ಸೇನೆ ಮತ್ತು ನಮ್ಮ ನೌಕಾಪಡೆ, ನಮ್ಮ ಗಡಿ ಭದ್ರತಾ ಪಡೆ-ಬಿಎಸ್‌ ಎಫ್‌, ಭಾರತದ ಅರೆ ಸೇನಾ ಪಡೆ ಸತತವಾಗಿ ನಿಗಾ ವಹಿಸಿವೆ. ಸರ್ಜಿಕಲ್‌ ಸ್ಟ್ರೈಕ್‌ ಮತ್ತು ವಾಯು ದಾಳಿಯ ಬಳಿಕ ಈಗ ಆಪರೇಷನ್‌ ಸಿಂಧೂರ್ ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯಾಗಿದೆ. ಆಪರೇಷನ್ ಸಿಂಧೂರವು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಹೊಸ ಆರಂಭವನ್ನು ಮಾಡಿದೆ. ಹೊಸ ಮಾನದಂಡವನ್ನು ಹೊಸ ಅಧ್ಯಾಯವನ್ನು ಸ್ಥಾಪಿಸಿದೆ. ಮೊದಲನೆಯದು , ಭಾರತದ ಮೇಲೆ ಭಯೋತ್ಪಾದಕ ದಾಳಿಯಾದರೆ ದಿಟ್ಟ ಉತ್ತರವನ್ನು ನೀಡಲಾಗುವುದು. ನಾವು ನಮ್ಮ ರೀತಿಯಲ್ಲಿ ನಮ್ಮ ಷರತ್ತುಗಳ ಮೇಲೆ ಉತ್ತರಗಳನ್ನು ನೀಡುತ್ತೇವೆ. ಭಯೋತ್ಪಾದನೆಯ ಮೂಲವನ್ನು ಬುಡ ಸಮೇತವಾಗಿ ನಿಗ್ರಹಗೊಳಿಸಲು ಕಠಿಣ ಕಾರ್ಯಾಚರಣೆಯನ್ನು ಕೈಗೊಳ್ಳುತ್ತೇವೆ. ಎರಡನೇಯದು ಯಾವುದೇ ಪರಮಾಣು ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಪರಮಾಣು ಬೆದರಿಕೆಯ ಅಡಿಯಲ್ಲಿ ಬೆಳೆಯುತ್ತಿರುವ ಭಯೋತ್ಪಾದಕ ತಾಣಗಳ ಮೇಲೆ ಭಾರತವು, ನಿಖರವಾದ ಮತ್ತು ನಿರ್ಣಾಯಕವಾದ ದಾಳಿಗಳನ್ನು ಕೈಗೊಳ್ಳಲಿದೆ. ಮೂರನೇಯದು , ಭಯೋತ್ಪಾದನೆ ಹಾಗೂ ಭಯೋತ್ಪಾದನೆಗೆ ಸಹಕರಿಸುವ ಎಲ್ಲ ಶಕ್ತಿಗಳನ್ನು ಸಹ ಒಂದೇ ದೃಷ್ಟಿಯಲ್ಲಿ ನೋಡಲಾಗುವುದು. ಅವರು ಸಹ ದೇಶದ ಆತಂಕವಾದಿಗಳಾಗಿದ್ದಾರೆ .

ಇಡೀ ವಿಶ್ವ, ಪಾಕಿಸ್ತಾನದ ಹೇಯ ಕೃತ್ಯವನ್ನು ಮತ್ತೊಮ್ಮೆ ನೋಡಿದೆ. ಆಪರೇಷನ್‌ ಸಿಂಧೂರ್‌ ದಾಳಿಯಲ್ಲಿ ಸಾವಿಗೀಡಾದ ಭಯೋತ್ಪಾದಕರಿಗೆ ವಿದಾಯ ನೀಡುವಲ್ಲಿ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ನಿರತರಾಗಿದ್ದರು. ಪಾಕ್‌ ನ ಪ್ರಾಯೋಜಿತ ಭಯೋತ್ಪಾದನೆಗೆ ಇದೊಂದು ಬಹುದೊಡ್ಡ ಸಾಕ್ಷಿಯಾಗಿದೆ.

