"ನೀವು ಈ 'ಅಮೃತ ಕಾಲ'ದ 'ಅಮೃತ ರಕ್ಷಕರು'
, "ಕಳೆದ ಕೆಲವು ವರ್ಷಗಳಲ್ಲಿ, ನಾವು ಅರೆಸೈನಿಕ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅನೇಕ ಮಹತ್ವದ ಬದಲಾವಣೆಗಳನ್ನು ಮಾಡಿದ್ದೇವೆ"
"ಕಾನೂನಿನ ಸುವ್ಯವಸ್ಥೆಯ ಪಾಲನೆಯಿಂದ ನೆಲೆಸುವ ಸುರಕ್ಷಿತ ವಾತಾವರಣವು ಅಭಿವೃದ್ಧಿಯ ವೇಗವನ್ನು ವೇಗಗೊಳಿಸುತ್ತದೆ"
"ಕಳೆದ 9 ವರ್ಷಗಳಲ್ಲಿ ಬದಲಾವಣೆಯ ಹೊಸ ಹಂತವನ್ನು ಕಾಣಬಹುದು"
"9 ವರ್ಷಗಳ ಹಿಂದೆ ಈ ದಿನದಂದು ಪ್ರಾರಂಭಿಸಲಾದ ʻಜನ್ ಧನ್ ಯೋಜನೆʼ ಹಳ್ಳಿಗಳು ಮತ್ತು ಬಡವರ ಆರ್ಥಿಕ ಸಬಲೀಕರಣದಲ್ಲಿ ದೊಡ್ಡ ಪಾತ್ರ ವಹಿಸಿದೆ"
"ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯನ್ನು ವೇಗಗೊಳಿಸುವಲ್ಲಿ ʻಜನ್ ಧನ್ ಯೋಜನೆʼ ವಹಿಸಿರುವ ಪಾತ್ರವು ನಿಜವಾಗಿಯೂ ಒಂದು ಅಧ್ಯಯನದ ವಿಷಯವಾಗಿದೆ”
"ಸರ್ಕಾರ ಮತ್ತು ಆಡಳಿತದಲ್ಲಿ ಬದಲಾವಣೆ ತರುವ ಧ್ಯೇಯದಲ್ಲಿ ನೀವೆಲ್ಲರೂ ಯುವಕರು ನನ್ನ ದೊಡ್ಡ ಶಕ್ತಿ"

ನಮಸ್ಕಾರ!
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.

ನನ್ನ ಕುಟುಂಬ ಸದಸ್ಯರೆ,
ದೇಶವೇ ಹೆಮ್ಮೆ ಮತ್ತು ಆತ್ಮವಿಶ್ವಾಸ ಬೀಗುತ್ತಿರುವ ವಾತಾವರಣದಲ್ಲಿ ಈ ಬಾರಿ ರೋಜ್‌ಗಾರ್ ಮೇಳ ಆಯೋಜಿಸಲಾಗಿದೆ. ನಮ್ಮ ಚಂದ್ರಯಾನ ಮತ್ತು ಅದರ ರೋವರ್ ಪ್ರಗ್ಯಾನ್, ಇತಿಹಾಸ ಸೃಷ್ಟಿಸುವ ಚಂದ್ರನಿಂದ ಚಿತ್ರಗಳನ್ನು ನಿರಂತರವಾಗಿ ಕಳುಹಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ, ನಿಮ್ಮ ಜೀವನದ ಪ್ರಮುಖ ಪ್ರಯಾಣವನ್ನು ನೀವು ಪ್ರಾರಂಭಿಸಲಿದ್ದೀರಿ. ಎಲ್ಲಾ ಯಶಸ್ವಿ ಅಭ್ಯರ್ಥಿಗಳಿಗೆ ಮತ್ತು ಅವರ ಕುಟುಂಬಗಳಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

 

ಸ್ನೇಹಿತರೆ,
ಸೇನೆಗೆ ಸೇರುವುದು, ರಕ್ಷಣಾ ಪಡೆ ಸೇರುವುದು, ಪೊಲೀಸ್ ಸೇವೆಗೆ ಸೇರುವುದು ಹೀಗೆ ಪ್ರತಿಯೊಬ್ಬ ಯುವಕನೂ ದೇಶ ರಕ್ಷಣೆಯ ಕಾವಲುಗಾರನಾಗುವ ಕನಸು ಕಾಣುತ್ತಾನೆ. ಇದರಿಂದ ನೀವು ದೊಡ್ಡ ಜವಾಬ್ದಾರಿ ಹೊಂದಿದ್ದೀರಿ. ಅದಕ್ಕಾಗಿಯೇ ನಮ್ಮ ಸರ್ಕಾರವು ನಿಮ್ಮ ಅಗತ್ಯಗಳ ಬಗ್ಗೆಯೂ ಬಹಳ ಗಂಭೀರವಾಗಿದೆ.
ಕಳೆದ ಕೆಲವು ವರ್ಷಗಳಲ್ಲಿ, ಅರೆಸೇನಾ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಾವು ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡಿದ್ದೇವೆ. ಅರ್ಜಿಯಿಂದ ಹಿಡಿದು ಆಯ್ಕೆ ಪ್ರಕ್ರಿಯೆವರೆಗೆ ಕಾರ್ಯ ಚುರುಕುಗೊಂಡಿದೆ. ಅರೆಸೇನಾ ಪಡೆಗಳ ನೇಮಕಾತಿ ಪರೀಕ್ಷೆಯನ್ನು ಈಗ 13 ಸ್ಥಳೀಯ ಭಾಷೆಗಳಲ್ಲಿಯೂ ನಡೆಸಲಾಗುತ್ತಿದೆ. ಈ ಹಿಂದೆ ಇಂತಹ ಪರೀಕ್ಷೆಗಳಲ್ಲಿ ಹಿಂದಿ ಅಥವಾ ಇಂಗ್ಲಿಷ್ ಆಯ್ಕೆ ಮಾಡಿಕೊಳ್ಳುವ ಅವಕಾಶವಿತ್ತು, ಆದರೆ ಈಗ ಮಾತೃಭಾಷೆಗೆ ಪ್ರಾಮುಖ್ಯತೆ ನೀಡಲಾಗಿದೆ. ಈ ಬದಲಾವಣೆಯು ಲಕ್ಷಾಂತರ ಯುವಕರಿಗೆ ಉದ್ಯೋಗ ಪಡೆಯಲು ಅವಕಾಶಗಳನ್ನು ಒದಗಿಸಿದೆ.
ಕಳೆದ ವರ್ಷ ಛತ್ತೀಸ್‌ಗಢದ ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ನೂರಾರು ಬುಡಕಟ್ಟು ಸಮುದಾಯದ ಯುವಕರನ್ನು ನೇಮಿಸಲಾಗಿತ್ತು. ಅವರು ಅಭಿವೃದ್ಧಿಯ ಮುಖ್ಯವಾಹಿನಿಯೊಂದಿಗೆ ಸಂಪರ್ಕದಲ್ಲಿರಲು ನಿಯಮಗಳನ್ನು ಸರಾಗಗೊಳಿಸುವ ಮೂಲಕ ರಕ್ಷಣಾ ಪಡೆಗಳಲ್ಲಿ ನೇಮಕಗೊಳ್ಳಲು ಅವಕಾಶ ನೀಡಲಾಯಿತು. ಅದೇ ರೀತಿ, ಗಡಿ ಜಿಲ್ಲೆಗಳು ಮತ್ತು ನಕ್ಸಲ್ ಪೀಡಿತ ಜಿಲ್ಲೆಗಳ ಯುವಕರಿಗೆ ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಕೋಟಾ ಹೆಚ್ಚಿಸಲಾಗಿದೆ. ಸರ್ಕಾರದ ಪ್ರಯತ್ನದಿಂದಾಗಿ ಅರೆಸೇನಾ ಪಡೆಗಳು ನಿರಂತರವಾಗಿ ಬಲಗೊಳ್ಳುತ್ತಿವೆ.

