ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಬಡವರ ಪರವಾದ ಅಭಿವೃದ್ಧಿ ಉಪಕ್ರಮಗಳನ್ನು ನಾವು ಅನುಷ್ಠಾನಗೊಳಿಸುತ್ತಿದ್ದೇವೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಭರವಸೆ ಮತ್ತು ನಂಬಿಕೆಯ ನವೋದಯವಾಗುತ್ತಿದೆ: ಪ್ರಧಾನಮಂತ್ರಿ
ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ: ಪ್ರಧಾನಮಂತ್ರಿ

ಭಾರತ್ ಮಾತಾ ಕಿ ಜೈ,

ಭಾರತ್ ಮಾತಾ ಕಿ ಜೈ,

ಭಾರತ್ ಮಾತಾ ಕಿ ಜೈ!

ರಾಜ್ಯಪಾಲರಾದ ಶ್ರೀ ಅಜಯ್ ಭಲ್ಲಾ ಜಿ, ಇಲ್ಲಿರುವ ರಾಜ್ಯ ಸರ್ಕಾರದ ಅಧಿಕಾರಿಗಳೆ ಮತ್ತು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಣಿಪುರದ ನನ್ನ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ನಮಸ್ಕಾರ!

ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.

 

ಸ್ನೇಹಿತರೆ,

ಈ ಪ್ರದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳು, ಅದರ ವೈವಿಧ್ಯತೆ ಮತ್ತು ಚೈತನ್ಯವು ಭಾರತದ ಗಮನಾರ್ಹ ಶಕ್ತಿಯನ್ನು ಪ್ರತಿನಿಧಿಸುತ್ತದೆ. 'ಮಣಿಪುರ' ಎಂಬ ಹೆಸರಿನಲ್ಲೂ 'ಮಣಿ'(ರತ್ನ) ಎಂಬ ಪದವಿದೆ. ಇದು ಮುಂಬರುವ ದಿನಗಳಲ್ಲಿ ಇಡೀ ಈಶಾನ್ಯ ಪ್ರದೇಶದ ತೇಜಸ್ಸಿಗೆ ಮೆರುಗು ನೀಡುವ ರತ್ನವಾಗಿದೆ. ಭಾರತ ಸರ್ಕಾರವು ಮಣಿಪುರವನ್ನು ಅಭಿವೃದ್ಧಿಯ ಹಾದಿಯಲ್ಲಿ ವೇಗವಾಗಿ ಮುನ್ನಡೆಸಲು ಸದಾ ಶ್ರಮಿಸುತ್ತಿದೆ. ಈ ಉತ್ಸಾಹದಲ್ಲಿ, ನಾನು ಇಂದು ನಿಮ್ಮೆಲ್ಲರ ನಡುವೆ ಬಂದಿದ್ದೇನೆ. ಸ್ವಲ್ಪ ಸಮಯದ ಹಿಂದೆ, ಸುಮಾರು 7 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ಈ ಯೋಜನೆಗಳು ಮಣಿಪುರದ ಜನರು ಮತ್ತು ಬೆಟ್ಟಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜೀವನವನ್ನು ಮತ್ತಷ್ಟು ಸುಧಾರಿಸುತ್ತವೆ. ಈ ಯೋಜನೆಗಳು ನಿಮ್ಮೆಲ್ಲರಿಗೂ ಹೊಸ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ನಿರ್ಮಿಸುತ್ತವೆ. ಈ ಯೋಜನೆಗಳಿಗಾಗಿ ಮಣಿಪುರದ ಎಲ್ಲಾ ಜನರಿಗೆ ಮತ್ತು ಚುರಾಚಂದ್‌ಪುರದ ಎಲ್ಲರಿಗೂ ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೆ,

ಮಣಿಪುರ ಗಡಿಯಲ್ಲಿರುವ ರಾಜ್ಯ. ಇಲ್ಲಿ ಸಂಪರ್ಕವು ಯಾವಾಗಲೂ ಒಂದು ಪ್ರಮುಖ ಸವಾಲಾಗಿದೆ. ಉತ್ತಮ ರಸ್ತೆಗಳ ಕೊರತೆಯಿಂದಾಗಿ ನೀವು ಎದುರಿಸಿದ ತೊಂದರೆಗಳನ್ನು ನಾನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿದ್ದೇನೆ. ಅದಕ್ಕಾಗಿಯೇ, 2014ರಿಂದ ಮಣಿಪುರದ ಸಂಪರ್ಕ ಸುಧಾರಿಸಲು ನಿರಂತರವಾಗಿ ಕೆಲಸ ಮಾಡಲು ನಾನು ಬಲವಾದ ಒತ್ತು ನೀಡಿದ್ದೇನೆ. ಇದನ್ನು ಸಾಧಿಸಲು ಭಾರತ ಸರ್ಕಾರ 2 ಹಂತಗಳಲ್ಲಿ ಪ್ರಯತ್ನಗಳನ್ನು ಕೈಗೊಂಡಿದೆ. ಮೊದಲನೆಯದಾಗಿ, ಮಣಿಪುರದಲ್ಲಿ ರೈಲ್ವೆ ಮತ್ತು ರಸ್ತೆಗಳಿಗೆ ಬಜೆಟ್ ಅನ್ನು ನಾವು ಹಲವಾರು ಬಾರಿ ಹೆಚ್ಚಿಸಿದ್ದೇವೆ. ಎರಡನೆಯದಾಗಿ, ನಗರಗಳಿಗೆ ಮಾತ್ರವಲ್ಲದೆ ಹಳ್ಳಿಗಳಿಗೂ ರಸ್ತೆಗಳನ್ನು ವಿಸ್ತರಿಸುವತ್ತ ಗಮನ ಹರಿಸಿದ್ದೇವೆ.

