ಇಂದು ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ: ಪ್ರಧಾನಮಂತ್ರಿ
ರಾಮೇಶ್ವರಂಗೆ ಸಂಪರ್ಕ ಕಲ್ಪಿಸುವ ಹೊಸ ಪಂಬನ್ ಸೇತುವೆಯು ತಂತ್ರಜ್ಞಾನ ಮತ್ತು ಸಂಪ್ರದಾಯವನ್ನು ಒಗ್ಗೂಡಿಸುತ್ತದೆ: ಪ್ರಧಾನಮಂತ್ರಿ
ಇಂದು, ದೇಶಾದ್ಯಂತ ಬೃಹತ್ ಯೋಜನೆಗಳು ವೇಗವಾಗಿ ಪ್ರಗತಿಯಲ್ಲಿವೆ: ಪ್ರಧಾನಮಂತ್ರಿ
ಭಾರತದ ಬೆಳವಣಿಗೆಯು ನಮ್ಮ ನೀಲಿ ಆರ್ಥಿಕತೆಯಿಂದ ಗಮನಾರ್ಹವಾಗಿ ಮುನ್ನಡೆಯಲಿದೆ ಮತ್ತು ಈ ಕ್ಷೇತ್ರದಲ್ಲಿ ತಮಿಳುನಾಡಿನ ಸಾಮರ್ಥ್ಯವನ್ನು ಜಗತ್ತು ಕಾಣಬಹುದು: ಪ್ರಧಾನಮಂತ್ರಿ
ತಮಿಳು ಭಾಷೆ ಮತ್ತು ಪರಂಪರೆಯು ವಿಶ್ವದ ಪ್ರತಿಯೊಂದು ಮೂಲೆಗೂ ತಲುಪುವಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ: ಪ್ರಧಾನಮಂತ್ರಿ

ವಣಕ್ಕಂ!

ನನ್ನ ಪ್ರೀತಿಯ ತಮಿಳು ಸಹೋದರ ಸಹೋದರಿಯರೇ!

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ನಮಸ್ಕಾರ!

ಸ್ನೇಹಿತರೆ,

ಇಂದು ರಾಮ ನವಮಿಯ ಶುಭ ಹಬ್ಬ. ಸ್ವಲ್ಪ ಸಮಯದ ಹಿಂದೆ ಅಯೋಧ್ಯೆಯ ಭವ್ಯ ರಾಮ ದೇವಾಲಯದಲ್ಲಿ ಸೂರ್ಯನ ದಿವ್ಯ ಕಿರಣಗಳು ಬಾಲ ರಾಮನನ್ನು ಭವ್ಯವಾದ ತಿಲಕದೊಂದಿಗೆ ಸ್ಪರ್ಶಿಸಿದವು. ಶ್ರೀ ರಾಮನ ಜೀವನ ಮತ್ತು ಅವರ ರಾಜ್ಯಭಾರದಿಂದ ಪಡೆದ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇಂದು, ರಾಮ ನವಮಿಯಂದು, ನಾವೆಲ್ಲರೂ ಒಟ್ಟಾಗಿ ಜಪಿಸೋಣ: ಜೈ ಶ್ರೀ ರಾಮ್! ಜೈ ಶ್ರೀ ರಾಮ್! ತಮಿಳುನಾಡಿನ ಸಂಗಮ ಯುಗದ ಸಾಹಿತ್ಯದಲ್ಲಿಯೂ ಶ್ರೀ ರಾಮನ ಉಲ್ಲೇಖಗಳಿವೆ. ಈ ಪವಿತ್ರ ಭೂಮಿ ರಾಮೇಶ್ವರದ ನನ್ನ ಎಲ್ಲಾ ದೇಶವಾಸಿಗಳಿಗೆ ನಾನು ನನ್ನ ಹೃತ್ಪೂರ್ವಕ ರಾಮ ನವಮಿಯ ಶುಭಾಶಯಗಳನ್ನು ತಿಳಿಸುತ್ತೇನೆ.

ಸ್ನೇಹಿತರೆ,

ಇಂದು ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥಿಸಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಧನ್ಯತೆ ಎಂದು ಭಾವಿಸುತ್ತೇನೆ. ಈ ವಿಶೇಷ ದಿನದಂದು, 8,300 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಹಸ್ತಾಂತರಿಸುವ ಅವಕಾಶ ನನಗೆ ಸಿಕ್ಕಿದೆ. ಈ ರೈಲು ಮತ್ತು ರಸ್ತೆ ಯೋಜನೆಗಳು ತಮಿಳುನಾಡಿನಲ್ಲಿ ಸಂಪರ್ಕ ಹೆಚ್ಚಿಸುತ್ತವೆ. ಈ ಯೋಜನೆಗಳಿಗಾಗಿ ತಮಿಳುನಾಡಿನಲ್ಲಿರುವ ನನ್ನ ಸಹೋದರ, ಸಹೋದರಿಯರನ್ನು ನಾನು ಅಭಿನಂದಿಸುತ್ತೇನೆ.