ನಾವು ಭಾರತ ಮತ್ತು ನಮ್ಮ ನಾಗರಿಕರನ್ನು ಯಾವುದೇ ರೀತಿಯ ಅಪಾಯದಿಂದ ರಕ್ಷಿಸುವುದಕ್ಕೋಸ್ಕರ ನಿರಂತರವಾಗಿ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತೇವೆ.

ಸ್ನೇಹಿತರೆ,

ಯುದ್ಧದ ಮೈದಾನದಲ್ಲಿ ನಾವು ಪ್ರತಿ ಬಾರಿ ಪಾಕಿಸ್ತಾನವನ್ನು ದೂಳೀಪಟ ಮಾಡಿದ್ದೇವೆ ಮತ್ತು ಈ ಬಾರಿ ಆಪರೇಷನ್‌ ಸಿಂಧೂರ್‌, ಹೊಸ ಆಯಾಮಕ್ಕೆ ಸೇರ್ಪಡೆಯಾಗಿದೆ.

ನಾವು ಮರುಭೂಮಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ನಮ್ಮ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದೇವೆ ಮತ್ತು ಜತೆಗೇ, ಹೊಸ ತಲೆಮಾರಿನ ಯುದ್ಧಕ್ರಮದಲ್ಲೂ ನಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸಿದ್ದೇವೆ.

ಈ ಆಪರೇಷನ್‌ ಮೂಲಕ, ನಮ್ಮ ಮೇಡ್‌ ಇನ್‌ ಇಂಡಿಯಾ ಶಸ್ತ್ರಾಸ್ತ್ರಗಳ ದಕ್ಷತೆಯೂ ಸಾಬೀತಾಗಿದೆ.

21ನೇ ಶತಮಾನದ ಯುದ್ಧದಲ್ಲಿ ಮೇಡ್‌ ಇನ್‌ ಇಂಡಿಯಾ ರಕ್ಷಣಾ ಸಲಕರಣೆಗಳ ಸಮಯ ಈಗ ಬಂದಿದೆ ಎನ್ನುವುದನ್ನು ಇಂದು ವಿಶ್ವ ನೋಡುತ್ತಿದೆ.

ಸ್ನೇಹಿತರೇ,

ಎಲ್ಲ ರೀತಿಯ ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಒಗ್ಗೂಡಿರುವುದು ನಮ್ಮ ಅತ್ಯಂತ ದೊಡ್ಡ ಶಕ್ತಿಯಾಗಿದೆ.

ನಿಶ್ಚಿತವಾಗಿ ಈ ಸಮಯ ಯುದ್ಧದ ಕಾಲವಲ್ಲ,

ಆದರೆ ಈ ಕಾಲ ಭಯೋತ್ಪಾದನೆಯ ಸಮಯವೂ ಅಲ್ಲ.

ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರುವುದು ಉತ್ತಮ ಜಗತ್ತನ್ನು ಸುನಿಶ್ಚಿತಗೊಳಿಸುತ್ತದೆ.

ದೇಶವಾಸಿಗಳೇ,

ಪಾಕಿಸ್ತಾನಿ ಯೋಧರು, ಪಾಕಿಸ್ತಾನದ ಸರ್ಕಾರ ಯಾವ ರೀತಿಯಲ್ಲಿ ಭಯೋತ್ಪಾದನೆಗೆ ಪುಷ್ಟಿ ನೀಡುತ್ತಿವೆ ಎಂದರೆ, ಒಂದು ದಿನ ಅದು ಪಾಕಿಸ್ತಾನವನ್ನೇ ಅಂತ್ಯಗೊಳಿಸುತ್ತದೆ.