ಸ್ನೇಹಿತರೆ,
ದೇಶದ ಅಭಿವೃದ್ಧಿ ಖಾತ್ರಿಪಡಿಸುವಲ್ಲಿ ನೀವು ಮಹತ್ವದ ಪಾತ್ರ ವಹಿಸುತ್ತೀರಿ. ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ವಾತಾವರಣವು ಅಭಿವೃದ್ಧಿಯ ವೇಗ ಹೆಚ್ಚಿಸುತ್ತದೆ. ನೀವು ಉತ್ತರ ಪ್ರದೇಶದ ಉದಾಹರಣೆ ತೆಗೆದುಕೊಳ್ಳಬಹುದು. ಒಂದು ಕಾಲದಲ್ಲಿ ಉತ್ತರ ಪ್ರದೇಶ ಅಭಿವೃದ್ಧಿಯ ವಿಷಯದಲ್ಲಿ ತೀರಾ ಹಿಂದುಳಿದಿತ್ತು, ಅಪರಾಧದ ವಿಷಯದಲ್ಲಿ ಬಹಳ ಮುಂದಿತ್ತು. ಆದರೆ ಈಗ ಕಾನೂನಿನ ನಿಯಮ ಸ್ಥಾಪಿಸುವುದರೊಂದಿಗೆ ಉತ್ತರ ಪ್ರದೇಶ  ಅಭಿವೃದ್ಧಿಯ ಹೊಸ ಎತ್ತರ ಮುಟ್ಟುತ್ತಿದೆ. ಒಂದು ಕಾಲದಲ್ಲಿ ಗೂಂಡಾಗಳು ಮತ್ತು ಮಾಫಿಯಾಗಳ ಭೀತಿಯಲ್ಲಿ ಬದುಕುತ್ತಿದ್ದ ಉತ್ತರ ಪ್ರದೇಶದಲ್ಲಿ ಭಯಮುಕ್ತ ಸಮಾಜ ನಿರ್ಮಾಣವಾಗುತ್ತಿದೆ. ಇಂತಹ ಕಾನೂನು ಸುವ್ಯವಸ್ಥೆ ಜನರಲ್ಲಿ ಆತ್ಮವಿಶ್ವಾಸ ತುಂಬುತ್ತದೆ. ಅಪರಾಧದ ಪ್ರಮಾಣ ಕಡಿಮೆಯಾದಾಗ, ಯುಪಿಯಲ್ಲಿ ಹೂಡಿಕೆಯೂ ಹೆಚ್ಚಾಗತೊಡಗಿತು, ಹೂಡಿಕೆ ಹರಿದುಬರಲು ಪ್ರಾರಂಭಿಸಿತು. ಇದಕ್ಕೆ ವಿರುದ್ಧವಾಗಿ, ಅಪರಾಧದ ಪ್ರಮಾಣವು ಉತ್ತುಂಗದಲ್ಲಿರುವ ರಾಜ್ಯಗಳಲ್ಲಿ ಹೂಡಿಕೆ ಕಡಿಮೆಯಾಗುವುದನ್ನು ನಾವು ನೋಡುತ್ತೇವೆ ಮತ್ತು ಜೀವನೋಪಾಯಕ್ಕಾಗಿ ಎಲ್ಲಾ ಕೆಲಸಗಳು ಸ್ಥಗಿತಗೊಳ್ಳುತ್ತವೆ.

