5,550 ಕೋಟಿಗೂ ಅಧಿಕ ಮೊತ್ತದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
500 ಕೋಟಿಗೂ ಅಧಿಕ ಮೌಲ್ಯದ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ
ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಿ
"ತೆಲುಗಿನ ಜನರ ಸಾಮರ್ಥ್ಯಗಳು ಯಾವಾಗಲೂ ಭಾರತದ ಸಾಮರ್ಥ್ಯವನ್ನು ಹೆಚ್ಚಿಸಿವೆ"
"ಇಂದಿನ ಹೊಸ ಯುವ ಭಾರತವು ಶಕ್ತಿಯಿಂದ ತುಂಬಿದೆ"
ಬಳಕೆಯಲ್ಲಿಲ್ಲದ ಮೂಲಸೌಕರ್ಯದಿಂದ ಭಾರತದಲ್ಲಿ ವೇಗದ ಅಭಿವೃದ್ಧಿ ಅಸಾಧ್ಯ
"ತೆಲಂಗಾಣವು ಸುತ್ತಮುತ್ತಲಿನ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುತ್ತಿದೆ ಮತ್ತು ಆರ್ಥಿಕ ಚಟುವಟಿಕೆಯ ಕೇಂದ್ರವಾಗುತ್ತಿದೆ"
"ಉತ್ಪಾದನಾ ಕ್ಷೇತ್ರವು ಯುವಕರಿಗೆ ಉದ್ಯೋಗದ ದೊಡ್ಡ ಮೂಲವಾಗುತ್ತಿದೆ"

ತೆಲಂಗಾಣ ಜನತೆಗೆ ನನ್ನ ನಮಸ್ಕಾರಗಳು!

ತೆಲಂಗಾಣ ರಾಜ್ಯಪಾಲರಾದ ಸೌಂದರರಾಜನ್ ಜೀ, ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಜಿ ಕಿಶನ್ ರೆಡ್ಡಿ ಜಿ, ಸಂಜಯ್ ಜಿ, ಇತರ ಗಣ್ಯರು ಮತ್ತು ತೆಲಂಗಾಣದ ನನ್ನ ಸಹೋದರ ಸಹೋದರಿಯರೇ! ಇತ್ತೀಚೆಗೆ ತೆಲಂಗಾಣ ರಚನೆಯಾಗಿ 9 ವರ್ಷ ಪೂರ್ಣಗೊಂಡಿದೆ. ತೆಲಂಗಾಣ ರಾಜ್ಯವು ಹೊಸದಾಗಿರಬಹುದು ಆದರೆ ಭಾರತದ ಇತಿಹಾಸಕ್ಕೆ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ಬಹುಮೂಲ್ಯವಾಗಿದೆ. ತೆಲುಗು ಜನರ ಸಾಮರ್ಥ್ಯವು ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ. ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಅಭಿವೃದ್ಧಿ ಹೊಂದಲು ತೆಲಂಗಾಣ ಪ್ರಮುಖ ಪಾತ್ರ ವಹಿಸಿದೆ. ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿರುವ ಮತ್ತು ಭಾರತದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಇಂಥ ಸನ್ನಿವೇಶದಲ್ಲಿ ತೆಲಂಗಾಣದ ಮುಂದೆ ಅವಕಾಶಗಳ ಮಹಾಪೂರವೇ ಇದೆ.