 

ಸ್ನೇಹಿತರೆ,

ಇದು ಭಾರತ ರತ್ನ ಡಾ. ಅಬ್ದುಲ್ ಕಲಾಂ ಅವರ ಭೂಮಿ. ವಿಜ್ಞಾನ ಮತ್ತು ಆಧ್ಯಾತ್ಮವು ಪರಸ್ಪರ ಪೂರಕವಾಗಿದೆ ಎಂಬುದನ್ನು ಅವರ ಜೀವನವು ನಮಗೆ ತೋರಿಸಿದೆ. ಅದೇ ರೀತಿ, ರಾಮೇಶ್ವರಂಗೆ ಹೊಸ ಪಂಬನ್ ಸೇತುವೆಯು ತಂತ್ರಜ್ಞಾನ ಮತ್ತು ಸಂಪ್ರದಾಯವನ್ನು ಒಟ್ಟಿಗೆ ತರುತ್ತದೆ. ಸಾವಿರಾರು ವರ್ಷಗಳಷ್ಟು ಹಳೆಯದಾದ ಈ ಪಟ್ಟಣವನ್ನು 21 ನೇ ಶತಮಾನದ ಎಂಜಿನಿಯರಿಂಗ್ ಅದ್ಭುತದಿಂದ ಸಂಪರ್ಕಿಸಲಾಗುತ್ತಿದೆ. ನಮ್ಮ ಎಂಜಿನಿಯರ್‌ಗಳು ಮತ್ತು ಕಾರ್ಮಿಕರ ಕಠಿಣ ಪರಿಶ್ರಮಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ. ಈ ಸೇತುವೆ ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ. ದೊಡ್ಡ ಹಡಗುಗಳು ಇದರ ಅಡಿ ಸಾಗಲು ಸಾಧ್ಯವಾಗುತ್ತದೆ. ರೈಲುಗಳು ಸಹ ಇದರ ಮೇಲೆ ವೇಗವಾಗಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ನಾನು ಸ್ವಲ್ಪ ಸಮಯದ ಹಿಂದೆ ಹೊಸ ರೈಲು ಸೇವೆ ಮತ್ತು ಹಡಗು ಸಂಚಾರಕ್ಕೆ ಚಾಲನೆ ನೀಡಿದ್ದೆ. ಮತ್ತೊಮ್ಮೆ, ಈ ಯೋಜನೆಗಾಗಿ ತಮಿಳುನಾಡಿನ ಜನರನ್ನು ನಾನು ಅಭಿನಂದಿಸುತ್ತೇನೆ.

ಸ್ನೇಹಿತರೆ,

ಹಲವು ದಶಕಗಳಿಂದ ಈ ಸೇತುವೆಗೆ ಬೇಡಿಕೆ ಇತ್ತು. ನಿಮ್ಮ ಆಶೀರ್ವಾದದಿಂದ ಈ ಕೆಲಸವನ್ನು ಪೂರ್ಣಗೊಳಿಸುವ ಸೌಭಾಗ್ಯ ನಮಗೆ ಸಿಕ್ಕಿದೆ. ಪಂಬನ್ ಸೇತುವೆ ವ್ಯಾಪಾರ ಸುಲಭತೆ ಮತ್ತು ಪ್ರಯಾಣ ಸುಲಭತೆ ಎರಡನ್ನೂ ಬೆಂಬಲಿಸುತ್ತದೆ. ಇದು ಲಕ್ಷಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹೊಸ ರೈಲು ಸೇವೆಯು ರಾಮೇಶ್ವರಂನಿಂದ ಚೆನ್ನೈ ಮತ್ತು ದೇಶದ ಇತರೆ ಭಾಗಗಳಿಗೆ ಸಂಪರ್ಕ ಸುಧಾರಿಸುತ್ತದೆ. ಇದು ತಮಿಳುನಾಡಿನ ವ್ಯಾಪಾರ ಮತ್ತು ಪ್ರವಾಸೋದ್ಯಮ ಎರಡಕ್ಕೂ ಪ್ರಯೋಜನ ನೀಡುತ್ತದೆ. ಯುವಕರಿಗೆ ಹೊಸ ಉದ್ಯೋಗ ಮತ್ತು ವ್ಯಾಪಾರ ಅವಕಾಶಗಳನ್ನು ಸಹ ಸೃಷ್ಟಿಸಲಿದೆ.

