ಇಂದು ಇಡೀ ವಿಶ್ವವು ನಮ್ಮ 'ವಿಕಸಿತ ಭಾರತ'ದ ಸಂಕಲ್ಪದ ಕುರಿತು ಚರ್ಚಿಸುತ್ತಿದೆ. ಇದು ವಿಶೇಷವಾಗಿ ಮೂಲಸೌಕರ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಪ್ರತಿಬಿಂಬಿಸುತ್ತದೆ, ಅದರ ಮೇಲೆ ಅಭಿವೃದ್ಧಿ ಹೊಂದಿದ ಭಾರತದ ತಳಹದಿ ನಿರ್ಮಾಣವಾಗುತ್ತಿದೆ: ಪ್ರಧಾನಮಂತ್ರಿ
ನಾವು "ಒಂದು ದೇಶ, ಒಂದು ಗ್ಯಾಸ್ ಗ್ರಿಡ್" ದೃಷ್ಟಿಕೋನದ ಮೇಲೆ ಕೆಲಸ ಮಾಡಿದ್ದೇವೆ ಮತ್ತು "ಪ್ರಧಾನ ಮಂತ್ರಿ ಊರ್ಜಾ ಗಂಗಾ" ಯೋಜನೆಯನ್ನು ರೂಪಿಸಿದ್ದೇವೆ: ಪ್ರಧಾನಮಂತ್ರಿ
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕಾಗಿದೆ. ಅಭಿವೃದ್ಧಿಯ ಮೂಲಕ ಸಬಲೀಕರಣ, ಉದ್ಯೋಗದ ಮೂಲಕ ಸ್ವಾವಲಂಬನೆ ಮತ್ತು ಸ್ಪಂದನೆಯ ಮೂಲಕ ಉತ್ತಮ ಆಡಳಿತ ನಮ್ಮ ಮುಂದಿನ ದಾರಿಯಾಗಲಿದೆ: ಪ್ರಧಾನಮಂತ್ರಿ

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!

ನಮ್ಮ ದುರ್ಗಾಪುರವು ಉಕ್ಕಿನ ನಗರವಾಗಿರುವ ಜತೆಗೆ, ಭಾರತದ ಕಾರ್ಯ (ಉದ್ಯೋಗ) ಪಡೆಯ ಪ್ರಮುಖ ಕೇಂದ್ರವೂ ಆಗಿದೆ. ದುರ್ಗಾಪುರವು ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಇಂದು ಆ ಪಾತ್ರವನ್ನು ಮತ್ತಷ್ಟು ಬಲಪಡಿಸುವ ಅವಕಾಶ ನಮಗೆ ಸಿಕ್ಕಿದೆ. ಸ್ವಲ್ಪ ಸಮಯದ ಹಿಂದೆ, 5,400 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಯಿತು ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಯೋಜನೆಗಳು ಈ ಪ್ರದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸುತ್ತವೆ. ಅವು ಅನಿಲ ಆಧಾರಿತ ಸಾರಿಗೆ ವ್ಯವಸ್ಥೆ ಮತ್ತು ಅನಿಲ ಆಧಾರಿತ ಆರ್ಥಿಕತೆಯನ್ನು ಉತ್ತೇಜಿಸುತ್ತವೆ. ಇಂದು ಪ್ರಾರಂಭಿಸಲಾದ ಯೋಜನೆಗಳು ಈ ಉಕ್ಕಿನ ನಗರದ ಗುರುತನ್ನು ಮತ್ತಷ್ಟು ಬಲಪಡಿಸುತ್ತವೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಈ ಉಪಕ್ರಮಗಳು ಪಶ್ಚಿಮ ಬಂಗಾಳವು "ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್" ಎಂಬ ಮಂತ್ರದಡಿ ಮುಂದುವರಿಯಲು ಸಹಾಯ ಮಾಡುತ್ತದೆ. ಇವು ಇಲ್ಲಿನ ಯುವಕರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. ಈ ಯೋಜನೆಗಳಿಗಾಗಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