 

ಸ್ನೇಹಿತರೆ,

ಇತ್ತೀಚಿನ ವರ್ಷಗಳಲ್ಲಿ, ಇಲ್ಲಿ ರಾಷ್ಟ್ರೀಯ ಹೆದ್ದಾರಿಗಳಿಗೆ 3,700 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ, 8,700 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಹೊಸ ಹೆದ್ದಾರಿಗಳ ಕೆಲಸವು ವೇಗವಾಗಿ ಪ್ರಗತಿಯಲ್ಲಿದೆ. ಇಲ್ಲಿ ಹಳ್ಳಿಗಳನ್ನು ತಲುಪುವುದು ಎಷ್ಟು ಕಷ್ಟಕರವಾಗಿತ್ತು ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ಈಗ ಈ ಪ್ರದೇಶದ ನೂರಾರು ಹಳ್ಳಿಗಳಿಗೆ ರಸ್ತೆ ಸಂಪರ್ಕ ಒದಗಿಸಲಾಗಿದೆ. ಇದು ಬೆಟ್ಟಗಳಲ್ಲಿ ವಾಸಿಸುವ ಜನರಿಗೆ ಮತ್ತು ಬುಡಕಟ್ಟು ಹಳ್ಳಿಗಳಿಗೆ ಹೆಚ್ಚಿನ ಪ್ರಯೋಜನ ನೀಡಿದೆ.

ಸ್ನೇಹಿತರೆ,

ನಮ್ಮ ಸರ್ಕಾರದ ಅವಧಿಯಲ್ಲಿ ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ. ಜಿರಿಬಮ್-ಇಂಫಾಲ್ ರೈಲು ಮಾರ್ಗವು ಶೀಘ್ರದಲ್ಲೇ ರಾಜಧಾನಿ ಇಂಫಾಲ್ ಅನ್ನು ರಾಷ್ಟ್ರೀಯ ರೈಲು ಜಾಲಕ್ಕೆ ಸಂಪರ್ಕಿಸುತ್ತದೆ. ಈ ಯೋಜನೆಗೆ ಸರ್ಕಾರ 22,000 ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದೆ. 400 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಇಂಫಾಲ್ ವಿಮಾನ ನಿಲ್ದಾಣವು ವೈಮಾನಿಕ ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದೆ. ಈ ವಿಮಾನ ನಿಲ್ದಾಣದಿಂದ ದೇಶದ ಇತರ ಭಾಗಗಳಿಗೆ ಹೆಲಿಕಾಪ್ಟರ್ ಸೇವೆಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಬೆಳೆಯುತ್ತಿರುವ ಸಂಪರ್ಕವು ಮಣಿಪುರದ ಎಲ್ಲಾ ಜನರಿಗೆ ಅನುಕೂಲಗಳನ್ನು ಹೆಚ್ಚಿಸುತ್ತಿದೆ, ಇಲ್ಲಿನ ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ.

ಸ್ನೇಹಿತರೆ,

ಭಾರತ ಇಂದು ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಶೀಘ್ರದಲ್ಲೇ, ನಾವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದೇವೆ. ಅಭಿವೃದ್ಧಿಯ ಪ್ರಯೋಜನಗಳು ದೇಶದ ಪ್ರತಿಯೊಂದು ಮೂಲೆಯನ್ನು ತಲುಪುವಂತೆ ನೋಡಿಕೊಳ್ಳುವುದು ನನ್ನ ನಿರಂತರ ಪ್ರಯತ್ನವಾಗಿದೆ. ದೆಹಲಿಯಲ್ಲಿ ಮಾಡಿದ ಘೋಷಣೆಗಳು ಇಲ್ಲಿ ಜಾರಿಗೆ ಬರಲು ದಶಕಗಳೇ ಬೇಕಾಗುವ ಸಮಯವಿತ್ತು. ಇಂದು ನಮ್ಮ ಚುರಚಂದ್‌ಪುರ, ನಮ್ಮ ಮಣಿಪುರ, ರಾಷ್ಟ್ರದ ಉಳಿದ ಭಾಗಗಳೊಂದಿಗೆ ಪ್ರಗತಿಯಲ್ಲಿದೆ. ಉದಾಹರಣೆಗೆ, ದೇಶಾದ್ಯಂತ ಬಡವರಿಗೆ ಪಕ್ಕಾ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ನಾವು ಪ್ರಾರಂಭಿಸಿದ್ದೇವೆ. ಮಣಿಪುರದಲ್ಲಿ ಸಾವಿರಾರು ಕುಟುಂಬಗಳು ಈ ಉಪಕ್ರಮದ ಪ್ರಯೋಜನ ಪಡೆದಿವೆ, ಇಲ್ಲಿ ಸುಮಾರು 60 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ, ಈ ಪ್ರದೇಶವು ಈ ಹಿಂದೆ ವಿದ್ಯುತ್ ಪೂರೈಕೆಯಲ್ಲಿ ಹಲವಾರು ಸವಾಲುಗಳನ್ನು ಎದುರಿಸಿತ್ತು. ನಮ್ಮ ಸರ್ಕಾರವು ನಿಮ್ಮನ್ನು ಈ ತೊಂದರೆಗಳಿಂದ ಮುಕ್ತಗೊಳಿಸಲು ಸಂಕಲ್ಪ ಮಾಡಿದೆ. ಇದರ ಪರಿಣಾಮವಾಗಿ, ಮಣಿಪುರದಲ್ಲಿ 1 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಉಚಿತ ವಿದ್ಯುತ್ ಸಂಪರ್ಕಗಳನ್ನು ಪಡೆದಿವೆ.

