ಭಾರತವು ವೈವಿಧ್ಯತೆ, ಬೇಡಿಕೆ ಮತ್ತು ವ್ಯಾಪಕ ಪ್ರಮಾಣದ ತ್ರಿವಳಿ ಶಕ್ತಿಯನ್ನು ಹೊಂದಿದೆ: ಪ್ರಧಾನಮಂತ್ರಿ
ಕಳೆದ 10 ವರ್ಷಗಳಲ್ಲಿ, ಭಾರತದಲ್ಲಿ 25 ಕೋಟಿ ಜನರು ಬಡತನವನ್ನು ಮೀರಿದ್ದಾರೆ: ಪ್ರಧಾನಮಂತ್ರಿ
ಇಂದು, ಭಾರತವು ವಿಶ್ವದ ಮೂರನೇ ಅತಿದೊಡ್ಡ ನವೋದ್ಯಮ ಪರಿಸರ ವ್ಯವಸ್ಥೆಯಾಗಿದ್ದು, ಆಹಾರ ಮತ್ತು ಕೃಷಿ ವಲಯಗಳಲ್ಲಿ ಅನೇಕ ನವೋದ್ಯಮಗಳು ಕಾರ್ಯನಿರ್ವಹಿಸುತ್ತಿವೆ: ಪ್ರಧಾನಮಂತ್ರಿ
ಜಾಗತಿಕ ಆಹಾರ ಭದ್ರತೆಗೆ ಭಾರತ ನಿರಂತರವಾಗಿ ಕೊಡುಗೆ ನೀಡುತ್ತಿದೆ: ಪ್ರಧಾನಮಂತ್ರಿ
ಇಂದು, ಸಣ್ಣ ರೈತರು ಮಾರುಕಟ್ಟೆಯಲ್ಲಿ ಪ್ರಮುಖ ಶಕ್ತಿಯಾಗುತ್ತಿದ್ದಾರೆ: ಪ್ರಧಾನಮಂತ್ರಿ
ಭಾರತದಲ್ಲಿ, ಸಹಕಾರಿಗಳು ನಮ್ಮ ಡೈರಿ ವಲಯ ಮತ್ತು ನಮ್ಮ ಗ್ರಾಮೀಣ ಆರ್ಥಿಕತೆಗೆ ಹೊಸ ಶಕ್ತಿಯನ್ನು ನೀಡುತ್ತಿವೆ: ಪ್ರಧಾನಮಂತ್ರಿ

ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ,  ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ವರ್ಲ್ಡ್ ಫುಡ್ ಇಂಡಿಯಾ(ವಿಶ್ವ ಆಹಾರ ಭಾರತ) ಕಾರ್ಯಕ್ರಮಕ್ಕಾಗಿ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಇಂದು ಈ ಕಾರ್ಯಕ್ರಮದಲ್ಲಿ, ನಮ್ಮ ರೈತರು, ಉದ್ಯಮಿಗಳು, ಹೂಡಿಕೆದಾರರು ಮತ್ತು ಗ್ರಾಹಕರು ಎಲ್ಲರೂ ಒಂದೇ ಸೂರಿನಡಿ ಇದ್ದಾರೆ. ವರ್ಲ್ಡ್ ಫುಡ್ ಇಂಡಿಯಾ ಹೊಸ ಸಂಪರ್ಕಗಳು ಮತ್ತು ಸೃಜನಶೀಲತೆಯ ಸಂದರ್ಭವಾಗಿದೆ. ನಾನು ಇದೀಗ ಇಲ್ಲಿನ ವಸ್ತುಪ್ರದರ್ಶನಗಳಿಗೆ ಭೇಟಿ ನೀಡಿದೆ. ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳು ಆರೋಗ್ಯವನ್ನು ಹೆಚ್ಚಿಸುವ ಮೇಲೆ ಹೆಚ್ಚಿನ ಗಮನ ಹರಿಸಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಕ್ಕಾಗಿ ನಿಮ್ಮೆಲ್ಲರಿಗೂ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೆ,

