ರಾಜ್ಯದ ಜನರ ಏಕತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ
"ಡಬಲ್ ಇಂಜಿನ್ ಸರ್ಕಾರದ ಅವಿರತ ಪ್ರಯತ್ನಗಳಿಂದ ತ್ರಿಪುರ ಅವಕಾಶಗಳ ನಾಡಾಗುತ್ತಿದೆ"
"ಸಂಪರ್ಕ ಮೂಲಸೌಕರ್ಯಗಳ ನಿರ್ಮಾಣದ ಮೂಲಕ, ರಾಜ್ಯವು ವೇಗವಾಗಿ ವ್ಯಾಪಾರ ಕಾರಿಡಾರ್‌ನ ಕೇಂದ್ರವಾಗುತ್ತಿದೆ"

ನಮಸ್ಕಾರ!

ಖುಳುಮಖ!

50 ವರ್ಷಗಳ ರಾಜ್ಯತ್ವ(ರಾಜ್ಯೋದಯ)ವನ್ನು ಪೂರ್ಣಗೊಳಿಸಿದ ತ್ರಿಪುರಾದ ಮಹಾಜನತೆಗೆ ಅನೇಕ ಅಭಿನಂದನೆಗಳು! ತ್ರಿಪುರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ಎಲ್ಲ ಮಹಾನ್ ವ್ಯಕ್ತಿಗಳನ್ನು ನಾನು ಗೌರವಪೂರ್ವಕವಾಗಿ ಅಭಿನಂದಿಸುತ್ತೇನೆ ಮತ್ತು ಅವರ ಪ್ರಯತ್ನಗಳಿಗೆ ವಂದಿಸುತ್ತೇನೆ!

ತ್ರಿಪುರಾದ ಇತಿಹಾಸವು ಯಾವಾಗಲೂ ವೈಭವಯುತವಾಗಿದೆ. ಮಾಣಿಕ್ಯ ವಂಶದ ಚಕ್ರವರ್ತಿಗಳ ಮಹಿಮೆಯಿಂದ ಇಂದಿನವರೆಗೆ, ತ್ರಿಪುರಾ ರಾಜ್ಯವಾಗಿ ತನ್ನ ಪಾತ್ರವನ್ನು ಬಲಪಡಿಸಿದೆ. ಬುಡಕಟ್ಟು ಸಮಾಜವಾಗಲಿ ಅಥವಾ ಇತರ ಸಮುದಾಯಗಳಾಗಲಿ ಎಲ್ಲರೂ ಒಗ್ಗಟ್ಟಿನಿಂದ ತ್ರಿಪುರಾ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮಾತೆ ತ್ರಿಪುರ ಸುಂದರಿಯ ಆಶೀರ್ವಾದದಿಂದ ತ್ರಿಪುರಾ ರಾಜ್ಯವು ಪ್ರತಿ ಸವಾಲನ್ನು ಸಹ ಧೈರ್ಯದಿಂದ ಎದುರಿಸಿದೆ.

 

ತ್ರಿಪುರಾವು ಹೊಸ ಎತ್ತರದತ್ತ ಸಾಗುತ್ತಿರುವ ಅಭಿವೃದ್ಧಿಯ ಹೊಸ ಹಂತಕ್ಕೆ ತ್ರಿಪುರಾದ ಜನರ ಬುದ್ಧಿವಂತಿಕೆಯು ಬಹಳಷ್ಟು ಕೊಡುಗೆ ನೀಡಿದೆ. ಮೂರು ವರ್ಷಗಳ ಅರ್ಥಪೂರ್ಣ ಬದಲಾವಣೆಯು ಈ ಬುದ್ಧಿವಂತಿಕೆಗೆ ಸಾಕ್ಷಿಯಾಗಿದೆ. ಇಂದು ತ್ರಿಪುರಾ ಅವಕಾಶಗಳ ನಾಡಾಗುತ್ತಿದೆ. ಇಂದು, ಡಬಲ್ ಎಂಜಿನ್ ಸರ್ಕಾರವು ತ್ರಿಪುರಾದ ಸಾಮಾನ್ಯ ಜನರ ಸಣ್ಣ ಅಗತ್ಯಗಳನ್ನು ಪೂರೈಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ಇದರ ಫಲವಾಗಿ ತ್ರಿಪುರಾ ಇಂದು ಅಭಿವೃದ್ಧಿಯ ಹಲವು ಮಾನದಂಡಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಈ ರಾಜ್ಯವು ಬೃಹತ್ ಸಂಪರ್ಕ ಮೂಲಸೌಕರ್ಯಗಳ ಮೂಲಕ ವ್ಯಾಪಾರ ಕಾರಿಡಾರ್‌ಗಳ ಕೇಂದ್ರವಾಗುತ್ತಿದೆ. ಹಲವು ದಶಕಗಳಿಂದ, ತ್ರಿಪುರಾ ಭಾರತದ ಉಳಿದ ಭಾಗಗಳಿಗೆ ರಸ್ತೆ ಮೂಲಕ ಮಾತ್ರ ಪ್ರವೇಶ ಹೊಂದಿತ್ತು. ತ್ರಿಪುರಾ ಸೇರಿದಂತೆ ಇಡೀ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು ಮಳೆ, ಭೂಕುಸಿತದಿಂದ ರಸ್ತೆಗಳು ನಿರ್ಬಂಧಿಸಲ್ಪಟ್ಟಾಗ ಅಗತ್ಯ ವಸ್ತುಗಳ ಕೊರತೆ ಎದುರಾಗುತ್ತಿತ್ತು. ಆದರೆ ಇಂದು ತ್ರಿಪುರಾ ರಸ್ತೆಗಳ ಜೊತೆಗೆ ರೈಲು, ವಿಮಾನ, ಒಳನಾಡು ಜಲಮಾರ್ಗವನ್ನು ಪಡೆಯುತ್ತಿದೆ. ತ್ರಿಪುರಾ ಬಾಂಗ್ಲಾದೇಶದ ಚಿತ್ತಗಾಂಗ್ ಬಂದರು ರಚನೆಯಾದ ನಂತರ ಹಲವಾರು ವರ್ಷಗಳಿಂದ ಅದನ್ನು ಪ್ರವೇಶಿಸಲು ಒತ್ತಾಯಿಸುತ್ತಿತ್ತು. 2020ರಲ್ಲಿ ಬಾಂಗ್ಲಾದೇಶದಿಂದ ಮೊದಲ ಸಾರಿಗೆ ಸರಕು ಅಖೌರಾ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ಗೆ ಆಗಮಿಸಿದಾಗ ಡಬಲ್ ಎಂಜಿನ್ ಸರ್ಕಾರವು ಈ ಬೇಡಿಕೆಯನ್ನು ಪೂರೈಸಿದೆ. ರೈಲು ಸಂಪರ್ಕದ ವಿಷಯದಲ್ಲಿ ತ್ರಿಪುರಾ ದೇಶದ ಪ್ರಮುಖ ರಾಜ್ಯಗಳನ್ನು ಸೇರುತ್ತಿದೆ. ಕೆಲವು ದಿನಗಳ ಹಿಂದೆ ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣವನ್ನೂ ವಿಸ್ತರಿಸಲಾಗಿದೆ.

 

ಸ್ನೇಹಿತರೆ,

ಇಂದು ಒಂದೆಡೆ ತ್ರಿಪುರಾ ಬಡವರಿಗೆ ಪಕ್ಕಾ ಮನೆಗಳನ್ನು ನೀಡುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಇನ್ನೊಂದೆಡೆ ಹೊಸ ತಂತ್ರಜ್ಞಾನವನ್ನೂ ವೇಗವಾಗಿ ಅಳವಡಿಸಿಕೊಳ್ಳುತ್ತಿದೆ. ವಸತಿ ನಿರ್ಮಾಣದಲ್ಲಿ ಹೊಸ ತಂತ್ರಜ್ಞಾನವನ್ನು ಬಳಸುತ್ತಿರುವ ದೇಶದ 6 ರಾಜ್ಯಗಳಲ್ಲಿ ತ್ರಿಪುರಾ ಕೂಡ ಒಂದಾಗಿದೆ. ಮೂರು ವರ್ಷಗಳಲ್ಲಿ ಏನಾಯಿತು ಎಂಬುದು ಕೇವಲ ಆರಂಭ. ತ್ರಿಪುರದ ನೈಜ ಸಾಮರ್ಥ್ಯ ಇನ್ನೂ ಮುನ್ನೆಲೆಗೆ ಬರಬೇಕಿದೆ.

ಪಾರದರ್ಶಕ ಆಡಳಿತದಿಂದ ಆಧುನಿಕ ಮೂಲಸೌಕರ್ಯಗಳವರೆಗೆ, ಇಂದು ನಿರ್ಮಾಣವಾಗುತ್ತಿರುವ ತ್ರಿಪುರಾ ಮುಂದಿನ ದಶಕಗಳವರೆಗೆ ರಾಜ್ಯವನ್ನು ಸಮಗ್ರವಾಗಿ ಸಿದ್ಧಪಡಿಸುತ್ತದೆ. ಈ ನಿಟ್ಟಿನಲ್ಲಿ ಬಿಪ್ಲಬ್ ದೇಬ್ ಜಿ ಮತ್ತು ಅವರ ತಂಡವು ಶ್ರಮಿಸುತ್ತಿದೆ. ಇತ್ತೀಚಿಗೆ, ತ್ರಿಪುರಾ ಸರ್ಕಾರವು ಪ್ರತಿ ಹಳ್ಳಿಗೆ ಅನೇಕ ಸೌಲಭ್ಯಗಳನ್ನು ಶೇಕಡ 100ರಷ್ಟು ತಲುಪುವಂತೆ ಮಾಡಲು ಅಭಿಯಾನ ಪ್ರಾರಂಭಿಸಿದೆ. ಸರ್ಕಾರದ ಈ ಪ್ರಯತ್ನವು ತ್ರಿಪುರಾದ ಜನರ ಜೀವನವನ್ನು ಸುಲಭಗೊಳಿಸುವಲ್ಲಿ ಬಹಳ ದೂರ ಸಾಗಲಿದೆ. ಭಾರತವು ಸ್ವಾತಂತ್ರ್ಯ ಗಳಿಸಿದ 100 ವರ್ಷಗಳನ್ನು ಪೂರ್ಣಗೊಳಿಸುವಾಗ, ತ್ರಿಪುರಾ ರಾಜ್ಯೋದಯ(ರಾಜ್ಯೋತ್ಸವ)ದ 75 ವರ್ಷಗಳನ್ನು ಪೂರ್ಣಗೊಳಿಸುತ್ತದೆ. ಹೊಸ ನಿರ್ಣಯಗಳು ಮತ್ತು ಅವಕಾಶಗಳಿಗೆ ಇದು ಬಹಳ ಒಳ್ಳೆಯ ಸಮಯ. ನಮ್ಮ ಕರ್ತವ್ಯಗಳನ್ನು ಪೂರೈಸುತ್ತಲೇ ಮುನ್ನಡೆಯಬೇಕು. ನಾವೆಲ್ಲರೂ ಒಟ್ಟಾಗಿ ಅಭಿವೃದ್ಧಿಯ ವೇಗವನ್ನು ಕಾಯ್ದುಕೊಳ್ಳೋಣ. ಈ ನಂಬಿಕೆಯೊಂದಿಗೆ, ನಿಮಗೆ ಶುಭ ಹಾರೈಸುತ್ತೇನೆ!

ಧನ್ಯವಾದಗಳು!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Oman, India’s Gulf 'n' West Asia Gateway

Media Coverage

Oman, India’s Gulf 'n' West Asia Gateway
NM on the go

Nm on the go

Always be the first to hear from the PM. Get the App Now!
...
Prime Minister condoles passing of renowned writer Vinod Kumar Shukla ji
December 23, 2025

The Prime Minister, Shri Narendra Modi has condoled passing of renowned writer and Jnanpith Awardee Vinod Kumar Shukla ji. Shri Modi stated that he will always be remembered for his invaluable contribution to the world of Hindi literature.

The Prime Minister posted on X:

"ज्ञानपीठ पुरस्कार से सम्मानित प्रख्यात लेखक विनोद कुमार शुक्ल जी के निधन से अत्यंत दुख हुआ है। हिन्दी साहित्य जगत में अपने अमूल्य योगदान के लिए वे हमेशा स्मरणीय रहेंगे। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति।"