ಭಾರತದ ಕಡಲ ವಲಯವು ಹೆಚ್ಚಿನ ವೇಗ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ: ಪ್ರಧಾನಮಂತ್ರಿ
ನಾವು ಒಂದು ಶತಮಾನಕ್ಕೂ ಹಳೆಯದಾದ ವಸಾಹತುಶಾಹಿ ಕಾಲದ ಶಿಪ್ಪಿಂಗ್ ಕಾನೂನುಗಳನ್ನು 21ನೇ ಶತಮಾನಕ್ಕೆ ಸೂಕ್ತವಾದ ಆಧುನಿಕ, ಭವಿಷ್ಯದ ಕಾನೂನುಗಳೊಂದಿಗೆ ಬದಲಾಯಿಸಿದ್ದೇವೆ: ಪ್ರಧಾನಮಂತ್ರಿ
ಇಂದು, ಭಾರತದ ಬಂದರುಗಳು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಅತ್ಯಂತ ದಕ್ಷವೆಂದು ಪರಿಗಣಿಸಲ್ಪಟ್ಟಿವೆ; ಅನೇಕ ವಿಷಯಗಳಲ್ಲಿ, ಅವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಬಂದರುಗಳಿಗಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ: ಪ್ರಧಾನಮಂತ್ರಿ
ಹಡಗು ನಿರ್ಮಾಣದಲ್ಲಿ ಹೊಸ ಎತ್ತರವನ್ನು ತಲುಪಲು ಭಾರತವು ಪ್ರಯತ್ನಗಳನ್ನು ಚುರುಕುಗೊಳಿಸುತ್ತಿದೆ, ನಾವು ಈಗ ದೊಡ್ಡ ಹಡಗುಗಳಿಗೆ 'ಮೂಲಸೌಕರ್ಯ ಆಸ್ತಿ' ಗಳ ಸ್ಥಾನಮಾನವನ್ನು ನೀಡಿದ್ದೇವೆ: ಪ್ರಧಾನಮಂತ್ರಿ
ಭಾರತದ ಶಿಪ್ಪಿಂಗ್ ವಲಯದಲ್ಲಿ ಕೆಲಸ ಮಾಡಲು ಮತ್ತು ವಿಸ್ತರಿಸಲು ಇದು ಸರಿಯಾದ ಸಮಯ: ಪ್ರಧಾನಮಂತ್ರಿ
ಜಾಗತಿಕ ಸಮುದ್ರಗಳು ಪ್ರಕ್ಷುಬ್ಧಗೊಂಡಾಗ, ಜಗತ್ತು ಸ್ಥಿರವಾದ ದೀಪಸ್ತಂಭವನ್ನು ಹುಡುಕುತ್ತದೆ, ಆ ಪಾತ್ರವನ್ನು ಶಕ್ತಿ ಮತ್ತು ಸ್ಥಿರತೆಯೊಂದಿಗೆ ನಿರ್ವಹಿಸಲು ಭಾರತವು ಉತ್ತಮ ಸ್ಥಿತಿಯಲ್ಲಿದೆ: ಪ್ರಧಾನಮಂತ್ರಿ
ಜಾಗತಿಕ ಉದ್ವಿಗ್ನತೆಗಳು, ವ್ಯಾಪಾರ ಅಡೆತಡೆಗಳು ಮತ್ತು ಬದಲಾಗುತ್ತಿರುವ ಪೂರೈಕೆ ಸರಪಳಿಗಳ ನಡುವೆ, ಭಾರತವು ಕಾರ್ಯತಂತ್ರದ ಸ್ವಾಯತ್ತತೆ, ಶಾಂತಿ ಮತ್ತು ಸಮಗ್ರ ಬೆಳವಣಿಗೆಯ ಸಂಕೇತವಾಗಿ ನಿಂತಿದೆ: ಪ್ರಧಾನಮಂತ್ರಿ