ಸ್ನೇಹಿತರೆ,

ಕಳೆದ 10 ವರ್ಷಗಳಲ್ಲಿ, ಭಾರತವು ತನ್ನ ಆರ್ಥಿಕತೆಯ ಗಾತ್ರವನ್ನು ದ್ವಿಗುಣಗೊಳಿಸಿದೆ. ಈ ತ್ವರಿತ ಬೆಳವಣಿಗೆಗೆ ಪ್ರಮುಖ ಕಾರಣವೆಂದರೆ ನಮ್ಮ ವಿಶ್ವ ದರ್ಜೆಯ ಆಧುನಿಕ ಮೂಲಸೌಕರ್ಯ. ಕಳೆದ ದಶಕದಲ್ಲಿ, ನಾವು ರೈಲ್ವೆ, ರಸ್ತೆಗಳು, ವಿಮಾನ ನಿಲ್ದಾಣಗಳು, ಬಂದರುಗಳು, ವಿದ್ಯುತ್, ನೀರು ಮತ್ತು ಅನಿಲ ಪೈಪ್‌ಲೈನ್‌ಗಳ ಬಜೆಟ್ ಅನ್ನು ಸುಮಾರು 6 ಪಟ್ಟು ಹೆಚ್ಚಿಸಿದ್ದೇವೆ. ಇಂದು ದೇಶವು ಬೃಹತ್ ಯೋಜನೆಗಳಲ್ಲಿ ತ್ವರಿತ ಪ್ರಗತಿ ಕಾಣುತ್ತಿದೆ. ನೀವು ದೇಶದ ಉತ್ತರ ಭಾಗವನ್ನು ನೋಡಿದರೆ, ವಿಶ್ವದ ಅತಿ ಎತ್ತರದ ರೈಲು ಸೇತುವೆಗಳಲ್ಲಿ ಒಂದಾದ ಚೆನಾಬ್ ಸೇತುವೆಯನ್ನು ಜಮ್ಮು-ಕಾಶ್ಮೀರದಲ್ಲಿ ನಿರ್ಮಿಸಲಾಗಿದೆ. ಪಶ್ಚಿಮ ಭಾಗದಲ್ಲಿ, ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಅಟಲ್ ಸೇತುವನ್ನು ಮುಂಬೈನಲ್ಲಿ ನಿರ್ಮಿಸಲಾಗಿದೆ. ಪೂರ್ವದಲ್ಲಿ, ಅಸ್ಸಾಂನ ಬೋಗಿಬೀಲ್ ಸೇತುವೆ ಒಂದು ಹೆಗ್ಗುರುತಾಗಿದೆ. ಮತ್ತು ದಕ್ಷಿಣದಲ್ಲಿ, ವಿಶ್ವದ ಕೆಲವೇ ಲಂಬ ಲಿಫ್ಟ್ ಸೇತುವೆಗಳಲ್ಲಿ ಒಂದಾದ ಪಂಬನ್ ಸೇತುವೆ ಪೂರ್ಣಗೊಂಡಿದೆ. ಅದೇ ರೀತಿ, ಪೂರ್ವ ಮತ್ತು ಪಶ್ಚಿಮ ಮೀಸಲಾದ ಸರಕು ಕಾರಿಡಾರ್‌ಗಳನ್ನು ಸಹ ಅಭಿವೃದ್ಧಿಪಡಿಸಲಾಗುತ್ತಿದೆ. ದೇಶದ ಮೊದಲ ಬುಲೆಟ್ ರೈಲಿನ ಕೆಲಸವು ವೇಗವಾಗಿ ಪ್ರಗತಿಯಲ್ಲಿದೆ. ವಂದೇ ಭಾರತ್, ಅಮೃತ್ ಭಾರತ್ ಮತ್ತು ನಮೋ ಭಾರತ್‌ನಂತಹ ಆಧುನಿಕ ರೈಲುಗಳು ರೈಲ್ವೆ ಜಾಲವನ್ನು ಇನ್ನಷ್ಟು ಮುಂದುವರಿದಂತೆ ಮಾಡುತ್ತಿವೆ.

ಸ್ನೇಹಿತರೆ,

ಭಾರತದ ಪ್ರತಿಯೊಂದು ಪ್ರದೇಶವು ಉತ್ತಮ ಸಂಪರ್ಕ ಹೊಂದಿರುವಾಗ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಹಾದಿ ಬಲಗೊಳ್ಳುತ್ತದೆ. ವಿಶ್ವಾದ್ಯಂತದ ಪ್ರತಿಯೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರ ಮತ್ತು ಅಭಿವೃದ್ಧಿ ಹೊಂದಿದ ಪ್ರತಿಯೊಂದು ಪ್ರದೇಶದಲ್ಲಿ ಇದು ನಿಖರವಾಗಿ ಸಂಭವಿಸಿದೆ. ಇಂದು ಭಾರತದ ಪ್ರತಿಯೊಂದು ರಾಜ್ಯವು ಹೆಚ್ಚಾಗಿ ಪರಸ್ಪರ ಸಂಪರ್ಕ ಹೊಂದುತ್ತಿದ್ದಂತೆ, ಇಡೀ ದೇಶದ ನಿಜವಾದ ಸಾಮರ್ಥ್ಯ ಹೊಕಹೊಮ್ಮುತ್ತಿದೆ. ಈ ಪ್ರಗತಿಯು ನಮ್ಮ ತಮಿಳುನಾಡು ಸೇರಿದಂತೆ ದೇಶದ ಪ್ರತಿಯೊಂದು ಪ್ರದೇಶಕ್ಕೂ ಪ್ರಯೋಜನ ನೀಡುತ್ತಿದೆ.

 

ಸ್ನೇಹಿತರೆ,

ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ)ದ ಕಡೆಗಿನ ಪ್ರಯಾಣದಲ್ಲಿ ತಮಿಳುನಾಡು ನಿರ್ಣಾಯಕ ಪಾತ್ರ ವಹಿಸುತ್ತದೆ. ತಮಿಳುನಾಡು ಬಲಗೊಂಡಷ್ಟೂ ಭಾರತದ ಬೆಳವಣಿಗೆ ವೇಗವಾಗಿರುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಕಳೆದ ದಶಕದಲ್ಲಿ, ಕೇಂದ್ರ ಸರ್ಕಾರದಿಂದ ತಮಿಳುನಾಡಿಗೆ ಹಂಚಿಕೆಯಾದ ಹಣವು 2014ಕ್ಕಿಂತ ಮೊದಲಿಗೆ ಹೋಲಿಸಿದರೆ 3 ಪಟ್ಟು ಹೆಚ್ಚಾಗಿದೆ. ಮೋದಿ ಸರ್ಕಾರವು ತಮಿಳುನಾಡಿಗೆ ಒದಗಿಸಿದ ಹಣಕಾಸಿನ ಪ್ರಮಾಣವು ಅದು ಅಧಿಕಾರದಲ್ಲಿದ್ದಾಗ ಐಎನ್ ಡಿಐ ಮೈತ್ರಿಕೂಟಕ್ಕಿಂತ 3 ಪಟ್ಟು ಹೆಚ್ಚಾಗಿದೆ, ಆಗ ಡಿಎಂಕೆ ಆ ಸರ್ಕಾರದ ಭಾಗವಾಗಿತ್ತು. ಇದು ತಮಿಳುನಾಡಿನ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಬಹಳವಾಗಿ ಹೆಚ್ಚಿಸಿದೆ.

ಸ್ನೇಹಿತರೆ,

ತಮಿಳುನಾಡಿನ ಮೂಲಸೌಕರ್ಯವು ಭಾರತ ಸರ್ಕಾರಕ್ಕೆ ಪ್ರಮುಖ ಆದ್ಯತೆಯಾಗಿದೆ. ಕಳೆದ ದಶಕದಲ್ಲಿ, ತಮಿಳುನಾಡಿಗೆ ರೈಲ್ವೆ ಬಜೆಟ್ ಅನ್ನು 7 ಪಟ್ಟು ಹೆಚ್ಚು ಹೆಚ್ಚಿಸಲಾಗಿದೆ. ಆದರೂ, ಕೆಲವು ಜನರಿಗೆ ಕಾರಣವಿಲ್ಲದೆ ದೂರು ನೀಡುವ ಅಭ್ಯಾಸವಿದೆ - ಅವರು ವಿಷಯಗಳ ಬಗ್ಗೆ ಅಳುತ್ತಲೇ ಇರುತ್ತಾರೆ. 2014ರ ಮೊದಲು, ತಮಿಳುನಾಡಿನಲ್ಲಿ ರೈಲ್ವೆ ಯೋಜನೆಗಳಿಗೆ ವಾರ್ಷಿಕ ಹಂಚಿಕೆ ಕೇವಲ 900 ಕೋಟಿ ರೂಪಾಯಿಗಳಾಗಿತ್ತು. ಮತ್ತು ಆ ಸಮಯದಲ್ಲಿ ಐಎನ್ ಡಿಐ ಮೈತ್ರಿಕೂಟದಉಸ್ತುವಾರಿ ಯಾರು ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಆದರೆ ಈ ವರ್ಷ, ತಮಿಳುನಾಡಿನ ರೈಲ್ವೆ ಬಜೆಟ್ 6,000 ಕೋಟಿ ರೂಪಾಯಿನ್ನು ಮೀರಿದೆ. ಭಾರತ ಸರ್ಕಾರವು ರಾಮೇಶ್ವರಂ ನಿಲ್ದಾಣ ಸೇರಿದಂತೆ ರಾಜ್ಯಾದ್ಯಂತ 77 ರೈಲು ನಿಲ್ದಾಣಗಳನ್ನು ಆಧುನೀಕರಿಸುತ್ತಿದೆ.

ಸ್ನೇಹಿತರೆ,

ಕಳೆದ 10 ವರ್ಷಗಳಲ್ಲಿ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ, ಗ್ರಾಮೀಣ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಅಗಾಧ ಪ್ರಗತಿ ಸಾಧಿಸಲಾಗಿದೆ. ಕೇಂದ್ರ ಸರ್ಕಾರದ ಸಹಾಯದಿಂದ 2014ರಿಂದ ತಮಿಳುನಾಡಿನಲ್ಲಿ 4,000 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಗಿದೆ. ಚೆನ್ನೈ ಬಂದರು ಸಂಪರ್ಕಿಸುವ ಎತ್ತರದ ಕಾರಿಡಾರ್ ಆಧುನಿಕ ಮೂಲಸೌಕರ್ಯದ ಅದ್ಭುತವಾಗಲಿದೆ. ಇಂದು ಸುಮಾರು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಲಾಗಿದೆ. ಈ ಯೋಜನೆಗಳು ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಸಂಪರ್ಕ ಹೆಚ್ಚಿಸುತ್ತವೆ ಮತ್ತು ಆಂಧ್ರ ಪ್ರದೇಶದೊಂದಿಗೆ ಸಂಪರ್ಕ ಬಲಪಡಿಸುತ್ತವೆ.

ಸ್ನೇಹಿತರೆ,

ಚೆನ್ನೈ ಮೆಟ್ರೋದಂತಹ ಆಧುನಿಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯು ತಮಿಳುನಾಡಿನಲ್ಲಿ ಪ್ರಯಾಣದ ಸುಲಭತೆಯನ್ನು ಹೆಚ್ಚಿಸುತ್ತಿವೆ. ಹಲವು ಮೂಲಸೌಕರ್ಯ ಯೋಜನೆಗಳು ಅಭಿವೃದ್ಧಿಗಾಂದಾಗ ಅವು ಬಹು ವಲಯಗಳಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈ ಯೋಜನೆಗಳು ನಮ್ಮ ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ತೆರೆಯುತ್ತವೆ.

 

ಸ್ನೇಹಿತರೆ,

ಕಳೆದ ದಶಕದಲ್ಲಿ, ಭಾರತ ಸಾಮಾಜಿಕ ಮೂಲಸೌಕರ್ಯದಲ್ಲಿ ದಾಖಲೆಯ ಹೂಡಿಕೆಗಳನ್ನು ಮಾಡಿದೆ. ತಮಿಳುನಾಡಿನ ಲಕ್ಷಾಂತರ ಬಡ ಕುಟುಂಬಗಳು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂಬುದರಿಂದ ನನಗೆ ಸಂತೋಷವಾಗಿದೆ. ಕಳೆದ 10 ವರ್ಷಗಳಲ್ಲಿ, ದೇಶಾದ್ಯಂತ ಬಡ ಕುಟುಂಬಗಳಿಗೆ 4 ಕೋಟಿಗೂ ಹೆಚ್ಚು ಪಕ್ಕಾ(ಶಾಶ್ವತ) ಮನೆಗಳನ್ನು ಒದಗಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ, ತಮಿಳುನಾಡಿನ ನನ್ನ ಬಡ ಕುಟುಂಬಗಳಿಗೆ 12 ಲಕ್ಷಕ್ಕೂ ಹೆಚ್ಚು ಪಕ್ಕಾ ಮನೆಗಳನ್ನು ನೀಡಲಾಗಿದೆ. ಕಳೆದ 10 ವರ್ಷಗಳಲ್ಲಿ, ಸುಮಾರು 12 ಕೋಟಿ ಗ್ರಾಮೀಣ ಕುಟುಂಬಗಳು ಮೊದಲ ಬಾರಿಗೆ ಪೈಪ್ ನೀರಿನ ಸಂಪರ್ಕ ಪಡೆದಿವೆ. ಇದರಲ್ಲಿ ತಮಿಳುನಾಡಿನಲ್ಲಿ 1 ಕೋಟಿ 11 ಲಕ್ಷ ಕುಟುಂಬಗಳು ಸೇರಿವೆ. ಮೊದಲ ಬಾರಿಗೆ ನಲ್ಲಿ ನೀರು ಅವರ ಮನೆಗಳನ್ನು ತಲುಪಿದೆ. ಇದು ತಮಿಳುನಾಡಿನ ತಾಯಂದಿರು ಮತ್ತು ಸಹೋದರಿಯರಿಗೆ ದೊಡ್ಡ ಪರಿಹಾರವಾಗಿದೆ.

ಸ್ನೇಹಿತರೆ,

ನಮ್ಮ ನಾಗರಿಕರಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯ ಪರಿಣಾಮ ನೋಡಿ - ಈ ಯೋಜನೆಯಡಿ, ತಮಿಳುನಾಡಿನಲ್ಲಿ ಈಗಾಗಲೇ 1 ಕೋಟಿಗೂ ಹೆಚ್ಚು ಚಿಕಿತ್ಸೆಗಳನ್ನು ನೀಡಲಾಗಿದೆ. ಇದರಿಂದಾಗಿ ತಮಿಳುನಾಡಿನ ಕುಟುಂಬಗಳಿಗೆ 8,000 ಕೋಟಿ ರೂಪಾಯಿ ಉಳಿತಾಯವಾಗಿದೆ - ಇಲ್ಲದಿದ್ದರೆ ಅವರ ಜೇಬಿನಿಂದ ಹಣ ಖರ್ಚು ಮಾಡಬೇಕಾಗಿತ್ತು. ನನ್ನ ತಮಿಳುನಾಡಿನ ಸಹೋದರ ಸಹೋದರಿಯರ ಜೇಬಿನಲ್ಲಿ 8,000 ಕೋಟಿ ರೂಪಾಯಿ ಉಳಿದಿರುವುದು ಒಂದು ದೊಡ್ಡ ಅಂಕಿಅಂಶವಾಗಿದೆ. ತಮಿಳುನಾಡಿನಲ್ಲಿ 1,400ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿವೆ. ಅಲ್ಲಿ ಔಷಧಿಗಳು 80% ರಿಯಾಯಿತಿಯಲ್ಲಿ ಲಭ್ಯವಿದೆ. ಈ ಕೈಗೆಟುಕುವ ಔಷಧಿಗಳಿಂದಾಗಿ, ತಮಿಳುನಾಡಿನಲ್ಲಿರುವ ನನ್ನ ಸಹೋದರ ಸಹೋದರಿಯರು ಆರೋಗ್ಯ ವೆಚ್ಚದಲ್ಲಿ 700 ಕೋಟಿ ರೂಪಾಯಿ ಉಳಿಸಿದ್ದಾರೆ. ಅದಕ್ಕಾಗಿಯೇ ನಾನು ನನ್ನ ತಮಿಳುನಾಡಿನ ಸಹೋದರ ಸಹೋದರಿಯರನ್ನು ಒತ್ತಾಯಿಸುತ್ತೇನೆ - ನೀವು ಔಷಧಿಗಳನ್ನು ಖರೀದಿಸಬೇಕಾದರೆ, ಯಾವಾಗಲೂ ಜನೌಷಧಿ ಕೇಂದ್ರಗಳಿಗೆ ಭೇಟಿ ನೀಡಿ. ಬೇರೆಡೆ ಮಾರಾಟವಾಗುವ 1 ರೂಪಾಯಿ ಬೆಲೆಯ ಔಷಧಿಗಳನ್ನು ಇಲ್ಲಿ ಕೇವಲ 20, 25 ಅಥವಾ 30 ಪೈಸೆಗೆ ಖರೀದಿಸಬಹುದು.