 

ಸ್ನೇಹಿತರೆ,

ನಮ್ಮ ತಾಯಂದಿರು ಮತ್ತು ಸಹೋದರಿಯರು ಕುಡಿಯುವ ನೀರು ಪಡೆಯಲು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದರು. ಆದ್ದರಿಂದ, ಈ ಸಮಸ್ಯೆ ಪರಿಹರಿಸಲು ನಾವು 'ಹರ್ ಘರ್ ನಲ್ ಸೆ ಜಲ್' (ಪ್ರತಿ ಮನೆಗೆ ನಲ್ಲಿ ನೀರು) ಯೋಜನೆ ಪ್ರಾರಂಭಿಸಿದ್ದೇವೆ. ಇತ್ತೀಚಿನ ವರ್ಷಗಳಲ್ಲಿ, ದೇಶಾದ್ಯಂತ 15 ಕೋಟಿಗೂ ಹೆಚ್ಚು ನಾಗರಿಕರು ನಲ್ಲಿ ನೀರಿನ ಸೌಲಭ್ಯ ಪಡೆದಿದ್ದಾರೆ. ಮಣಿಪುರದಲ್ಲಿ, ಕೇವಲ 7-8 ವರ್ಷಗಳ ಹಿಂದೆ ಕೇವಲ 25,000ರಿಂದ 30,000 ಮನೆಗಳು ಪೈಪ್ ನೀರಿನ ಸಂಪರ್ಕ ಹೊಂದಿದ್ದವು. ಇಂದು, ಇಲ್ಲಿ 350,000ಕ್ಕೂ ಹೆಚ್ಚು ಮನೆಗಳು ನಲ್ಲಿ ನೀರಿನ ಸೌಲಭ್ಯ ಹೊಂದಿವೆ. ಮಣಿಪುರದ ಪ್ರತಿಯೊಂದು ಕುಟುಂಬವು ಶೀಘ್ರದಲ್ಲೇ ತಮ್ಮ ಮನೆಗಳಲ್ಲಿ ಪೈಪ್ ನೀರನ್ನು ಪಡೆಯುತ್ತವೆ ಎಂಬ ವಿಶ್ವಾಸ ನನಗಿದೆ.

ಸ್ನೇಹಿತರೆ,

ಹಿಂದಿನ ಕಾಲದಲ್ಲಿ ಬೆಟ್ಟ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಉತ್ತಮ ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳು ಕೇವಲ ಕನಸುಗಳಾಗಿದ್ದವು. ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ, ರೋಗಿಯು ಆಸ್ಪತ್ರೆಗೆ ತಲುಪುವ ಹೊತ್ತಿಗೆ ಕೊನೆಯುಸಿರೆಳೆಯುತ್ತಿದ್ದ. ಆದರೆ ಇಂದು, ಭಾರತ ಸರ್ಕಾರದ ಪ್ರಯತ್ನಗಳಿಂದಾಗಿ ಪರಿಸ್ಥಿತಿ ಬದಲಾಗುತ್ತಿದೆ. ಚುರಾಚಂದ್‌ಪುರದಲ್ಲಿರುವ ವೈದ್ಯಕೀಯ ಕಾಲೇಜು ಈಗ ಸಿದ್ಧವಾಗಿದ್ದು, ಹೊಸ ವೈದ್ಯರನ್ನು ಸೃಷ್ಟಿಸುತ್ತಿದೆ ಮತ್ತು ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುತ್ತಿದೆ. ಸ್ವಾತಂತ್ರ್ಯದ ನಂತರ ಹಲವು ದಶಕಗಳಿಂದ ಮಣಿಪುರದ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಯಾವುದೇ ವೈದ್ಯಕೀಯ ಕಾಲೇಜು ಇರಲಿಲ್ಲ. ಈ ಸಾಧನೆಯನ್ನು ನಮ್ಮ ಸರ್ಕಾರ ಮಾಡಿದೆ ಎಂಬುದನ್ನು ನೀವೇ ಊಹಿಸಿ. ಪ್ರಧಾನ ಮಂತ್ರಿ ದೈವಿಕ ಯೋಜನೆಯಡಿ, ನಮ್ಮ ಸರ್ಕಾರವು 5 ಗುಡ್ಡಗಾಡು ಜಿಲ್ಲೆಗಳಲ್ಲಿ ಆಧುನಿಕ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುತ್ತಿದೆ. ಆಯುಷ್ಮಾನ್ ಭಾರತ ಯೋಜನೆಯ ಮೂಲಕ, ಸರ್ಕಾರವು ಬಡವರಿಗೆ 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಒದಗಿಸುತ್ತದೆ. ಮಣಿಪುರದಲ್ಲಿ ಸುಮಾರು ಎರಡೂವರೆ ಲಕ್ಷ ರೋಗಿಗಳು ಈ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಈ ಸೌಲಭ್ಯವಿಲ್ಲದಿದ್ದರೆ, ಇಲ್ಲಿನ ನನ್ನ ಬಡ ಸಹೋದರ ಸಹೋದರಿಯರು ವೈದ್ಯಕೀಯ ಚಿಕಿತ್ಸೆಗಾಗಿ ತಮ್ಮ ಜೇಬಿನಿಂದ 350 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಬೇಕಾಗಿತ್ತು. ಆದರೆ ಸಂಪೂರ್ಣ ವೆಚ್ಚವನ್ನು ಭಾರತ ಸರ್ಕಾರವೇ ಭರಿಸಿದೆ ಏಕೆಂದರೆ ಪ್ರತಿಯೊಬ್ಬ ಬಡ ವ್ಯಕ್ತಿಯ ಕಾಳಜಿಗಳನ್ನು ಪರಿಹರಿಸುವುದು ನಮ್ಮ ಆದ್ಯತೆಯಾಗಿದೆ.

ಸ್ನೇಹಿತರೆ,

ಮಣಿಪುರದ ಭೂಮಿ ಮತ್ತು ಈ ಪ್ರದೇಶವು ಭರವಸೆ ಮತ್ತು ಆಶಾವಾದದ ಭೂಮಿ. ದುರದೃಷ್ಟವಶಾತ್, ಈ ಭವ್ಯವಾದ ಪ್ರದೇಶದಲ್ಲಿ ಹಿಂಸಾಚಾರ ಆವರಿಸಿತ್ತು. ಸ್ವಲ್ಪ ಸಮಯದ ಹಿಂದೆ, ನಾನು ಶಿಬಿರಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತ ಜನರನ್ನು ಭೇಟಿಯಾದೆ. ಅವರೊಂದಿಗೆ ಮಾತನಾಡಿದ ನಂತರ, ಮಣಿಪುರದಲ್ಲಿ ಭರವಸೆ ಮತ್ತು ಆತ್ಮವಿಶ್ವಾಸದ ಹೊಸ ಉದಯವು ಆಗುತ್ತಿದೆ ಎಂದು ನಾನು ಹೇಳಬಲ್ಲೆ.