ನನ್ನ ಕುಟುಂಬ ಸದಸ್ಯರೆ,
ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗುತ್ತಿರುವುದನ್ನು ನೀವು ನಿರಂತರವಾಗಿ ಓದುತ್ತಿದ್ದೀರಿ. ಈ ದಶಕದಲ್ಲಿ ಭಾರತವು ವಿಶ್ವದ ಅಗ್ರ-3 ಆರ್ಥಿಕತೆಗಳಲ್ಲಿ ಸೇರಲಿದೆ. ನಾನು ನಿಮಗೆ ಈ ಗ್ಯಾರಂಟಿ ನೀಡಿದಾಗ ಅಥವಾ ಮೋದಿ ತನ್ನ ದೇಶವಾಸಿಗಳಿಗೆ ಮತ್ತು ಕುಟುಂಬ ಸದಸ್ಯರಿಗೆ ಈ ಭರವಸೆ ನೀಡಿದಾಗ, ಅದನ್ನು ದೊಡ್ಡ ಜವಾಬ್ದಾರಿಯೊಂದಿಗೆ ಮಾಡಲಾಗುತ್ತದೆ. ಆದರೆ ನೀವು ಇದನ್ನು ಓದಿದಾಗ, ನಿಮ್ಮ ಮನಸ್ಸಿನಲ್ಲಿ ಒಂದು ಪ್ರಶ್ನೆ ಬರುತ್ತದೆ. ಇದು ದೇಶದ ಸಾಮಾನ್ಯ ನಾಗರಿಕರ ಮೇಲೆ ಏನು ಪರಿಣಾಮ ಬೀರುತ್ತದೆ? ಮತ್ತು ಈ ಪ್ರಶ್ನೆ ತುಂಬಾ ಸ್ವಾಭಾವಿಕವಾಗಿದೆ.

ಸ್ನೇಹಿತರೆ,
ಯಾವುದೇ ಆರ್ಥಿಕತೆ ಮುಂದುವರಿಯಬೇಕಾದರೆ ದೇಶದ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿ ಹೊಂದುವುದು ಅವಶ್ಯಕ. ಆಹಾರ ಕ್ಷೇತ್ರದಿಂದ ಫಾರ್ಮಾದವರೆಗೆ, ಬಾಹ್ಯಾಕಾಶದಿಂದ ಸ್ಟಾರ್ಟಪ್‌ಗಳವರೆಗೆ, ಪ್ರತಿಯೊಂದು ಕ್ಷೇತ್ರವೂ ಮುಂದೆ ಸಾಗಿದಾಗ, ಆರ್ಥಿಕತೆಯೂ ಮುಂದುವರಿಯುತ್ತದೆ. ಫಾರ್ಮಾ ಉದ್ಯಮದ ಉದಾಹರಣೆ ತೆಗೆದುಕೊಳ್ಳೋಣ. ಸಾಂಕ್ರಾಮಿಕ ಕೋವಿಡ್ ಸಮಯದಲ್ಲಿ ಭಾರತದ ಫಾರ್ಮಾ ಉದ್ಯಮವನ್ನು ಬಹಳವಾಗಿ ಪ್ರಶಂಸಿಸಲಾಯಿತು. ಇಂದು ಈ ಉದ್ಯಮವು 4 ಲಕ್ಷ ಕೋಟಿ ರೂ. ಮತ್ತು 2030ರ ವೇಳೆಗೆ ಭಾರತದ ಫಾರ್ಮಾ ಉದ್ಯಮವು ಸುಮಾರು 10 ಲಕ್ಷ ಕೋಟಿ ರೂ.ಗೆ ಏರಿಕೆ ಕಾಣಲಿದೆ. ಈಗ ಈ ಫಾರ್ಮಾ ಉದ್ಯಮವು ಮುಂದೆ ಸಾಗಿದಾಗ, ಇದರ ಅರ್ಥವೇನು? ಇದರರ್ಥ ಈ ದಶಕದಲ್ಲಿ ಫಾರ್ಮಾ ಉದ್ಯಮಕ್ಕೆ ಇಂದಿನ ಯುವಕರ ಸಂಖ್ಯೆಗಿಂತ ಹಲವು ಪಟ್ಟು ಹೆಚ್ಚಿನ ಸಂಖ್ಯೆಯ ಅಗತ್ಯವಿದೆ. ಅನೇಕ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

 

ಸ್ನೇಹಿತರೆ,
ಇಂದು ದೇಶದಲ್ಲಿ ಆಟೋಮೊಬೈಲ್ ಮತ್ತು ಆಟೋ ಘಟಕಗಳ ಉದ್ಯಮಗಳು ಕೂಡ ತ್ವರಿತ ಬೆಳವಣಿಗೆಗೆ ಸಾಕ್ಷಿಯಾಗುತ್ತಿವೆ. ಪ್ರಸ್ತುತ, ಈ ಎರಡೂ ಕೈಗಾರಿಕೆಗಳು 12 ಲಕ್ಷ ಕೋಟಿ ರೂ. ವಹಿವಾಟು ನಡೆಸುತ್ತಿವೆ. ಮುಂಬರುವ ವರ್ಷಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಬೆಳವಣಿಗೆ ನಿಭಾಯಿಸಲು, ಆಟೋಮೊಬೈಲ್ ಉದ್ಯಮಕ್ಕೆ ಹೆಚ್ಚಿನ ಸಂಖ್ಯೆಯ ಹೊಸ ಯುವಕರ ಅಗತ್ಯವಿದೆ. ಹೊಸ ಉದ್ಯೋಗಿಗಳು ಬೇಕಾಗುತ್ತಾರೆ ಮತ್ತು ಅಸಂಖ್ಯಾತ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಆಹಾರ ಸಂಸ್ಕರಣಾ ಉದ್ಯಮದ ಮಹತ್ವದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿರುವುದನ್ನು ನೀವು ನೋಡಿರಬೇಕು. ಭಾರತದ ಆಹಾರ ಸಂಸ್ಕರಣಾ ಮಾರುಕಟ್ಟೆ ಕಳೆದ ವರ್ಷ ಸುಮಾರು 26 ಲಕ್ಷ ಕೋಟಿ ರೂ.ಗೆ ಬೆಳವಣಿಗೆ ಕಂಡಿತ್ತು. ಈಗ ಮುಂದಿನ 3-3.5 ವರ್ಷಗಳಲ್ಲಿ ಈ ವಲಯವು ಸುಮಾರು 35 ಲಕ್ಷ ಕೋಟಿ ರೂ. ಅಂದರೆ, ಅದು ಹೆಚ್ಚು ವಿಸ್ತಾರವಾದಷ್ಟೂ ಹೆಚ್ಚು ಯುವಕರ ಅಗತ್ಯವಿರುತ್ತದೆ, ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ.