ಸ್ನೇಹಿತರೆ,

ಇಂದು ಜಗತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ದ ನಿರ್ಣಯಗಳ ಬಗ್ಗೆ ಮಾತನಾಡುತ್ತಿದೆ. ಇದರ ಹಿಂದೆ ಭಾರತದಾದ್ಯಂತ ಕಾಣುತ್ತಿರುವ ಪರಿವರ್ತನೆಗಳಿವೆ - 'ವಿಕಸಿತ ಭಾರತ'ಕ್ಕೆ ಅಡಿಪಾಯ ಹಾಕುತ್ತಿರುವ ರೂಪಾಂತರಗಳು. ಈ ಬದಲಾವಣೆಗಳ ಪ್ರಮುಖ ಅಂಶವೆಂದರೆ, ಭಾರತದ ಮೂಲಸೌಕರ್ಯ. ನಾನು ಮೂಲಸೌಕರ್ಯದ ಬಗ್ಗೆ ಮಾತನಾಡುವಾಗ ನಾನು ಸಾಮಾಜಿಕ, ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಸೇರಿಸುತ್ತೇನೆ. ಬಡವರಿಗೆ 4 ಕೋಟಿಗೂ ಹೆಚ್ಚು ಕಾಯಂ ಮನೆಗಳು, ಕೋಟ್ಯಂತರ ಶೌಚಾಲಯಗಳು, 12 ಕೋಟಿಗೂ ಹೆಚ್ಚಿನ ನಲ್ಲಿ ನೀರಿನ ಸಂಪರ್ಕಗಳು, ಸಾವಿರಾರು ಕಿಲೋಮೀಟರ್ ಹೊಸ ರಸ್ತೆಗಳು, ಹೊಸ ಹೆದ್ದಾರಿಗಳು, ಹೊಸ ರೈಲು ಮಾರ್ಗಗಳು, ಸಣ್ಣ ನಗರಗಳಲ್ಲಿ ವಿಮಾನ ನಿಲ್ದಾಣಗಳು, ಪ್ರತಿ ಮನೆ ಮತ್ತು ಹಳ್ಳಿಯನ್ನು ತಲುಪುವ ಅಂತರ್ಜಾಲ ಪ್ರವೇಶ - ಈ ಎಲ್ಲಾ ಆಧುನಿಕ ಮೂಲಸೌಕರ್ಯಗಳು ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಪ್ರತಿಯೊಂದು ರಾಜ್ಯಕ್ಕೂ ಪ್ರಯೋಜನ ನೀಡುತ್ತಿವೆ.

 

ಸ್ನೇಹಿತರೆ,

ಪಶ್ಚಿಮ ಬಂಗಾಳದಲ್ಲಿ ರೈಲು ಸಂಪರ್ಕದ ಅಭೂತಪೂರ್ವ ಕೆಲಸ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ವಂದೇ ಭಾರತ್ ರೈಲುಗಳು ಓಡುತ್ತಿರುವ ರಾಜ್ಯಗಳಲ್ಲಿ ಬಂಗಾಳವೂ ಒಂದಾಗಿದೆ. ಕೋಲ್ಕತಾ ಮೆಟ್ರೋ ವೇಗವಾಗಿ ವಿಸ್ತರಿಸುತ್ತಿದೆ. ಇಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲಾಗುತ್ತಿದೆ, ಮಾರ್ಗ ವಿಸ್ತರಣೆ ಮತ್ತು ವಿದ್ಯುದೀಕರಣ ಕೆಲಸಗಳು ವೇಗವಾಗಿ ಪ್ರಗತಿಯಲ್ಲಿವೆ. ಅನೇಕ ರೈಲು ನಿಲ್ದಾಣಗಳನ್ನು ಆಧುನೀಕರಿಸಲಾಗುತ್ತಿದೆ. ಇದರ ಜತೆಗೆ, ಹೆಚ್ಚಿನ ಸಂಖ್ಯೆಯ ರೈಲ್ವೆ ಮೇಲ್ಸೇತುವೆಗಳನ್ನು ಸಹ ನಿರ್ಮಿಸಲಾಗುತ್ತಿದೆ. ಇಂದು, ಪಶ್ಚಿಮ ಬಂಗಾಳಕ್ಕೆ ಇನ್ನೂ 2 ರೈಲ್ವೆ ಮೇಲ್ಸೇತುವೆಗಳನ್ನು ನೀಡಲಾಗಿದೆ. ಈ ಎಲ್ಲಾ ಪ್ರಯತ್ನಗಳು ಬಂಗಾಳ ಜನರ ಜೀವನವನ್ನು ಗಮನಾರ್ಹವಾಗಿ ಸುಗಮಗೊಳಿಸುತ್ತವೆ.

