Today, India is the fastest growing major economy:PM
Government is following the mantra of Reform, Perform and Transform:PM
Government is committed to carrying out structural reforms to make India developed:PM
Inclusion taking place along with growth in India:PM
India has made ‘process reforms’ a part of the government's continuous activities:PM
Today, India's focus is on critical technologies like AI and semiconductors:PM
Special package for skilling and internship of youth:PM

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಜಿ, ಆರ್ಥಿಕ ಬೆಳವಣಿಗೆ ಸಂಸ್ಥೆಯ ಅಧ್ಯಕ್ಷ ಎನ್.ಕೆ. ಸಿಂಗ್ ಜಿ, ಸಮ್ಮೇಳನದಲ್ಲಿ ಭಾಗವಹಿಸಿರುವ ಭಾರತ ಮತ್ತು ವಿದೇಶಗಳ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೇ! ಇದು ಕೌಟಿಲ್ಯ ಸಮ್ಮೇಳನದ 3ನೇ ಆವೃತ್ತಿಯಾಗಿದೆ. ನಿಮ್ಮೆಲ್ಲರನ್ನು ಇಲ್ಲಿ ಭೇಟಿಯಾಗುವ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಇಲ್ಲಿ ಹಲವಾರು ಅಧಿವೇಶನಗಳು ನಡೆಯಲಿದ್ದು, ಮುಂದಿನ 3 ದಿನಗಳಲ್ಲಿ ವಿವಿಧ ಆರ್ಥಿಕ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಈ ಚರ್ಚೆಗಳು ಭಾರತದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತವೆ ಎಂಬ ವಿಶ್ವಾಸ ನನಗಿದೆ.

ಸ್ನೇಹಿತರೆ,

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ಸ್ನೇಹಿತರೆ,

ಭಾರತವು ಇಂದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಭಾರತವು ಪ್ರಸ್ತುತ ಜಿಡಿಪಿಯಲ್ಲಿ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಜಾಗತಿಕ ಹಣಕಾಸು ತಂತ್ರಜ್ಞಾನ ಅಳವಡಿಕೆ ದರಗಳಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ಇಂದು ನಾವು ಸ್ಮಾರ್ಟ್‌ಫೋನ್ ಡೇಟಾ ಬಳಕೆಯಲ್ಲಿ ನಂಬರ್ 1 ಆಗಿದ್ದೇವೆ. ನಾವು ಜಾಗತಿಕವಾಗಿ 2ನೇ ಅತಿದೊಡ್ಡ ಇಂಟರ್ನೆಟ್ ಬಳಕೆದಾರರ ನೆಲೆ ಹೊಂದಿದ್ದೇವೆ. ವಿಶ್ವದ ಅರ್ಧದಷ್ಟು ನೈಜ-ಸಮಯದ ಡಿಜಿಟಲ್ ವಹಿವಾಟುಗಳು ಇಂದು ಭಾರತದಲ್ಲಿ ನಡೆಯುತ್ತಿವೆ. ಭಾರತ ಈಗ ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆ ಹೊಂದಿದೆ. ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ವಿಷಯದಲ್ಲಿ, ಭಾರತವು 4ನೇ ಸ್ಥಾನದಲ್ಲಿದೆ. ಉತ್ಪಾದನೆಯ ವಿಷಯಕ್ಕೆ ಬಂದಾಗ, ಭಾರತ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ ದೇಶವಾಗಿದೆ. ಭಾರತವು ದ್ವಿಚಕ್ರ ವಾಹನಗಳು ಮತ್ತು ಟ್ರ್ಯಾಕ್ಟರ್‌ಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವೂ ಆಗಿದೆ. ಅಷ್ಟೇ ಅಲ್ಲ, ಭಾರತವು ವಿಶ್ವದಲ್ಲೇ ಅತ್ಯಂತ ಹೆಚ್ಚಿನ ಯುವ ಸಮುದಾಯ ಹೊಂದಿರುವ ದೇಶವಾಗಿದೆ. ಭಾರತವು ಜಾಗತಿಕವಾಗಿ ವಿಜ್ಞಾನಿಗಳು ಮತ್ತು ತಂತ್ರಜ್ಞರ ಸಮೂಹವನ್ನು ಹೊಂದಿರುವ 3ನೇ ಅತಿದೊಡ್ಡ ದೇಶವಾಗಿದೆ. ಅದು ವಿಜ್ಞಾನವೇ ಆಗಲಿ, ತಂತ್ರಜ್ಞಾನವೇ ಆಗಲಿ ಅಥವಾ ನಾವೀನ್ಯತೆಯೇ ಆಗಿರಲಿ, ಭಾರತವು ಸ್ಪಷ್ಟವಾಗಿ ಅಗ್ರ ಸ್ಥಾನದಲ್ಲಿದೆ.

 

ಸ್ನೇಹಿತರೆ,

'ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ' ಎಂಬ ಮಂತ್ರವನ್ನು ಅನುಸರಿಸುವ ಮೂಲಕ, ನಾವು ರಾಷ್ಟ್ರವನ್ನು ತ್ವರಿತ ಗತಿಯಲ್ಲಿ ಮುನ್ನಡೆಸಲು ನಿರಂತರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ. 60 ವರ್ಷಗಳ ನಂತರ ಭಾರತದ ಜನರು ಸತತ 3ನೇ ಬಾರಿಗೆ ಅದೇ ಸರ್ಕಾರವನ್ನು ಆಯ್ಕೆ ಮಾಡಿದ ಪರಿಣಾಮ ಇದು. ಜನರ ಬದುಕು ಬದಲಾದಾಗ ದೇಶ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ ಎಂಬ ವಿಶ್ವಾಸ ಮೂಡುತ್ತದೆ. ಈ ಭಾವನೆಯು ಭಾರತದ ಸಾರ್ವಜನಿಕರ ಆದೇಶದಲ್ಲಿ ಪ್ರತಿಫಲಿಸುತ್ತದೆ. 140 ಕೋಟಿ ನಾಗರಿಕರ ನಂಬಿಕೆ ಈ ಸರ್ಕಾರದ ದೊಡ್ಡ ಆಸ್ತಿಯಾಗಿದೆ.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ರಚನಾತ್ಮಕ ಸುಧಾರಣೆಗಳನ್ನು ಮಾಡುವುದನ್ನು ಮುಂದುವರಿಸುವುದು ನಮ್ಮ ಬದ್ಧತೆಯಾಗಿದೆ. ನಮ್ಮ 3ನೇ ಅವಧಿಯ ಮೊದಲ 3 ತಿಂಗಳಲ್ಲಿ ನಾವು ಮಾಡಿದ ಕೆಲಸದಲ್ಲಿ ಈ ಬದ್ಧತೆಯನ್ನು ನೀವು ನೋಡಬಹುದು. ದಿಟ್ಟ ನೀತಿ ಬದಲಾವಣೆಗಳು, ಉದ್ಯೋಗಗಳು ಮತ್ತು ಕೌಶಲ್ಯಗಳಿಗೆ ಬಲವಾದ ಬದ್ಧತೆ, ಸುಸ್ಥಿರ ಬೆಳವಣಿಗೆ ಮತ್ತು ನಾವೀನ್ಯತೆಯ ಮೇಲೆ ಗಮನ ಕೇಂದ್ರೀಕರಿಸುವುದು, ಆಧುನಿಕ ಮೂಲಸೌಕರ್ಯ, ಜೀವನ ಗುಣಮಟ್ಟ ಮತ್ತು ತ್ವರಿತ ಬೆಳವಣಿಗೆಯ ನಿರಂತರತೆಯು ನಮ್ಮ ಮೊದಲ 3 ತಿಂಗಳ ನೀತಿಗಳಲ್ಲಿ ಪ್ರತಿಫಲಿಸುತ್ತಿದೆ. ಈ ಅವಧಿಯಲ್ಲಿ ಅಂದರೆ 15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ 3 ತಿಂಗಳಲ್ಲೇ ಭಾರತದಲ್ಲಿ ಹಲವಾರು ಬೃಹತ್ ಮೂಲಸೌಕರ್ಯ ಯೋಜನೆಗಳ ಕೆಲಸ ಆರಂಭವಾಗಿದೆ. ನಾವು ದೇಶಾದ್ಯಂತ 12 ಕೈಗಾರಿಕಾ ಪ್ರದೇಶ(ನೋಡ್‌)ಗಳನ್ನು ನಿರ್ಮಿಸಲು ನಿರ್ಧರಿಸಿದ್ದೇವೆ. ಹೆಚ್ಚುವರಿಯಾಗಿ, ನಾವು 3 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದೇವೆ.