 

ಸ್ನೇಹಿತರೆ,

ಎಲ್ಲಿಯೇ ಆಗಲಿ ಅಭಿವೃದ್ಧಿ ಆಗಬೇಕೆಂದರೆ ಶಾಂತಿ ಸ್ಥಾಪಿಸುವುದು ಅತ್ಯಗತ್ಯ. ಕಳೆದ 11 ವರ್ಷಗಳಲ್ಲಿ ಈಶಾನ್ಯದಲ್ಲಿ ಅನೇಕ ದೀರ್ಘಕಾಲದ ವಿವಾದಗಳು ಮತ್ತು ಸಂಘರ್ಷಗಳನ್ನು ಪರಿಹರಿಸಲಾಗಿದೆ. ಜನರು ಶಾಂತಿಯ ಮಾರ್ಗ ಆರಿಸಿಕೊಂಡಿದ್ದಾರೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಇತ್ತೀಚೆಗೆ ಬೆಟ್ಟಗಳು ಮತ್ತು ಕಣಿವೆಗಳಲ್ಲಿನ ವಿವಿಧ ಗುಂಪುಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲು ಮಾತುಕತೆಗಳು ಪ್ರಾರಂಭವಾಗಿವೆ ಎಂಬ ವಿಷಯದಿಂದ ನನಗೆ ಸಂತೋಷವಾಗಿದೆ. ಈ ಪ್ರಯತ್ನಗಳು ಮಾತುಕತೆ, ಗೌರವ ಮತ್ತು ಪರಸ್ಪರ ತಿಳಿವಳಿಕೆಯ ಮೂಲಕ ಶಾಂತಿ ಸ್ಥಾಪಿಸುವ ಭಾರತ ಸರ್ಕಾರದ ಬದ್ಧತೆಯ ಭಾಗವಾಗಿದೆ. ಎಲ್ಲಾ ಸಂಸ್ಥೆಗಳು ಶಾಂತಿಯ ಹಾದಿಯಲ್ಲಿ ಮುಂದುವರಿಯಲು, ಅವರ ಕನಸುಗಳನ್ನು ಈಡೇರಿಸಲು ಮತ್ತು ಅವರ ಮಕ್ಕಳ ಭವಿಷ್ಯ ಭದ್ರಪಡಿಸಿಕೊಳ್ಳಲು ನಾನು ಒತ್ತಾಯಿಸುತ್ತೇನೆ. ಇಂದು ನಾನು ನಿಮ್ಮೊಂದಿಗಿದ್ದೇನೆ, ಭಾರತ ಸರ್ಕಾರ ನಿಮ್ಮೊಂದಿಗಿದೆ ಮತ್ತು ಮಣಿಪುರದ ಜನರೊಂದಿಗೆ ಇದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ.

ಸ್ನೇಹಿತರೆ,

ಮಣಿಪುರದಲ್ಲಿ ಸಾಮಾನ್ಯ ಸ್ಥಿತಿ ಮರರುಸ್ಥಾಪಿಸಲು ಭಾರತ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ನಮ್ಮ ಸರ್ಕಾರವು ಸ್ಥಳಾಂತರಗೊಂಡ ಕುಟುಂಬಗಳಿಗೆ 7 ಸಾವಿರ ಹೊಸ ಮನೆಗಳನ್ನು ನಿರ್ಮಿಸಲು ನೆರವು ನೀಡುತ್ತಿದೆ. ಇತ್ತೀಚೆಗೆ, ಸುಮಾರು 3 ಸಾವಿರ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಅನ್ನು ಸಹ ಅನುಮೋದಿಸಲಾಗಿದೆ. ಹೆಚ್ಚುವರಿಯಾಗಿ, ಸ್ಥಳಾಂತರಗೊಂಡ ಜನರಿಗೆ ಸಹಾಯ ಮಾಡಲು 500 ಕೋಟಿ ರೂಪಾಯಿಗಳ ವಿಶೇಷ ಅನುದಾನ ಪ್ರಕಟಿಸಲಾಗಿದೆ.

ಸ್ನೇಹಿತರೆ,

ಮಣಿಪುರದ ಬುಡಕಟ್ಟು ಯುವಕರ ಕನಸುಗಳು ಮತ್ತು ಹೋರಾಟಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ. ನಿಮ್ಮ ಕಳವಳಗಳನ್ನು ಪರಿಹರಿಸಲು, ವಿವಿಧ ಪರಿಹಾರಗಳನ್ನು ಹುಡುಕಲಾಗುತ್ತಿದೆ. ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಅವರ ಅಭಿವೃದ್ಧಿಗೆ ಸರಿಯಾದ ಹಣ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ.

 

ಸ್ನೇಹಿತರೆ,

ಇಂದು ಪ್ರತಿಯೊಂದು ಬುಡಕಟ್ಟು ಸಮುದಾಯದ ಅಭಿವೃದ್ಧಿಯು ದೇಶಕ್ಕೆ ಆದ್ಯತೆಯಾಗಿದೆ. ಮೊದಲ ಬಾರಿಗೆ, ಬುಡಕಟ್ಟು ಪ್ರದೇಶಗಳಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು 'ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ' ನಡೆಯುತ್ತಿದೆ. ಈ ಉಪಕ್ರಮದಡಿ, ಮಣಿಪುರದ 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಪ್ರದೇಶಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಮಣಿಪುರದಲ್ಲಿಯೂ ಸಹ, ಅಂತಹ 18 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಶಾಲೆಗಳು ಮತ್ತು ಕಾಲೇಜುಗಳ ಆಧುನೀಕರಣವು ಇಲ್ಲಿನ ಗುಡ್ಡಗಾಡು ಜಿಲ್ಲೆಗಳಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಲು ಸಜ್ಜಾಗಿದೆ.