ಸ್ನೇಹಿತರೆ,
ಇಂದು ಭಾರತದಲ್ಲಿ ಮೂಲಸೌಕರ್ಯಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ. ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೂಲಸೌಕರ್ಯಕ್ಕೆ 30 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ. ಇದು ದೇಶಾದ್ಯಂತ ಸಂಪರ್ಕ ವಿಸ್ತರಿಸುತ್ತಿದೆ.ಇದು ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಲ್ಲಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಿದೆ. ಹೊಸ ಸಾಧ್ಯತೆಗಳು ಅಂದರೆ ಹೆಚ್ಚು ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ ಎಂದರ್ಥ.

ಸ್ನೇಹಿತರೆ,
2030ರ ವೇಳೆಗೆ, ನಮ್ಮ ಆರ್ಥಿಕತೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಕೊಡುಗೆಯು 20 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ. ಈ ಉದ್ಯಮದಿಂದ 13 ರಿಂದ 14 ಕೋಟಿ ಜನರು ಹೊಸ ಉದ್ಯೋಗಗಳನ್ನು ಪಡೆಯಲಿದ್ದಾರೆ ಎಂದು ನಂಬಲಾಗಿದೆ. ಈ ಎಲ್ಲಾ ಉದಾಹರಣೆಗಳಿಂದ, ಭಾರತದ ಅಭಿವೃದ್ಧಿ ಕೇವಲ ಸಂಖ್ಯೆಗಳ ಓಟವಲ್ಲ ಎಂದು ನೀವು ಅರ್ಥ ಮಾಡಿಕೊಳ್ಳಬಹುದು. ಈ ಬೆಳವಣಿಗೆಯು ಭಾರತದ ಪ್ರತಿಯೊಬ್ಬ ನಾಗರಿಕನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದರರ್ಥ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಇದು ಆದಾಯ ಮತ್ತು ಜೀವನದ ಗುಣಮಟ್ಟದಲ್ಲಿ ಹೆಚ್ಚಳ ಖಾತ್ರಿಪಡಿಸುತ್ತದೆ. ರೈತರ ಕುಟುಂಬಗಳನ್ನು ನಾವು ಸಹ ನೋಡುತ್ತೇವೆ, ಬಂಪರ್ ಬೆಳೆ ಬಂದರೆ ಮತ್ತು ಅವರ ಬೆಳೆಗಳಿಗೆ ಉತ್ತಮ ಬೆಲೆ ಸಿಕ್ಕರೆ, ಆಗ ಮನೆಯಲ್ಲಿ ಸಂತೋಷ ತುಂಬಿರುತ್ತದೆ. ಅವರು ಹೊಸ ಬಟ್ಟೆಗಳನ್ನು ಖರೀದಿಸುತ್ತಾರೆ; ಅವರು ಹೊರಗೆ ಹೋಗಿ ಹೊಸ ವಸ್ತುಗಳನ್ನು ಖರೀದಿಸಲು ಬಯಸುತ್ತಾರೆ. ಮನೆಯ ಆದಾಯ ಹೆಚ್ಚಾದರೆ, ಕುಟುಂಬದ ಸದಸ್ಯರ ಜೀವನದಲ್ಲೂ ಸಕಾರಾತ್ಮಕ ಬದಲಾವಣೆ ಕಂಡುಬರುತ್ತದೆ. ಸಂಸಾರದಲ್ಲೂ ಮತ್ತು ದೇಶದಲ್ಲೂ ಅಷ್ಟೇ. ದೇಶದ ಆದಾಯ ಹೆಚ್ಚಾದಂತೆ ದೇಶದ ಶಕ್ತಿ ಹೆಚ್ಚುತ್ತದೆ, ಸಂಪತ್ತು ಹೆಚ್ಚುತ್ತದೆ. ದೇಶದ ಪ್ರಜೆಗಳು ಕೂಡ ಸಮೃದ್ಧರಾಗಲು ಪ್ರಾರಂಭಿಸುತ್ತಾರೆ.