ಪ್ರತಿಯೊಬ್ಬ ಹೂಡಿಕೆದಾರರು ಹೂಡಿಕೆ ಮಾಡುವ ಮೊದಲು, ಅವರು ಹೂಡಿಕೆ ಮಾಡಲು ಉದ್ದೇಶಿಸಿರುವ ಸ್ಥಳದ ನೈಸರ್ಗಿಕ ಸಾಮರ್ಥ್ಯಗಳನ್ನು ನಿರ್ಣಯಿಸುತ್ತಾರೆ. ಇಂದು, ಜಗತ್ತು, ವಿಶೇಷವಾಗಿ ಆಹಾರ ವಲಯಕ್ಕೆ ಸಂಬಂಧಿಸಿದ ಹೂಡಿಕೆದಾರರು, ಭಾರತದತ್ತ ಹೆಚ್ಚಿನ ಭರವಸೆಯಿಂದ ನೋಡುತ್ತಿದ್ದಾರೆ. ಏಕೆಂದರೆ ಭಾರತವು ವೈವಿಧ್ಯತೆ, ಬೇಡಿಕೆ ಮತ್ತು ಪ್ರಮಾಣದ 3 ಪಟ್ಟು ಶಕ್ತಿ ಹೊಂದಿದೆ. ಪ್ರತಿಯೊಂದು ಧಾನ್ಯ, ಪ್ರತಿಯೊಂದು ಹಣ್ಣು ಮತ್ತು ಪ್ರತಿಯೊಂದು ತರಕಾರಿಯನ್ನು ಭಾರತದಲ್ಲಿ ಉತ್ಪಾದಿಸಲಾಗುತ್ತದೆ. ಈ ವೈವಿಧ್ಯತೆಯಿಂದಾಗಿ, ಭಾರತವು ಜಗತ್ತಿನಲ್ಲೇ ವಿಶಿಷ್ಟವಾಗಿದೆ. ಪ್ರತಿ 100 ಕಿಲೋಮೀಟರ್‌ಗೂ ನಮ್ಮ ದೇಶದಲ್ಲಿ ಆಹಾರ ಮತ್ತು ಅದರ ರುಚಿ ಬದಲಾಗುತ್ತದೆ. ಭಾರತದಲ್ಲಿ, ವಿವಿಧ ರೀತಿಯ ಆಹಾರಗಳಿಗೆ ಅಪಾರ ಬೇಡಿಕೆಯಿದೆ. ಈ ಬೇಡಿಕೆಯು ಭಾರತಕ್ಕೆ ಸ್ಪರ್ಧಾತ್ಮಕ ನೆಲೆ ನೀಡುತ್ತದೆ, ಈ ನೆಲೆಯನ್ನು ಹೂಡಿಕೆದಾರರಿಗೆ ಆದ್ಯತೆಯ ತಾಣವನ್ನಾಗಿ ಮಾಡುತ್ತಿದೆ.

 

ಸ್ನೇಹಿತರೆ,

ಇಂದು ಭಾರತವು ಕಾರ್ಯ ನಿರ್ವಹಿಸುತ್ತಿರುವ ಪ್ರಮಾಣವು ಅಭೂತಪೂರ್ವ ಮತ್ತು ಊಹಿಸಲಾಗದ ಮಟ್ಟದಲ್ಲಿದೆ. ಕಳೆದ 10 ವರ್ಷಗಳಲ್ಲಿ ಭಾರತದ 25 ಕೋಟಿ ಜನರು ಬಡತನವನ್ನು ಸೋಲಿಸಿದ್ದಾರೆ. ಈ ಎಲ್ಲಾ ನಾಗರಿಕರು ಈಗ ನವ ಮಧ್ಯಮ ವರ್ಗದ ಭಾಗವಾಗಿದ್ದಾರೆ. ಈ ನವ ಮಧ್ಯಮ ವರ್ಗವು ದೇಶದ ಅತ್ಯಂತ ಶಕ್ತಿಶಾಲಿ ಮತ್ತು ಮಹತ್ವಾಕಾಂಕ್ಷೆಯ ವಿಭಾಗವಾಗಿದೆ. ಇಷ್ಟು ದೊಡ್ಡ ಸಂಖ್ಯೆಯ ಜನರ ಆಕಾಂಕ್ಷೆಗಳು ನಮ್ಮ ಆಹಾರ ಪ್ರವೃತ್ತಿಗಳನ್ನು ರೂಪಿಸುತ್ತವೆ. ನಮ್ಮ ಬೇಡಿಕೆಯನ್ನು ಮುನ್ನಡೆಸುತ್ತಿರುವುದು ಈ ಮಹತ್ವಾಕಾಂಕ್ಷೆಯ ವರ್ಗವೇ ಆಗಿದೆ.