ಸ್ನೇಹಿತರೆ,

ಮಣಿಪುರದ ಸಂಸ್ಕೃತಿ ಯಾವಾಗಲೂ 'ನಾರಿ ಶಕ್ತಿ'(ಮಹಿಳಾ ಸಬಲೀಕರಣ)ಯನ್ನು ಉತ್ತೇಜಿಸಿದೆ. ನಮ್ಮ ಸರ್ಕಾರವು ಮಹಿಳೆಯರ ಸಬಲೀಕರಣದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮಣಿಪುರದ ಹೆಣ್ಣು ಮಕ್ಕಳನ್ನು ಬೆಂಬಲಿಸಲು ಸರ್ಕಾರವು ಕೆಲಸ ಮಾಡುವ ಮಹಿಳಾ ಹಾಸ್ಟೆಲ್‌ಗಳನ್ನು ಸಹ ನಿರ್ಮಿಸುತ್ತಿದೆ.

ಸ್ನೇಹಿತರೆ,

ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಮುಂದುವರಿಯುತ್ತಿದ್ದೇವೆ. ಭಾರತ ಸರ್ಕಾರವು ಮಣಿಪುರ ಸರ್ಕಾರದೊಂದಿಗೆ ಮಣಿಪುರದ ಅಭಿವೃದ್ಧಿಯಲ್ಲಿ, ಸ್ಥಳಾಂತರಗೊಂಡ ಜನರನ್ನು ಸೂಕ್ತ ಸ್ಥಳಗಳಲ್ಲಿ ಸಾಧ್ಯವಾದಷ್ಟು ಬೇಗ ಪುನರ್ವಸತಿ ಕಲ್ಪಿಸಲು ಮತ್ತು ಶಾಂತಿ ಸ್ಥಾಪಿಸುವಲ್ಲಿ ಸಹಕರಿಸುವುದನ್ನು ಮುಂದುವರಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಮತ್ತೊಮ್ಮೆ, ಅಭಿವೃದ್ಧಿ ಯೋಜನೆಗಳಿಗಾಗಿ ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ. ನೀವು ತೋರಿಸಿದ ಪ್ರೀತಿ ಮತ್ತು ಗೌರವಕ್ಕಾಗಿ ಮಣಿಪುರದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾವೆಲ್ಲರೂ ಒಟ್ಟಾಗಿ ಹೇಳೋಣ:

ಭಾರತ್ ಮಾತಾ ಕಿ ಜೈ,

ಭಾರತ್ ಮಾತಾ ಕಿ ಜೈ,

ಭಾರತ್ ಮಾತಾ ಕಿ ಜೈ,

ತುಂಬು ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India auto retail hits record August with 24.23 lakh registrations, up 17.5%

Media Coverage

India auto retail hits record August with 24.23 lakh registrations, up 17.5%
NM on the go

Nm on the go

Always be the first to hear from the PM. Get the App Now!
...
The Dedicated Freight Corridor is the lifeline of a rapidly developing India: PM Modi in Vadodara, Gujarat
September 08, 2026
We are strengthening India's infrastructure to move people and goods faster, create new opportunities and power economic growth: PM
The Dedicated Freight Corridor is the lifeline of a rapidly developing India: PM
From chips to ships, India is now building a new manufacturing future: PM

भारत माता की जय।

भारत माता की जय।

गुजरात के राज्यपाल आचार्य देवव्रत जी, यहां के लोकप्रिय मुख्यमंत्री श्री भूपेंद्र भाई पटेल, इस कार्यक्रम में ऑनलाइन हमारे साथ अनेक राज्यों के महानुभाव जुड़े हैं। महाराष्ट्र के गवर्नर जिष्णु देव वर्मा जी, मुख्यमंत्री देवेंद्र फ़डणवीस जी, डिप्टी सीएम एकनाथ शिंदे जी, डिप्टी सीएम श्रीमती सुनेत्र पवार जी, अन्य मंत्रीगण, सांसदगण, विधायकगण और वहां पर भी इकट्ठे हुए लाखों नागरिक भाई-बहन। यहां मंच पर उपस्थित केंद्रीय मंत्रिमंडल के मेरे साथी अश्विनी वैष्णव, उपमुख्यमंत्री, युवा नेता हर्ष संघवी, गुजरात सरकार के मंत्रीगण, उपस्थित अन्य जनप्रतिनिधिगण, गुजरात के मेरे प्यारे भाइयों और बहनों।

और खास इसलिए के मेरे ब़डौदा के महाराजा सयाजीराव यूनिवर्सिटी का ये मैदान अलग-अलग फील्ड में काम करने वाले सभी साथियों का साथ और विकास का ये उत्सव, यहां सबकुछ एक साथ हो रहा है।

साथियों,

आज मैं विकसित भारत की यात्रा को और गति देने के लिए आपके बीच आया हूं। थोड़ी देर पहले यहां देश के विकास से जुड़े हज़ारों करोड़ रुपए के प्रोजेक्ट्स का शिलान्यास और लोकार्पण हुआ है। मैं देश की जनता को बहुत-बहुत बधाई देता हूं। इस विकास पर्व पर आप सभी ने जिस सेवा भाव से और सेवा भाव के साथ पूरे वडोदरा शहर में स्वच्छता से स्वागत अभियान चलाया है, इसके लिए मैं वड़ोदरा के हर एक नागरिक को ह्दय से बहुत-बहुत बधाई देता हूं, उनकी सराहना करता हूं। और ये जो आपने रंग दिखाया ना, मैं कल एक वीडियो देख रहा था, सीना चौड़ा हो गया, वाह! क्या ये मेरा वडोदरा है? और अब तो गणेशोत्सव की तैयारी, बाद में नवरात्रि। और गणेशोत्सव और नवरात्रि पूरा गुजरात का ध्यान वडोदरा पर होता है। और आज आपने, मैं देख रहा था पिछले एक सप्ताह से हर परिवार में वातावरण बन गया है स्वच्छता का। मुझे लगता है कि इस बार जब गणेश जी पधारेंगे ना, सारे आशीर्वाद वड़ोदरा पर बरसने वाले हैं।

साथियों,

इस वर्ष लाल किले से मैंने विकसित भारत के लिए संकल्प की सप्तधारा का आह्वान किया है। इस सप्तधारा में एक धारा गतिशक्ति की भी है। विकसित भारत के लिए हमें ऐसी कनेक्टिविटी चाहिए, जो सुगम भी हो और जमाने के हिसाब से जरा तेज भी हो। वड़ोदरा तो गतिशक्ति यूनिवर्सिटी का शहर है। आज यहां से डेडिकेटेड फ्रेट कॉरिडोर की आखिरी कड़ियां भी जुड़ गई हैं। आज 2800 किलोमीटर से अधिक का डेडिकेटेड फ्रेट कॉरिडोर प्रोजेक्ट पूरा हो गया। ये 21वीं सदी के भारत के लिए बहुत ऐतिहासिक कार्य संपन्न हुआ है।