ಸ್ನೇಹಿತರೆ,

ಭಾರತದ ಬೆಳವಣಿಗೆಯ ಯಶೋಗಾಥೆಯಲ್ಲಿ ಮತ್ತೊಂದು ಗಮನಾರ್ಹ ಅಂಶವೆಂದರೆ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮನೋಭಾವ. ಬೆಳವಣಿಗೆ ಆದರೆ ಅಸಮಾನತೆ ಬರುತ್ತದೆ ಎಂದು ಒಮ್ಮೆ ನಂಬಲಾಗುತ್ತಿತ್ತು. ಆದರೆ ಭಾರತ ದೇಶದಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿದೆ. ಭಾರತದಲ್ಲಿ ಬೆಳವಣಿಗೆಯ ಜೊತೆಗೆ ಹಣಕಾಸು ಸೇರ್ಪಡೆಯೂ ಆಗುತ್ತಿದೆ. ಇದರ ಪರಿಣಾಮವಾಗಿ ಕಳೆದ 10 ವರ್ಷಗಳಲ್ಲಿ 250 ದಶಲಕ್ಷ ಅಂದರೆ 25 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ. ಭಾರತದ ಕ್ಷಿಪ್ರ ಪ್ರಗತಿಯ ಜತೆಗೆ, ಅಸಮಾನತೆ ಕಡಿಮೆಯಾಗಿದೆ, ಅಭಿವೃದ್ಧಿಯ ಪ್ರಯೋಜನಗಳು ಎಲ್ಲರಿಗೂ ತಲುಪುವುದನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ.

ಸ್ನೇಹಿತರೆ,

ಭಾರತದ ಬೆಳವಣಿಗೆಯ ಮುನ್ನೋಟಗಳ ವಿಶ್ವಾಸವು ನಾವು ಸಾಗುತ್ತಿರುವ ದಿಕ್ಕನ್ನು ಸಹ ತೋರಿಸುತ್ತಿದೆ. ಇತ್ತೀಚಿನ ವಾರಗಳು ಮತ್ತು ತಿಂಗಳ ದತ್ತಾಂಶದಲ್ಲಿ ನೀವು ಇದನ್ನು ನೋಡಬಹುದು. ಕಳೆದ ವರ್ಷ, ನಮ್ಮ ಆರ್ಥಿಕತೆಯು ಯಾವುದೇ ಭವಿಷ್ಯಕ್ಕಿಂತ ಉತ್ತಮವಾಗಿ ಕಾರ್ಯ ನಿರ್ವಹಿಸಿತು. ಅದು ವಿಶ್ವ ಬ್ಯಾಂಕ್ ಆಗಿರಲಿ, ಐಎಂಎಫ್ ಆಗಿರಲಿ ಅಥವಾ ಮೂಡೀಸ್ ವರದಿಯೇ ಆಗಿರಲಿ, ಎಲ್ಲರೂ ಭಾರತಕ್ಕಾಗಿ ತಮ್ಮ ಮುನ್ಸೂಚನೆಗಳನ್ನು ಪರಿಷ್ಕರಿಸಿದ್ದಾರೆ. ಈ ಎಲ್ಲಾ ಸಂಸ್ಥೆಗಳು ಜಾಗತಿಕ ಅನಿಶ್ಚಯದ ಹೊರತಾಗಿಯೂ ಭಾರತದ ಜಿಡಿಪಿ 7+% ದರದಲ್ಲಿ ಬೆಳವಣಿಗೆ ಮುಂದುವರಿಸುತ್ತದೆ ಎಂದು ಹೇಳುತ್ತಿವೆ. ನಾವು ಭಾರತೀಯರು ಅದಕ್ಕಿಂತಲೂ ಉತ್ತಮ ಪ್ರದರ್ಶನ ನೀಡುತ್ತೇವೆ ಎಂಬ ವಿಶ್ವಾಸವಿದೆ.