ಸ್ನೇಹಿತರೆ,

ಇಂದು, ದೇಶದ ಪ್ರತಿಭಾವಂತ ಯುವಕರು ಪ್ರತಿಯೊಂದು ವಲಯದಲ್ಲೂ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದ್ದಾರೆ. ನಮ್ಮ ಆಹಾರ ವಲಯವೂ ಇದಕ್ಕೆ ಹೊರತಾಗಿಲ್ಲ. ಇಂದು ಭಾರತವು ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆ ಹೊಂದಿದೆ. ಈ ಸ್ಟಾರ್ಟಪ್‌ಗಳಲ್ಲಿ ಹಲವು ಆಹಾರ ಮತ್ತು ಕೃಷಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ. ಕೃತಕ ಬುದ್ಧಿಮತ್ತೆ, ಇ-ಕಾಮರ್ಸ್, ಡ್ರೋನ್‌ಗಳು ಮತ್ತು ಅಪ್ಲಿಕೇಶನ್‌ಗಳನ್ನು ಸಹ ಈ ವಲಯಕ್ಕೆ ಸಂಯೋಜಿಸಲಾಗುತ್ತಿದೆ. ನಮ್ಮ ಸ್ಟಾರ್ಟಪ್‌ಗಳು ಪೂರೈಕೆ ಸರಪಳಿಗಳು, ಚಿಲ್ಲರೆ ವ್ಯಾಪಾರ ಮತ್ತು ಸಂಸ್ಕರಣೆ ವಲಯಯನ್ನು ಪರಿವರ್ತಿಸುತ್ತಿವೆ. ಹೀಗಾಗಿ, ಭಾರತವು ವೈವಿಧ್ಯತೆ, ಬೇಡಿಕೆ ಮತ್ತು ನಾವೀನ್ಯತೆಗಳನ್ನು ಏಕಕಾಲದಲ್ಲಿ ಹೊಂದಿದೆ. ಈ ಅಂಶಗಳು ಭಾರತವನ್ನು ಹೂಡಿಕೆಗಳಿಗೆ ಅತ್ಯಂತ ಆಕರ್ಷಕ ತಾಣವನ್ನಾಗಿ ಮಾಡುತ್ತವೆ. ಆದ್ದರಿಂದ, ಕೆಂಪುಕೋಟೆಯ ಮೇಲಿಂದ ನಾನು ಹೇಳಿದ್ದನ್ನು ಪುನರುಚ್ಚರಿಸಲು ಬಯಸುತ್ತೇನೆ: ಭಾರತದಲ್ಲಿ ಹೂಡಿಕೆ ಮಾಡಲು ಮತ್ತು ವ್ಯವಹಾರ ವಿಸ್ತರಿಸಲು ಇದು ಸರಿಯಾದ ಸಮಯ.

ಸ್ನೇಹಿತರೆ,

21ನೇ ಶತಮಾನವು ಇಡೀ ವಿಶ್ವದ ಮುಂದೆ ಇರುವ ಅನೇಕ ಸವಾಲುಗಳ ಬಗ್ಗೆ ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ. ವಿಶ್ವದ ಮುಂದೆ ಸವಾಲುಗಳು ಉದ್ಭವಿಸಿದಾಗಲೆಲ್ಲಾ, ಭಾರತವು ಸಕಾರಾತ್ಮಕ ಪಾತ್ರ ವಹಿಸಲು ಮುಂದೆ ಬಂದಿದೆ ಎಂಬುದು ಸಹ ನಿಮಗೆ ತಿಳಿದಿದೆ. ಜಾಗತಿಕ ಆಹಾರ ಭದ್ರತೆಗೆ ಭಾರತವು ನಿರಂತರವಾಗಿ ಕೊಡುಗೆ ನೀಡುತ್ತಿದೆ. ನಮ್ಮ ರೈತರು, ಹೈನುಗಾರರು, ಮೀನುಗಾರರ ಕಠಿಣ ಪರಿಶ್ರಮ ಮತ್ತು ಬೆಂಬಲಿತ ಸರ್ಕಾರಿ ನೀತಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ, ಭಾರತದ ಸಾಮರ್ಥ್ಯವು ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ದಶಕದಲ್ಲಿ, ನಮ್ಮ ಆಹಾರ ಧಾನ್ಯ ಉತ್ಪಾದನೆಯು ಗಮನಾರ್ಹವಾಗಿ ಹೆಚ್ಚಾಗಿದೆ. ಇಂದು ಭಾರತವು ಅತಿದೊಡ್ಡ ಹಾಲು ಉತ್ಪಾದಕ ದೇಶವಾಗಿದ್ದು, ವಿಶ್ವದ ಹಾಲು ಪೂರೈಕೆಯಲ್ಲಿ ಶೇಕಡ 25ರಷ್ಟು ಕೊಡುಗೆ ನೀಡುತ್ತಿದೆ. ನಾವು ಸಿರಿಧಾನ್ಯಗಳ ಅತಿದೊಡ್ಡ ಉತ್ಪಾದಕರು. ಅಕ್ಕಿ ಮತ್ತು ಗೋಧಿಯಲ್ಲಿ, ನಾವು ವಿಶ್ವದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ಹಣ್ಣುಗಳು, ತರಕಾರಿಗಳು ಮತ್ತು ಮೀನುಗಾರಿಕೆಯಲ್ಲೂ ಭಾರತವು ಗಮನಾರ್ಹ ಕೊಡುಗೆ ನೀಡುತ್ತಿದೆ. ಅದಕ್ಕಾಗಿಯೇ ಜಗತ್ತಿನಲ್ಲಿ ಬೆಳೆಗಳ ಬಿಕ್ಕಟ್ಟು ಉಂಟಾದಾಗಲೆಲ್ಲಾ, ಪೂರೈಕೆ ಸರಪಳಿಗಳು ಅಡ್ಡಿಪಡಿಸಿದಾಗಲೆಲ್ಲಾ, ಭಾರತವು ತನ್ನ ಜವಾಬ್ದಾರಿ ಪೂರೈಸಲು ಬಲಿಷ್ಠವಾಗಿ ಮುಂದೆ ಬರುತ್ತದೆ.