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಸ್ನೇಹಿತರೇ,

ಜಾಗತಿಕ ಕಡಲಯಾನ ನಾಯಕರ ಸಮಾವೇಶಕ್ಕೆ ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಈ ಕಾರ್ಯಕ್ರಮವು 2016 ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇಂದು ಈ ಸಮಾವೇಶವು ನಿಜವಾದ ಜಾಗತಿಕ ಕಾರ್ಯಕ್ರಮವಾಗಿ ವಿಕಸನಗೊಂಡಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯಕ್ರಮದಲ್ಲಿ 85ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿರುವುದು ಸ್ವತಃ ಪ್ರಬಲ ಸಂದೇಶವನ್ನು ರವಾನಿಸುತ್ತದೆ. ಹಡಗು ದೈತ್ಯ ಕಂಪನಿಗಳ ಸಿಇಒಗಳಿಂದ ಹಿಡಿದು ನವೋದ್ಯಮಗಳವರೆಗೆ ಮತ್ತು ನೀತಿ ನಿರೂಪಕರಿಂದ ಹೂಡಿಕೆದಾರರವರೆಗೆ ಎಲ್ಲರೂ ಇಂದು ಇಲ್ಲಿ ಉಪಸ್ಥಿತರಿದ್ದಾರೆ. ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳು ಸಹ ಹಾಜರಿದ್ದಾರೆ. ನಿಮ್ಮ ಸಾಮೂಹಿಕ ದೃಷ್ಟಿಕೋನವು ಈ ಶೃಂಗಸಭೆಯ ಸಹಕಾರ ಮತ್ತು ಶಕ್ತಿ ಎರಡನ್ನೂ ಹೆಚ್ಚಿಸಿದೆ.

 

ಸ್ನೇಹಿತರೇ,

ಕಡಲಯಾನ ವಲಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಯೋಜನೆಗಳನ್ನು ಇಂದು ಉದ್ಘಾಟಿಸಲಾಗಿದೆ. ಕಡಲಯಾ ವಲಯದಲ್ಲಿ ಸಾವಿರಾರು ಕೋಟಿ ರೂಪಾಯಿಗಳ  ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಇದು ಭಾರತದ ಕಡಲಯಾನ ಸಾಮರ್ಥ್ಯದ ಮೇಲೆ ವಿಶ್ವದ  ವಿಶ್ವಾಸ ಹೆಚ್ಚಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ಕಾರ್ಯಕ್ರಮದಲ್ಲಿ ನಿಮ್ಮ ಉಪಸ್ಥಿತಿಯು ಈ ದೃಷ್ಟಿಕೋನಕ್ಕೆ ನಮ್ಮ ಸಮಾನ ಬದ್ಧತೆಯ ಪ್ರತಿಬಿಂಬವಾಗಿದೆ.

ಸ್ನೇಹಿತರೇ,

21ನೇ ಶತಮಾನದ ಈ ಯುಗದಲ್ಲಿ, ಭಾರತದ ಕಡಲಯಾನ ವಲಯವು ಹೆಚ್ಚಿನ ವೇಗ ಮತ್ತು ಚೈತನ್ಯದಿಂದ ಮುನ್ನಡೆಯುತ್ತಿದೆ. ನಿರ್ದಿಷ್ಟವಾಗಿ, 2025ನೇ ವರ್ಷವು ಭಾರತದ ಕಡಲಯಾನ ಉದ್ಯಮಕ್ಕೆ ಹೆಗ್ಗುರುತಿನ ವರ್ಷವಾಗಿದೆ. ಈ ವರ್ಷದ ಕೆಲವು ಪ್ರಮುಖ ಸಾಧನೆಗಳನ್ನು ನಾನು ಎತ್ತಿ ತೋರಿಸಲು ಬಯಸುತ್ತೇನೆ. ವಿಜಿಂಜಮ್ ಬಂದರಿನಲ್ಲಿ ಭಾರತದ ಮೊದಲ ಆಳ-ಸಮುದ್ರ ಅಂತರರಾಷ್ಟ್ರೀಯ ಸಾಗಣೆ ಕೇಂದ್ರವು ಈಗ ಕಾರ್ಯಾರಂಬ ಮಾಡಿದೆ. ಇತ್ತೀಚೆಗೆ, ವಿಶ್ವದ ಅತಿದೊಡ್ಡ ಕಂಟೈನರ್ ಹಡಗು ಅಲ್ಲಿಗೆ ಆಗಮಿಸಿತು, ಇದು ಪ್ರತಿಯೊಬ್ಬ ಭಾರತೀಯನಿಗೂ ಅಪಾರ ಹೆಮ್ಮೆಯ ಕ್ಷಣವಾಗಿತ್ತು. 2024-25ರಲ್ಲಿ, ಭಾರತದ ಪ್ರಮುಖ ಬಂದರುಗಳು ಇದುವರೆಗಿನ ಅತ್ಯಧಿಕ ಸರಕು ಪ್ರಮಾಣವನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿವೆ. ಇದಲ್ಲದೆ, ಭಾರತೀಯ ಬಂದರು ಮೊದಲ ಬಾರಿಗೆ ಮೆಗಾವ್ಯಾಟ್ ಪ್ರಮಾಣದ ಸ್ಥಳೀಯ ಹಸಿರು ಹೈಡ್ರೋಜನ್ ಸೌಲಭ್ಯವನ್ನು ಪ್ರಾರಂಭಿಸಿದೆ ಮತ್ತು  ನಮ್ಮ ಕಾಂಡ್ಲಾ ಬಂದರು ಈ ಸಾಧನೆ ಮಾಡಿದೆ. 'ಜವಾಹರ್ ಲಾಲ್ ನೆಹರು ಬಂದರು ಟ್ರಸ್ಟ್'ನಲ್ಲಿ (ಜೆಎನ್‌ಪಿಟಿ)  ಮತ್ತೊಂದು ಪ್ರಮುಖ ಮೈಲುಗಲ್ಲು ಸಾಧಿಸಲಾಗಿದೆ, ಅಲ್ಲಿ ಭಾರತ್ ಮುಂಬೈ ಕಂಟೈನರ್ ಟರ್ಮಿನಲ್‌ನ 2ನೇ ಹಂತವನ್ನು ಉದ್ಘಾಟಿಸಲಾಗಿದೆ. ಇದು ಟರ್ಮಿನಲ್‌ನ ನಿರ್ವಹಣಾ ಸಾಮರ್ಥ್ಯವನ್ನು ದ್ವಿಗುಣಗೊಳಿಸಿದೆ, ಇದು ಭಾರತದ ಅತಿದೊಡ್ಡ ಕಂಟೈನರ್ ಬಂದರಾಗಿದೆ. ಭಾರತದ ಬಂದರು ಮೂಲಸೌಕರ್ಯದಲ್ಲಿ ಇದುವರೆಗಿನ ಅತಿಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಇದು ಸಾಧ್ಯವಾಗಿದೆ, ತ್ತು ಇದಕ್ಕಾಗಿ ಸಿಂಗಾಪುರದ ಜೊತೆಗಿನ ನಮ್ಮ ಪಾಲುದಾರರಿಗೆ ನನ್ನ ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