ಸ್ನೇಹಿತರೆ,
ಕಳೆದ 9 ವರ್ಷಗಳಲ್ಲಿ ನಮ್ಮ ಪ್ರಯತ್ನದಿಂದ, ಬದಲಾವಣೆಯ ಮತ್ತೊಂದು ಹೊಸ ಹಂತ ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಕಳೆದ ವರ್ಷ ಭಾರತವು ದಾಖಲೆಯ ರಫ್ತು ವಹಿವಾಟು ನಡೆಸಿದೆ. ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ವಸ್ತುಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದಕ್ಕೆ ಇದು ಸೂಚನೆಯಾಗಿದೆ. ಇದರರ್ಥ ನಮ್ಮ ಉತ್ಪಾದನೆಯು ಹೆಚ್ಚಾಗಿದೆ, ಅದೇ ಸಮಯದಲ್ಲಿ ಉತ್ಪಾದನಾ ಪ್ರಕ್ರಿಯೆಯಲ್ಲಿ ಹೊಸ ಯುವಕರ ಅಗತ್ಯತೆಯಿಂದಾಗಿ ಉದ್ಯೋಗಗಳು ಸಹ ಹೆಚ್ಚಿವೆ. ಸಹಜವಾಗಿ, ಕುಟುಂಬದ ಆದಾಯವೂ ಹೆಚ್ಚುತ್ತಿದೆ. ಇಂದು ಭಾರತವು ವಿಶ್ವದ 2ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರವಾಗಿದೆ. ದೇಶದಲ್ಲಿ ಮೊಬೈಲ್ ಫೋನ್‌ಗಳ ಬೇಡಿಕೆಯೂ ನಿರಂತರವಾಗಿ ಹೆಚ್ಚುತ್ತಿದೆ. ಸರ್ಕಾರದ ಪ್ರಯತ್ನಗಳು ಮೊಬೈಲ್ ಉತ್ಪಾದನೆಯನ್ನು ಬಹುಪಟ್ಟು ಹೆಚ್ಚಿಸಿವೆ. ಈಗ ದೇಶವು ಮೊಬೈಲ್‌ಗಳನ್ನು ಮೀರಿ ಚಲಿಸುತ್ತಿದೆ ಮತ್ತು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳತ್ತಲೂ ಗಮನ ಹರಿಸುತ್ತಿದೆ.
ಐಟಿ ಹಾರ್ಡ್‌ವೇರ್ ಉತ್ಪಾದನಾ ಕ್ಷೇತ್ರದಲ್ಲಿ, ಮೊಬೈಲ್ ಕ್ಷೇತ್ರದಲ್ಲಿ ನಾವು ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಹೊರಟಿದ್ದೇವೆ. ಭಾರತದಲ್ಲಿ ತಯಾರಾಗುವ ಅತ್ಯುತ್ತಮ ಗುಣಮಟ್ಟದ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳು ಮೊಬೈಲ್‌ಗಳಂತೆಯೇ ವಿಶ್ವಾದ್ಯಂತ ನಮ್ಮ ವೈಭವವನ್ನು ಹೆಚ್ಚಿಸುವ ದಿನ ದೂರವಿಲ್ಲ. ವೋಕಲ್ ಫಾರ್ ಲೋಕಲ್ ಎಂಬ ಮಂತ್ರ ಅನುಸರಿಸಿ, ಭಾರತ ಸರ್ಕಾರವು ಮೇಡ್ ಇನ್ ಇಂಡಿಯಾ ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳಂತಹ ಹಲವಾರು ಉತ್ಪನ್ನಗಳನ್ನು ಖರೀದಿಸಲು ಒತ್ತು ನೀಡುತ್ತಿದೆ. ಇದರಿಂದ ಉತ್ಪಾದನೆ ಹೆಚ್ಚಿದ್ದು, ಯುವಕರಿಗೆ ಹೊಸ ಉದ್ಯೋಗಾವಕಾಶಗಳೂ ಸೃಷ್ಟಿಯಾಗುತ್ತಿವೆ. ಅದಕ್ಕಾಗಿಯೇ ನಾನು ಮತ್ತೊಮ್ಮೆ ಪುನರಾವರ್ತಿಸುತ್ತೇನೆ, ಆರ್ಥಿಕತೆಯ ಈ ಸಂಪೂರ್ಣ ಚಕ್ರ ನಿರ್ವಹಿಸುವ ಮತ್ತು ರಕ್ಷಿಸುವ ದೊಡ್ಡ ಜವಾಬ್ದಾರಿ ನಿಮ್ಮ ಮೇಲೆ ಇದೆ. ನೀವೆಲ್ಲರೂ ಭದ್ರತಾ ಸಿಬ್ಬಂದಿಯಾಗಿ ಉದ್ಯೋಗ ಪ್ರಾರಂಭಿಸುತ್ತಿರುವಾಗ, ನಿಮ್ಮಲ್ಲಿರುವ ಜವಾಬ್ದಾರಿಯನ್ನು ನೀವು ಊಹಿಸಬಹುದು.

ನನ್ನ ಕುಟುಂಬದ ಸದಸ್ಯರೆ,
ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯನ್ನು 9 ವರ್ಷಗಳ ಹಿಂದೆ ಇದೇ ದಿನದಂದು ಪ್ರಾರಂಭಿಸಲಾಯಿತು. ಈ ಯೋಜನೆಯು ಹಳ್ಳಿಗಳು ಮತ್ತು ಬಡವರ ಆರ್ಥಿಕ ಸಬಲೀಕರಣದಲ್ಲಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. 9 ವರ್ಷಗಳ ಹಿಂದೆ, ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬ್ಯಾಂಕ್ ಖಾತೆ ಹೊಂದಿರಲಿಲ್ಲ. ಆದರೆ ಜನ್ ಧನ್ ಯೋಜನೆಯಿಂದಾಗಿ ಕಳೆದ 9 ವರ್ಷಗಳಲ್ಲಿ 50 ಕೋಟಿಗೂ ಹೆಚ್ಚು ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಈ ಯೋಜನೆಯು ಬಡವರು ಮತ್ತು ಗ್ರಾಮೀಣರಿಗೆ ನೇರವಾಗಿ ಸರ್ಕಾರದ ಸವಲತ್ತುಗಳನ್ನು ಒದಗಿಸಲು ಸಹಾಯ ಮಾಡಿದೆ, ಆದರೆ ಮಹಿಳೆಯರು, ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ಉದ್ಯೋಗ ಮತ್ತು ಸ್ವಯಂಉದ್ಯೋಗದ ವಿಷಯದಲ್ಲಿ ಸಾಕಷ್ಟು ಶಕ್ತಿ ನೀಡಿದೆ.
ಪ್ರತಿ ಹಳ್ಳಿಯಲ್ಲಿ ಬ್ಯಾಂಕ್ ಖಾತೆ ತೆರೆದಾಗ ಲಕ್ಷಾಂತರ ಯುವಕರು ಬ್ಯಾಂಕಿಂಗ್ ಪ್ರತಿನಿಧಿಗಳಾಗಿ ಮತ್ತು ಬ್ಯಾಂಕ್ ಮಿತ್ರರಾಗಿ ಉದ್ಯೋಗಾವಕಾಶಗಳನ್ನು ಪಡೆದರು. ನಮ್ಮ ಸಾವಿರಾರು ಗಂಡು, ಹೆಣ್ಣು ಮಕ್ಕಳಿಗೆ ಬ್ಯಾಂಕ್ ಮಿತ್ರ, ಬ್ಯಾಂಕ್ ಸಖಿ ರೂಪದಲ್ಲಿ ಉದ್ಯೋಗ ಸಿಕ್ಕಿದೆ. ಇಂದು 21 ಲಕ್ಷಕ್ಕೂ ಹೆಚ್ಚು ಯುವ ಸ್ನೇಹಿತರು ಪ್ರತಿ ಹಳ್ಳಿಯಲ್ಲಿ ಬ್ಯಾಂಕಿಂಗ್ ಪ್ರತಿನಿಧಿಗಳಾಗಿ ಅಥವಾ ಬ್ಯಾಂಕ್ ಮಿತ್ರ ಅಥವಾ ಬ್ಯಾಂಕ್ ಸಖಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಡಿಜಿಟಲ್ ಸಖಿಯರು, ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಬ್ಯಾಂಕಿಂಗ್ ಸೇವೆಗಳೊಂದಿಗೆ ಸಂಪರ್ಕಿಸುತ್ತಿದ್ದಾರೆ.

ಅದೇ ರೀತಿ, ಜನ್ ಧನ್ ಯೋಜನೆಯು ಉದ್ಯೋಗ ಮತ್ತು ಸ್ವಯಂಉದ್ಯೋಗಕ್ಕಾಗಿ ಮತ್ತೊಂದು ಬೃಹತ್ ಅಭಿಯಾನಕ್ಕೆ ಚಾಲನೆ ನೀಡಿತು, ಅದು ಮುದ್ರಾ ಯೋಜನೆಯಾಗಿದೆ. ಇದು ಮಹಿಳೆಯರು ಸೇರಿದಂತೆ ಆ ವಿಭಾಗಗಳಿಗೆ ಸಣ್ಣ ವ್ಯಾಪಾರಗಳಿಗೆ ಸಾಲ ಪಡೆಯಲು ಸುಲಭವಾಯಿತು, ಅವರು ಹಿಂದೆಂದೂ ಯೋಚಿಸಲಿಲ್ಲ. ಈ ಜನರಿಗೆ ಬ್ಯಾಂಕ್‌ಗಳಿಗೆ ನೀಡಲು ಯಾವುದೇ ಗ್ಯಾರಂಟಿ ಇರಲಿಲ್ಲ. ಇಂತಹ ಸನ್ನಿವೇಶದಲ್ಲಿ ಸರ್ಕಾರವೇ ಅವರ ಪರವಾಗಿ ಗ್ಯಾರಂಟಿ ನೀಡಿತು. ಮುದ್ರಾ ಯೋಜನೆಯಡಿ ಈವರೆಗೆ 24 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ನೀಡಲಾಗಿದೆ. ಫಲಾನುಭವಿಗಳಲ್ಲಿ ಮೊದಲ ಬಾರಿಗೆ ತಮ್ಮ ವ್ಯವಹಾರ ಪ್ರಾರಂಭಿಸಿದ ಸುಮಾರು 8 ಕೋಟಿ ಜನರಿದ್ದಾರೆ. ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆಯಡಿ, ಸುಮಾರು 43 ಲಕ್ಷ ಬೀದಿ ವ್ಯಾಪಾರಿಗಳಿಗೆ ಮೊದಲ ಬಾರಿಗೆ ಬ್ಯಾಂಕ್‌ಗಳಿಂದ ಯಾವುದೇ ಖಾತರಿಯಿಲ್ಲದೆ ಸಾಲ ಮಂಜೂರು ಮಾಡಲಾಗಿದೆ. ಮುದ್ರಾ ಮತ್ತು ಸ್ವಾನಿಧಿಯ ಫಲಾನುಭವಿಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು, ದಲಿತರು, ಹಿಂದುಳಿದವರು ಮತ್ತು ನನ್ನ ಬುಡಕಟ್ಟು ಯುವಕರು ಇದ್ದಾರೆ.
ಗ್ರಾಮಗಳಲ್ಲಿ ಮಹಿಳಾ ಸ್ವಸಹಾಯ ಗುಂಪುಗಳನ್ನು ಬಲಪಡಿಸುವಲ್ಲಿ ಜನ್ ಧನ್ ಖಾತೆಗಳು ಸಾಕಷ್ಟು ಸಹಾಯ ಮಾಡಿದೆ. ಈಗಿನ ಕಾಲದಲ್ಲಿ ಹಳ್ಳಿಗೆ ಹೋದಾಗ, ಮಹಿಳಾ ಸ್ವಸಹಾಯ ಸಂಘದ ಸಹೋದರಿಯರನ್ನು ಭೇಟಿಯಾದಾಗ, ‘ನಾನೊಬ್ಬ ಲಕ್ಷಪತಿ ದೀದಿ’ ಎಂದು ಅನೇಕರು ಬರುತ್ತಾರೆ. ಇದರಿಂದ ಎಲ್ಲವೂ ಸಾಧ್ಯವಾಗಿದೆ. ಸರಕಾರ ನೀಡುವ ಆರ್ಥಿಕ ನೆರವನ್ನು ಈಗ ನೇರವಾಗಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಬಂಧಿಸಿದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯನ್ನು ವೇಗಗೊಳಿಸುವಲ್ಲಿ ಜನ್ ಧನ್ ಯೋಜನೆಯು ವಹಿಸಿದ ಪಾತ್ರವು ನಿಜಕ್ಕೂ ಉನ್ನತ ವಿಶ್ವವಿದ್ಯಾಲಯಗಳಿಗೆ ಸಂಶೋಧನೆಯ ವಿಷಯವಾಗಿದೆ.