 

ಸ್ನೇಹಿತರೆ,

ಜಾಗತಿಕ ಕಲ್ಯಾಣದ ಹಿತದೃಷ್ಟಿಯಿಂದ, ಭಾರತದ ಸಾಮರ್ಥ್ಯ ಮತ್ತು ಕೊಡುಗೆಯನ್ನು ಮತ್ತಷ್ಟು ಹೆಚ್ಚಿಸುವುದು ನಮ್ಮ ಪ್ರಯತ್ನವಾಗಿದೆ. ಇದಕ್ಕಾಗಿ, ಸರ್ಕಾರವು ಪ್ರತಿಯೊಬ್ಬ ಪಾಲುದಾರರನ್ನು ಮತ್ತು ಆಹಾರ, ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತಿದೆ. ನಮ್ಮ ಸರ್ಕಾರ ಆಹಾರ ಸಂಸ್ಕರಣಾ ವಲಯವನ್ನು ಪ್ರೋತ್ಸಾಹಿಸುತ್ತಿದೆ. ಅದಕ್ಕಾಗಿಯೇ ಈ ವಲಯದಲ್ಲಿ ಶೇ. 100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಲಾಗಿದೆ. ಇದರ ಜತೆಗೆ, ಉತ್ಪಾದನೆ ಸಂಪರ್ಕಿತ ಉತ್ತೇಜನಾ(ಪಿಎಲ್‌ಐ) ಯೋಜನೆ ಮತ್ತು ಮೆಗಾ ಫುಡ್ ಪಾರ್ಕ್‌ಗಳ ವಿಸ್ತರಣೆಯು ಈ ವಲಯಕ್ಕೆ ಉತ್ತೇಜನ ನೀಡಿದೆ. ಇಂದು ಭಾರತವು ವಿಶ್ವದ ಅತಿದೊಡ್ಡ ಸಂಗ್ರಹಣಾ ಮೂಲಸೌಕರ್ಯ ಯೋಜನೆ ನಡೆಸುತ್ತಿದೆ. ಈ ಸರ್ಕಾರಿ ಪ್ರಯತ್ನಗಳ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ 10 ವರ್ಷಗಳಲ್ಲಿ ಭಾರತದ ಸಂಸ್ಕರಣಾ ಸಾಮರ್ಥ್ಯ 20 ಪಟ್ಟು ಹೆಚ್ಚಾಗಿದೆ. ಸಂಸ್ಕರಿಸಿದ ಆಹಾರದ ನಮ್ಮ ರಫ್ತು ಕೂಡ 2 ಪಟ್ಟು ಹೆಚ್ಚಾಗಿದೆ.

ಸ್ನೇಹಿತರೆ,

ರೈತರು, ಹೈನುಗಾರರು, ಮೀನುಗಾರರು ಮತ್ತು ಸಣ್ಣ ಸಂಸ್ಕರಣಾ ಘಟಕಗಳು ಆಹಾರ ಪೂರೈಕೆ ಮತ್ತು ಮೌಲ್ಯ ಸರಪಳಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕಳೆದ ದಶಕದಲ್ಲಿ, ನಮ್ಮ ಸರ್ಕಾರ ಈ ಎಲ್ಲಾ ಪಾಲುದಾರರನ್ನು ಬಲಪಡಿಸಿದೆ. ಭಾರತದಲ್ಲಿ ಶೇಕಡ 85ಕ್ಕಿಂತ ಹೆಚ್ಚು ಜನರು ಸಣ್ಣ ಅಥವಾ ಅತಿಸಣ್ಣ ರೈತರು ಎಂಬುದು ನಿಮಗೂ ತಿಳಿದಿದೆ. ಆದ್ದರಿಂದ, ನಾವು ನೀತಿಗಳನ್ನು ರೂಪಿಸಿದ್ದೇವೆ ಮತ್ತು ಬೆಂಬಲ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇವೆ, ಅದರ ಮೂಲಕ ಈ ಸಣ್ಣ ರೈತರು ಈಗ ಮಾರುಕಟ್ಟೆಯಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ.