 

ಸ್ನೇಹಿತರೇ,

ಈ ವರ್ಷ, ಭಾರತವು ಕಡಲ ಕ್ಷೇತ್ರದಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳತ್ತ ಪ್ರಮುಖ ಹೆಜ್ಜೆಗಳನ್ನು ಇಟ್ಟಿದೆ. ನಾವು ಒಂದು ಶತಮಾನದಷ್ಟು ಹಳೆಯದಾದ ವಸಾಹತುಶಾಹಿ ಕಡಲಯಾನ ಕಾನೂನುಗಳನ್ನು ರದ್ದುಗೊಳಿಸಿದ್ದೇವೆ ಮತ್ತು ಅವುಗಳ ಸ್ಥಾನದಲ್ಲಿ ಆಧುನಿಕ, ಭವಿಷ್ಯ ಸನ್ನದ್ಧ 21ನೇ ಶತಮಾನದ ಶಾಸನಗಳನ್ನು ಪರಿಚಯಿಸಿದ್ದೇವೆ. ಈ ಹೊಸ ಕಾನೂನುಗಳು 'ರಾಜ್ಯ ಕಡಲಯಾನ ಮಂಡಳಿ'ಗಳಿಗೆ ಅಧಿಕಾರ ಹೆಚ್ಚಿಸಿವೆ. ಸುರಕ್ಷತೆ ಮತ್ತು ಸುಸ್ಥಿರತೆಗೆ ಒತ್ತು ನೀಡುತ್ತವೆ ಮತ್ತು ಬಂದರು ನಿರ್ವಹಣೆಯ ಡಿಜಿಟಲೀಕರಣವನ್ನು ವಿಸ್ತರಿಸುತ್ತವೆ.

ಸ್ನೇಹಿತರೇ,

'ಮರ್ಚೆಂಟ್ ಶಿಪ್ಪಿಂಗ್ ಕಾಯ್ದೆ'ಯಡಿಯಲ್ಲಿ ನಾವು ಭಾರತೀಯ ಕಡಲಯಾನ ಕಾನೂನುಗಳನ್ನು ಅಂತರರಾಷ್ಟ್ರೀಯ ನಿಮಗಳೊಂದಿಗೆ ಸಮನ್ವಯಗೊಳಿಸಿದ್ದೇವೆ. ಇದು ಸುರಕ್ಷತೆಯ ಭರವಸೆಯನ್ನು ಬಲಪಡಿಸಿದೆ, ವ್ಯವಹಾರವನ್ನು ಸುಲಭಗೊಳಿಸಿದೆ ಮತ್ತು ಸರ್ಕಾರದ ಹಸ್ತಕ್ಷೇಪವನ್ನು ಕಡಿಮೆ ಮಾಡಿದೆ. ಈ ಪ್ರಯತ್ನಗಳು ಹೂಡಿಕೆದಾರರು ಮತ್ತು ಎಲ್ಲಾ ಪಾಲುದಾರರ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂಬ ವಿಶ್ವಾಸ ನನಗಿದೆ.