ಸ್ನೇಹಿತರೆ,

ನಾವು ಇಲ್ಲಿನ ವಿಮಾನ ನಿಲ್ದಾಣವನ್ನು ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯೊಂದಿಗೆ ಸಂಪರ್ಕಿಸಿದ್ದೇವೆ. ಕಳೆದ ವರ್ಷವೊಂದರಲ್ಲೇ, 500,000ಕ್ಕೂ ಹೆಚ್ಚು ಪ್ರಯಾಣಿಕರು ಇದರ ಮೂಲಕ ಪ್ರಯಾಣಿಸಿದ್ದಾರೆ. ಅಂತಹ ಮೂಲಸೌಕರ್ಯ ಅಭಿವೃದ್ಧಿಪಡಿಸಿದಾಗ, ಜನರು ಉತ್ತಮ ಸೌಲಭ್ಯಗಳಿಂದ ಪ್ರಯೋಜನ ಪಡೆಯುವುದಲ್ಲದೆ, ಸಾವಿರಾರು ಯುವಜನರು ಉದ್ಯೋಗವನ್ನು ಸಹ ಪಡೆಯುತ್ತಾರೆ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ಈ ಯೋಜನೆಗಳನ್ನು ಪೂರ್ಣಗೊಳಿಸಲು ಬಳಸುವ ಕಚ್ಚಾ ವಸ್ತುಗಳ ಉತ್ಪಾದನೆ ಸಮಯದಲ್ಲಿ ದೊಡ್ಡ ಪ್ರಮಾಣದ ಉದ್ಯೋಗವನ್ನು ಸೃಷ್ಟಿಸುತ್ತಿವೆ.

ಸ್ನೇಹಿತರೆ,

ಕಳೆದ 10–11 ವರ್ಷಗಳಲ್ಲಿ, ದೇಶದಲ್ಲಿ ಅನಿಲ ಸಂಪರ್ಕದ ಕುರಿತು ಮಾಡಿದ ಕೆಲಸಕ್ಕೆ ಸರಿಸಾಟಿಯೇ ಇಲ್ಲ. ಕಳೆದ ದಶಕದಲ್ಲಿ, ಎಲ್‌.ಪಿ.ಜಿ ಅನಿಲ ದೇಶದ ಪ್ರತಿಯೊಂದು ಮನೆ ತಲುಪಿದೆ, ಈ ಸಾಧನೆಯನ್ನು ಜಾಗತಿಕವಾಗಿ ಪ್ರಶಂಸಿಸಲಾಗಿದೆ. ನಾವು ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್‌ನ ದೃಷ್ಟಿಕೋನದ ಮೇಲೆ ಕೆಲಸ ಮಾಡಿದ್ದೇವೆ, ಪ್ರಧಾನ ಮಂತ್ರಿ ಉರ್ಜಾ ಗಂಗಾ ಯೋಜನೆ ಪ್ರಾರಂಭಿಸಿದ್ದೇವೆ. ಈ ಯೋಜನೆಯಡಿ, ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ಭಾರತದ 6 ರಾಜ್ಯಗಳಲ್ಲಿ ಅನಿಲ ಪೈಪ್‌ಲೈನ್‌ಗಳನ್ನು ಹಾಕಲಾಗುತ್ತಿದೆ. ಈ ರಾಜ್ಯಗಳಲ್ಲಿನ ಕೈಗಾರಿಕೆಗಳು ಮತ್ತು ಮನೆಗಳಿಗೆ ಕೈಗೆಟುಕುವ ಪೈಪ್ ಅನಿಲ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಅನಿಲ ಲಭ್ಯವಾದಾಗ ಮಾತ್ರ ಈ ರಾಜ್ಯಗಳಲ್ಲಿನ ವಾಹನಗಳು ಸಿ.ಎನ್‌.ಜಿಯಲ್ಲಿ ಚಲಿಸಲು ಸಾಧ್ಯವಾಗುತ್ತದೆ. ನಮ್ಮ ಕೈಗಾರಿಕೆಗಳು ಅನಿಲ ಆಧಾರಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ದುರ್ಗಾಪುರದ ಕೈಗಾರಿಕಾ ಭೂಮಿ ಈಗ ರಾಷ್ಟ್ರೀಯ ಅನಿಲ ಗ್ರಿಡ್‌ನ ಭಾಗವಾಗಿದೆ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇದು ಸ್ಥಳೀಯ ಕೈಗಾರಿಕೆಗಳಿಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ. ಈ ಯೋಜನೆಯ ಮೂಲಕ, ಪಶ್ಚಿಮ ಬಂಗಾಳದ ಸುಮಾರು 25ರಿಂದ 30 ಲಕ್ಷ ಮನೆಗಳು ಕೈಗೆಟುಕುವ ದರದಲ್ಲಿ ಪೈಪ್‌ ಲೈನ್ ಅನಿಲ ಪಡೆಯುತ್ತವೆ. ಇದರರ್ಥ ಈ ಕುಟುಂಬಗಳಿಗೆ ಮತ್ತು ವಿಶೇಷವಾಗಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಜೀವನ ಸುಲಭವಾಗುತ್ತದೆ. ಇದರ ಪರಿಣಾಮವಾಗಿ ಸಾವಿರಾರು ಉದ್ಯೋಗಾವಕಾಶಗಳು ಸಹ ಸೃಷ್ಟಿಯಾಗುತ್ತವೆ.