 

ಸ್ನೇಹಿತರೆ,

ಉದಾಹರಣೆಗೆ, ಅತಿಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳನ್ನು ನಮ್ಮ ಸ್ವಸಹಾಯ ಗುಂಪುಗಳು ನಡೆಸುತ್ತಿವೆ. ಈ ಸ್ವಸಹಾಯ ಗುಂಪುಗಳು ನಮ್ಮ ಹಳ್ಳಿಗಳಲ್ಲಿರುವ ಲಕ್ಷಾಂತರ ಜನರೊಂದಿಗೆ ಸಂಬಂಧ ಹೊಂದಿವೆ. ಅವರನ್ನು ಬೆಂಬಲಿಸಲು ನಮ್ಮ ಸರ್ಕಾರವು ಸಾಲ-ಸಂಬಂಧಿತ ಸಬ್ಸಿಡಿಗಳನ್ನು ಒದಗಿಸುತ್ತಿದೆ. ಇಂದಿಗೂ ಸಹ ಸುಮಾರು 800 ಕೋಟಿ ರೂ. ಸಬ್ಸಿಡಿಗಳನ್ನು ನಿಮ್ಮ ಮುಂದೆಯೇ ಈ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.

ಸ್ನೇಹಿತರೆ,

ಅದೇ ರೀತಿ, ನಮ್ಮ ಸರ್ಕಾರವು ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಒಗಳು)ಗಳನ್ನು  ವಿಸ್ತರಿಸುತ್ತಿದೆ. 2014ರಿಂದ ದೇಶಾದ್ಯಂತ 10 ಸಾವಿರ ಎಫ್‌ಪಿಒಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ಮೂಲಕ ಲಕ್ಷಾಂತರ ಸಣ್ಣ ರೈತರನ್ನು ಸಂಪರ್ಕಿಸಲಾಗಿದೆ. ಇವು ಸಣ್ಣ ರೈತರು ತಮ್ಮ ಉತ್ಪನ್ನಗಳನ್ನು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ತರಲು ಸಹಾಯ ಮಾಡುತ್ತವೆ. ಅವರ ಪಾತ್ರ ಇದಕ್ಕೆ ಮಾತ್ರ ಸೀಮಿತವಾಗಿಲ್ಲ. ಈ ಎಫ್‌ಪಿಒಗಳು ಆಹಾರ ಸಂಸ್ಕರಣಾ ವಲಯದಲ್ಲೂ ಗಮನಾರ್ಹ ಪಾತ್ರ ವಹಿಸುತ್ತಿ, ಬ್ರಾಂಡ್ ಉತ್ಪನ್ನಗಳನ್ನು ಅಭಿವೃದ್ಧಿಪಡಿಸುತ್ತಿವೆ. ನಮ್ಮ ಎಫ್‌ಪಿಒಗಳ ಬಲವನ್ನು ನೋಡಿ ನೀವು ಆಶ್ಚರ್ಯಚಕಿತರಾಗುವಿರಿ. ಇಂದು ನಮ್ಮ ಎಫ್‌ಪಿಒಗಳ 15,000ಕ್ಕೂ ಹೆಚ್ಚು ಉತ್ಪನ್ನಗಳು ಆನ್‌ಲೈನ್ ವೇದಿಕೆಗಳಲ್ಲಿ ಲಭ್ಯವಿದೆ. ಕಾಶ್ಮೀರದ ಬಾಸ್ಮತಿ ಅಕ್ಕಿ, ಕೇಸರಿ ಮತ್ತು ವಾಲ್ ನಟ್ಸ್, ಹಿಮಾಚಲದ ಜಾಮ್ ಮತ್ತು ಸೇಬಿನ ರಸ, ರಾಜಸ್ಥಾನದ ಸಿರಿಧಾನ್ಯ ಕುಕೀಸ್, ಮಧ್ಯಪ್ರದೇಶದಿಂದ ಸೋಯಾ ಗಟ್ಟಿಗಳು, ಬಿಹಾರದ ಉತ್ಕೃಷ್ಟ ಆಹಾರ(ಸೂಪರ್‌ಫುಡ್) ಮಖಾನಾ, ಮಹಾರಾಷ್ಟ್ರದ ನೆಲಗಡಲೆ ಎಣ್ಣೆ ಮತ್ತು ಬೆಲ್ಲ, ಕೇರಳದ ಬಾಳೆಹಣ್ಣು ಚಿಪ್ಸ್ ಮತ್ತು ತೆಂಗಿನ ಎಣ್ಣೆ ಸೇರಿದಂತೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಮ್ಮ ಎಫ್‌ಪಿಒಗಳು ಭಾರತದ ಕೃಷಿ ವೈವಿಧ್ಯತೆಯನ್ನು ಪ್ರತಿ ಮನೆಗೂ ತರುತ್ತಿವೆ, 1,100ಕ್ಕೂ ಹೆಚ್ಚು ಎಫ್‌ಪಿಒಗಳು ಕೋಟ್ಯಾಧಿಪತಿಗಳಾಗಿದ್ದಾರೆ, ಅಂದರೆ ಅವರ ವಾರ್ಷಿಕ ವಹಿವಾಟು ಒಂದು ಕೋಟಿ ರೂಪಾಯಿ ದಾಟಿದೆ ಎಂಬುದನ್ನು ತಿಳಿದರೆ ನಿಮಗೆ ಸಂತೋಷವಾಗುತ್ತದೆ. ಇಂದು ಎಫ್‌ಪಿಒಗಳು ರೈತರ ಆದಾಯ ಹೆಚ್ಚಿಸುವಲ್ಲಿ ಮತ್ತು ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.