ಸ್ನೇಹಿತರೆ,

ಭಾರತದ ಮೇಲಿನ ಈ ವಿಶ್ವಾಸದ ಹಿಂದೆ ಸದೃಢವಾದ ಕಾರಣಗಳಿವೆ. ಉತ್ಪಾದನೆಯೇ ಆಗಿರಲಿ ಅಥವಾ ಸೇವಾ ವಲಯವೇ ಆಗಿರಲಿ, ಇಂದು ಜಗತ್ತು ಭಾರತವನ್ನು ಹೂಡಿಕೆಗೆ ಆದ್ಯತೆಯ ತಾಣವಾಗಿ ನೋಡುತ್ತಿದೆ. ಇದು ಕಾಕತಾಳೀಯವಲ್ಲ, ಆದರೆ ಕಳೆದ 10 ವರ್ಷಗಳಲ್ಲಿ ಆಗಿರುವ ಪ್ರಮುಖ ಸುಧಾರಣೆಗಳ ಫಲಿತಾಂಶ ಇದಾಗಿದೆ. ಈ ಸುಧಾರಣೆಗಳು ಭಾರತದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳನ್ನು ಪರಿವರ್ತಿಸಿವೆ. ಒಂದು ಉದಾಹರಣೆಯೆಂದರೆ, ಭಾರತದ ಬ್ಯಾಂಕಿಂಗ್ ಸುಧಾರಣೆಗಳು ಬ್ಯಾಂಕ್‌ಗಳ ಆರ್ಥಿಕ ಪರಿಸ್ಥಿತಿಗಳನ್ನು ಬಲಪಡಿಸುವುದು ಮಾತ್ರವಲ್ಲದೆ, ಅವುಗಳ ಸಾಲ ನೀಡುವ ಸಾಮರ್ಥ್ಯವನ್ನು ಹೆಚ್ಚಿಸಿವೆ. ಅಂತೆಯೇ, ಜಿಎಸ್‌ಟಿಯು ವಿವಿಧ ಕೇಂದ್ರ ಮತ್ತು ರಾಜ್ಯಗಳ ಪರೋಕ್ಷ ತೆರಿಗೆಗಳನ್ನು ಸಂಯೋಜಿಸಿದೆ. ದಿವಾಳಿತನ ಮತ್ತು ಋಣಭಾರ ಸಂಕೇತ(ಐಬಿಸಿ)ದ ಜವಾಬ್ದಾರಿ, ಚೇತರಿಕೆ ಮತ್ತು ನಿರ್ಣಯದ ಹೊಸ ಸಾಲಸಂಸ್ಕೃತಿಯನ್ನು ಅಭಿವೃದ್ಧಿಪಡಿಸಿದೆ. ಭಾರತದ ಗಣಿಗಾರಿಕೆ, ರಕ್ಷಣೆ ಮತ್ತು ಬಾಹ್ಯಾಕಾಶದಂತಹ ಕ್ಷೇತ್ರಗಳು  ಖಾಸಗಿ ಪಾಲುದಾರರಿಗೆ ಮತ್ತು ನಮ್ಮ ಯುವ ಉದ್ಯಮಿಗಳಿಗೆ ತೆರೆದಿವೆ. ವಿಶ್ವಾದ್ಯಂತ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಸೃಷ್ಟಿಸಲು ನಾವು ಎಫ್‌ಡಿಐ ನೀತಿಯನ್ನು ಉದಾರಗೊಳಿಸಿದ್ದೇವೆ. ಸರಕು ಸಾಗಣೆ ವೆಚ್ಚ ಮತ್ತು ಸಮಯ ಕಡಿಮೆ ಮಾಡಲು ನಾವು ಆಧುನಿಕ ಮೂಲಸೌಕರ್ಯಗಳ ಮೇಲೆ ಗಮನ ಕೇಂದ್ರೀಕರಿಸುತ್ತಿದ್ದೇವೆ. ಕಳೆದ ದಶಕದಲ್ಲಿ ನಾವು ಮೂಲಸೌಕರ್ಯ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸಿದ್ದೇವೆ.

 

ಸ್ನೇಹಿತರೆ,

ಭಾರತವು ಸರ್ಕಾರವು ಸುಧಾರಣೆ ಪ್ರಕ್ರಿಯೆಗಳನ್ನು ತನ್ನ ಉಪಕ್ರಮಗಳಲ್ಲಿ ಸಂಯೋಜಿಸಿದೆ. ನಾವು 40,000ಕ್ಕೂ ಹೆಚ್ಚು ಅನುಸರಣೆಗಳನ್ನು ತೆಗೆದುಹಾಕಿದ್ದೇವೆ ಮತ್ತು ಕಂಪನಿಗಳ ಕಾಯಿದೆಯನ್ನು ಅಪರಾಧ ಮುಕ್ತಗೊಳಿಸಿದ್ದೇವೆ. ಹಿಂದಿನ ಕಷ್ಟಕರ ವ್ಯಾಪಾರ ಕಾರ್ಯಾಚರಣೆಗಳ ಹಲವಾರು ನಿಬಂಧನೆಗಳಿಗೆ ತಿದ್ದುಪಡಿ ತಂದಿದ್ದೇವೆ. ಕಂಪನಿಗಳ ಪ್ರಾರಂಭ, ಮುಚ್ಚುವಿಕೆ ಮತ್ತು ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಗಳನ್ನು ಸರಳಗೊಳಿಸಲು ರಾಷ್ಟ್ರೀಯ ಏಕಗವಾಕ್ಷಿ ವ್ಯವಸ್ಥೆ ಪರಿಚಯಿಸಲಾಗಿದೆ. ಈಗ, ರಾಜ್ಯ ಮಟ್ಟದಲ್ಲಿ ಸುಧಾರಣೆಪ್ರಕ್ರಿಯೆ ಗಳನ್ನು ವೇಗಗೊಳಿಸಲು ನಾವು ರಾಜ್ಯ ಸರ್ಕಾರಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ.

ಸ್ನೇಹಿತರೆ,

ಭಾರತದಲ್ಲಿ ಉತ್ಪಾದನೆ ಅಥವಾ ತಯಾರಿಕೆ ಉತ್ತೇಜಿಸಲು, ನಾವು ಉತ್ಪಾದನೆ ಸಂಪರ್ತಿಕ ಉತ್ತೇಜನಾ ಯೋಜನೆ(ಪಿಎಲ್‌ಐ)ಯನ್ನು ಪರಿಚಯಿಸಿದ್ದೇವೆ. ಇದರ ಪರಿಣಾಮವು ಈಗ ಹಲವು ವಲಯಗಳಲ್ಲಿ ಗೋಚರಿಸುತ್ತಿದೆ. ಕಳೆದ 3 ವರ್ಷಗಳಲ್ಲಿ ಪಿಎಲ್ಐ ಸುಮಾರು 1.25 ಲಕ್ಷ ಕೋಟಿ ರೂ.  ಹೂಡಿಕೆ ಆಕರ್ಷಿಸಿದೆ. ಇದರಿಂದ ಸುಮಾರು 11 ಲಕ್ಷ ಕೋಟಿ ರೂ. ಮೊತ್ತದ ಉತ್ಪಾದನೆ ಮತ್ತು ಮಾರಾಟವಾಗಿದೆ. ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯು ಗಮನಾರ್ಹವಾಗಿದೆ. ಈ ವಲಯಗಳನ್ನು ಇತ್ತೀಚೆಗೆ ತೆರೆಯಲಾಗಿದೆ, ಇನ್ನೂ 200ಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಈಗಾಗಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊರಹೊಮ್ಮಿವೆ. ಇಂದು, ನಮ್ಮ ಖಾಸಗಿ ರಕ್ಷಣಾ ಕಂಪನಿಗಳು ದೇಶದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ 20 ಪ್ರತಿಶತ ಪಾಲು ಹೊಂದಿವೆ.

ಸ್ನೇಹಿತರೆ,

ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಬೆಳವಣಿಗೆ ಇನ್ನೂ ಗಮನಾರ್ಹವಾಗಿದೆ. ಕೇವಲ 10 ವರ್ಷಗಳ ಹಿಂದೆ, ಭಾರತವು ಹೆಚ್ಚಿನ ಮೊಬೈಲ್ ಫೋನ್‌ಗಳ ಪ್ರಮುಖ ಆಮದುದಾರ ರಾಷ್ಟ್ರವಾಗಿತ್ತು. ಆದರೆ ಇಂದು, ಭಾರತದಲ್ಲಿ 330 ದಶಲಕ್ಷ  ಅಥವಾ 33 ಕೋಟಿಗೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ತಯಾರಿಸಲಾಗುತ್ತಿದೆ. ವಾಸ್ತವವಾಗಿ, ನೀವು ಯಾವುದೇ ವಲಯವನ್ನು ನೋಡಿದರೂ, ಭಾರತದಲ್ಲಿ ಹೂಡಿಕೆದಾರರಿಗೆ ಹೂಡಿಕೆ ಮಾಡಲು ಮತ್ತು ಹೆಚ್ಚಿನ ಆದಾಯ ಗಳಿಸಲು ಅಸಾಧಾರಣ ಅವಕಾಶಗಳಿವೆ.

ಸ್ನೇಹಿತರೆ,

ಭಾರತ ಈಗ ಕೃತಕ ಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್‌ಗಳಂತಹ ನಿರ್ಣಾಯಕ ತಂತ್ರಜ್ಞಾನಗಳ ಮೇಲೆ ಗಮನಕೇಂದ್ರೀಕರಿಸುತ್ತಿದೆ, ನಾವು ಈ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆ ಮಾಡುತ್ತಿದ್ದೇವೆ. ನಮ್ಮ ಎಐ ಮಿಷನ್ ಎಐ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಕೌಶಲ್ಯ ಅಭಿವೃದ್ಧಿ ಎರಡನ್ನೂ ಹೆಚ್ಚಿಸುತ್ತಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿ, ಒಟ್ಟು 1.5 ಟ್ರಿಲಿಯನ್ ರೂ.( 1.5 ಲಕ್ಷ ಕೋಟಿ ರೂ.) ಹೂಡಿಕೆ ಮಾಡಲಾಗುತ್ತಿದೆ. ಶೀಘ್ರದಲ್ಲೇ, ಭಾರತದಲ್ಲಿರುವ 5 ಸೆಮಿಕಂಡಕ್ಟರ್ ಘಟಕಗಳು 'ಮೇಡ್ ಇನ್ ಇಂಡಿಯಾ' ಚಿಪ್‌ಗಳನ್ನು ವಿಶ್ವದ ಮೂಲೆ ಮೂಲೆಗೆ ತಲುಪಿಸಲು ಪ್ರಾರಂಭಿಸುತ್ತವೆ.

ಸ್ನೇಹಿತರೆ,

ಭಾರತವು ಕೈಗೆಟುಕುವ ಬೌದ್ಧಿಕ ಶಕ್ತಿಯ ಪ್ರಮುಖ ಮೂಲವಾಗಿದೆ ಎಂದು ನಿಮಗೆಲ್ಲರಿಗೂ ತಿಳಿದಿದೆ. ಇಂದು ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವದಾದ್ಯಂತದ ಕಂಪನಿಗಳ 1,700ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳ ಉಪಸ್ಥಿತಿಯೇ ಇದಕ್ಕೆ ಸಾಕ್ಷಿಯಾಗಿದೆ. ಈ ಕೇಂದ್ರಗಳು 2 ದಶಲಕ್ಷಕ್ಕೂ ಹೆಚ್ಚು ಅಂದರೆ 20 ಲಕ್ಷಕ್ಕಿಂತ ಹೆಚ್ಚಿನ ಭಾರತೀಯ ಯುವಕರನ್ನು ನೇಮಿಸಿಕೊಂಡಿವೆ, ಅವರು ಜಗತ್ತಿಗೆ ಹೆಚ್ಚು ಕೌಶಲ್ಯಪೂರ್ಣ ಸೇವೆಗಳನ್ನು ಒದಗಿಸುತ್ತಿದ್ದಾರೆ. ಇಂದು, ಭಾರತವು ಈ ಜನಸಂಖ್ಯಾ ಲಾಭಾಂಶವನ್ನು ಗರಿಷ್ಠಗೊಳಿಸಲು ಅಭೂತಪೂರ್ವ ಗಮನ ಹರಿಸುತ್ತಿದೆ. ಇದನ್ನು ಸಾಧಿಸಲು ಶಿಕ್ಷಣ, ನಾವೀನ್ಯತೆ, ಕೌಶಲ್ಯ ಮತ್ತು ಸಂಶೋಧನೆಗೆ ವಿಶೇಷ ಗಮನ ನೀಡಲಾಗುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದೊಂದಿಗೆ ನಾವು ಈ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ಪರಿಚಯಿಸಿದ್ದೇವೆ. ಕಳೆದ 10 ವರ್ಷಗಳಲ್ಲಿ, ಪ್ರತಿ ವಾರ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ, ಪ್ರತಿದಿನ 2 ಹೊಸ ಕಾಲೇಜುಗಳನ್ನು ತೆರೆಯಲಾಗಿದೆ. ಈ ಅವಧಿಯಲ್ಲಿ ನಮ್ಮ ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ.

 

ಸ್ನೇಹಿತರೆ,

ನಾವು ಶಿಕ್ಷಣದ ಪ್ರವೇಶ ವಿಸ್ತರಿಸುವ ಜತೆಗೆ ಅದರ ಗುಣಮಟ್ಟ ಸುಧಾರಿಸುವತ್ತ ಗಮನ ಹರಿಸುತ್ತಿದ್ದೇವೆ. ಇದರ ಪರಿಣಾಮವಾಗಿ, ಕ್ಯುಎಸ್ ಜಾಗತಿಕ ವಿಶ್ವವಿದ್ಯಾಲಯಗಳ ಶ್ರೇಯಾಂಕದಲ್ಲಿ ಭಾರತೀಯ ಸಂಸ್ಥೆಗಳ ಸಂಖ್ಯೆ ಕಳೆದ ದಶಕದಲ್ಲಿ 3 ಪಟ್ಟು ಹೆಚ್ಚಾಗಿದೆ. ಈ ವರ್ಷದ ಬಜೆಟ್‌ನಲ್ಲಿ ಲಕ್ಷಾಂತರ ಯುವಕರಿಗೆ ಕೌಶಲ್ಯ ಮತ್ತು ತರಬೇತಿ ನೀಡಲು ವಿಶೇಷ ಪ್ಯಾಕೇಜ್ ಘೋಷಿಸಿದ್ದೇವೆ. ಪಿಎಂ ಇಂಟರ್ನ್‌ಶಿಪ್ ಯೋಜನೆಯಡಿ, 111 ಕಂಪನಿಗಳು ಮೊದಲ ದಿನವೇ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿವೆ. ಈ ಯೋಜನೆಯ ಮೂಲಕ ನಾವು ಪ್ರಮುಖ ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ನೊಂದಿಗೆ 1 ಕೋಟಿ ಯುವಕರನ್ನು ಬೆಂಬಲಿಸುತ್ತಿದ್ದೇವೆ.

ಸ್ನೇಹಿತರೆ,

ಭಾರತದ ಸಂಶೋಧನಾ ಉತ್ಪಾದನೆ ಮತ್ತು ಪೇಟೆಂಟ್ ಸಲ್ಲಿಕೆಗಳು ಕಳೆದ 10 ವರ್ಷಗಳಲ್ಲಿ ತ್ವರಿತ ಬೆಳವಣಿಗೆ ಕಂಡಿವೆ. ಒಂದು ದಶಕಕ್ಕೂ ಕಡಿಮೆ ಅವಧಿಯಲ್ಲಿ, ಜಾಗತಿಕ ಆವಿಷ್ಕಾರ ಸೂಚ್ಯಂಕ ಶ್ರೇಯಾಂಕದಲ್ಲಿ ಭಾರತವು 81ನೇ ಸ್ಥಾನದಿಂದ 39ನೇ ಸ್ಥಾನಕ್ಕೆ ಜಿಗಿದಿದೆ, ನಾವು ಮತ್ತಷ್ಟು ಮುನ್ನಡೆಯುವ ಗುರಿ ಹೊಂದಿದ್ದೇವೆ. ತನ್ನ ಸಂಶೋಧನಾ ಪರಿಸರ ವ್ಯವಸ್ಥೆ ಬಲಪಡಿಸಲು ಭಾರತವು 1 ಟ್ರಿಲಿಯನ್(1 ಲಕ್ಷ ಕೋಟಿ ರೂ.) ರೂ. ಮೌಲ್ಯದ ಸಂಶೋಧನಾ ನಿಧಿ ಸ್ಥಾಪಿಸಿದ್ದೇವೆ.