 

ಸ್ನೇಹಿತರೆ,

ಇಂದು ದುರ್ಗಾಪುರ ಮತ್ತು ರಘುನಾಥಪುರದ ಪ್ರಮುಖ ಉಕ್ಕು ಮತ್ತು ವಿದ್ಯುತ್ ಸ್ಥಾವರಗಳು ಸುಧಾರಿತ ತಂತ್ರಜ್ಞಾನದಿಂದ ಸಜ್ಜುಗೊಂಡಿವೆ. ಅವುಗಳಿಗೆ ಸುಮಾರು 1,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದೆ. ಈ ಸ್ಥಾವರಗಳು ಈಗ ಹೆಚ್ಚು ಪರಿಣಾಮಕಾರಿಯಾಗಿ ಮಾರ್ಪಟ್ಟಿವೆ, ಜಾಗತಿಕವಾಗಿ ಸ್ಪರ್ಧಿಸಲು ಸಿದ್ಧವಾಗಿವೆ. ಈ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಬಂಗಾಳದ ಜನರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

 

ಸ್ನೇಹಿತರೆ,

ಅದು ಭಾರತದ ಕಾರ್ಖಾನೆಗಳಾಗಲಿ, ನಮ್ಮ ಹೊಲಗಳು ಮತ್ತು ಗದ್ದೆಗಳಾಗಲಿ - 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸ್ಪಷ್ಟ ನಿರ್ಣಯದೊಂದಿಗೆ ಎಲ್ಲೆಡೆ ಕೆಲಸ ನಡೆಯುತ್ತಿದೆ. ನಮ್ಮ ಮಾರ್ಗ: ಅಭಿವೃದ್ಧಿಯ ಮೂಲಕ ಸಬಲೀಕರಣ, ಉದ್ಯೋಗದ ಮೂಲಕ ಸ್ವಾವಲಂಬನೆ ಮತ್ತು ಸೂಕ್ಷ್ಮತೆಯ ಮೂಲಕ ಉತ್ತಮ ಆಡಳಿತ. ಈ ತತ್ವಗಳಿಂದ ಮಾರ್ಗದರ್ಶಿಸಲ್ಪಟ್ಟ ನಾವು, ಭಾರತದ ಅಭಿವೃದ್ಧಿಯ ಪಯಣದಲ್ಲಿ ಪಶ್ಚಿಮ ಬಂಗಾಳವನ್ನು ಬಲಿಷ್ಠ ಎಂಜಿನ್ ಆಗಿ ಮಾಡಲು ನಿರ್ಧರಿಸಿದ್ದೇವೆ. ಮತ್ತೊಮ್ಮೆ, ಈ ಅಭಿವೃದ್ಧಿ ಯೋಜನೆಗಳಿಗಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ಈಗ ಅಷ್ಟೆ - ನಾನು ಇನ್ನೂ ಹೆಚ್ಚಿನದನ್ನು ಹೇಳುವುದಿದೆ, ಆದರೆ ಈ ವೇದಿಕೆಯಲ್ಲಿ ಹೇಳುವ ಬದಲು, ಮುಂದಿನ ಕಾರ್ಯಕ್ರಮದಲ್ಲಿ ಹೇಳುವುದು ಉತ್ತಮ. ಅಲ್ಲಿ ಏನು ಹೇಳಲಾಗುವುದು ಎಂದು ಕೇಳಲು ಇಡೀ ಬಂಗಾಳ ಮತ್ತು ಇಡೀ ದೇಶವು ಕುತೂಹಲದಿಂದ ಕಾಯುತ್ತಿದೆ. ಮಾಧ್ಯಮದವರು ಸಹ ತುಂಬಾ ಕುತೂಹಲದಿಂದ ಇದ್ದಾರೆ. ಆದ್ದರಿಂದ ಸ್ನೇಹಿತರೆ, ಈ ಕಾರ್ಯಕ್ರಮದಲ್ಲಿ ನಾನು ನನ್ನ ಮಾತುಗಳನ್ನು ಮುಗಿಸುತ್ತೇನೆ. ಆದರೆ ಕೆಲವೇ ಕ್ಷಣಗಳಲ್ಲಿ, ನಾನು ಮತ್ತೆ ದೃಢನಿಶ್ಚಯದಿಂದ ಮಾತನಾಡುತ್ತೇನೆ, ಮುಂದಿನ ಕಾರ್ಯಕ್ರಮದಲ್ಲಿ. ತುಂಬು ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।