 

ಸ್ನೇಹಿತರೆ,

ಎಫ್‌ಪಿಒಗಳ ಜತೆಗೆ, ಸಹಕಾರಿ ಸಂಸ್ಥೆಗಳು ಭಾರತದ ದೊಡ್ಡ ಶಕ್ತಿಯಾಗಿದೆ. ಈ ವರ್ಷ ಅಂತಾರಾಷ್ಟ್ರೀಯ ಸಹಕಾರಿ ವರ್ಷವಾಗಿದೆ. ಭಾರತದಲ್ಲಿ, ಸಹಕಾರಿಗಳು ನಮ್ಮ ಡೇರಿ ವಲಯ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಹೊಸ ಶಕ್ತಿಯೊಂದಿಗೆ ಸಬಲೀಕರಣಗೊಳಿಸುತ್ತಿವೆ. ಸಹಕಾರಿ ಸಂಸ್ಥೆಗಳ ಮಹತ್ವವನ್ನು ಗುರುತಿಸಿ, ನಮ್ಮ ನೀತಿಗಳನ್ನು ಅವರ ಅಗತ್ಯಗಳಿಗೆ ಅನುಗುಣವಾಗಿ ರೂಪಿಸಲು ನಾವು ಅವುಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದ್ದೇವೆ. ಈ ವಲಯಕ್ಕಾಗಿ ತೆರಿಗೆ ಮತ್ತು ಪಾರದರ್ಶಕತೆಯ

ಸುಧಾರಣೆಗಳನ್ನು ಸಹ ಕೈಗೊಳ್ಳಲಾಗಿದೆ. ಈ ನೀತಿ ಮಟ್ಟದ ಬದಲಾವಣೆಗಳು ಸಹಕಾರಿ ವಲಯಕ್ಕೆ ಹೊಸ ಶಕ್ತಿ ನೀಡಿವೆ.

ಸ್ನೇಹಿತರೆ,

ಭಾರತದ ಸಮುದ್ರ ಮತ್ತು ಮೀನುಗಾರಿಕೆ ವಲಯದ ಬೆಳವಣಿಗೆಯೂ ಗಮನಾರ್ಹವಾಗಿದೆ. ಕಳೆದ ದಶಕದಲ್ಲಿ ನಾವು ಮೀನುಗಾರಿಕೆ ವಲಯಕ್ಕೆ ಸಂಬಂಧಿಸಿದ ಮೂಲಸೌಕರ್ಯ ವಿಸ್ತರಿಸಿದ್ದೇವೆ. ನಾವು ಮೀನುಗಾರರಿಗೆ ಹಣಕಾಸಿನ ಬೆಂಬಲ ಮತ್ತು ಆಳ ಸಮುದ್ರ ಮೀನುಗಾರಿಕೆ ದೋಣಿಗಳಿಗೆ ಸಹಾಯ ಒದಗಿಸಿದ್ದೇವೆ. ಇದು ನಮ್ಮ ಸಮುದ್ರ ಉತ್ಪಾದನೆ ಮತ್ತು ರಫ್ತು ಎರಡನ್ನೂ ಹೆಚ್ಚಿಸಿದೆ. ಇಂದು ಈ ವಲಯವು ಸುಮಾರು 3 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತಿದೆ. ಸಮುದ್ರ ಉತ್ಪನ್ನಗಳ ಸಂಸ್ಕರಣೆಯನ್ನು ವಿಸ್ತರಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಇದಕ್ಕಾಗಿ, ಆಧುನಿಕ ಸಂಸ್ಕರಣಾ ಘಟಕಗಳು, ಶೀತಲ ಕೇಂದ್ರ ಸರಪಳಿಗಳು ಮತ್ತು ಸ್ಮಾರ್ಟ್ ಬಂದರುಗಳಲ್ಲಿ ಹೂಡಿಕೆ ಮಾಡಲಾಗುತ್ತಿದೆ.

 

ಸ್ನೇಹಿತರೆ,

ನಾವು ಬೆಳೆಗಳನ್ನು ಸಂರಕ್ಷಿಸಲು ಆಧುನಿಕ ತಂತ್ರಜ್ಞಾನದಲ್ಲೂ ಹೂಡಿಕೆ ಮಾಡುತ್ತಿದ್ದೇವೆ. ರೈತರನ್ನು ಆಹಾರ ವಿಕಿರಣ ತಂತ್ರಜ್ಞಾನದೊಂದಿಗೆ ಸಂಪರ್ಕಿಸಲಾಗುತ್ತಿದೆ. ಇದು ನಮ್ಮ ಕೃಷಿ ಉತ್ಪನ್ನಗಳ ಶೆಲ್ಫ್ ಜೀವಿತಾವಧಿಯನ್ನು ಹೆಚ್ಚಿಸಿದೆ, ಆಹಾರ ಭದ್ರತೆಯನ್ನು ಬಲಪಡಿಸಿದೆ. ಈ ಕೆಲಸದಲ್ಲಿ ತೊಡಗಿರುವ ಘಟಕಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಬೆಂಬಲ ಒದಗಿಸುತ್ತಿದೆ.

ಸ್ನೇಹಿತರೆ,

ಇಂದಿನ ಭಾರತವು ನಾವೀನ್ಯತೆ ಮತ್ತು ಸುಧಾರಣೆಗಳ ಹೊಸ ಹಾದಿಯಲ್ಲಿ ಮುಂದುವರಿಯುತ್ತಿದೆ. ಪ್ರಸ್ತುತ, ನಮ್ಮ ದೇಶದಲ್ಲಿ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ರೈತರಿಗೆ, ಈ ಸುಧಾರಣೆಗಳು ಕಡಿಮೆ ವೆಚ್ಚ ಮತ್ತು ಹೆಚ್ಚಿನ ಪ್ರಯೋಜನಗಳ ಭರವಸೆ ತರುತ್ತಿವೆ. ಬೆಣ್ಣೆ ಮತ್ತು ತುಪ್ಪದ ಮೇಲೆ ಕೇವಲ 5 ಪ್ರತಿಶತ ಜಿಎಸ್‌ಟಿಯೊಂದಿಗೆ, ಅವರು ಅಪಾರ ಪ್ರಯೋಜನ ಪಡೆಯುತ್ತಾರೆ. ಹಾಲಿನ ಡಬ್ಬಿಗಳ ಮೇಲೂ ತೆರಿಗೆ ಕೇವಲ 5 ಪ್ರತಿಶತ. ಇದು ರೈತರು ಮತ್ತು ಉತ್ಪಾದಕರಿಗೆ ಉತ್ತಮ ಬೆಲೆ ಖಚಿತಪಡಿಸುತ್ತದೆ. ಇದು ಬಡವರು ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಪೌಷ್ಟಿಕಾಂಶವನ್ನು ಖಚಿತಪಡಿಸುತ್ತದೆ. ಆಹಾರ ಸಂಸ್ಕರಣಾ ವಲಯವು ಸಹ ಈ ಸುಧಾರಣೆಗಳಿಂದ ಗಮನಾರ್ಹವಾಗಿ ಲಾಭ ಪಡೆಯಲಿದೆ. ಸೇವಿಸಲು ಸಿದ್ಧ ಮತ್ತು ಸಂರಕ್ಷಿತ ಹಣ್ಣುಗಳು, ತರಕಾರಿಗಳು ಮತ್ತು ಬೀಜಗಳು ಕೇವಲ 5 ಪ್ರತಿಶತ ಜಿಎಸ್‌ಟಿ ಆಕರ್ಷಿಸುತ್ತವೆ. ಇಂದು ಸಂಸ್ಕರಿಸಿದ ಆಹಾರ ಉತ್ಪನ್ನಗಳ ಶೇಕಡ 90ಕ್ಕಿಂತ ಹೆಚ್ಚು ಉತ್ಪನ್ನಗಳು ಶೂನ್ಯ ಅಥವಾ ಶೇಕಡ 5ರಷ್ಟು ತೆರಿಗೆ ಶ್ರೇಣಿಯಲ್ಲಿ ಬರುತ್ತವೆ. ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಲಾಗಿದೆ. ಜಿಎಸ್‌ಟಿ ಸುಧಾರಣೆಗಳಿಂದಾಗಿ, ಜೈವಿಕ ಒಳಹರಿವು ಅಗ್ಗವಾಗಿದ್ದು, ಸಣ್ಣ ಸಾವಯವ ರೈತರು ಮತ್ತು ಎಫ್‌ಪಿಒಗಳಿಗೆ ನೇರವಾಗಿ ಪ್ರಯೋಜನ ನೀಡುತ್ತದೆ.

 

ಸ್ನೇಹಿತರೆ,

ಇಂದು ಜೈವಿಕ ವಿಘಟನೀಯ ಪ್ಯಾಕೇಜಿಂಗ್ ಕೂಡ ಈ ಕಾಲಘಟ್ಟದ ಬೇಡಿಕೆಯಾಗಿದೆ. ನಮ್ಮ ಉತ್ಪನ್ನಗಳು ತಾಜಾ ಮತ್ತು ಉತ್ತಮ ಗುಣಮಟ್ಟದ್ದಾಗಿರುವುದು ಮುಖ್ಯ, ಆದರೆ ಇದರ ಜತೆಗೆ, ಪ್ರಕೃತಿಯ ಬಗ್ಗೆ ನಮಗೂ ಜವಾಬ್ದಾರಿ ಇದೆ. ಆದ್ದರಿಂದ, ಸರ್ಕಾರವು ಜೈವಿಕ ವಿಘಟನೀಯ ಪ್ಯಾಕೇಜಿಂಗ್ ಮೇಲಿನ ಜಿಎಸ್ಟಿಯನ್ನು ಶೇಕಡ 18ರಿಂದ 5ಕ್ಕೆ ಇಳಿಸಿದೆ. ಜೈವಿಕ ವಿಘಟನೀಯ ಪ್ಯಾಕೇಜಿಂಗ್‌ಗೆ ಸಂಬಂಧಿಸಿದ ನಾವೀನ್ಯತೆಗಳಲ್ಲಿ ಹೂಡಿಕೆ ಮಾಡಲು ಮತ್ತು ನಮ್ಮ ಎಲ್ಲಾ ಉತ್ಪನ್ನ ಪ್ಯಾಕೇಜಿಂಗ್ ಅನ್ನು ಸಾಧ್ಯವಾದಷ್ಟು ಬೇಗ ಜೈವಿಕ ವಿಘಟನೀಯ ವಸ್ತುಗಳಿಗೆ ಬದಲಾಯಿಸಲು ನಾನು ಎಲ್ಲಾ ಉದ್ಯಮ ಪಾಲುದಾರರನ್ನು ಹೃತ್ಪೂರ್ವಕವಾಗಿ ಒತ್ತಾಯಿಸಲು ಬಯಸುತ್ತೇನೆ.

ಸ್ನೇಹಿತರೆ,

ಭಾರತವು ಉದಾರ ಮನೋಭಾವದಿಂದ ಜಗತ್ತಿಗೆ ತನ್ನ ಬಾಗಿಲುಗಳನ್ನು ತೆರೆದಿಟ್ಟಿದೆ. ಆಹಾರ ಸರಪಳಿಯೊಂದಿಗೆ ಸಂಬಂಧಿಸಿದ ಎಲ್ಲಾ ಹೂಡಿಕೆದಾರರಿಗೆ ನಾವು ಮುಕ್ತರಾಗಿದ್ದೇವೆ. ಮುಕ್ತ ಹೃದಯದಿಂದ ಸಹಭಾಗಿತ್ವಕ್ಕೆ ನಾವು ಸಿದ್ಧರಿದ್ದೇವೆ. ಮತ್ತೊಮ್ಮೆ, ಭಾರತದಲ್ಲಿ ಹೆಚ್ಚಿನದನ್ನು ಹೂಡಿಕೆ ಮಾಡಲು ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ಈ ವಲಯದಲ್ಲಿ ಅಪಾರ ಸಾಧ್ಯತೆಗಳಿವೆ. ಅವುಗಳ ಲಾಭ ಪಡೆದುಕೊಳ್ಳಿ. ಈ ಕಾರ್ಯಕ್ರಮದೊಂದಿಗೆ ಸಂಬಂಧಿಸಿದ ಎಲ್ಲ ಪಾಲುದಾರರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ. ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।