साथियों,

ये डेडिकेटेड फ्रेट कॉरिडोर, इस बात का साक्षी है कि बीते 12 साल में देश की काम करने की संस्कृति कैसे बदली है। इस डेडिकेटेड फ्रेट कॉरिडोर पर 2004 में विचार शुरू हुआ था। यानी, यहां मैं सारे नौजवान देख रहा हूं, जब इसका विचार शुरू हुआ, आप में से बहुत लोग होंगे जिनका जन्म भी नहीं हुआ होगा, उस समय शुरू हुआ था। 2006 में एक विशेष कंपनी बनाई गई इस काम को करने के लिए और फिर 2014 तक फाइलें ही यहां से वहां होती रहीं। फाइलें टेबल पर यात्रा कर रही थी और दुर्भाग्य देखिए, इन फाइलों को भी कोई डेडिकेटेड कॉरिडोर नसीब नहीं हुआ, फाइल को भी नहीं नसीब हुआ। फाइलें अटकती थीं, लटकती थीं, भटकती थीं। और 2014 में वड़ोदरा के और गुजरात के और देश के लोगों ने मुझे गुजरात से निकाल करके दिल्ली भेज दिया। पहले वाली सरकार 2000 तक रही। आपने मुझे भेजा और उनकी विदाई हुई, और सच्चाई ये थी कि सात-आठ वर्ष में, जरा मेरे नौजवान सुन लीजिए, ये याद रखिए, सात-आठ वर्ष में एक किलोमीटर फ्रेट कॉरिडोर पर भी काम पूरा नहीं हो पाया था। अगर उनके हिसाब से देश चलाते, तो पता नहीं आपके बाद तीन-चार पीढ़ियां आती, तो भी नहीं होता। भारत के लॉजिस्टिक्स इकोसिस्टम को ट्रांसफॉर्म करने वाले प्रोजेक्ट की ये हालत करके रखी थी।

साथियों,

2014 के बाद आपने जो मुझे शिक्षा-दीक्षा दी थी, इस धरती ने मुझे जो सिखाया था, आपके पास से जो लेसन लेके मैं दिल्ली पहुंचा था, हमने वहां पहुंचते ही इसको गति देने का काम प्रारंभ कर दिया। 2800 किलोमीटर के कॉरिडोर का काम आज पूरा करके दिखाया। और आज ईस्टर्न और वेस्टर्न डेडिकेटेड फ्रेट कॉरिडोर, देश के व्यापार-कारोबार का मुख्य आधार बन रहा है।

साथियों,

डेडिकेटेड फ्रेट कॉरिडोर, तेजी से विकसित होते भारत की जीवन रेखा है। इसने भारत के ट्रांसपोर्टेशन सेक्टर का कायाकल्प कर दिया है। पहले पैसेंजर ट्रेन जिस ट्रैक पर चलती थी, उसी ट्रैक पर मालगाड़ी भी चलती थी। यानि ट्रैवल और ट्रांसपोर्ट, दोनों धीमा था। लेकिन, डेडिकेटेड फ्रेट कॉरिडोर ने इस स्थिति को बदल दिया है। आज पूर्वी और पश्चिमी फ्रेट कॉरिडोर्स पर हर रोज़ 430 से ज्यादा मालगाड़ियां चलती हैं, प्रतिदिन 430 मालगाड़ी। और पहले जो मालगाड़ी, साढ़े 6 घंटे में 100 किलोमीटर का सफऱ तय करती थी और अब वही मालगाड़ी आधे से भी कम समय में 100 किलोमीटर का सफर तय कर लेगी। जिस जगह पर ट्रक से सामान भेजने में सामान्य तौर पर 30 घंटे लगते हैं, डेडिकेटेड फ्रेट कॉरिडोर पर यही दूरी 10-12 घंटे में पूरी हो जाती है। यानि, इस कॉरिडोर पर मालगाड़ी के चलने से ट्रक और ट्रेन में लगने वाला फ्यूल बचता है, किराया-भाड़ा का खर्च कम हुआ है, समय बचा है, पर्यावरण को फायदा हुआ है। यानि, इन्वेस्टमेंट एक ट्रैक पर किया और फायदे अनेक सारे हुए हैं।

साथियों,

इस फ्रेट कॉरिडोर से पूर्वी और पश्चिमी भारत के किसानों की उपज अब तेज़ी से बड़े बाज़ार तक पहुंच पा रही है। कई तरह के फूल, कई तरह की सब्जियां, कई तरह के फल, यानि जो चीजें मौसम के हिसाब से जल्दी खराब होती हैं, उनके लिए भी सही समय पर मंडियों और लोगों के बीच पहुंचने का रास्ता बना है। इससे किसान का बहुत बड़ा फायदा हुआ है।

साथियों,

ये फ्रेट कॉरिडोर एक और वजह से कमाल का है। हाल ही में JNPT मुंबई, JNPT पोर्ट से वड़ोदरा तक Double स्टैक Container मालगाड़ी का संचालन किया गया है। यानि डिब्बे के ऊपर एक और डिब्बा लगाकर मालगाड़ी को चलाया गया। इस मालगाड़ी के चलने से एक बार में ही 250 से अधिक ट्रकों के बराबर का सामान मुंबई से वड़ोदरा चला आया, 250 ट्रक। अब ये जो नाराज फूफा जी है, वो चिल्लाएंगे कि ट्रक वालों का क्या होगा? ट्रक कहां जाएंगे? जिन्होंने ट्रक खरीदा है, उनका क्या होगा? अब फूफा जी को काम मिल गया। यानि अब बड़ी मात्रा में सामान तेजी से देश के एक कोने से दूसरे कोने तक पहुंच पाएगा।

