ಪುಣೆ ಮೆಟ್ರೋದ ಪೂರ್ಣಗೊಂಡ ವಿಭಾಗಗಳ ಉದ್ಘಾಟನೆ, ಮೆಟ್ರೋ ರೈಲಿಗೆ ಹಸಿರು ನಿಶಾನೆ
ಪಿಎಂಎವೈ ಅಡಿ ಶಂಕುಸ್ಥಾಪನೆ, ನಿರ್ಮಾಣಗೊಂಡ ಮನೆಗಳ ಹಸ್ತಾಂತರ
ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕ ಉದ್ಘಾಟನೆ
“ದೇಶದ ಆರ್ಥಿಕತೆಗೆ ವೇಗ ನೀಡುವ ನಿಟ್ಟಿನಲ್ಲಿ ಉಜ್ವಲ ನಗರವಾಗಿ ಹೊರ ಹೊಮ್ಮಿದ ಪುಣೆ ಮತ್ತು ಇಡೀ ದೇಶದ ಯುವ ಜನರ ನಿರೀಕ್ಷೆಗಳನ್ನು ಸಾಕಾರಗೊಳಿಸಿದ ನಗರ”
“ನಮ್ಮ ಸರ್ಕಾರ ನಾಗರಿಕರ ಜೀವನಮಟ್ಟ ಸುಧಾರಿಸಲು ಬದ್ಧ”
“ಆಧುನಿಕ ಭಾರತದ ನಗರಗಳಿಗೆ ಮೆಟ್ರೋ ಹೊಸ ಜೀವನಾಡಿ”
“ಮಹಾರಾಷ್ಟ್ರದ ಕೈಗಾರಿಕಾಭಿವೃದ್ದಿಯು ಸ್ವಾತಂತ್ರೋತ್ತರ ಭಾರತದ ಕೈಗಾರಿಕಾಭಿವೃದ್ಧಿಗೆ ದಾರಿ ಮಾಟಿಕೊಟ್ಟಿದೆ”
“ಅದು ಬಡವರು ಅಥವಾ ಮಧ್ಯಮವರ್ಗದವರಿರಬಹುದು, ಪ್ರತಿಯೊಂದು ಕನಸನ್ನು ಈಡೇರಿಸುವುದು ಮೋದಿಯವರ ವಾಗ್ದಾನ”

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!

ಆಗಸ್ಟ್ ಮಾಸವು ಆಚರಣೆ ಮತ್ತು ಕ್ರಾಂತಿಯ ತಿಂಗಳು. ಈ ಕ್ರಾಂತಿಕಾರಿ ತಿಂಗಳ ಆರಂಭದಲ್ಲಿ ಪುಣೆಯಲ್ಲಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ.

ವಾಸ್ತವವಾಗಿ, ಪುಣೆ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಬಾಲಗಂಗಾಧರ ತಿಲಕ್ ಸೇರಿದಂತೆ ಅನೇಕ ಕ್ರಾಂತಿಕಾರಿಗಳನ್ನು, ಸ್ವಾತಂತ್ರ್ಯ ಹೋರಾಟಗಾರರನ್ನು ಪುಣೆ ದೇಶಕ್ಕೆ ನೀಡಿದೆ. ಇಂದು ಲೋಕಶಾಹಿರ್ ಅಣ್ಣಾ ಭಾವು ಸಾಥೆ ಅವರ ಜನ್ಮದಿನವೂ ಆಗಿದ್ದು, ಈ ದಿನ ನಮ್ಮೆಲ್ಲರಿಗೂ ಬಹಳ ವಿಶೇಷವಾಗಿದೆ. ಅಣ್ಣಾ ಭಾವು ಸಾಠೆ ಒಬ್ಬ ಮಹಾನ್ ಸಮಾಜ ಸುಧಾರಕರಾಗಿದ್ದರು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು. ಇಂದಿಗೂ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ವಿದ್ವಾಂಸರು ಅವರ ಸಾಹಿತ್ಯದ ಬಗ್ಗೆ ಸಂಶೋಧನೆ ಮಾಡುತ್ತಾರೆ. ಅಣ್ಣಾ ಭಾವು ಸಾಥೆ ಅವರ ಕೃತಿಗಳು ಮತ್ತು ಬೋಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇವೆ.

 

ಸ್ನೇಹಿತರೇ,

ಪುಣೆ ಒಂದು ರೋಮಾಂಚಕ ನಗರವಾಗಿದ್ದು, ಇದು ರಾಷ್ಟ್ರದ ಆರ್ಥಿಕತೆಯನ್ನು ಮುನ್ನಡೆಸುವುದರ ಜೊತೆಗೆ ದೇಶಾದ್ಯಂತದ ಯುವಕರ ಕನಸುಗಳನ್ನು ಈಡೇರಿಸುತ್ತದೆ. ಇಂದು ಪುಣೆ ಮತ್ತು ಪಿಂಪ್ರಿ-ಚಿಂಚ್ವಾಡ್‌ನಲ್ಲಿ ಕೈಗೊಂಡ ಯೋಜನೆಗಳಿಂದ ಪುಣೆಯ ಈ ಪಾತ್ರವು ಮತ್ತಷ್ಟು ಬಲಗೊಳ್ಳಲಿದೆ. ಸುಮಾರು 15,000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮತ್ತು ಉದ್ಘಾಟನೆಗಳು ನೆರವೇರಿಸಲಾಗಿದೆ. ಸಾವಿರಾರು ಕುಟುಂಬಗಳು ಶಾಶ್ವತ ಮನೆಗಳನ್ನು ಪಡೆದಿವೆ. ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸಲು ಆಧುನಿಕ ಘಟಕವನ್ನು ಸ್ಥಾಪಿಸಲಾಗಿದೆ. ಈ ಯೋಜನೆಗಳಿಗಾಗಿ ನಾನು ಪುಣೆ ಎಲ್ಲಾ ನಿವಾಸಿಗಳು ಮತ್ತು ನಾಗರಿಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೇ,

ವೃತ್ತಿಪರರ, ವಿಶೇಷವಾಗಿ ನಗರಗಳಲ್ಲಿ ವಾಸಿಸುವ ಮಧ್ಯಮ ವರ್ಗದ ಜೀವನದ ಗುಣಮಟ್ಟವನ್ನು ಸುಧಾರಿಸಲು ನಮ್ಮ ಸರ್ಕಾರ ಅತ್ಯಂತ ಬದ್ಧವಾಗಿದೆ. ಜೀವನದ ಗುಣಮಟ್ಟ ಸುಧಾರಿಸಿದಾಗ, ನಗರದ ಅಭಿವೃದ್ಧಿಯೂ ವೇಗಗೊಳ್ಳುತ್ತದೆ. ಪುಣೆಯಂತಹ ನಮ್ಮ ನಗರಗಳಲ್ಲಿ ಜೀವನದ ಗುಣಮಟ್ಟವನ್ನು ಸುಧಾರಿಸಲು ನಮ್ಮ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ನಾನು ಇಲ್ಲಿಗೆ ಬರುವ ಮೊದಲು, ಪುಣೆ ಮೆಟ್ರೋದ ಮತ್ತೊಂದು ವಿಭಾಗವನ್ನು ಉದ್ಘಾಟನೆಯಲ್ಲಿ ಪಾಲ್ಗೊಂಡೆ. ಪುಣೆ ಮೆಟ್ರೋ ಕಾಮಗಾರಿ ಪ್ರಾರಂಭವಾದಾಗ, ಅದರ ಅಡಿಪಾಯ ಹಾಕುವ ಅವಕಾಶ ನನಗೆ ಸಿಕ್ಕಿತು, ಮತ್ತು ದೇವೇಂದ್ರ ಫಡ್ನವೀಸ್‌ ಅದನ್ನು ಬಹಳ ಸಂತೋಷಕರ ರೀತಿಯಲ್ಲಿ ವಿವರಿಸಿದರು. ಕಳೆದ 5 ವರ್ಷಗಳಲ್ಲಿ, ಸರಿಸುಮಾರು 24 ಕಿಲೋಮೀಟರ್ ಮೆಟ್ರೋ ಜಾಲವನ್ನು ಸ್ಥಾಪಿಸಲಾಗಿದೆ.

ಸ್ನೇಹಿತರೇ,

ಭಾರತೀಯ ನಗರಗಳಲ್ಲಿನ ಜನರ ಜೀವನ ಮಟ್ಟವನ್ನು ಹೆಚ್ಚಿಸಬೇಕಾದರೆ ನಾವು ಸಾರ್ವಜನಿಕ ಸಾರಿಗೆಯನ್ನು ಆಧುನೀಕರಿಸಬೇಕು. ಅದಕ್ಕಾಗಿಯೇ ನಾವು ನಿರಂತರವಾಗಿ ಮೆಟ್ರೋ ಜಾಲವನ್ನು ವಿಸ್ತರಿಸುತ್ತಿದ್ದೇವೆ, ಹೊಸ ಫ್ಲೈಓವರ್‌ಗಳನ್ನು ನಿರ್ಮಿಸುತ್ತಿದ್ದೇವೆ ಜೊತೆಗೆ ಕೆಂಪು ದೀಪಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒತ್ತು ನೀಡುತ್ತಿದ್ದೇವೆ. 2014ರವರೆಗೆ, ಭಾರತವು 250 ಕಿಲೋಮೀಟರ್‌ಗಿಂತ ಕಡಿಮೆ ಮೆಟ್ರೋ ಜಾಲವನ್ನು ಹೊಂದಿತ್ತು, ಅದರಲ್ಲಿ ಹೆಚ್ಚಿನವು ʻದೆಹಲಿ-ಎನ್‌ಸಿಆರ್ʼ ನಲ್ಲಿದ್ದವು. ಈಗ, ದೇಶವು 800 ಕಿಲೋಮೀಟರ್‌ಗಿಂತ ಹೆಚ್ಚು ಮೆಟ್ರೋ ಜಾಲವನ್ನು ಹೊಂದಿದೆ. ಇದಲ್ಲದೆ, ಹೆಚ್ಚುವರಿಯಾಗಿ ಒಂದು ಸಾವಿರ ಕಿಲೋಮೀಟರ್ ಕೆಲಸ ನಡೆಯುತ್ತಿದೆ. 2014ರಲ್ಲಿ, ಕೇವಲ 5 ನಗರಗಳಲ್ಲಿ ಮೆಟ್ರೋ ಜಾಲಗಳು ಅಸ್ತಿತ್ವದಲ್ಲಿದ್ದವು, ಆದರೆ ಇಂದು ದೇಶಾದ್ಯಂತ 20 ನಗರಗಳಲ್ಲಿ ಮೆಟ್ರೋ ಜಾಲವು ಕಾರ್ಯನಿರ್ವಹಿಸುತ್ತಿದೆ. ಪುಣೆ ಹೊರತುಪಡಿಸಿ, ಮಹಾರಾಷ್ಟ್ರವು ಮುಂಬೈ ಮತ್ತು ನಾಗ್‌ಪುರದಲ್ಲಿ ಮೆಟ್ರೋ ವಿಸ್ತರಣೆಗೆ ಸಾಕ್ಷಿಯಾಗಿದೆ. ಈ ಮೆಟ್ರೋ ಜಾಲಗಳು ಆಧುನಿಕ ಭಾರತೀಯ ನಗರಗಳ ಜೀವನಾಡಿಗಳಾಗುತ್ತಿವೆ. ಪುಣೆಯಂತಹ ನಗರಗಳಲ್ಲಿ ಮೆಟ್ರೋವನ್ನು ವಿಸ್ತರಿಸುವುದು ಪರಿಣಾಮಕಾರಿ ಸಾರಿಗೆಯನ್ನು ಒದಗಿಸಲು ಮಾತ್ರವಲ್ಲದೆ ಪರಿಸರವನ್ನು ರಕ್ಷಿಸಲು ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ನಮ್ಮ ಸರ್ಕಾರವು ಮೆಟ್ರೋ ಜಾಲವನ್ನು ವಿಸ್ತರಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ.

ಸಹೋದರ-ಸಹೋದರಿಯರೇ,

ನಗರಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರ ಮೇಲೆ ಜೀವನ ಗುಣಮಟ್ಟ ಸುಧಾರಣೆಯು ಹೆಚ್ಚು ಅವಲಂಬಿತವಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳು ಸ್ವಚ್ಛ ನಗರಗಳನ್ನು ಹೊಂದಿದ್ದಕ್ಕಾಗಿ ಪ್ರಶಂಸೆಯನ್ನು ಪಡೆಯುತ್ತಿದ್ದ ಕಾಲವೊಂದಿತ್ತು. ಈಗ ನಾವು ಭಾರತೀಯ ನಗರಗಳನ್ನು ಅದನ್ನು ಸಾಧಿಸಲು ಪ್ರಯತ್ನಿಸುತ್ತಿದ್ದೇವೆ. ʻಸ್ವಚ್ಛ ಭಾರತ ಅಭಿಯಾನʼ(ಸ್ವಚ್ಛ ಭಾರತ ಮಿಷನ್) ಕೇವಲ ಶೌಚಾಲಯಗಳನ್ನು ನಿರ್ಮಿಸುವುದಕ್ಕಿಂತಲೂ ಮಿಗಿಲಾದುದು; ಇದು ತ್ಯಾಜ್ಯ ನಿರ್ವಹಣೆಗೂ ಗಮನಾರ್ಹ ಒತ್ತು ನೀಡುತ್ತದೆ. ಕಸದ ಬೃಹತ್ ಪರ್ವತಗಳು ನಮ್ಮ ನಗರಗಳಲ್ಲಿ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿವೆ. ನಿಮಗೆ ತಿಳಿದಿರುವಂತೆ, ಪುಣೆಯಲ್ಲಿ ಮೆಟ್ರೋ ಡಿಪೋವನ್ನು ನಿರ್ಮಿಸಲಾಗಿದೆ, ಇದನ್ನು ಮೊದಲು ಕೊಥ್ರುಡ್ ಕಸ ಡಂಪಿಂಗ್ ಯಾರ್ಡ್ ಎಂದು ಕರೆಯಲಾಗುತ್ತಿತ್ತು. ಅಂತಹ ಕಸದ ಪರ್ವತಗಳನ್ನು ತೆಗೆದುಹಾಕಲು ಸಮರೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಹೆಚ್ಚುವರಿಯಾಗಿ, ನಾವು 'ತ್ಯಾಜ್ಯದಿಂದ ಸಂಪತ್ತಿಗೆ' ತತ್ವದ ಮೇಲೆ ಕೆಲಸ ಮಾಡುತ್ತಿದ್ದೇವೆ, ಅಲ್ಲಿ ನಾವು ತ್ಯಾಜ್ಯವನ್ನು ಉಪಯುಕ್ತ ಸಂಪನ್ಮೂಲಗಳಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ. ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ʻಪಿಂಪ್ರಿ-ಚಿಂಚ್ವಾಡ್ʼ ಸ್ಥಾವರವು ಈ ನಿಟ್ಟಿನಲ್ಲಿ ಅತ್ಯುತ್ತಮ ಯೋಜನೆಯಾಗಿದೆ. ಈ ಘಟಕವು ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುತ್ತದೆ. ಇಲ್ಲಿ ಉತ್ಪತ್ತಿಯಾಗುವ ವಿದ್ಯುತ್‌ ಮೂಲಕ ನಿಗಮವು ತನ್ನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ. ಇದರರ್ಥ ಮಾಲಿನ್ಯದ ಸಮಸ್ಯೆ ಕಡಿಮೆಯಾಗುತ್ತದೆ, ಜೊತೆಗೆ ಪುರಸಭೆಯ ವೆಚ್ಚವು ಸಹ ಉಳಿಯುತ್ತದೆ.

 

ಸ್ನೇಹಿತರೇ,

ಸ್ವಾತಂತ್ರ್ಯದ ನಂತರ, ಮಹಾರಾಷ್ಟ್ರದ ಕೈಗಾರಿಕಾ ಅಭಿವೃದ್ಧಿಯು ಭಾರತದ ಒಟ್ಟಾರೆ ಕೈಗಾರಿಕಾ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡಿದೆ. ಮಹಾರಾಷ್ಟ್ರದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು, ಆಧುನಿಕ ಮೂಲಸೌಕರ್ಯ ಅತ್ಯಗತ್ಯ. ಆದ್ದರಿಂದ, ಮಹಾರಾಷ್ಟ್ರದಲ್ಲಿ ಮೂಲಸೌಕರ್ಯಕ್ಕಾಗಿ ನಮ್ಮ ಸರ್ಕಾರ ಮಾಡುತ್ತಿರುವ ಹೂಡಿಕೆಯ ಪ್ರಮಾಣವು ಅಭೂತಪೂರ್ವವಾಗಿದೆ. ಪ್ರಸ್ತುತ, ದೊಡ್ಡ ಎಕ್ಸ್‌ಪ್ರೆಸ್ ವೇಗಳು, ಹೊಸ ರೈಲ್ವೆ ಮಾರ್ಗಗಳು ಮತ್ತು ವಿಮಾನ ನಿಲ್ದಾಣಗಳನ್ನು ಇಲ್ಲಿ ನಿರ್ಮಿಸಲಾಗುತ್ತಿದೆ. ರೈಲ್ವೆ ಅಭಿವೃದ್ಧಿಗಾಗಿ ವೆಚ್ಚವು 2014ಕ್ಕಿಂತ ಮೊದಲಿನ ಅವಧಿಗೆ ಹೋಲಿಸಿದರೆ 12 ಪಟ್ಟು ಹೆಚ್ಚಾಗಿದೆ. ಮಹಾರಾಷ್ಟ್ರದ ವಿವಿಧ ನಗರಗಳನ್ನು ನೆರೆಯ ರಾಜ್ಯಗಳ ಆರ್ಥಿಕ ಕೇಂದ್ರಗಳೊಂದಿಗೆ ಸಂಪರ್ಕಿಸಲಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಗುಜರಾತ್ ಮತ್ತು ಮಹಾರಾಷ್ಟ್ರ ಎರಡಕ್ಕೂ ಪ್ರಯೋಜನವನ್ನು ನೀಡುತ್ತದೆ. ದೆಹಲಿ-ಮುಂಬೈ ಆರ್ಥಿಕ ಕಾರಿಡಾರ್ ಮಹಾರಾಷ್ಟ್ರವನ್ನು ಮಧ್ಯಪ್ರದೇಶ ಮತ್ತು ಇತರ ಉತ್ತರದ ರಾಜ್ಯಗಳೊಂದಿಗೆ ಸಂಪರ್ಕಿಸುತ್ತದೆ. ಮಹಾರಾಷ್ಟ್ರ ಮತ್ತು ಉತ್ತರ ಭಾರತದ ನಡುವಿನ ರೈಲು ಸಂಪರ್ಕವನ್ನು ʻವೆಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ʼ ಗಮನಾರ್ಹವಾಗಿ ಸುಧಾರಿಸುತ್ತದೆ. ಇದಲ್ಲದೆ, ಮಹಾರಾಷ್ಟ್ರವನ್ನು ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಛತ್ತೀಸ್‌ಗಢದೊಂದಿಗೆ ಸಂಪರ್ಕಿಸುವ ಪ್ರಸರಣ ಮಾರ್ಗ ಜಾಲವು ಮಹಾರಾಷ್ಟ್ರದಲ್ಲಿ ಕೈಗಾರಿಕೆಗಳ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ತೈಲ ಮತ್ತು ಅನಿಲ ಕೊಳವೆ ಮಾರ್ಗಗಳು, ಔರಂಗಾಬಾದ್ ಕೈಗಾರಿಕಾ ನಗರ, ನವೀ ಮುಂಬೈ ವಿಮಾನ ನಿಲ್ದಾಣ ಮತ್ತು ಶೇಂದ್ರ-ಬಿಡ್ಕಿನ್ ಕೈಗಾರಿಕಾ ಪಾರ್ಕ್ ಮಹಾರಾಷ್ಟ್ರದ ಆರ್ಥಿಕತೆಗೆ ಹೊಸ ಪ್ರಚೋದನೆ ನೀಡುವ ಸಾಮರ್ಥ್ಯವನ್ನು ಹೊಂದಿವೆ.

ಸ್ನೇಹಿತರೇ,

ನಮ್ಮ ಸರ್ಕಾರವು ರಾಜ್ಯದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ, ಇದು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಮಹಾರಾಷ್ಟ್ರವು ಪ್ರಗತಿ ಹೊಂದಿದಾಗ, ಭಾರತವು ಪ್ರಗತಿ ಹೊಂದುತ್ತದೆ, ಮತ್ತು ಭಾರತವು ಅಭಿವೃದ್ಧಿ ಹೊಂದಿದಾಗ, ಮಹಾರಾಷ್ಟ್ರಕ್ಕೂ ಪ್ರಯೋಜನವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಭಾರತದ ಪ್ರಗತಿ ಮತ್ತು ಅಭಿವೃದ್ಧಿಯ ಬಗ್ಗೆ ವಿಶ್ವದಾದ್ಯಂತ ಚರ್ಚೆಗಳು ನಡೆಯುತ್ತಿವೆ. ಮಹಾರಾಷ್ಟ್ರ, ವಿಶೇಷವಾಗಿ ಪುಣೆ ಕೂಡ ಈ ಬೆಳವಣಿಗೆಯ ಲಾಭವನ್ನು ಪಡೆಯುತ್ತಿದೆ. ಕಳೆದ 9 ವರ್ಷಗಳಲ್ಲಿ, ನಾವೀನ್ಯತೆ ಮತ್ತು ನವೋದ್ಯಮಗಳ ವಿಷಯದಲ್ಲಿ ಭಾರತವು ಜಗತ್ತಿನಲ್ಲಿ ಹೊಸ ಗುರುತನ್ನು ಸೃಷ್ಟಿಸಿದೆ. ಕೇವಲ 9 ವರ್ಷಗಳ ಹಿಂದೆ, ಭಾರತದಲ್ಲಿ ಕೆಲವೇ ನೂರು ನವೋದ್ಯಮಗಳಿದ್ದವು, ಮತ್ತು ಈಗ ನಾವು 100,000 ನವೋದ್ಯಮಗಳ ಗಡಿಯನ್ನು ದಾಟಿದ್ದೇವೆ. ಡಿಜಿಟಲ್ ಮೂಲಸೌಕರ್ಯದ ವಿಸ್ತರಣೆಯಿಂದಾಗಿ ನವೋದ್ಯಮಗಳ ಈ ಪರಿಸರ ವ್ಯವಸ್ಥೆಯು ಪ್ರವರ್ಧಮಾನಕ್ಕೆ ಬಂದಿದೆ. ಭಾರತದಲ್ಲಿ ಡಿಜಿಟಲ್ ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪುಣೆ ಮಹತ್ವದ ಐತಿಹಾಸಿಕ ಪಾತ್ರ ವಹಿಸಿದೆ. ಅಗ್ಗದ ಡೇಟಾ, ಕೈಗೆಟುಕುವ ಫೋನ್‌ಗಳು ಮತ್ತು ಪ್ರತಿ ಹಳ್ಳಿಯನ್ನು ತಲುಪುವ ಇಂಟರ್ನೆಟ್ ಸಂಪರ್ಕವು ಈ ವಲಯವನ್ನು ಬಲಪಡಿಸಿದೆ. ಇಂದು, ಭಾರತವು ವಿಶ್ವದ ಅತ್ಯಂತ ವೇಗವಾಗಿ ʻ5ಜಿʼ ಸೇವೆಗಳನ್ನು ಹೊರತರುವ ದೇಶಗಳಲ್ಲಿ ಒಂದಾಗಿದೆ. ಫಿನ್‌ಟಕೆ, ಬಯೋಟೆಕ್, ಅಗ್ರಿಟೆಕ್ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಯುವ ಪ್ರತಿಭೆಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಈ ಪ್ರಗತಿಯಿಂದ ಪುಣೆ ಅಪಾರ ಲಾಭವನ್ನು ಪಡೆಯುತ್ತಿದೆ.

 

ಸ್ನೇಹಿತರೇ,

ಒಂದೆಡೆ, ನಾವು ಮಹಾರಾಷ್ಟ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯನ್ನು ನೋಡುತ್ತಿದ್ದೇವೆ. ಮತ್ತೊಂದೆಡೆ, ನೆರೆಯ ರಾಜ್ಯವಾದ ಕರ್ನಾಟಕದ ಬೆಳವಣಿಗೆಗಳನ್ನು ನಾವು ಗಮನಿಸುತ್ತಿದ್ದೇವೆ. ಬೆಂಗಳೂರು ಅಂತಹ ಮಹತ್ವದ ಐಟಿ ಹಬ್ ಮತ್ತು ಜಾಗತಿಕ ಹೂಡಿಕೆದಾರರ ಕೇಂದ್ರವಾಗಿದೆ. ಈ ಸಮಯದಲ್ಲಿ ಬೆಂಗಳೂರು ಮತ್ತು ಕರ್ನಾಟಕವು ತ್ವರಿತ ಪ್ರಗತಿಗೆ ಸಾಕ್ಷಿಯಾಗುವುದು ಅತ್ಯಗತ್ಯವಾಗಿತ್ತು. ಆದರೆ, ʻಗ್ಯಾರಂಟಿʼಗಳ ಆಧಾರದ ಮೇಲೆ ಅಲ್ಲಿ ರಚನೆಯಾದ ಸರ್ಕಾರವು ಅಲ್ಪಾವಧಿಯಲ್ಲಿ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾಗಿದೆ. ಇದನ್ನು ಇಡೀ ದೇಶವು ನೋಡುತ್ತಿದೆ ಮತ್ತು ಚಿಂತಿಸುತ್ತಿದೆ. ಒಂದು ಪಕ್ಷವು ತನ್ನ ಗುಪ್ತ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಸರ್ಕಾರದ ಖಜಾನೆಯನ್ನು ಖಾಲಿ ಮಾಡಿದಾಗ, ರಾಜ್ಯದ ಜನರು ಹೆಚ್ಚು ತೊಂದರೆ ಅನುಭವಿಸುತ್ತಾರೆ. ಅದು ನಮ್ಮ ಯುವಕರ ಭವಿಷ್ಯದ ಬಗ್ಗೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಇದು ಸರ್ಕಾರ ರಚಿಸಲು ಪಕ್ಷಕ್ಕೆ ಸಹಾಯ ಮಾಡಬಹುದಾದರೂ, ಇದು ಜನರ ಭವಿಷ್ಯವನ್ನು ಅಪಾಯಕ್ಕೆ ತಳ್ಳುತ್ತದೆ. ಪರಿಸ್ಥಿತಿ ಹೇಗಿದೆಯೆಂದರೆ, ಕರ್ನಾಟಕ ಸರ್ಕಾರವೇ ತನ್ನ ಬೊಕ್ಕಸ ಖಾಲಿಯಾಗಿದೆ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಮತ್ತು ಕರ್ನಾಟಕದ ಪ್ರಗತಿಗೆ ಹಣದ ಕೊರತೆಯಿದೆ ಎಂದು ಒಪ್ಪಿಕೊಳ್ಳುತ್ತದೆ. ಸಹೋದರರೇ, ಇದು ನಮ್ಮ ದೇಶಕ್ಕೆ ