ನಮಸ್ಕಾರ ಮಿತ್ರರೇ,

ಸಂಸತ್ತಿನ ಈ ಅಧಿವೇಶನ ಅತ್ಯಂತ ಮುಖ್ಯವಾದದು. ದೇಶ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿದೆ. ಭಾರತದಾದ್ಯಂತ ಸಾಮಾನ್ಯ ಜನರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸು ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಕಥೆಗಳು ಭಾರತದ ಉಜ್ವಲ ಭವಿಷ್ಯದ ಸಂಕೇತಗಳಾಗಿವೆ.

ಇತ್ತೀಚೆಗಷ್ಟೇ ಇಡೀ ದೇಶ ಸಂವಿಧಾನದಿನದಂದು ಹೊಸ ನಿರ್ಣಯದೊಂದಿಗೆ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಂಕಲ್ಪ ಮಾಡಿದೆ. ಆ ನಿಟ್ಟಿನಲ್ಲಿ, ನಾವೆಲ್ಲರೂ ಮತ್ತು ದೇಶದ ಪ್ರತಿಯೊಬ್ಬ ನಾಗರಿಕರು ಈ ಅಧಿವೇಶನವನ್ನು ಬಯಸುತ್ತಿದ್ದಾರೆ ಮತ್ತು  ಸಂಸತ್ತಿನ ಮುಂದಿನ ಅಧಿವೇಶನಗಳಲ್ಲಿಯೂ ಸಹ ಸಂಸತ್ತಿನಲ್ಲಿ ದೇಶದ ಹಿತಾಸಕ್ತಿಯ ಬಗ್ಗೆ ಚರ್ಚೆಗಳು ನಡೆಯಬೇಕೆಂದು ಮತ್ತು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಮನೋಭಾವಕ್ಕೆ ಅನುಗುಣವಾಗಿ ದೇಶದ ಅಭಿವೃದ್ಧಿಗೆ ಹೊಸ ಮಾರ್ಗೋಪಾಯಗಳನ್ನು ಕಂಡುಹಿಡಿಯಬೇಕೆಂದು ಬಯಸುತ್ತಾರೆ.

ಈ ಅಧಿವೇಶನವು ವಿಚಾರಗಳಿಂದ ಸಮೃದ್ಧವಾಗಿರಬೇಕು ಮತ್ತು ಸಕಾರಾತ್ಮಕ ಚರ್ಚೆಗಳು ದೂರಗಾಮಿ ಪರಿಣಾಮಗಳನ್ನು ಬೀರಬೇಕು. ಸಂಸತ್ತಿನ ಕಲಾಪವನ್ನು ಯಾರು ಬಲವಂತವಾಗಿ ಅಡ್ಡಿಪಡಿಸಿದರು ಎನ್ನುವುದಕ್ಕಿಂತ ಸಂಸತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದರ ಮಹತ್ವದ ಕೊಡುಗೆಗಳನ್ನು ನಿರ್ಣಯಿಸಬೇಕೆಂದು ನಾನು ಭಾವಿಸುತ್ತೇನೆ. ಇದು ಮಾನದಂಡವಾಗಿರಬಾರದು. ಸಂಸತ್ತು ಎಷ್ಟು ಗಂಟೆ ಕೆಲಸ ಮಾಡಿದೆ ಮತ್ತು ಎಷ್ಟು ಸಕಾರಾತ್ಮಕ ಕೆಲಸ ಮಾಡಿದೆ ಎಂಬುದು ಮಾನದಂಡವಾಗಿರಬೇಕು. ಸರ್ಕಾರ ಎಲ್ಲ ವಿಷಯಗಳ ಬಗ್ಗೆ ಮುಕ್ತ ಮನಸ್ಸಿನಿಂದ ಚರ್ಚೆಗೆ ಸಿದ್ಧವಿದೆ. ಸರ್ಕಾರ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲೂ ಸಹ ಸಿದ್ಧವಿದೆ. ನಾವು ಸಂಸತ್ತಿನಲ್ಲಿ ಪ್ರಶ್ನೆಗಳಿರಬೇಕು ಮತ್ತು ಶಾಂತಿಯೂ ನೆಲಸುವಂತೆ ಮಾಡಬೇಕೆಂದು ಬಯಸುತ್ತೇವೆ.

ಸರ್ಕಾರದ ನೀತಿಗಳ ವಿರುದ್ಧದ ಧ್ವನಿಗಳು ಪ್ರಬಲವಾಗಿರಬೇಕು, ಆದರೆ ಸಂಸತ್ತಿನ ಮತ್ತು ಪೀಠದ ಘನತೆಯನ್ನು ಎತ್ತಿಹಿಡಿಯಬೇಕು. ನಾವು ಯುವಪೀಳಿಗೆಗೆ ಸ್ಪೂರ್ತಿ ನೀಡುವ ರೀತಿ ನಡವಳಿಕೆಯನ್ನು ಕಾಪಾಡಿಕೊಳ್ಳಬೇಕು. ಕಳೆದ ಅಧಿವೇಶನದಿಂದೀಚೆಗೆ ದೇಶ 100 ಕೋಟಿಗೂ ಅಧಿಕ ಕೋವಿಡ್ ಲಸಿಕೆಗಳನ್ನು ನೀಡಿದೆ ಮತ್ತು ನಾವು ಇದೀಗ 150 ಕೋಟಿ ಅಂಕಿಯತ್ತ ಅತ್ಯಂತ ವೇಗವಾಗಿ ಸಾಗುತ್ತಿದ್ದೇವೆ. ನಾವು ಹೊಸ ರೂಪಾಂತರಿ ಬಗ್ಗೆ ಜಾಗೃತರಾಗಿರಬೇಕು. ನಾವು ಸಂಸತ್ತಿನ ಎಲ್ಲ ಸದಸ್ಯರನ್ನು ಮತ್ತು ನಿಮ್ಮನ್ನು ಎಚ್ಚರದಿಂದ ಇರುವಂತೆ ಕೋರುತ್ತೇನೆ, ಏಕೆಂದರೆ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಪ್ರತಿಯೊಬ್ಬರ ಆರೋಗ್ಯವೂ ನಮ್ಮ ಆದ್ಯತೆಯಾಗಬೇಕು.

ಉಚಿತ ಆಹಾರ ಧಾನ್ಯಗಳನ್ನು ವಿತರಿಸುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮುಂದುವರಿದಿದೆ, ಹಾಗಾಗಿ ಈ ಕೊರೊನಾ ಅವಧಿಯಲ್ಲಿ ದೇಶದ 80ಕೋಟಿಗೂ ಅಧಿಕ ಮಂದಿ ಯಾವುದೇ ತೊಂದರೆ ಅನುಭವಿಸುವುದಿಲ್ಲ. ಇದೀಗ ಆ ಯೋಜನೆಯನ್ನು 2022ರ ಮಾರ್ಚ್ ವರೆಗೆ ವಿಸ್ತರಣೆ ಮಾಡಲಾಗಿದೆ. ಸುಮಾರು 2.60 ಲಕ್ಷ ಕೋಟಿ ರೂ.ಗಳ ವೆಚ್ಚದ ಈ ಯೋಜನೆಯು 80ಕೋಟಿಗೂ ಅಧಿಕ ದೇಶವಾಸಿಗಳ ಕಾಳಜಿಯ ಬಗ್ಗೆ ಗಮನಹರಿಸುತ್ತದೆ ಮತ್ತು ಇದರಿಂದ ಬಡವರ ಒಲೆ ಉರಿಯುತ್ತಲೇ ಇರುತ್ತದೆ. ಈ ಅಧಿವೇಶನದಲ್ಲಿ ನಾವು ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ತ್ವರಿತ ನಿರ್ಧಾರಗಳನ್ನು ಕೈಗೊಳ್ಳುತ್ತೇವೆ ಮತ್ತು ಸಾಮಾನ್ಯ ಜನರ ಆಶಯಗಳು ಮತ್ತು ನಿರೀಕ್ಷೆಗಳನ್ನು ಈಡೇರಿಸುತ್ತೇವೆ ಎಂಬ ಭರವಸೆ ನನಗಿದೆ. ಇದು ನಮ್ಮ ನಿರೀಕ್ಷೆಯೂ ಆಗಿದೆ. ತುಂಬಾ ಧನ್ಯವಾದಗಳು

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why Amazon, Microsoft, Google are pouring $57 billion to build AI infrastructure in India

Media Coverage

Why Amazon, Microsoft, Google are pouring $57 billion to build AI infrastructure in India
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasising on unity and mutual harmony
June 26, 2026

The Prime Minister, Shri Narendra Modi today shared Sanskrit Subhashitam emphasising that one should always work together with unity and mutual harmony.

The Prime Minister shared a Sanskrit verse-

“सङ्गच्छध्वं संवदध्वं
सं वो मनांसि जानताम्।

देवा भागं यथा पूर्वे
सञ्जानाना उपासते॥

Shri Modi posted on X:

सङ्गच्छध्वं संवदध्वं
सं वो मनांसि जानताम्।

देवा भागं यथा पूर्वे
सञ्जानाना उपासते॥