ಸ್ನೇಹಿತರೆ,
ಇದುವರೆಗೆ ನಾನು ರೋಜ್‌ಗಾರ್ ಮೇಳದ ವಿವಿಧ ಕಾರ್ಯಕ್ರಮಗಳಲ್ಲಿ ಲಕ್ಷಗಟ್ಟಲೆ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದೇನೆ. ಆ ಯುವಕರಿಗೆ ಸಾರ್ವಜನಿಕ ಸೇವೆ ಅಥವಾ ಇತರ ಕ್ಷೇತ್ರಗಳಲ್ಲಿ ಉದ್ಯೋಗ ಸಿಕ್ಕಿದೆ. ನೀವೆಲ್ಲರೂ ಯುವ ಸ್ನೇಹಿತರೇ, ಸರ್ಕಾರ ಮತ್ತು ಆಡಳಿತದಲ್ಲಿ ಬದಲಾವಣೆ ತರುವ ಉದ್ದೇಶದಲ್ಲಿ ನನ್ನ ದೊಡ್ಡ ಶಕ್ತಿಯಾಗಿದ್ದೀರಿ. ನೀವೆಲ್ಲರೂ ಹೊಸ ಪೀಳಿಗೆಗೆ ಸೇರಿದವರು, ಅಲ್ಲಿ ಎಲ್ಲವೂ ಕೇವಲ ಒಂದು ಕ್ಲಿಕ್ ದೂರದಲ್ಲಿದೆ. ಆದ್ದರಿಂದ, ಜನರು ಪ್ರತಿ ಸೇವೆಯ ವೇಗದ ವಿತರಣೆ ಬಯಸುತ್ತಾರೆ ಎಂದು ನೀವು ಅರ್ಥ ಮಾಡಿಕೊಳ್ಳಬಹುದು. ಇಂದಿನ ಪೀಳಿಗೆಯು ಸಮಸ್ಯೆಗಳಿಗೆ ತುಂಡು ತುಂಡಾಗಿ ಪರಿಹಾರ ಬಯಸುವುದಿಲ್ಲ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ಅವರಿಗೆ ಶಾಶ್ವತ ಪರಿಹಾರ ಬೇಕು. ಆದ್ದರಿಂದ, ಸಾರ್ವಜನಿಕ ಸೇವಕರಾಗಿ, ನೀವು ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಅಂತಹ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಮತ್ತು ದೀರ್ಘಾವಧಿಯಲ್ಲಿ ಜನರಿಗೆ ಅನುಕೂಲವಾಗುವ ರೀತಿ ಪ್ರತಿ ಕ್ಷಣವೂ ಸಿದ್ಧರಾಗಿರಬೇಕು.

ನೀವು ಸೇರಿರುವ ನವ ಪೀಳಿಗೆಯು ಯಶಸ್ಸನ್ನು ಸಾಧಿಸಲು ನಿರ್ಧರಿಸುತ್ತದೆ. ಈ ಪೀಳಿಗೆ ಯಾರ ಕೃಪಾಕಟಾಕ್ಷವನ್ನೂ ಬಯಸುವುದಿಲ್ಲ. ಇದು ಕೇವಲ ಒಂದು ವಿಷಯವನ್ನು ಬಯಸುತ್ತದೆ, ಅವರ ಆ ದಾರಿಯಲ್ಲಿ ಯಾರೂ ಅಡ್ಡಿಯಾಗಬಾರದು. ಆದ್ದರಿಂದ, ಸಾರ್ವಜನಿಕ ಸೇವೆಗಾಗಿ ಮತ್ತು ಸಾರ್ವಜನಿಕರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರ ಯಾವಾಗಲೂ ಇರುತ್ತದೆ ಎಂಬುದನ್ನು ಸಾರ್ವಜನಿಕ ಸೇವಕರಾದ ನೀವು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ನೀವು ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಿದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಿಮಗೆ ಸುಲಭವಾಗುತ್ತದೆ.

ಸ್ನೇಹಿತರೆ,
ಅರೆಸೇನಾ ಪಡೆಗಳಲ್ಲಿ ನಿಮ್ಮ ಪ್ರಮುಖ ಜವಾಬ್ದಾರಿಯನ್ನು ಪೂರೈಸುವಾಗ, ನೀವು ನಿರಂತರ ಕಲಿಕೆಯ ಮನೋಭಾವವನ್ನು ಸಹ ಕಾಪಾಡಿಕೊಳ್ಳಬೇಕು. ನಿಮ್ಮಂತಹ ಕರ್ಮಯೋಗಿಗಳಿಗಾಗಿ IGoT ಕರ್ಮಯೋಗಿ ಪೋರ್ಟಲ್‌ನಲ್ಲಿ 600ಕ್ಕೂ ಹೆಚ್ಚು ವಿವಿಧ ಕೋರ್ಸ್‌ಗಳು ಲಭ್ಯವಿದೆ, ಸರ್ಟಿಫಿಕೇಟ್ ಕೋರ್ಸ್‌ಗಳಿವೆ. 20 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅವರು ಆನ್‌ಲೈನ್‌ನಲ್ಲಿ ಓದುತ್ತಿದ್ದಾರೆ ಮತ್ತು ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ.

ನಿಮ್ಮೆಲ್ಲರನ್ನೂ ಮೊದಲ ದಿನದಿಂದ ಈ ಪೋರ್ಟಲ್‌ಗೆ ಸೇರಲು ಮತ್ತು ಮೊದಲ ದಿನದಿಂದ ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ, ಸಾಧ್ಯವಾದಷ್ಟು ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪೂರ್ಣಗೊಳಿಸಬೇಕು, ಸಾಧ್ಯವಾದಷ್ಟು ಪ್ರಮಾಣಪತ್ರಗಳನ್ನು ಪಡೆದುಕೊಳ್ಳಬೇಕು ಎಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ನೀವು ಕಲಿಯುವ, ತಿಳಿದಿರುವ ಮತ್ತು ಅರ್ಥ ಮಾಡಿಕೊಳ್ಳುವ ಯಾವುದೇ ಪರೀಕ್ಷೆಗಳು ಕೇವಲ ಪರೀಕ್ಷೆಗಳಿಗೆ ಸೀಮಿತವಾಗಿಲ್ಲ. ಆದರೆ ನಿಮ್ಮ ಜೀವನದಲ್ಲಿ ನಿಮ್ಮ ಕರ್ತವ್ಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವುದಾಗಿದೆ. ಇದು ನಿಮಗೆ ಉತ್ತಮ ಅವಕಾಶವಾಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ.

ಸ್ನೇಹಿತರೆ,
ನಿಮ್ಮ ಕ್ಷೇತ್ರವು ಸಮವಸ್ತ್ರದ ಜಗತ್ತಿಗೆ ಸೇರಿದೆ. ನಿಮ್ಮ ಕೆಲಸವು ನಿರ್ದಿಷ್ಟ ಸಮಯದ ಚೌಕಟ್ಟಿಗೆ ಸೀಮಿತವಾಗಿಲ್ಲದ ಕಾರಣ ದೈಹಿಕ ಸಾಮರ್ಥ್ಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬೇಡಿ ಎಂದು ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಹವಾಮಾನದ ಎಲ್ಲಾ ಬದಲಾವಣೆಗಳನ್ನು ನೀವು ಎದುರಿಸಬೇಕಾಗುತ್ತದೆ. ದೇಶ ರಕ್ಷಣೆಯ ಕೆಲಸ ಮಾಡುವವರಿಗೆ ದೈಹಿಕ ಸಾಮರ್ಥ್ಯ ಬಹಳ ಮುಖ್ಯ. ಅರ್ಧದಷ್ಟು ಕೆಲಸವನ್ನು ದೈಹಿಕ ಸಾಮರ್ಥ್ಯದೊಂದಿಗೆ ಮಾಡಲಾಗುತ್ತದೆ. ನೀವು ಬಲವಾಗಿ ನಿಂತರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನೀವು ಹೆಚ್ಚುವರಿ ಏನನ್ನೂ ಮಾಡಬೇಕಾಗಿಲ್ಲ; ಅಲ್ಲಿ ನಿಮ್ಮ ಉಪಸ್ಥಿತಿ ಸಾಕು.
ಎರಡನೆಯದಾಗಿ, ನಿಮ್ಮ ಕರ್ತವ್ಯ ಸಮಯದಲ್ಲಿ ನೀವು ಕೆಲವು ಒತ್ತಡದ ಕ್ಷಣಗಳನ್ನು ಎದುರಿಸಬಹುದು. ಸಣ್ಣಪುಟ್ಟ ವಿಷಯಗಳಿಗೆ ಒತ್ತಡ ಉಂಟಾಗಬಹುದು. ನನ್ನ ಅಭಿಪ್ರಾಯದಲ್ಲಿ, ಯೋಗವು ನಿಮ್ಮ ಜೀವನದಲ್ಲಿ ದೈನಂದಿನ ಅಭ್ಯಾಸವಾಗಿರಬೇಕು. ಸಮತೋಲಿತ ಮನಸ್ಸು ನಿಮ್ಮ ಕೆಲಸವನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂಬುದನ್ನು ನೀವು ನೋಡುತ್ತೀರಿ. ಯೋಗ ಕೇವಲ ದೈಹಿಕ ವ್ಯಾಯಾಮವಲ್ಲ. ಆರೋಗ್ಯವಂತ ಮನಸ್ಸಿಗೆ, ಸಮತೋಲನದ ಮನಸ್ಸಿಗೆ ಮತ್ತು ನಿಮ್ಮಂತಹವರು ಕರ್ತವ್ಯದ ಸಮಯದಲ್ಲಿ ಒತ್ತಡದಿಂದ ಮುಕ್ತರಾಗಲು ಅದನ್ನು ಜೀವನದ ಭಾಗವಾಗಿಸುವುದು ಬಹಳ ಮುಖ್ಯ.

ಸ್ನೇಹಿತರೆ,
2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯ ಆಚರಿಸುತ್ತದೆ, ಆಗ ನೀವು ಸರ್ಕಾರದಲ್ಲಿ ಉನ್ನತ ಸ್ಥಾನಕ್ಕೆ ತಲುಪುತ್ತೀರಿ. ದೇಶದ 25 ವರ್ಷಗಳು ಮತ್ತು ನಿಮ್ಮ ಜೀವನದ ಈ 25 ವರ್ಷಗಳು ಅಂತಹ ಅದ್ಭುತ ಸಂಬಂಧವನ್ನು ಹೊಂದಿವೆ! ಆದ್ದರಿಂದ, ನೀವು ಈಗ ಈ ಅವಕಾಶವನ್ನು ಕಳೆದುಕೊಳ್ಳಬಾರದು. ನಿಮ್ಮ ಸಂಪೂರ್ಣ ಶಕ್ತಿ, ಸಾಮರ್ಥ್ಯವನ್ನು ನೀವು ಎಷ್ಟು ಸಾಧ್ಯವೋ ಅಷ್ಟು ಅಭಿವೃದ್ಧಿಪಡಿಸಿ ಮತ್ತು ನಿಮ್ಮಿಂದ ಸಾಧ್ಯವಾದಷ್ಟು ನಿಮ್ಮನ್ನು ಅರ್ಪಿಸಿಕೊಳ್ಳಿ. ನೀವು ಎಷ್ಟು ಜನ ಸಾಮಾನ್ಯರಿಗಾಗಿ ನಿಮ್ಮ ಜೀವನವನ್ನು ಮುಡಿಪಾಗಿಡುತ್ತೀರಿ, ಜೀವನದಲ್ಲಿ ನೀವು ಹೆಚ್ಚು ತೃಪ್ತಿ ಹೊಂದುತ್ತೀರಿ; ಇದು ನಿಮಗೆ ಅದ್ಭುತವಾದ ಸಂತೋಷವನ್ನು ತರುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಯಶಸ್ಸು ನಿಮಗೆ ಅಪಾರವಾದ ಒಟ್ಟಾರೆ ತೃಪ್ತಿಯನ್ನು ನೀಡುತ್ತದೆ.
ನಿಮಗೆ ನನ್ನ ಶುಭಾಶಯಗಳು, ನಿಮ್ಮ ಕುಟುಂಬ ಸದಸ್ಯರಿಗೆ ಅನೇಕ ಅಭಿನಂದನೆಗಳು! ತುಂಬು ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।