ಪಾಕಿಸ್ತಾನಕ್ಕೆ ಇದರಿಂದ ರಕ್ಷಿಸಿಕೊಳ್ಳಬೇಕು ಎಂದಾದರೆ ಅದು ತನ್ನ ಭಯೋತ್ಪಾದನೆಗೆ ಮೂಲಸೌಕರ್ಯ ಒದಗಿಸುವ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸಬೇಕು. ಇದನ್ನು ಬಿಟ್ಟು ಶಾಂತಿಯ ಬೇರೆ ಯಾವುದೇ ಮಾರ್ಗವಿಲ್ಲ.

ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಎನ್ನುವುದು ಭಾರತದ ಅತ್ಯಂತ ಸ್ಪಷ್ಟ ನಿಲುವಾಗಿದೆ.

ಭಯೋತ್ಪಾದನೆ ಮತ್ತು ವ್ಯಾಪಾರ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಮತ್ತು,

ನೀರು ಮತ್ತು ರಕ್ತ ಒಟ್ಟಿಗೇ ಹರಿಯಲು ಸಾಧ್ಯವಿಲ್ಲ.

ನಮ್ಮ ಪ್ರಕಟಿತ ನೀತಿಯೆಂದರೆ, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯುತ್ತದೆ ಎಂದಾದರೆ, ಅದು ಭಯೋತ್ಪಾದನೆಯ ಕುರಿತಾಗಿಯೇ ಆಗಿರುತ್ತದೆ. ಪಾಕಿಸ್ತಾನದೊಂದಿಗೆ ಮಾತುಕತೆಯಾಗುವುದಾದರೆ ಪಾಕ್‌ ಆಕ್ರಮಿತ ಕಾಶ್ಮೀರ-ಪಿಓಕೆಯ ಕುರಿತಾಗಿಯೇ ಇರುತ್ತದೆ ಎನ್ನುವುದನ್ನು ನಾನು ಇಂದು ಜಾಗತಿಕ ಸಮುದಾಯಕ್ಕೂ ತಿಳಿಸುತ್ತೇನೆ.

ಪ್ರೀತಿಯ ದೇಶವಾಸಿಗಳೇ,

ಇಂದು ಬುದ್ಧ ಪೂರ್ಣಿಮೆಯಾಗಿದೆ. ಭಗವಾನ್‌ ಬುದ್ಧ ನಮಗೆ ಶಾಂತಿಯ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಶಾಂತಿಯ ಮಾರ್ಗ ಸಹ ಶಕ್ತಿಯಿಂದ ಕೂಡಿದ್ದು ಸಾಗುತ್ತದೆ. ಮಾನವೀಯತೆ, ಶಾಂತಿ ಮತ್ತು ಸಮೃದ್ಧಿಯೆಡೆಗೆ ಮುನ್ನಡೆಯುತ್ತದೆ.

ಪ್ರತಿ ಭಾರತೀಯನು ಶಾಂತಿಯಿಂದ ಬದುಕಬೇಕು, ವಿಕಸಿತ ಭಾರತದ ಕನಸುಗಳನ್ನು ಪೂರ್ಣಗೊಳಿಸಬೇಕು.

ಇದರಿಂದಾಗಿ, ಭಾರತ ಶಕ್ತಿಶಾಲಿಯಾಗುವುದು ಅಗತ್ಯವಾಗಿದೆ.

ಮತ್ತು ಅವಶ್ಯಕತೆಯಿರುವಾಗ ಈ ಶಕ್ತಿಯ ಬಳಕೆ ಮಾಡುವುದು ಕೂಡ ಅಗತ್ಯ.

ಕೆಲವು ದಿನಗಳಿಂದ ಭಾರತವು ಇದನ್ನೇ ಮಾಡಿದೆ.

ನಾನು ಮತ್ತೊಮ್ಮೆ ಭಾರತದ ಸೇನೆ ಮತ್ತು ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸುತ್ತೇನೆ. ನಮ್ಮ ದೇಶವಾಸಿಗಳ ಧೈರ್ಯ ಮತ್ತು ಏಕತೆಗೆ ವಂದಿಸುತ್ತೇನೆ.

ಧನ್ಯವಾದ,

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!