ಸ್ನೇಹಿತರೇ,

ವ್ಯಾಪಾರವನ್ನು ಸುಗಮ ಮತ್ತು ಸುಲಭವಾಗಿಸಲು 'ಕರಾವಳಿ ಹಡಗುಯಾ ಕಾಯ್ದೆ'ಯನ್ನು ವಿನ್ಯಾಸಗೊಳಿಸಲಾಗಿದೆ. ಇದು ಪೂರೈಕೆ ಸರಪಳಿ ಭದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಭಾರತದ ಸುದೀರ್ಘ ಕರಾವಳಿಯಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಅಂತೆಯೇ, 'ಒಂದು ರಾಷ್ಟ್ರ - ಒಂದು ಬಂದರು' ಪ್ರಕ್ರಿಯೆಯು ಬಂದರು ಸಂಬಂಧಿತ ಕಾರ್ಯವಿಧಾನಗಳನ್ನು ಪ್ರಮಾಣೀಕರಿಸುತ್ತದೆ ಮತ್ತು ಕಾಗದಪತ್ರಗಳ ಕಾರ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

 

ಸ್ನೇಹಿತರೇ,

ಕಡಲಯಾನ ವಲಯದಲ್ಲಿನ ಈ ಸುಧಾರಣೆಗಳು ಒಂದು ರೀತಿಯಲ್ಲಿ ನಮ್ಮ ದಶಕದ ಸುಧಾರಣಾ ಪಯಣದ ಮುಂದುವರಿಕೆಯಾಗಿದೆ. ಕಳೆದ ಹತ್ತರಿಂದ ಹನ್ನೊಂದು ವರ್ಷಗಳಲ್ಲಿ ನಾವು ಹಿಂತಿರುಗಿ ನೋಡಿದರೆ, ಭಾರತದ ಕಡಲಯಾನ ಕ್ಷೇತ್ರದಲ್ಲಿನ ಪರಿವರ್ತನೆಯು ನಿಜವಾಗಿಯೂ ಐತಿಹಾಸಿಕವಾಗಿದೆ. 'ಮ್ಯಾರಿಟೈಮ್ ಇಂಡಿಯಾ ವಿಷನ್' ಅಡಿಯಲ್ಲಿ, 150ಕ್ಕೂ ಹೆಚ್ಚು ಹೊಸ ಉಪಕ್ರಮಗಳನ್ನು ಪ್ರಾರಂಭಿಸಲಾಗಿದೆ. ಇದರ ಪರಿಣಾಮವಾಗಿ, ಪ್ರಮುಖ ಬಂದರುಗಳ ಸಾಮರ್ಥ್ಯವು ಬಹುತೇಕ ದ್ವಿಗುಣಗೊಂಡಿದೆ, ವಹಿವಾಟಿನ ಸಮಯವು ಗಮನಾರ್ಹವಾಗಿ ಕಡಿಮೆಯಾಗಿದೆ, ಕ್ರೂಸ್ ಪ್ರವಾಸೋದ್ಯಮವು ಹೊಸ ವೇಗವನ್ನು ಪಡೆದುಕೊಂಡಿದೆ, ಒಳನಾಡಿನ ಜಲಮಾರ್ಗಗಳಲ್ಲಿ ಸರಕು ಸಾಗಣೆಯು ಶೇ.700 ಕ್ಕಿಂತ ಹೆಚ್ಚಾಗಿದೆ, ಕಾರ್ಯಾಚರಣೆಯ ಜಲಮಾರ್ಗಗಳ ಸಂಖ್ಯೆ 3 ರಿಂದ 32 ಕ್ಕೆ ಏರಿದೆ ಮತ್ತು ನಮ್ಮ ಬಂದರುಗಳ ನಿವ್ವಳ ವಾರ್ಷಿಕ ಹೆಚ್ಚುವರಿಯು ಕೇವಲ ಒಂದು ದಶಕದಲ್ಲಿ ಒಂಬತ್ತು ಪಟ್ಟು ಹೆಚ್ಚಾಗಿದೆ.