 

ಸ್ನೇಹಿತರೇ,

ಇಂದಿನ ನವ ಭಾರತ, ಯುವ ಭಾರತ ಮತ್ತು ಶಕ್ತಿ ತುಂಬಿದ ಭಾರತವಾಗಿದೆ. ನಾವು ಈಗ 21 ನೇ ಶತಮಾನದ ಮೂರನೇ ದಶಕದ ಸುವರ್ಣ ಅವಧಿಯನ್ನು ಪ್ರವೇಶಿಸಿದ್ದೇವೆ. ಈ ಸುವರ್ಣ ಅವಧಿಯಲ್ಲಿ ಪ್ರತಿ ಸೆಕೆಂಡ್ ಅನ್ನು ನಾವು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಕ್ಷಿಪ್ರ ಅಭಿವೃದ್ಧಿ ಸಾಧ್ಯತೆಯ ವಿಷಯದಲ್ಲಿ ದೇಶದ ಯಾವುದೇ ಭಾಗವು ಹಿಂದೆ ಉಳಿಯಬಾರದು. ಇವುಗಳನ್ನು ಬಲಪಡಿಸುವ ಸಲುವಾಗಿ, ಕಳೆದ 9 ವರ್ಷಗಳಲ್ಲಿ, ಭಾರತ ಸರ್ಕಾರವು ತೆಲಂಗಾಣದ ಅಭಿವೃದ್ಧಿ ಮತ್ತು ಅದರ ಜತೆಗಿನ ಸಂಪರ್ಕಕ್ಕೆ ವಿಶೇಷ ಗಮನವನ್ನು ನೀಡಿದೆ. ಇದಕ್ಕೆ ಅನುಗುಣವಾಗಿ ಇಂದು ತೆಲಂಗಾಣದಲ್ಲಿ ಸಂಪರ್ಕ ಮತ್ತು ಉತ್ಪಾದನೆಗೆ ಸಂಬಂಧಿಸಿದ 6,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಈ ಎಲ್ಲಾ ಯೋಜನೆಗಳಿಗಾಗಿ ನಾನು ತೆಲಂಗಾಣದ ಜನರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ಹೊಸ ಗುರಿಗಳಿದ್ದರೆ, ಹೊಸ ಮಾರ್ಗಗಳನ್ನೂ ಸೃಷ್ಟಿಸಬೇಕು. ಹಳೆಯ ಮೂಲಸೌಕರ್ಯಗಳ ಆಧಾರದ ಮೇಲೆ ಭಾರತದ ತ್ವರಿತ ಅಭಿವೃದ್ಧಿ ಸಾಧ್ಯವಾಗಿರಲಿಲ್ಲ. ಪ್ರಯಾಣದಲ್ಲಿ ಹೆಚ್ಚು ಸಮಯ ವ್ಯರ್ಥವಾದರೆ, ಇತರೆ ಕಾರ್ಯಗಳ ವೆಚ್ಚ ದುಬಾರಿಯಾಗಿದ್ದರೆ, ವ್ಯವಹಾರಗಳು ಮತ್ತು ಜನರು ತೊಂದರೆಗಳನ್ನು ಅನುಭವಿಸುತ್ತಾರೆ. ಆದ್ದರಿಂದಲೇ ನಮ್ಮ ಸರ್ಕಾರ ಹಿಂದೆಂದಿಗಿಂತಲೂ ಹೆಚ್ಚು ವೇಗವಾಗಿ ಕೆಲಸ ಮಾಡುತ್ತಿದೆ. ಇಂದು, ಪ್ರತಿಯೊಂದು ರೀತಿಯ ಮೂಲಸೌಕರ್ಯಗಳಿಗೆ ಮೊದಲಿಗಿಂತ ಹಲವಾರು ಪಟ್ಟು ವೇಗವಾಗಿ ಕೆಲಸ ಮಾಡಲಾಗುತ್ತಿದೆ. ದೇಶದಾದ್ಯಂತ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು, ಆರ್ಥಿಕ ಕಾರಿಡಾರ್‌ಗಳು, ಕೈಗಾರಿಕಾ ಕಾರಿಡಾರ್‌ಗಳ ಜಾಲವನ್ನು ವಿಸ್ತರಿಸಲಾಗುತ್ತಿದೆ. ಎರಡು ಲೇನ್ ಹೆದ್ದಾರಿಗಳನ್ನು ನಾಲ್ಕು ಪಥಗಳಾಗಿ ಮತ್ತು ನಾಲ್ಕು ಪಥಗಳು ಆರು ಪಥಗಳಾಗಿ ಪರಿವರ್ತಿಸಲಾಗುತ್ತಿದೆ. ದಶಪಥ ಹೆದ್ದಾರಿಗಳು ಈಗ ನಮ್ಮ ದೇಶದಲ್ಲಿವೆ. 9 ವರ್ಷಗಳ ಹಿಂದೆ ತೆಲಂಗಾಣದ ರಾಷ್ಟ್ರೀಯ ಹೆದ್ದಾರಿ ಜಾಲ ಕೇವಲ 2500 ಕಿ.ಮೀ ಇತ್ತು. ಇಂದು ಅದು ದುಪ್ಪಟ್ಟಾಗಿ 5000 ಕಿ.ಮೀ.ಗೆ ಏರಿಕೆಯಾಗಿದೆ. ಇಂದು, ತೆಲಂಗಾಣದಲ್ಲಿ 2500 ಕಿಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ. ಭಾರತಮಾಲಾ ಯೋಜನೆಯಡಿ ದೇಶದಲ್ಲಿ ನಿರ್ಮಿಸಲಾಗುತ್ತಿರುವ ಹತ್ತಾರು ಕಾರಿಡಾರ್‌ಗಳಲ್ಲಿ ಹಲವು ತೆಲಂಗಾಣದ ಮೂಲಕ ಹಾದು ಹೋಗಿವೆ. ಹೈದರಾಬಾದ್-ಇಂದೋರ್ ಆರ್ಥಿಕ ಕಾರಿಡಾರ್, ಸೂರತ್-ಚೆನ್ನೈ ಆರ್ಥಿಕ ಕಾರಿಡಾರ್, ಹೈದರಾಬಾದ್-ಪಣಜಿ ಎಕನಾಮಿಕ್ ಕಾರಿಡಾರ್, ಹೈದರಾಬಾದ್-ವಿಶಾಖಪಟ್ಟಣಂ ಇಂಟರ್ ಕಾರಿಡಾರ್ ಹೀಗೆ ಹಲವಾರು ಉದಾಹರಣೆಗಳು ನಮ್ಮ ಮುಂದೆ ಇವೆ. ಒಂದು ರೀತಿಯಲ್ಲಿ, ತೆಲಂಗಾಣವು ನೆರೆಯ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುತ್ತದೆ ಮತ್ತು ಆರ್ಥಿಕ ಚಟುವಟಿಕೆಗಳ ಕೇಂದ್ರವಾಗುತ್ತಿದೆ.

 

ಸ್ನೇಹಿತರೇ,

ಇಂದು, ನಾಗ್ಪುರ-ವಿಜಯವಾಡ ಕಾರಿಡಾರ್‌ನ ಮಂಚೇರಿಯಲ್‌ನಿಂದ ವಾರಂಗಲ್ ವಿಭಾಗದ ಕಾಮಗಾರಿಗೆ ಅಡಿಗಲ್ಲು ಕೂಡ ಹಾಕಲಾಗಿದೆ. ಇದು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದವರೆಗೆ ತೆಲಂಗಾಣಕ್ಕೆ ಆಧುನಿಕ ಸಂಪರ್ಕವನ್ನು ಒದಗಿಸುತ್ತದೆ. ಇದು ಮಂಚೇರಿಯಲ್ ಮತ್ತು ವಾರಂಗಲ್ ನಡುವಿನ ಪ್ರಯಾಣ ಅಂತರವನ್ನು ಬಹಳ ಕಡಿಮೆ ಮಾಡುತ್ತದೆ ಮತ್ತು ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ವಿಶೇಷವಾಗಿ ಅಭಿವೃದ್ಧಿಯ ಕೊರತೆಯಿರುವ ಪ್ರದೇಶಗಳ ಮೂಲಕ ಹಾದುಹೋಗುತ್ತದೆ ಮತ್ತು ನಮ್ಮ ಬುಡಕಟ್ಟು ಸಹೋದರರು ಮತ್ತು ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಸ್ಥಳಗಳ ಮೂಲಕವೇ ಸಾಗುತ್ತದೆ. ಈ ಕಾರಿಡಾರ್ ಮಲ್ಟಿಮಾಡಲ್ ಸಂಪರ್ಕವನ್ನು ಬಲಪಡಿಸುತ್ತದೆ. ಕರೀಂನಗರ-ವಾರಂಗಲ್ ವಿಭಾಗದ ಚತುಷ್ಪಥವು ಹೈದರಾಬಾದ್-ವಾರಂಗಲ್ ಇಂಡಸ್ಟ್ರಿಯಲ್ ಕಾರಿಡಾರ್, ಕಾಕತೀಯ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಮತ್ತು ವಾರಂಗಲ್ ವಿಶೇಷ ಆರ್ಥಿಕ ವಲಯದ (SEZ) ಸಂಪರ್ಕವನ್ನು ಬಲಪಡಿಸುತ್ತದೆ.

ಸ್ನೇಹಿತರೇ,

ಭಾರತ ಸರ್ಕಾರವು ಇಂದು ತೆಲಂಗಾಣದಲ್ಲಿ ಕೈಗಾರಿಕೆಗಳಿಗೆ ಮತ್ತು ಇಲ್ಲಿನ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ತೆಲಂಗಾಣದಲ್ಲಿ ಅನೇಕ ಪಾರಂಪರಿಕ ಕೇಂದ್ರಗಳು ಮತ್ತು ಧಾರ್ಮಿಕ ಸ್ಥಳಗಳಿವೆ. ಈ ಸ್ಥಳಗಳಿಗೆ ಭೇಟಿ ನೀಡಲು ಈಗ ಹೆಚ್ಚು ಅನುಕೂಲಕರ ಪರಿಸ್ಥಿತಿ ಇದೆ. ಇಲ್ಲಿನ ಕೃಷಿಗೆ ಸಂಬಂಧಿಸಿದ ಕೈಗಾರಿಕೆಗಳು, ಕರೀಂನಗರದ ಗ್ರಾನೈಟ್ ಉದ್ಯಮಗಳು ಸಹ ಭಾರತ ಸರ್ಕಾರದ ಪ್ರಯತ್ನದಿಂದ ಪ್ರಯೋಜನ ಪಡೆಯುತ್ತಿವೆ. ರೈತರಾಗಲಿ, ಕೂಲಿಕಾರರಾಗಲಿ, ವಿದ್ಯಾರ್ಥಿಗಳಾಗಲಿ ಅಥವಾ ವೃತ್ತಿಪರರಾಗಲಿ ಎಲ್ಲರೂ ಇದರ ಲಾಭ ಪಡೆಯುತ್ತಿದ್ದಾರೆ. ಪರಿಣಾಮವಾಗಿ, ಯುವಕರು ತಮ್ಮ ಮನೆಯ ಸಮೀಪದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಹೊಸ ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಸ್ನೇಹಿತರೇ

ಉತ್ಪಾದನಾ ಕ್ಷೇತ್ರವು ದೇಶದ ಯುವಕರಿಗೆ ಉದ್ಯೋಗ ಒದಗಿಸುವ ಮತ್ತೊಂದು ಪ್ರಮುಖ ಮಾಧ್ಯಮವಾಗುತ್ತಿದೆ. ಮೇಕ್ ಇನ್ ಇಂಡಿಯಾ ಅಭಿಯಾನವು ಅಂತಹ ಇನ್ನೊಂದು ಮಾಧ್ಯಮವಾಗಿದೆ. ದೇಶದಲ್ಲಿ ಉತ್ಪಾದನೆಯನ್ನು ಉತ್ತೇಜಿಸಲು ನಾವು PLI ಯೋಜನೆಯನ್ನು ಪ್ರಾರಂಭಿಸಿದ್ದೇವೆ. ಅಂದರೆ ಹೆಚ್ಚು ಉತ್ಪಾದನೆ ಮಾಡುತ್ತಿರುವವರು ಭಾರತ ಸರ್ಕಾರದಿಂದ ವಿಶೇಷ ನೆರವು ಪಡೆಯುತ್ತಿದ್ದಾರೆ. ಇದರ ಅಡಿಯಲ್ಲಿ, ತೆಲಂಗಾಣದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ವರ್ಷ ರಕ್ಷಣಾ ರಫ್ತಿನಲ್ಲಿ ಭಾರತ ಹೊಸ ದಾಖಲೆ ಸೃಷ್ಟಿಸಿರುವ ಸಂಗತಿ ನಿಮಗೆ ತಿಳಿದಿದೆ. ಸುಮಾರು 9 ವರ್ಷಗಳ ಹಿಂದೆ ಭಾರತದ ರಕ್ಷಣಾ ರಫ್ತು 1000 ಕೋಟಿ ರೂ.ಗಿಂತ ಕಡಿಮೆ ಇತ್ತು. ಇಂದು 16 ಸಾವಿರ ಕೋಟಿ ದಾಟಿದೆ. ಹೈದರಾಬಾದ್ ಮೂಲದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ಕೂಡ ಇದರ ಲಾಭ ಪಡೆಯುತ್ತಿದೆ.

ಸ್ನೇಹಿತರೇ

ಇಂದು ಭಾರತೀಯ ರೈಲ್ವೆಯು ಉತ್ಪಾದನೆಯ ವಿಷಯದಲ್ಲಿ ಹೊಸ ದಾಖಲೆಗಳನ್ನು ಮತ್ತು ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲುಗಳ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಭಾರತೀಯ ರೈಲ್ವೇ ಸಾವಿರಾರು ಆಧುನಿಕ ಕೋಚ್‌ಗಳು ಮತ್ತು ಇಂಜಿನ್‌ಗಳನ್ನು ತಯಾರಿಸಿದೆ. ಭಾರತೀಯ ರೈಲ್ವೇಯ ಈ ಪರಿಷ್ಕರಣೆಯೊಂದಿಗೆ, ಈಗ ಮೇಕ್ ಇನ್ ಇಂಡಿಯಾದ ಹೊಸ ಉತ್ಸಾಹಕ್ಕೆ ಕಾಜಿಪೇಟ್ ಕೂಡ ಸೇರ್ಪಡೆಯಾಗಿದೆ. ಈಗ ಪ್ರತಿ ತಿಂಗಳು ಹತ್ತಾರು ವ್ಯಾಗನ್‌ಗಳನ್ನು ಇಲ್ಲಿ ತಯಾರಿಸಲಾಗುವುದು. ಪರಿಣಾಮವಾಗಿ, ಈ ಪ್ರದೇಶದಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಮತ್ತು ಇಲ್ಲಿನ ಪ್ರತಿಯೊಂದು ಕುಟುಂಬವು ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನ ಪಡೆಯುತ್ತದೆ. ಇದೇ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್'. ಈ ಅಭಿವೃದ್ಧಿಯ ಮಂತ್ರದ ಮೇಲೆ ನಾವು ತೆಲಂಗಾಣವನ್ನು ಮುನ್ನಡೆಸಬೇಕಾಗಿದೆ. ಮತ್ತೊಮ್ಮೆ, ಈ ಪ್ರಗತಿಪರ ಯೋಜನೆಗಳಿಗಾಗಿ, ಕಾರ್ಯಕ್ರಮಗಳಿಗಾಗಿ ಮತ್ತು ಅಭಿವೃದ್ಧಿಯ ಹೊಸ ಪರ್ವಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. 
ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು! 
ಧನ್ಯವಾದ !

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।