साथियों,

फ्रेट कॉरिडोर के साथ-साथ अब भारत में रेल वहां भी पहुंच रही है, जहां इतने दशकों तक नहीं पहुंची थी। गुजरात हो, मध्य प्रदेश हो, महाराष्ट्र हो, यहां जो आदिवासी क्षेत्र हैं, वो भी इस प्रोजेक्ट के द्वारा रेल से जुड़ रहे हैं। पहले की सरकार में बजट में एक-दो ट्रेनों की घोषणा होती थी और उसके भी साल भर ढोल पीटे जाते थे। जबकि आज देश में साल भर एक के बाद एक नई ट्रेनें चलाई जा रही हैं। आज भी इस कार्यक्रम में कई नई ट्रेन शुरु हुई हैं। नई ट्रेन से वड़ोदरा, छोटा उदयपुर और अलीराजपुर के लोगों को बहुत सुविधा होगी।

साथियों,

रोड, रेल, मेट्रो, एयरपोर्ट, गैस पाइपलाइन, गरीबों का घर, जब देश में करोड़ों लोगों के लिए ये चीजें बनती हैं, तो इससे लोगों का जीवन आसान होता है और साथ ही छोटे से बड़े कामगार को रोजगार के लाखों-लाख अवसर मिलते हैं। आप रेलवे का ही देखिए, इस वर्ष का रेल बजट पौने तीन लाख करोड़ रुपए से अधिक रहा है। जो 12 वर्ष पहले की तुलना में कई गुणा अधिक है। यानि रेलवे के आधुनिकीकरण पर हो रहा खर्च, हज़ारों हज़ार नए रोजगार बना रहा है। और ये रोजगार कंस्ट्रक्शन के दौरान तो बनता ही है। एक बार रोड, रेल, पाइपलाइन, पोर्ट, एयरपोर्ट बन गया, तो फिर उसके आसपास नए उद्योग लगना शुरू हो जाते हैं, नए बिजनेस आते हैं, ये फिर नए रोजगार बनाते हैं। वहां कुछ लोग, वो बेटी चित्र लेकर कब से खड़ी है, वो सज्जन भी कुछ कला लेकर के आए हैं। जरा हमारे साथी उसको कलेक्ट कर लें। ये आगे पहुंचा दीजिए, हां। एक और भी है कोई, हां, ले लीजिए। आपका बहुत-बहुत धन्यवाद।

साथियों,

मैंने देश के सामने विकसित भारत की जिन सप्तधाराओं का विजन रखा है, उनमें एक धारा मैन्युफैक्चरिंग की भी है। और वड़ोदरा शहर, इसकी ताकत अच्छे से जानता भी है, समझता भी है। एजुकेशन, स्किल और इंडस्ट्री का कोलैब कैसे होता है, ये वड़ोदरा करीब डेढ़ सौ साल से इसका प्रतिबिंब है। दशकों पहले, यहां टेक्स्टाइल और टाइल्स के निर्माण से एक यात्रा शुरु हुई थी, जो बाद में ऑयल और पेट्रोकेमिकल्स के साथ आगे बढ़ी। पिछले दो-ढाई दशक में वड़ोदरा MSMEs का एक बड़ा हब बन गया है। और मुझे याद है, जब मैं नया-नया मुख्यमंत्री बना था, तो वड़ोदरा का मेरे पर स्पेशल अधिकार रहा है हमेशा, तो हर हफ्ते कोई ना कोई डेलीगेशन आता था। बस हमारे वड़ोदरा में कुछ मैन्युफैक्चरिंग का हो, मैन्युफैक्चरिंग का हो, क्योंकि यहां पर आते थे, तो या तो ज्योति या एलएमबी या तो जीएसएफसी, यही सब दिखता था और कुछ सुनता नहीं देता। आज कहां से कहां बदल गया है। अब तो ये शहर देश के पहले मेड इन इंडिया मिलिट्री ट्रांसपोर्ट एयरक्राफ्ट के लिए भी जाना जा रहा है। C-295 एयरक्राफ्ट की पहली फ्लाइट यहां आसमान देख चुकी है। मैं वड़ोदरा के लोगों को ये गौरव पाने के लिए बहुत-बहुत बधाई देता हूं।

साथियों,

जब देश की मैन्युफैक्चरिंग की बात हो रही है, तो मैं एक और आंकड़ा बताना चाहता हूं। बीते एक दशक में भारत रेल कोच-मेट्रो कोच बनाने का, रेल इंजन बनाने का भी एक बड़ा निर्माता बना है। 2014 के बाद से अब तक, भारत ने करीब 50 हज़ार, ये आंकड़ा सुनिए, 2014 के बाद भारत ने अब तक 50 हज़ार आधुनिक रेलवे कोच बनाए हैं। पुरानी सरकार 10 साल में 50 हजार टॉयलेट नहीं बना सकती थी। 50 हजार आधुनिक कोच तो किए ही हैं, करीब ढाई लाख वेगन, मालगाड़ी के लिए जो वेगन होते हैं, भारतीय रेल में जोड़े गए हैं, ढाई लाख।

साथियों,

अब भारत चिप से लेकर शिप तक, निर्माण की एक नई गाथा लिख रहा है। यानि पुर्जे भी हमारे और प्रोडक्ट भी हमारा, आत्मनिर्भरता की एक पूरी चेन भारत में ही बनेगी। और ये हम सोलर पावर के मामले में देख रहे हैं। जैसे कडाणा डैम पर जो फ्लोटिंग सोलर प्लांट का प्रोजेक्ट है, कुछ साल पहले तक देश में सोलर प्रोजेक्ट्स लगाने बहुत महंगे पड़ते थे। क्योंकि पीवी मॉड्यूल से लेकर, हर प्रकार का हार्डवेयर इंपोर्ट करना पड़ता था। लेकिन बीते वर्षों में हमने भारत में ही पीवी मॉड्यूल बनाने शुरु किए। और आज हम इसमें 200 गीगावॉट से ज्यादा की कैपेसिटी विकसित कर चुके हैं। और ऐसी ही आत्मनिर्भरता के कारण आज पीएम सूर्यघर मुफ्त बिजली योजना का विस्तार हो रहा है। अब तक देश में 55 लाख परिवार अपने छत पर, टेरेस पर सोलर प्लांट लगा चुके हैं। और इसमें 11 लाख परिवार हमारे गुजरात के हैं। यहां इतने सारे परिवार, बिजली उत्पादक बन चुके हैं और इसके कारण, प्रोडक्शन से लेकर इंस्टॉलेशन और सर्विस तक, कितने ही युवाओं को रोजगार मिला है, कितने नए वेंडर्स आए हैं।