ಸ್ನೇಹಿತರೆ,

ಇಂದು ಇಡೀ ವಿಶ್ವವೇ ಭಾರತದ ಹಸಿರು ಭವಿಷ್ಯ ಮತ್ತು ಹಸಿರು ಉದ್ಯೋಗಗಳ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಈ ವಲಯದಲ್ಲಿ ನಿಮಗೆ ಸಮಾನವಾದ ಮಹತ್ವದ ಅವಕಾಶಗಳಿವೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆಯನ್ನು ನೀವೆಲ್ಲರೂ ನೋಡಿದ್ದೀರಿ. ಈ ಶೃಂಗಸಭೆಯ ಯಶಸ್ಸು ಏನೆಂದರೆ, ಹಸಿರು ಪರಿವರ್ತನೆಯ ನವೀಕೃತ ಉತ್ಸಾಹ. ಜಿ-20 ಶೃಂಗಸಭೆ ಸಮಯದಲ್ಲಿ ಭಾರತದ ಉಪಕ್ರಮದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟ ಪ್ರಾರಂಭಿಸಲಾಯಿತು. ಜಿ-20 ಸದಸ್ಯ ರಾಷ್ಟ್ರಗಳು ಭಾರತದ ಹಸಿರು ಹೈಡ್ರೋಜನ್ ಇಂಧನ ಅಭಿವೃದ್ಧಿಯನ್ನು ಬಲವಾಗಿ ಬೆಂಬಲಿಸಿದವು. ಭಾರತದಲ್ಲಿ, ಈ ದಶಕದ ಅಂತ್ಯದ ವೇಳೆಗೆ 5 ದಶಲಕ್ಷ ಟನ್ ಹಸಿರು ಹೈಡ್ರೋಜನ್ ಉತ್ಪಾದಿಸುವ ಗುರಿಯನ್ನು ನಾವು ಹೊಂದಿದ್ದೇವೆ. ನಾವು ಸೂಕ್ಷ್ಮ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದನೆಯನ್ನು ಸಹ ಮುಂದುವರಿಸುತ್ತಿದ್ದೇವೆ.

ಭಾರತ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ, ದೊಡ್ಡ ಪ್ರಮಾಣದ ಛಾವಣಿ ಸೌರ ಯೋಜನೆ. ಚಾವಣಿಯ ಸೌರಶಕ್ತಿ ವ್ಯವಸ್ಥೆಗಳನ್ನು ಸ್ಥಾಪಿಸಲು ಮತ್ತು ಸೌರಶಕ್ತಿ ಮೂಲಸೌಕರ್ಯ ಸ್ಥಾಪನೆಗೆ ಸಹಾಯ ಮಾಡಲು ನಾವು ಪ್ರತಿ ಮನೆಗೆ ಹಣ ಒದಗಿಸುತ್ತಿದ್ದೇವೆ. ಇಲ್ಲಿಯವರೆಗೆ 13 ದಶಲಕ್ಷಕ್ಕಿಂತಲೂ ಹೆಚ್ಚು ಅಂದರೆ 1 ಕೋಟಿ 30 ಲಕ್ಷ ಕುಟುಂಬಗಳು ಈ ಯೋಜನೆಗೆ ನೋಂದಾಯಿಸಿಕೊಂಡಿವೆ, ಅಂದರೆ ಈ ಕುಟುಂಬಗಳು ಸೌರ ವಿದ್ಯುತ್ ಉತ್ಪಾದಕರಾಗಿದ್ದಾರೆ. ಈ ಉಪಕ್ರಮವು ಪ್ರತಿ ಕುಟುಂಬಕ್ಕೆ ಸರಾಸರಿ 25,000 ರೂ. ಉಳಿಸುತ್ತದೆ. ಪ್ರತಿ 3 ಕಿಲೋವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯು 50-60 ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ತಡೆಯುತ್ತದೆ. ಈ ಯೋಜನೆಯು ಸರಿಸುಮಾರು 1.7 ದಶಲಕ್ಷ(17 ಲಕ್ಷ) ಉದ್ಯೋಗಗಳನ್ನು ಸೃಷ್ಟಿಸುತ್ತದೆ, ನುರಿತ ಅಪಾರ ಯುವಉದ್ಯೋಗಿಗಳನ್ನು ಸೃಜಿಸುತ್ತದೆ. ಆದ್ದರಿಂದ, ಈ ವಲಯದಲ್ಲೂ ನಿಮಗೆ ಹಲವಾರು ಹೊಸ ಹೂಡಿಕೆ ಅವಕಾಶಗಳು ಹೊರಹೊಮ್ಮುತ್ತಿವೆ.

 

ಸ್ನೇಹಿತರೆ,

ಭಾರತದ ಆರ್ಥಿಕತೆಯು ಪ್ರಸ್ತುತ ಗಮನಾರ್ಹ ಬದಲಾವಣೆಗೆ ಒಳಗಾಗುತ್ತಿದೆ. ಬಲವಾದ ಆರ್ಥಿಕ ಮೂಲಸೌಕರ್ಯಗಳೊಂದಿಗೆ, ಭಾರತವು ನಿರಂತರವಾದ ಉನ್ನತ ಬೆಳವಣಿಗೆಯ ಹಾದಿಯಲ್ಲಿದೆ. ಇಂದು ಭಾರತವು ಉನ್ನತ ಸ್ಥಾನ ತಲುಪಲು ಶ್ರಮಿಸುತ್ತಿದೆ. ಮಾತ್ರವಲ್ಲದೆ, ಅಗ್ರಸ್ಥಾನದಲ್ಲಿ ಉಳಿಯಲು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ. ಜಗತ್ತು ಇಂದು ಪ್ರತಿಯೊಂದು ವಲಯದಲ್ಲೂ ಅಪಾರ ಅವಕಾಶಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮ ಚರ್ಚೆಗಳಿಂದ ಅನೇಕ ಮೌಲ್ಯಯುತ ಒಳನೋಟಗಳು ಹೊರಹೊಮ್ಮುತ್ತವೆ ಎಂಬ ವಿಶ್ವಾಸ ನನಗಿದೆ. ಈ ಪ್ರಯತ್ನಕ್ಕೆ ನಾನು ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಇದು ನಮಗೆ ಕೇವಲ ಚರ್ಚೆಯ ವೇದಿಕೆಯಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇಲ್ಲಿ ನಡೆಯುವ ಚರ್ಚೆಗಳು, ಪ್ರಸ್ತಾಪಿಸಿದ ವಿಚಾರಗಳು, ಮಾಡಬೇಕಾದವುಗಳು ಮತ್ತು ಮಾಡಬಾರದವುಗಳು, ಪ್ರಯೋಜಕವೆಂದು ಸಾಬೀತಾದವುಗಳು ನಮ್ಮ ಸರ್ಕಾರಿ ವ್ಯವಸ್ಥೆಯಲ್ಲಿ ಶ್ರದ್ಧೆಯಿಂದ ಸಂಯೋಜಿಸಲ್ಪಟ್ಟಿವೆ. ನಾವು ಅವುಗಳನ್ನು ನಮ್ಮ ನೀತಿಗಳು ಮತ್ತು ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತೇವೆ. ಈ ವಿಚಾರಮಂಥನ ಪ್ರಕ್ರಿಯೆಯಲ್ಲಿ ನೀವು ನೀಡುವ ಬುದ್ಧಿವಂತ ಸಲಹೆ ಸೂಚನೆಗಳನ್ನು ನಾವು ನಮ್ಮ ದೇಶಕ್ಕೆ ಉಜ್ವಲ ಭವಿಷ್ಯ ರೂಪಿಸಲು ಬಳಸುತ್ತೇವೆ. ಆದ್ದರಿಂದ, ನಿಮ್ಮ ಭಾಗವಹಿಸುವಿಕೆ ನಮಗೆ ಅತ್ಯಂತ ಮಹತ್ವದ್ದಾಗಿದೆ. ನೀವು ನೀಡುವ ಪ್ರತಿಯೊಂದು ಪದವೂ ನಮಗೆ ಮೌಲ್ಯ ನೀಡುತ್ತವೆ. ನಿಮ್ಮ ಆಲೋಚನೆಗಳು, ನಿಮ್ಮ ಅನುಭವ - ಅವೇ ನಮ್ಮ ಆಸ್ತಿ. ಮತ್ತೊಮ್ಮೆ, ನಿಮ್ಮೆಲ್ಲರ ಕೊಡುಗೆಗಳಿಗಾಗಿ ನಾನು ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಅವರ ಶ್ಲಾಘನೀಯ ಪ್ರಯತ್ನಗಳಿಗಾಗಿ ನಾನು ಎನ್.ಕೆ.  ಸಿಂಗ್ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸುತ್ತೇನೆ.

ಆತ್ಮೀಯ ಅಭಿನಂದನೆಗಳು ಮತ್ತು ಶುಭಾಶಯಗಳೊಂದಿಗೆ,

ಧನ್ಯವಾದಗಳು!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Govt directs faster processing of city gas projects, hikes commercial LPG allocation to ease supply stress

Media Coverage

Govt directs faster processing of city gas projects, hikes commercial LPG allocation to ease supply stress
NM on the go

Nm on the go

Always be the first to hear from the PM. Get the App Now!
...
This is the New India that leaves no stone unturned for development: PM Modi
March 23, 2026
Today, India is moving forward with a new confidence; Now India faces challenges head-on: PM
From the Gulf to the Global West and from the Global South to neighbouring countries, India is a trusted partner for all: PM
What gets measured gets improved and ultimately gets transformed: PM
This is the new India, It is leaving no stone unturned for development: PM

नमस्कार!

पिछले कुछ समय में मुझे एक-दो बार टीवी9 भारतवर्ष देखने का मौका मिला है। नॉर्मली भी युद्धों और मिसाइलों पर आपका बहुत फोकस होता है और आजकल तो आपको कंटेंट की ओवरफीडिंग हो रही है। बड़े-बड़े देश टीवी9 को इतना सारा कंटेंट देने पर तुले हुए हैं, लेकिन On a Serious Note, आज विश्व जिन गंभीर परिस्थितियों से गुजर रहा है, वो अभूतपूर्व है और बेहद गंभीर है। और इन स्थितियों के बीच, आज टीवी-9 नेटवर्क ने विचारों का एक बेहद महत्वपूर्ण मंच बनाया है। आज इस समिट में आप सभी India and the world, इस विषय पर चर्चा कर रहे हैं। मैं आप सबको बधाई देता हूं। इस समिट के लिए अपनी शुभकामनाएं देता हूं। सभी अतिथियों का अभिनंदन करता हूं।

साथियों,

आज जब दुनिया, conflicts के कारण उलझी हुई है, जब इन conflicts के दुष्प्रभाव पूरी दुनिया पर दिख रहे हैं, तब India and the world की बात करना बहुत ही प्रासंगिक है। भारत आज वो देश है, जिसकी अर्थव्यवस्था तेजी से आगे बढ़ रही है। 2014 के पहले की स्थितियों को पीछे छोड़कर के आज भारत एक नए आत्मविश्वास के साथ आगे बढ़ रहा है। अब भारत चुनौतियों को टालता नहीं है बल्कि चुनौतियों से टकराता है। आप बीते 5-6 साल में देखिए, कोरोना की महामारी के बाद चुनौतियां एक के बाद एक बढ़ती ही गई हैं। ऐसा कोई साल नहीं है, जिसने भारत की, भारतीयों की परीक्षा न ली हो। लेकिन 140 करोड़ देशवासियों के एकजुट प्रयास से भारत हर आपदा का सामना करते हुए आगे बढ़ रहा है। इस समय युद्ध की परिस्थितियों में भी भारत की नीति और रणनीति देखकर, भारत का सामर्थ्य देखकर दुनिया के अनेकों देश हैरान हैं। हमारे यहां कहावत है, सांच को आंच नहीं। 28 फरवरी से दुनिया में जो उथल-पुथल मची है, इन कठोर विपरीत परिस्थितियों में भी भारत प्रगति के, विकास के, विश्वास के संकल्प के साथ आगे बढ़ रहा है। इन 23 दिनों में भारत ने अपनी Relationship Building Capacity दिखाई है, Decision Making Capacity दिखाई है और Crisis Management Capacity दिखाई है।

साथियों,

आज जब दुनिया इतने सारे खेमों में बंटी हुई है, भारत ने अभूतपूर्व और अकल्पनीय bridges बनाए हैं। Gulf से लेकर Global West तक, Global South से लेकर पड़ोसी देशों तक भारत सभी का trusted partner है। कुछ लोग पूछते हैं, हम किसके साथ हैं? तो उनको मेरा जवाब यही है कि हम भारत के साथ हैं, हम भारत के हितों के साथ हैं, शांति के साथ हैं, संवाद के साथ हैं।

साथियों,

संकट के इसी समय में जब global supply chains डगमगा रही हैं, भारत ने diversification और resilience का मॉडल पेश किया है। Energy हो, fertilizers हों या essential goods अपने नागरिकों को कम से कम परेशानी हो, इसके लिए भारत ने निरंतर प्रयास किया है और आज भी कर रहे है।

साथियों,

जब राष्ट्रनीति ही राजनीति का मुख्य आधार हो, तब देश का भविष्य सर्वोपरि होता है। लेकिन जब राजनीति में व्यक्तिगत स्वार्थ हावी हो जाता है, तब लोग देश के फ्यूचर के बजाय अपने फ्यूचर के बारे में सोचते हैं। आप ज़रा याद कीजिए 2004 से 2010 के बीच क्या हुआ था? तब कांग्रेस सरकार के समय पेट्रोल-डीजल और गैस की कीमतों का संकट आया था और तब कांग्रेस ने देश की नहीं बल्कि अपनी सत्ता की चिंता की। उस वक्त कांग्रेस ने एक लाख अड़तालीस हज़ार करोड़ रुपए के ऑयल बॉन्ड जारी किए थे और प्रधानमंत्री मनमोहन सिंह जी ने खुद कहा था कि वो आने वाली पीढ़ी पर कर्ज का बोझ डाल रहे हैं। यह जानते हुए भी कि ऑयल बॉन्ड का फैसला गलत है, जो रिमोट कंट्रोल से सरकार चला रहे थे, उन लोगों ने अपनी सत्ता बचाने के लिए यह गलत निर्णय किया क्योंकि जवाबदेही उस समय नहीं होनी थी, उस बॉन्ड पर री-पेमेंट 2020 के बाद होनी थी।

साथियों,

बीते 5-6 वर्षों में हमारी सरकार ने कांग्रेस सरकार के उस पाप को धोने का काम किया है, और इस धुलाई का खर्चा कम नहीं आया है, ऐसी लाँड्री आपने देखी नहीं होगी। 1 लाख 48 हज़ार करोड़ रुपए की जगह, देश को 3 लाख करोड़ रुपए से अधिक की पेमेंट करनी पड़ी क्योंकि इसमें ब्याज भी जुड़ गया था। यानी हमने करीब-करीब दोगुनी राशि चुकाने के लिए मजबूर हुए। आजकल कांग्रेस के जो नेता बयानों की मिसाइलें दाग रहे हैं, मिसाइल आई तो टीवी9 को मजा आएगा, उनकी इस विषय का जिक्र आते ही बोलती बंद हो जाती है।

साथियों,

पश्चिम एशिया में बनी परिस्थितियों पर मैंने आज लोकसभा में अपना वक्तव्य दिया है। दुनिया में जहां भी युद्ध हो रहे हैं, वो भारत की सीमा से दूर हैं। लेकिन आज की व्यवस्थाओं में कोई भी देश युद्धों से दुष्प्रभाव से दूर रहे, ऐसा संभव नहीं होता। अनेक देशों में तो स्थिति बहुत गंभीर हो चुकी है। और इन हालातों में हम देख रहे हैं कि राजनीतिक स्वार्थ से भरे कुछ लोग, कुछ दल, संकट के इस समय में भी अपने लिए राजनीतिक अवसर खोज रहे हैं। इसलिए मैं टीवी9 के मंच से फिर कहूंगा, यह समय संयम का है, संवेदनशीलता का है। हमने कोरोना महासंकट के दौरान भी देखा है, जब देशवासी एकजुट होकर संकट का सामना करते हैं, तो कितने सार्थक परिणाम आते हैं। इसी भाव के साथ हमें इस युद्ध से बनी परिस्थितियों का सामना करना है।

साथियों,

दुनिया की हर उथल-पुथल के बीच, भारत ने अपनी प्रगति की गति को भी बनाए रखा है। अगर मैं 28 फरवरी को युद्ध शुरू होने के बाद, बीते 23 दिनों का ही ब्यौरा दूं, तो पूरब से पश्चिम तक, उत्तर से दक्षिण तक देश में हजारों करोड़ के डेवलपमेंट प्रोजेक्ट्स का काम हुआ है। दिल्ली मेट्रो रेल के महत्वपूर्ण कॉरिडोर्स का लोकार्पण, सिलचर का हाई स्पीड कॉरिडोर का शिलान्यास, कोटा में नए एयरपोर्ट का शिलान्यास, मदुरै एयरपोर्ट को इंटरनेशनल एयरपोर्ट का दर्जा देना, ऐसे अनेक काम बीते 23 दिनों में ही हुए हैं। बीते एक महीने के दौरान ही औद्योगिक विकास को गति देने के लिए भव्य स्कीम को मंजूरी दी गई है। इसके तहत देशभर में 100 plug-and-play industrial parks विकसित किए जाएंगे। देश में Small Hydro Power Development Scheme को भी हरी झंडी दी गई है। इससे आने वाले वर्षों में 1,500 मेगावाट नई hydro power capacity जोड़ी जाएगी। इसी दौरान जल जीवन मिशन को साल 2028 तक बढ़ाने का निर्णय लिया गया है। किसानों के हित में भी अनेक बड़े निर्णय लिए गए हैं। बीते एक महीने में ही पीएम किसान सम्मान निधि के तहत 18 हजार करोड़ रुपए से अधिक सीधे किसानों के खातों में ट्रांसफर किए गए हैं। और जो हमारे MSMEs हैं, जो हमारे निर्यातक हैं, उनके लिए भी करीब 500 करोड़ रुपए के राहत पैकेज की भी घोषणा की गई है। यह सारे कदम इस बात का प्रमाण हैं कि विकसित भारत बनाने के लिए देश कितनी तेज गति से काम कर रहा है।

साथियों,

Management की दुनिया में एक सिद्धांत कहा जाता है - What gets measured, gets managed. लेकिन मैं इसमें एक बात और जोड़ना चाहता हूं, What gets measured, gets improved और ultimately, gets transformed. क्योंकि आकलन जागरूकता पैदा करता है। आकलन जवाबदेही तय करता है और सबसे महत्वपूर्ण आकलन संभावनाओं को जन्म देता है।

साथियों,

अगर आप 2014 से पहले के 10-11 साल और 2014 के बाद के 10-11 साल का आप आकलन करेंगे, तो यही पाएंगे कि कैसे इसी सिद्धांत पर चलते हुए, भारत ने हर सेक्टर को Transform किया है। जैसे पहले हाईवे बनते थे, करीब 11-12 किलोमीटर प्रति दिन की रफ्तार से, आज भारत करीब 30 किलोमीटर प्रतिदिन की स्पीड से हाईवे बना रहा है। पहले पोर्ट्स पर शिप का Turnaround Time, 5-6 दिन का होता था। आज वही काम, करीब-करीब 2 दिन से भी कम समय में पूरा हो रहा है। पहले Startup Culture के बारे में चर्चा ही नहीं होती थी। 2014 से पहले, हमारे देश में 400-500 स्टार्ट अप्स ही थे। आज भारत में 2 लाख से ज्यादा रजिस्ट्रर्ड स्टार्ट अप्स हैं। पहले मेडिकल education में सीटें भी सीमित थीं, करीब 50-55 हजार MBBS seats थीं, आज यह बढ़कर सवा लाख से ज्यादा हो चुकी हैं। पहले देश के Banking system से भी करोड़ों लोग बाहर थे। देश में सिर्फ 25 करोड़ के आसपास ही बैंक account थे। वहीं जनधन योजना के माध्यम से 55 करोड़ से ज्यादा बैंक अकाउंट खुले हैं। पहले हमारे देश में airports की संख्या भी 70 से कम थी। आज एयरपोर्ट्स की संख्या भी बढ़कर 160 से ज्यादा हो चुकी है।

साथियों,

पहले भी योजनाएं तो बनती थीं, लेकिन आज फर्क है, आज परिणाम दिखते हैं। पहले गति धीमी थी, आज भारत fastrack पर है। पहले संभावनाएं भी अंधकार में थीं, आज संकल्प सिद्धियों में बदल रहे हैं। इसलिए दुनिया को भी यह संदेश मिल रहा है कि यह नया भारत है। यह अपने विकास के लिए कोई कोर-कसर बाकी नहीं छोड़ रहा है।

साथियों,

आज हमारा प्रयास है कि अतीत में विकास का जो असंतुलन पैदा हो गया था, उसको अवसरों में बदला जाए। अब जैसे हमारा पूर्वी भारत है। हमारा पूर्वी भारत संसाधनों से समृद्ध है, दशकों तक वहां जिन्होंने सरकारें चलाई हैं, उनकी उपेक्षा ने पूर्वी भारत के विकास पर ब्रेक लगा दी थी। अब हालात बदल रहे हैं। जिस असम में कभी गोलियों की आवाज सुनाई देती थी, आज वहां सेमीकंडक्टर यूनिट बन रही है। ओडिशा में सेमीकंडक्टर से लेकर पेट्रोकेमिकल्स तक अनेक नए-नए सेक्टर का विकास हो रहा है। जिस बिहार में 6-7 दशक में गंगा जी पर एक बड़ा पुल बन पाया था एक, उस बिहार में पिछले एक दशक में 5 से ज्यादा नए पुल बनाए गए हैं। यूपी में कभी कट्टा मैन्युफैक्चरिंग की कहानियां कही जाती थीं, आज यूपी, मोबाइल फोन मैन्युफैक्चरिंग में दुनिया में अपनी पहचान बना रहा है।

साथियों,

पूर्वी भारत का एक और बड़ा राज्य पश्चिम बंगाल है। पश्चिम बंगाल, एक समय में भारत के कल्चर, एजुकेशन, इंडस्ट्री और ट्रेड का हब होता था। बीते 11 वर्षों में केंद्र सरकार ने पश्चिम बंगाल के विकास के लिए बड़ी मात्रा में निवेश किया है। लेकिन दुर्भाग्य से, आज वहां एक ऐसी निर्मम सरकार है, जो विकास पर ब्रेक लगाकर बैठी है। TV9 बांग्ला के जो दर्शक हैं, वो जानते हैं कि बंगाल में आयुष्मान योजना पर निर्मम सरकार ने ब्रेक लगाया हुआ है। पीएम सूर्यघर मुफ्त बिजली योजना पर ब्रेक लगाया हुआ है। पीएम आवास योजना पर ब्रेक लगाया हुआ है। चाय बागान श्रमिकों के लिए शुरू हुई योजना के लिए ब्रेक लगाया हुआ है। यानी विकास और जनकल्याण से ज्यादा प्राथमिकता निर्मम सरकार अपने राजनीतिक स्वार्थ को दे रही है।

साथियों,

देश में इस तरह की राजनीति की शुरुआत जिस दल ने की है, वो अपने गुनाहों से बच नहीं सकती और वो पार्टी है - कांग्रेस। कांग्रेस पार्टी की राजनीति का एक ही लक्ष्य रहा है, किसी भी तरह विकास का विरोध और कांग्रेस यह तब से कर रही है, जब मैं गुजरात में था। गुजरात में वर्षों तक जनता ने हमें आशीर्वाद दिया, तो कांग्रेस ने उस जनादेश को स्वीकार नहीं किया। उन्होंने गुजरात की छवि पर सवाल उठाए, उसकी प्रगति को कटघरे में खड़ा किया और जब यही विश्वास पूरे देश में दिखाई दिया, तो कांग्रेस का विरोध भी रीजनल से नेशनल हो गया।

साथियों,

जब राजनीति में विरोध, विकास के विरोध में बदल जाए, जब आलोचना देश की उपलब्धियों पर सवाल उठाने लगे, तब यह सिर्फ सरकार का विरोध नहीं रह जाता, यह देश की प्रगति से असहज होने की मानसिकता बन जाती है। आज कांग्रेस इसी मानसिकता की गुलाम बन चुकी है। आज स्थिति यह है कि देश की हर सफलता पर प्रश्न उठाया जाता है, हर उपलब्धि में कमी खोजी जाती है और हर प्रयास के असफल होने की कामना की जाती है। कोविड के समय, देश ने अपनी वैक्सीन बनाई, तो कांग्रेस ने उस पर भी संदेह जताया। Make in India की बात हुई, तो कहा गया कि यह सफल नहीं होगा, बब्बर शेर कहकर इसका मजाक उड़ाया गया। जब देश में डिजिटल इंडिया अभियान शुरू हुआ, तो उसका मजाक उड़ाया गया। लेकिन हर बार यह कांग्रेस का दुर्भाग्य और देश का सौभाग्य रहा कि भारत ने हर चुनौती को सफलता में बदला। आज भारत दुनिया की सबसे बड़ी वैक्सीनेशन ड्राइव का उदाहरण है। भारत डिजिटल पेमेंट्स में दुनिया का अग्रणी देश है। भारत मैन्युफैक्चरिंग और स्टार्टअप्स में नई ऊंचाइयों को छू रहा है।

साथियों,

लोकतंत्र में विरोध जरूरी होता है। लेकिन विरोध और विद्वेष के बीच एक रेखा होती है। सरकार का विरोध करना लोकतांत्रिक अधिकार है। लेकिन देश को बदनाम करना, यह कांग्रेस की नीयत पर सवाल खड़ा करता है। जब विरोध इस स्तर तक पहुंच जाए कि देश की उपलब्धियां भी असहज करने लगें, तो यह राजनीति नहीं, यह दृष्टिकोण की समस्या है। अभी हमने ग्लोबल AI समिट में भी देखा है। जब पूरी दुनिया भारत में जुटी हुई थी, तो कांग्रेस के लोग कपड़े फाड़ने वहां पहुंच गए थे। इन लोगों को देश की इज्जत की कितनी परवाह है, यह इसी से पता चलता है। इसलिए आज आवश्यकता है कि देशहित को, दलहित से ऊपर रखा जाए क्योंकि अंत में राजनीति से ऊपर, राष्ट्र होता है, राष्ट्र का विकास होता है।

साथियों,

आज का यह दिन भी हमें यही प्रेरणा देता है। आज के ही दिन शहीद भगत सिंह, शहीद राजगुरु और शहीद सुखदेव ने देश के लिए सर्वोच्च बलिदान दिया था। आज ही, समाजवादी आंदोलन के प्रखर आदर्श डॉ. राम मनोहर लोहिया जी की जयंती भी है। यह वो प्रेरणाएं हैं, जिन्होंने देश को हमेशा स्व से ऊपर रखा है। देशहित को सबसे ऊपर रखने की यही प्रेरणा, भारत को विकसित भारत बनाएगी। यही प्रेरणा भारत को आत्मनिर्भर बनाएगी। मुझे पूरा विश्वास है कि टीवी9 की यह समिट भी भारत के आत्मविश्वास और दुनिया के भरोसे पर, भारतीयों पर जो भरोसा है, उस भरोसे को और सशक्त करेगी। आप सभी को मेरी तरफ से बहुत-बहुत शुभकामनाएं हैं और आपके बीच आने का अवसर दिया, आप सबसे मिलने का मौका लिया, इसलिए बहुत-बहुत धन्यवाद!

नमस्‍कार!