ಸ್ನೇಹಿತರೇ,

ಇಂದು ಭಾರತದ ಬಂದರುಗಳನ್ನು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಅತ್ಯಂತ ಪರಿಣಾಮಕಾರಿ ಬಂದರುಗಳಾಗಿ ಪರಿಗಣಿಸಲಾಗಿದೆ ಮತ್ತು ಅನೇಕ ಅಂಶಗಳಲ್ಲಿ, ಅವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಬಂದರುಗಳನ್ನು ಸಹ ಮೀರಿಸುತ್ತವೆ ಎಂಬುದು ಹೆಮ್ಮೆಯ ವಿಷಯವಾಗಿದೆ. ನಾನು ಇನ್ನೂ ಕೆಲವು ಅಂಕಿ-ಅಂಶಗಳನ್ನು ಹಂಚಿಕೊಳ್ಳುತ್ತೇನೆ: ಭಾರತದಲ್ಲಿ ಸರಾಸರಿ ಕಂಟೇನರ್ ಲಂಗರು ಸಮಯವು ಮೂರು ದಿನಗಳಿಗಿಂತ ಕಡಿಮೆಯಾಗಿದೆ, ಇದು ಹಲವಾರು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಉತ್ತಮವಾಗಿದೆ.  ಸರಕು ಸಾಗಣೆ ಹಡಗು ಸರಾಸರಿ ನಿಲುಗಡೆ ಸಮಯವು 96 ಗಂಟೆಗಳಿಂದ ಕೇವಲ 48 ಗಂಟೆಗಳಿಗೆ ಇಳಿದಿದೆ. ಈ ಸುಧಾರಣೆಗಳು ಭಾರತೀಯ ಬಂದರುಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಿವೆ ಮತ್ತು ಜಾಗತಿಕ ಹಡಗು ಮಾರ್ಗಗಳಿಗೆ ಆಕರ್ಷಕವಾಗಿವೆ. ವಿಶ್ವ ಬ್ಯಾಂಕಿನ ಲಾಜಿಸ್ಟಿಕ್ಸ್ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತವು ಗಮನಾರ್ಹ ಸುಧಾರಣೆಯನ್ನು ಪ್ರದರ್ಶಿಸಿದೆ.

ಮತ್ತು ಸ್ನೇಹಿತರೇ,

ಕಡಲಯಾನ ಕ್ಷೇತ್ರದ ಮಾನವ ಸಂಪನ್ಮೂಲ ಅಂಶದಲ್ಲೂ ಭಾರತವು ಜಾಗತಿಕವಾಗಿ ತನ್ನ ಛಾಪು ಮೂಡಿಸುತ್ತಿದೆ. ಕಳೆದ ದಶಕದಲ್ಲಿ ಭಾರತೀಯ ನಾವಿಕರ ಸಂಖ್ಯೆ 1.25ಲಕ್ಷದಿಂದ 3 ಲಕ್ಷಕ್ಕೆ ಏರಿದೆ. ನೀವು ಪ್ರಪಂಚದಾದ್ಯಂತ ಯಾವುದೇ ಕರಾವಳಿಗೆ ಭೇಟಿ ನೀಡಿದರೂ, ಭಾರತೀಯ ನಾವಿಕರನ್ನು ಹೊಂದಿರುವ ಹಡಗನ್ನು ನೀವು ಖಂಡಿತವಾಗಿಯೂ ಕಾಣಬಹುದು. ಇಂದು, ನಾವಿಕರ ಸಂಖ್ಯೆಯಲ್ಲಿ ಭಾರತವು ವಿಶ್ವದ ಅಗ್ರ ಮೂರು ದೇಶಗಳಲ್ಲಿ ಒಂದಾಗಿದೆ.

 

ಸ್ನೇಹಿತರೇ,

21ನೇ ಶತಮಾನದ ಕಾಲು ಭಾಗ ಈಗಾಗಲೇ ಕಳೆದಿದೆ. ಈ ಶತಮಾನದ ಮುಂದಿನ 25 ವರ್ಷಗಳು ಇನ್ನಷ್ಟು ನಿರ್ಣಾಯಕವಾಗಲಿವೆ. ಅದಕ್ಕಾಗಿಯೇ ನಮ್ಮ ಗಮನವು ನೀಲಿ ಆರ್ಥಿಕತೆಯ ಮೇಲೆ, ಸುಸ್ಥಿರ ಕರಾವಳಿ ಅಭಿವೃದ್ಧಿಯ ಮೇಲೆ ನೆಟ್ಟಿದೆ. ನಾವು ಪರಿಸರ ಸ್ನೇಹಿ (ಹಸಿರು) ಸರಕು-ಸಾಗಣೆ, ಬಂದರು ಸಂಪರ್ಕ ಮತ್ತು ಕರಾವಳಿ ಕೈಗಾರಿಕಾ ಕ್ಲಸ್ಟರ್‌ಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ.

ಸ್ನೇಹಿತರೇ,

ಹಡಗು ನಿರ್ಮಾಣವೂ ಇಂದು ಭಾರತದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಭಾರತವು ವಿಶ್ವದ ಪ್ರಮುಖ ಹಡಗು ನಿರ್ಮಾಣ ಕೇಂದ್ರಗಳಲ್ಲಿ ಒಂದಾಗಿತ್ತು. ಇಲ್ಲಿಂದ ಸ್ವಲ್ಪ ದೂರದಲ್ಲಿ ಅಜಂತಾ ಗುಹೆಗಳಿವೆ, ಅಲ್ಲಿ ನೀವು ಆರನೇ ಶತಮಾನದ ವರ್ಣಚಿತ್ರವನ್ನು, ಅದರಲ್ಲಿ ಮೂರು ಸ್ತಂಭಗಳ ಹಡಗಿನ ವಿನ್ಯಾಸವನ್ನು ನೋಡಬಹುದು. ಆರನೇ ಶತಮಾನದ ಕಲಾಕೃತಿಯೊಂದು ಅಂತಹ ಸುಧಾರಿತ ಮೂರು-ಸ್ತಂಭಗಳ  ಹಡಗು ವಿನ್ಯಾಸವನ್ನು ಹೊಂದಿದೆಯೆಂದರೆ ನೀವೇ ಊಹಿಸಿ. ಇದನ್ನು ಇತರ ದೇಶಗಳು ಶತಮಾನಗಳ ನಂತರ ಅಳವಡಿಸಿಕೊಂಡವು. ಈ ವಿಚಾರದಲ್ಲಿ ಹಲವಾರು ಶತಮಾನಗಳ ಅಂತರವನ್ನು ಕಾಣಬಹುದು.

ಸ್ನೇಹಿತರೇ,

ಭಾರತದಲ್ಲಿ ನಿರ್ಮಿಸಲಾದ ಹಡಗುಗಳು ಒಂದು ಕಾಲದಲ್ಲಿ ಜಾಗತಿಕ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದವು. ನಂತರ, ನಾವು ಹಡಗು ಒಡೆಯುವ ಕ್ಷೇತ್ರದಲ್ಲಿಯೂ ಮುಂದುವರೆದೆವು. ಈಗ, ಭಾರತವು ಮತ್ತೊಮ್ಮೆ ಹಡಗು ತಯಾರಿಕೆಯಲ್ಲಿ ಹೊಸ ಎತ್ತರವನ್ನು ತಲುಪುವ ಪ್ರಯತ್ನಗಳನ್ನು ವೇಗಗೊಳಿಸುತ್ತಿದೆ. ಭಾರತವು ಈಗ ದೊಡ್ಡ ಹಡಗುಗಳಿಗೆ ಮೂಲಸೌಕರ್ಯ ಸ್ವತ್ತುಗಳ ಸ್ಥಾನಮಾನವನ್ನು ನೀಡಿದೆ. ಈ ನೀತಿ ನಿರ್ಧಾರವು ಇಲ್ಲಿರುವ ಎಲ್ಲಾ ಹಡಗು ನಿರ್ಮಾಣಕಾರರಿಗೆ ಹೊಸ ಮಾರ್ಗಗಳನ್ನು ತೆರೆಯುತ್ತದೆ. ಇದು ಹೊಸ ಹಣಕಾಸು ಆಯ್ಕೆಗಳನ್ನು ಒದಗಿಸುತ್ತದೆ, ಬಡ್ಡಿ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಸಾಲ ಸೌಲಭ್ಯಗಳ ಲಭ್ಯತೆಯನ್ನು ಸುಧಾರಿಸುತ್ತದೆ.

 

ಮತ್ತು ಸ್ನೇಹಿತರೇ,

ಈ ಸುಧಾರಣೆಯನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರ ಸುಮಾರು 70,000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಿದೆ. ಇದು ದೇಶೀಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ, ದೀರ್ಘಕಾಲೀನ ಹಣಕಾಸು ಉತ್ತೇಜಿಸುತ್ತದೆ, ‘ಗ್ರೀನ್‌ಫೀಲ್ಡ್‌' ಮತ್ತು 'ಬ್ರೌನ್‌ಫೀಲ್ಡ್' ಶಿಪ್‌ಯಾರ್ಡ್‌ಗಳ ಅಭಿವೃದ್ಧಿಗೆ ಕಾರಣವಾಗುತ್ತದೆ, ಸುಧಾರಿತ ಕಡಲಯಾನ ಕೌಶಲ್ಯಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ನಮ್ಮ ಯುವಕರಿಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಇದು ನಿಮ್ಮೆಲ್ಲರಿಗೂ ಹೊಸ ಹೂಡಿಕೆ ಅವಕಾಶಗಳನ್ನು ತೆರೆಯುತ್ತದೆ.

ಸ್ನೇಹಿತರೇ,

ಇದು ಛತ್ರಪತಿ ಶಿವಾಜಿ ಮಹಾರಾಜರ ನಾಡು. ಛತ್ರಪತಿ ಶಿವಾಜಿ ಮಹಾರಾಜರು ಕಡಲ ಭದ್ರತೆಗೆ ಅಡಿಪಾಯ ಹಾಕಿದ್ದಲ್ಲದೆ, ಅರೇಬಿಯನ್ ಸಮುದ್ರದ ವ್ಯಾಪಾರ ಮಾರ್ಗಗಳಲ್ಲಿ ಭಾರತದ ಶಕ್ತಿಯನ್ನು ಪ್ರದರ್ಶಿಸಿದರು. ಸಮುದ್ರಗಳು ಕೇವಲ ಗಡಿಗಳಲ್ಲ, ಅವು ಅವಕಾಶಗಳ ಹೆಬ್ಬಾಗಿಲುಗಳು ಎಂದು ಶಿವಾಜಿಯವರ ದೂರದೃಷ್ಟಿಯಿಂದ ನಾವು ಕಲಿತುಕೊಂಡೆವು. ಇಂದು, ಭಾರತವು ಅದೇ ಮನೋಭಾವ ಮತ್ತು ದೃಷ್ಟಿಕೋನದಿಂದ ಮುನ್ನಡೆಯುತ್ತಿದೆ.

ಸ್ನೇಹಿತರೇ,

ಜಾಗತಿಕ ಪೂರೈಕೆ ಸರಪಳಿಯನ್ನು ಬಲಪಡಿಸುವ ಗುರಿಯನ್ನು ಭಾರತವು ಹೊಂದಿದೆ. ನಾವು ವಿಶ್ವದರ್ಜೆಯ ಬೃಹತ್‌ ಬಂದರುಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಮತ್ತು ಮಹಾರಾಷ್ಟ್ರದ ವಾಧ್ವಾನ್‌ನಲ್ಲಿ 76,000 ಕೋಟಿ ರೂಪಾಯಿ ವೆಚ್ಚದ ಹೊಸ ಬಂದರನ್ನು ನಿರ್ಮಿಸಲಾಗುತ್ತಿದೆ. ನಮ್ಮ ಪ್ರಮುಖ ಬಂದರುಗಳ ಸಾಮರ್ಥ್ಯವನ್ನು ನಾಲ್ಕು ಪಟ್ಟು ಹೆಚ್ಚಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಕಂಟೇನರ್ ಸರಕುಗಳಲ್ಲಿ ಭಾರತದ ಪಾಲನ್ನು ಹೆಚ್ಚಿಸಲು ನಾವು ಬಯಸುತ್ತೇವೆ ಮತ್ತು ಈ ಎಲ್ಲಾ ಗುರಿಗಳನ್ನು ಸಾಧಿಸುವಲ್ಲಿ, ನೀವು ನಮ್ಮ ಪ್ರಮುಖ ಪಾಲುದಾರರು. ನಿಮ್ಮ ಆಲೋಚನೆಗಳು, ಆವಿಷ್ಕಾರಗಳು ಮತ್ತು ಹೂಡಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮಗೆ ತಿಳಿದಿರುವಂತೆ, ಭಾರತವು ಬಂದರುಗಳು ಮತ್ತು ಹಡಗುಗಳಲ್ಲಿ ಶೇ.100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವವು ವೇಗವಾಗಿ ಬೆಳೆಯುತ್ತಿದೆ. "ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್"(ಭಾರತದಲ್ಲಿ ತಯಾರಿಸಿ, ಜಗತ್ತಿಗಾಗಿ ತಯಾರಿಸಿ) ದೃಷ್ಟಿಕೋನದ ಅಡಿಯಲ್ಲಿ ನಾವು ವಿವಿಧ ಪ್ರೋತ್ಸಾಹಕಗಳನ್ನು ನೀಡುತ್ತಿದ್ದೇವೆ. ಹೂಡಿಕೆಗಳನ್ನು ಆಕರ್ಷಿಸಲು ನಾವು ರಾಜ್ಯ ಸರ್ಕಾರಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ. ಆದ್ದರಿಂದ, ವಿವಿಧ ದೇಶಗಳ ಹೂಡಿಕೆದಾರರಿಗೆ, ಭಾರತದ ಹಡಗು ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಮತ್ತು ವಿಸ್ತರಿಸಲು ಇದು ಸರಿಯಾದ ಸಮಯ, ಸೂಕ್ತ ಸಮಯ.

 

ಸ್ನೇಹಿತರೇ,

ಭಾರತದ ಮತ್ತೊಂದು ದೊಡ್ಡ ಶಕ್ತಿಯೆಂದರೆ ನಮ್ಮ ರೋಮಾಂಚಕ ಪ್ರಜಾಪ್ರಭುತ್ವ ಮತ್ತು ವಿಶ್ವಾಸಾರ್ಹತೆ. ಜಾಗತಿಕ ಸಮುದ್ರಗಳು ಪ್ರಕ್ಷುಬ್ಧವಾಗಿದ್ದಾಗ, ಜಗತ್ತು ಸ್ಥಿರವಾದ ಲೈಟ್ ಹೌಸ್ ಗಾಗಿ ಎದುರು ನೋಡುತ್ತದೆ.  ಭಾರತವು ಆ ಲೈಟ್ ಹೌಸ್‌ನ ಪಾತ್ರವನ್ನು ಬಹಳ ಶಕ್ತಿಯಿಂದ ನಿರ್ವಹಿಸಬಲ್ಲದು. ಜಾಗತಿಕ ಉದ್ವಿಗ್ನತೆಗಳು, ವ್ಯಾಪಾರ ಅಡೆತಡೆಗಳು ಮತ್ತು ಬದಲಾಗುತ್ತಿರುವ ಪೂರೈಕೆ ಸರಪಳಿಗಳ ನಡುವೆ, ಭಾರತವು ಕಾರ್ಯತಂತ್ರದ ಸ್ವಾಯತ್ತತೆ, ಶಾಂತಿ ಮತ್ತು ಸಮಗ್ರ ಬೆಳವಣಿಗೆಯ ಸಂಕೇತವಾಗಿ ನಿಂತಿದೆ. ನಮ್ಮ ಕಡಲ ಮತ್ತು ವ್ಯಾಪಾರ ಉಪಕ್ರಮಗಳು ಈ ವಿಶಾಲ ದೃಷ್ಟಿಕೋನದ ಭಾಗವಾಗಿದೆ. ಇದಕ್ಕೆ ಒಂದು ಜ್ವಲಂತ ಉದಾಹರಣೆಯೆಂದರೆ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್, ಇದು ಜಾಗತಿಕ ವ್ಯಾಪಾರ ಮಾರ್ಗಗಳನ್ನು ಮರುವ್ಯಾಖ್ಯಾನಿಸುತ್ತದೆ ಮತ್ತು ಶುದ್ಧ ಇಂಧನ ಹಾಗೂ ಸ್ಮಾರ್ಟ್ ಸರಕು ಸಾಗಣೆಯನ್ನು ಉತ್ತೇಜಿಸುತ್ತದೆ.

ಸ್ನೇಹಿತರೇ,

ಇಂದು ನಾವು ಎಲ್ಲರನ್ನೂ ಒಳಗೊಂಡ ಕಡಲಯಾನದ ಅಭಿವೃದ್ಧಿಯ ಮೇಲೂ ಗಮನ ಹರಿಸಿದ್ದೇವೆ. ಸಣ್ಣ ದ್ವೀಪ ರೂಪದಲ್ಲಿರುವ ಅಭಿವೃದ್ಧಿಶೀಲ ರಾಷ್ಟ್ರಗಳು ಮತ್ತು ಕಡಿಮೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಂತ್ರಜ್ಞಾನ, ತರಬೇತಿ ಮತ್ತು ಮೂಲಸೌಕರ್ಯಗಳ ಮೂಲಕ ಸಬಲೀಕರಣಗೊಂಡಾಗ ಮಾತ್ರ ಇದನ್ನು ಸಾಧಿಸಬಹುದು. ಒಟ್ಟಾಗಿ, ನಾವು ಹವಾಮಾನ ಬದಲಾವಣೆ, ಪೂರೈಕೆ ಸರಪಳಿ ಅಡೆತಡೆಗಳು, ಆರ್ಥಿಕ ಅನಿಶ್ಚಿತತೆ ಮತ್ತು ಕಡಲ ಭದ್ರತೆಯ ಸವಾಲುಗಳನ್ನು ಎದುರಿಸಬೇಕಾಗಿದೆ.

ಸ್ನೇಹಿತರೇ,

ಶಾಂತಿ, ಪ್ರಗತಿ ಮತ್ತು ಸಮೃದ್ಧಿಯನ್ನು ಮುನ್ನಡೆಸಲು ಮತ್ತು ಜಗತ್ತಿಗೆ ಸುಸ್ಥಿರ ಭವಿಷ್ಯವನ್ನು ನಿರ್ಮಿಸಲು ನಾವೆಲ್ಲರೂ ಒಗ್ಗೂಡೋಣ. ಮತ್ತೊಮ್ಮೆ, ಈ ಸಮಾವೇಶದ ಭಾಗವಾಗಿರುವ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।