ಸ್ನೇಹಿತರೆ,

ಯುವ ಭಾರತೀಯರು ಇನ್ನು ಮುಂದೆ ವೈದ್ಯರಾಗಲು ವಿದೇಶಗಳಿಗೆ ಹೋಗಬೇಕಾಗಿಲ್ಲ ಎಂಬುದನ್ನು ಖಚಿತಪಡಿಸುವುದು ನಮ್ಮ ಗುರಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ತಮಿಳುನಾಡು 11 ಹೊಸ ವೈದ್ಯಕೀಯ ಕಾಲೇಜುಗಳನ್ನು ಪಡೆದುಕೊಂಡಿದೆ.

 

ಸ್ನೇಹಿತರೆ,

ದೇಶಾದ್ಯಂತ ಹಲವಾರು ರಾಜ್ಯಗಳು ಪ್ರಾದೇಶಿಕ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ ನೀಡಲು ಪ್ರಾರಂಭಿಸಿವೆ. ಈಗ, ಇಂಗ್ಲಿಷ್ ಓದದೇ ಇರುವ ಬಡ ತಾಯಂದಿರ ಮಕ್ಕಳು ಸಹ ವೈದ್ಯರಾಗಬಹುದು. ತಮಿಳುನಾಡು ಸರ್ಕಾರವು ತಮಿಳಿನಲ್ಲಿ ವೈದ್ಯಕೀಯ ಕೋರ್ಸ್‌ಗಳನ್ನು ಪರಿಚಯಿಸಬೇಕೆಂದು ನಾನು ಒತ್ತಾಯಿಸುತ್ತೇನೆ, ಇದರಿಂದ ಹಿಂದುಳಿದ ಕುಟುಂಬಗಳ ಮಕ್ಕಳು ಸಹ ವೈದ್ಯರಾಗುವ ತಮ್ಮ ಕನಸನ್ನು ನನಸಾಗಿಸಬಹುದು.

ಸ್ನೇಹಿತರೆ,

ತೆರಿಗೆದಾರರ ಪ್ರತಿ ರೂಪಾಯಿ ಹಣ ಬಡ ನಾಗರಿಕರಿಗೆ ಪ್ರಯೋಜನ ನೀಡುತ್ತದೆ ಎಂಬುದನ್ನು ಖಚಿತಪಡಿಸುವುದು ಉತ್ತಮ ಆಡಳಿತದ ಸಾರ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿ, ತಮಿಳುನಾಡಿನ ಸಣ್ಣ ರೈತರು ಸುಮಾರು 12,000 ಕೋಟಿ ರೂಪಾಯಿ ಪಡೆದಿದ್ದಾರೆ. ಹೆಚ್ಚುವರಿಯಾಗಿ, ತಮಿಳುನಾಡಿನ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, 14,800 ಕೋಟಿ ರೂಪಾಯಿ ಕ್ಲೈಮ್‌ಗಳನ್ನು ಪಡೆದಿದ್ದಾರೆ.

ಸ್ನೇಹಿತರೆ,

ಭಾರತದ ಬೆಳವಣಿಗೆಯನ್ನು ನಮ್ಮ ನೀಲಿ ಆರ್ಥಿಕತೆಯು ಗಮನಾರ್ಹವಾಗಿ ನಡೆಸುತ್ತದೆ, ಈ ವಲಯದಲ್ಲಿ ತಮಿಳುನಾಡಿನ ಶಕ್ತಿಯನ್ನು ಜಗತ್ತು ನೋಡಬಹುದು. ತಮಿಳುನಾಡಿನ ಮೀನುಗಾರಿಕೆ ಸಮುದಾಯವು ನಂಬಲಾಗದಷ್ಟು ಶ್ರಮಶೀಲವಾಗಿದೆ. ತಮಿಳುನಾಡಿನ ಮೀನುಗಾರಿಕೆ ಮೂಲಸೌಕರ್ಯ ಬಲಪಡಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಕಳೆದ 5 ವರ್ಷಗಳಲ್ಲಿ, ತಮಿಳುನಾಡು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ, ನೂರಾರು ಕೋಟಿಗಳನ್ನು ಪಡೆದಿದೆ. ಮೀನುಗಾರರಿಗೆ ಗರಿಷ್ಠ ಮತ್ತು ಆಧುನಿಕ ಸೌಲಭ್ಯಗಳು ಸಿಗುವುದನ್ನು ಖಚಿತಪಡಿಸಲು ನಾವು ಬಯಸುತ್ತೇವೆ. ಅದು ಸಮುದ್ರ ತೀರದ ಉದ್ಯಾನವನಗಳಾಗಲಿ, ಮೀನುಗಾರಿಕೆ ಬಂದರುಗಳಾಗಲಿ ಅಥವಾ ಇಳಿಯುವ ಕೇಂದ್ರಗಳಾಗಲಿ, ಕೇಂದ್ರ ಸರ್ಕಾರವು ಕೋಟ್ಯಂತರ ರೂಪಾಯಿಗಳನ್ನು ಹೂಡಿಕೆ ಮಾಡುತ್ತಿದೆ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ನಾವು ಕಾಳಜಿ ವಹಿಸುತ್ತೇವೆ. ಬಿಕ್ಕಟ್ಟಿನ ಸಮಯದಲ್ಲಿ ಭಾರತ ಸರ್ಕಾರ ಮೀನುಗಾರರೊಂದಿಗೆ ದೃಢವಾಗಿ ನಿಲ್ಲುತ್ತದೆ. ಭಾರತ ಸರ್ಕಾರದ ಪ್ರಯತ್ನಗಳಿಂದಾಗಿ, ಕಳೆದ 10 ವರ್ಷಗಳಲ್ಲಿ 3,700ಕ್ಕೂ ಹೆಚ್ಚು ಮೀನುಗಾರರನ್ನು ಶ್ರೀಲಂಕಾದಿಂದ ಸುರಕ್ಷಿತವಾಗಿ ಮರಳಿ ಕರೆತರಲಾಗಿದೆ. ಇವರಲ್ಲಿ, ಕಳೆದ ವರ್ಷವಷ್ಟೇ 600ಕ್ಕೂ ಹೆಚ್ಚು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ನಮ್ಮ ಕೆಲವು ಮೀನುಗಾರರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು ಎಂಬುದು ನಿಮಗೆಲ್ಲಾ ನೆನಪಿರಬಹುದು. ಆದರೆ ಅವರನ್ನು ಜೀವಂತವಾಗಿ ಮರಳಿ ಕರೆತರಲು ಮತ್ತು ಭಾರತದಲ್ಲಿರುವ ಅವರ ಕುಟುಂಬಗಳೊಂದಿಗೆ ಅವರನ್ನು ಮತ್ತೆ ಒಂದುಗೂಡಿಸಲು ನಾವು ಅವಿಶ್ರಾಂತವಾಗಿ ಕೆಲಸ ಮಾಡಿದ್ದೇವೆ.

 

ಸ್ನೇಹಿತರೆ,

ಇಂದು ಭಾರತದ ಬಗ್ಗೆ ಇಡೀ ವಿಶ್ವದ ಆಕರ್ಷಣೆ ಹೆಚ್ಚುತ್ತಿದೆ. ಜನರು ಭಾರತವನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ತಿಳಿದುಕೊಳ್ಳಲು ಮತ್ತು ಅರ್ಥ ಮಾಡಿಕೊಳ್ಳಲು ಬಯಸುತ್ತಾರೆ. ಇದಕ್ಕೆ ಪ್ರಮುಖ ಕಾರಣ ನಮ್ಮ ಶ್ರೀಮಂತ ಸಂಸ್ಕೃತಿ ಮತ್ತು ಮೃದು ಶಕ್ತಿ. ತಮಿಳು ಭಾಷೆ ಮತ್ತು ಪರಂಪರೆ ಪ್ರಪಂಚದ ಮೂಲೆ ಮೂಲೆಗೂ ತಲುಪುವಂತೆ ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಕೆಲವೊಮ್ಮೆ, ತಮಿಳುನಾಡಿನ ಕೆಲವು ನಾಯಕರಿಂದ ನನಗೆ ಬಂದ ಪತ್ರಗಳನ್ನು ನೋಡಿದಾಗ ನನಗೆ ಆಶ್ಚರ್ಯವಾಗುತ್ತದೆ - ಒಬ್ಬರೂ ತಮಿಳಿನಲ್ಲಿ ತಮ್ಮ ಹೆಸರನ್ನು ಸಹಿ ಮಾಡುವುದಿಲ್ಲ! ತಮಿಳು ಹೆಮ್ಮೆಯ ವಿಷಯವಾಗಿದೆ, ಮತ್ತು ಈ ಅದ್ಭುತ ಭಾಷೆಯನ್ನು ಗೌರವಿಸಲು ಪ್ರತಿಯೊಬ್ಬರೂ ಕನಿಷ್ಠ ತಮಿಳಿನಲ್ಲಿ ತಮ್ಮ ಹೆಸರನ್ನು ಸಹಿ ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ. 21ನೇ ಶತಮಾನದಲ್ಲಿ ನಾವು ಈ ಮಹಾನ್ ಸಂಪ್ರದಾಯವನ್ನು ಮುಂದಕ್ಕೆ ಕೊಂಡೊಯ್ಯಬೇಕು ಎಂದು ನಾನು ದೃಢವಾಗಿ ನಂಬುತ್ತೇನೆ. ರಾಮೇಶ್ವರಂ ಮತ್ತು ತಮಿಳುನಾಡಿನ ಪವಿತ್ರ ಭೂಮಿ ನಮಗೆ ಸ್ಫೂರ್ತಿ ಮತ್ತು ಚೈತನ್ಯ ನೀಡುತ್ತದೆ ಎಂಬುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಇಂದು ಅದ್ಭುತ ಕಾಕತಾಳೀಯವನ್ನು ನೋಡಿ. ಇದು ರಾಮನವಮಿಯ ಶುಭ ಸಂದರ್ಭ. ನಾವು ರಾಮೇಶ್ವರಂನ ಪವಿತ್ರ ಭೂಮಿಯಲ್ಲಿದ್ದೇವೆ. ಇಂದು ಹೊಸ ಪಂಬನ್ ಸೇತುವೆ ಉದ್ಘಾಟಿಸಲಾಗಿದೆ. 100 ವರ್ಷಗಳ ಹಿಂದೆ ಹಳೆಯ ಪಂಬನ್ ಸೇತುವೆಯನ್ನು ಗುಜರಾತ್‌ನಲ್ಲಿ ಜನಿಸಿದ ವ್ಯಕ್ತಿಯೊಬ್ಬರು ನಿರ್ಮಿಸಿದರು. ಇಂದು 100 ವರ್ಷಗಳ ನಂತರ, ಗುಜರಾತ್‌ನಲ್ಲಿ ಜನಿಸಿದ ವ್ಯಕ್ತಿಯೇ ಹೊಸ ಪಂಬನ್ ಸೇತುವೆಯನ್ನು ಮತ್ತೊಮ್ಮೆ ಉದ್ಘಾಟಿಸಿದ್ದಾರೆ.

ಸ್ನೇಹಿತರೆ,

ರಾಮನವಮಿಯ ಈ ಶುಭ ಸಂದರ್ಭದಲ್ಲಿ, ನಾವು ರಾಮೇಶ್ವರಂನ ಪವಿತ್ರ ಭೂಮಿಯಲ್ಲಿ ನಿಂತಿರುವಾಗ, ನಾನು ತುಂಬಾ ಭಾವುಕನಾಗಿದ್ದೇನೆ. ಇಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸ್ಥಾಪನಾ ದಿನವೂ ಆಗಿದೆ. ನಾವು ಶ್ರಮಿಸುತ್ತಿರುವ ಬಲವಾದ, ಸಮೃದ್ಧ ಮತ್ತು ವಿಕಸಿತ ಭಾರತದ ದೃಷ್ಟಿಕೋನವು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಅವಿಶ್ರಾಂತ ಪ್ರಯತ್ನಗಳಿಂದ ನಡೆಸಲ್ಪಡುತ್ತದೆ. 3-4 ತಲೆಮಾರುಗಳು ಭಾರತ ಮಾತೆಯ ಸೇವೆಗೆ ತಮ್ಮ ಜೀವನ ಮುಡಿಪಾಗಿಟ್ಟಿವೆ. ಬಿಜೆಪಿಯ ಆದರ್ಶಗಳು ಮತ್ತು ಲಕ್ಷಾಂತರ ಬಿಜೆಪಿ ಕಾರ್ಯಕರ್ತರ ಕಠಿಣ ಪರಿಶ್ರಮವು ಇಂದು ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ನೀಡಿದೆ ಎಂಬುದು ನನಗೆ ತುಂಬಾ ಹೆಮ್ಮೆಯ ವಿಷಯವಾಗಿದೆ. ದೇಶದ ಜನರು ಬಿಜೆಪಿ ನೇತೃತ್ವದ ಸರ್ಕಾರಗಳ ಉತ್ತಮ ಆಡಳಿತವನ್ನು ನೋಡುತ್ತಿದ್ದಾರೆ. ಅವರು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರಗಳಿಗೆ ಸಾಕ್ಷಿಯಾಗುತ್ತಾರೆ ಮತ್ತು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಯ ಭಾವನೆ ಅನುಭವಿಸುತ್ತಾನೆ. ಪ್ರತಿಯೊಂದು ರಾಜ್ಯದಲ್ಲೂ, ದೇಶದ ಪ್ರತಿಯೊಂದು ಮೂಲೆಯಲ್ಲೂ, ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಆಳವಾಗಿ ಸಂಪರ್ಕ ಹೊಂದಿದ್ದಾರೆ, ನೆಲದ ಮೇಲೆ ಕೆಲಸ ಮಾಡುತ್ತಾರೆ ಮತ್ತು ಬಡವರಿಗೆ ಸೇವೆ ಸಲ್ಲಿಸುತ್ತಾರೆ. ಅವರ ಸಮರ್ಪಣೆಯನ್ನು ನೋಡುವುದು ನನಗೆ ಅಪಾರ ಹೆಮ್ಮೆಯನ್ನು ತುಂಬುತ್ತದೆ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ಅವರಿಗೆ ನನ್ನ ಶುಭಾಶಯಗಳನ್ನು ಅರ್ಪಿಸುತ್ತೇನೆ. ಮತ್ತೊಮ್ಮೆ, ತಮಿಳುನಾಡಿನಲ್ಲಿ ಈ ಅಭಿವೃದ್ಧಿ ಯೋಜನೆಗಳಿಗಾಗಿ ನಿಮ್ಮೆಲ್ಲರನ್ನೂ ನಾನು ಅಭಿನಂದಿಸುತ್ತೇನೆ!

 

ನಂದ್ರಿ! ವಣಕ್ಕಂ! ಮೀಂಡಮ್ ಸಂಧಿಪ್ಪೊಂ!

ಭಾರತ್ ಮಾತಾ ಕಿ ಜೈ!

ಭಾರತ್ ಮಾತಾ ಕಿ ಜೈ!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New train services to boost Purvanchal connectivity from June 19

Media Coverage

New train services to boost Purvanchal connectivity from June 19
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।