साथियों,

‘झूठ की गूंज’ से भरमाने वाले तो हर चौराहे पर मिल जाएंगे, लेकिन भारत का नौजवान सच की हुंकार से चलता है, सच की हुंकार के साथ चलता है, सच की हुंकार के लिए चलता है। हमारे युवा साथी ये देख रहे हैं कि आज देश में सोलर हो, विंड हो, हाइड्रो हो, न्यूक्लियर हो, सारे सेक्टर्स पर सरकार कितना फोकस से काम कर रही है।

साथियों,

आने वाले दौर में हर आधुनिक सेक्टर बिजली से ही चलेगा, इलेक्ट्रिक इकोसिस्टम पर निर्भर होगा। जैसे चिप इंडस्ट्री है, डेटा सेंटर और AI से जुड़ी इंडस्ट्री है, इनका खाद पानी बिजली ही है। इसलिए अगर हमें AI में दुनिया के सामने सुपर पावर बनना है, तो देश को उसकी तैयारी, उसका इकोसिस्टम भी बनाना होगा। यही काम भारत ग्राउंड पर कर रहा है। तभी किसी देश से यूरेनियम के लिए समझौते हो रहे हैं, किसी से क्रिटिकल मिनरल्स और रेयर अर्थ मिनरल्स को लेकर समझौते किए जा रहे हैं। ये सारी मेहनत देश के युवाओं का फ्यूचर सुरक्षित करने के लिए दिन-रात मेहनत करके की जा रही है, आपके भविष्य के लिए किया जा रहा है।

साथियों,

दुनिया तेज़ी से बदल रही है, तो दुनिया की ज़रूरतें भी बदल रही हैं और इसी प्रकार हमारी पढ़ाई-लिखाई के तौर-तरीके भी बदल रहे हैं। पहले फोकस सिर्फ डिग्री पर होता था, लेकिन अब डिग्री के साथ-साथ स्किल पर भी फोकस है, स्किल का महत्मय बढ़ रहा है। नौजवानों के पास स्किल हो और वो स्किल समय-समय पर अपग्रेड हो, एक बड़ी जरूरत बन गई है। और इसीलिए, आज हम अपनी शिक्षा नीति को, शिक्षण और ट्रेनिंग के संस्थानों को नए रूप में ढाल रहे हैं। और इसी भाव के साथ ही मैंने लाल किले से भी युवाशक्ति के लिए दो बड़ी घोषणाएं की हैं। पहली घोषणा, देश की पारंपरिक ज़रूरत से जुड़ी है। आप सब जानते हैं कि हमारे यहां लाखों नौजवान ऐसे हैं, जो प्रतियोगी परीक्षाओं की तैयारी करते हैं। हर साल, हमारे मिडिल क्लास परिवारों की कमाई का एक बड़ा हिस्सा इन बच्चों की कोचिंग पर खर्च हो जाता है। हमारी कोशिश है कि गरीब और मिडिल क्लास के ऐसे बच्चों की, परिवारों के पैसे की बचत हो। और इसीलिए अब सरकार स्टूडेंट्स को ऑनलाइन फ्री-कोचिंग व्यवस्था देने की दिशा में आगे बढ़ रही है। और हिंदुस्तान के बेस्ट टीचर के द्वारा उनके कोचिंग हो। हमारे जो नौजवान, अपनी तैयारी कर रहे हैं, उनकी कोचिंग का ध्यान सरकार खुद रखेगी।

साथियों,

भारत के नौजवानों को AI में पारंगत होना उतना ही जरूरी है। हम चाहते हैं कि हमारे नौजवानों की पीढ़ी AI के लिए तैयार हो। ऐसा नहीं है, AI सीखने वालों की जरूरत सिर्फ आईटी सेक्टर में है, अगर कोई इस स्किल को जानता है, तो वो खेती के लिए नया AI solution बना सकता है। आरोग्य के क्षेत्र में technology विकसित कर सकता है। Manufacturing की productivity बढ़ा सकता है। Robotics में अपना startup शुरू कर सकता है। इसलिए जरूरी है कि हमारे पास देश और दुनिया की इंडस्ट्री के लिए AI को समझने वाले और AI का इस्तेमाल करने वाले युवा हों। सरकार इसके लिए एक बड़ा अभियान शुरू करने जा रही है।

साथियों,

भारत का ये कालखंड अभूतपूर्व है। ये भारत की युवाशक्ति का उत्कर्ष काल है, ये समय फिर भारत के जीवन में लौटकर नहीं आएगा। और इसलिए, हमें 2047 में विकसित भारत के लक्ष्य को सर्वोपरि रखना है। हमें भारत को विकसित बनाकर ही रहना है। इसी आह्वान के साथ, एक बार फिर आप सभी को विकास कार्यों की बहुत शुभकामनाएं।

अब मेरा एक काम करना पड़ेगा वडोदरा वालों को, करेंगे? पक्के तौर पर? आप सबने वड़ोदरा को इतना स्वच्छ बना दिया, कितनी मेहनत करनी पड़ी। मैं देख रहा था, हमारे नौजवान दिन-रात सफाई में लगे हुए थे। लेकिन एक बार हम तय करें कि अब हम वडोदरा को गंदा होने ही नहीं देंगे। मैं खुद गंदगी नहीं करूँगा, ये संकल्प लें, तो वडोदरा गंदा होगा? वडोदरा गंदा होगा? तो दिवाली ऐसी चकाचक जाएगी या नहीं, नवरात्रि शानदार जाएगी या नहीं, गणेशोत्सव में चार चाँद लगेंगे या नहीं, तो इतना काम तो हो जाएगा।

शाबाश।

धन्यवाद।

भारत माता की जय!

भारत माता की जय!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!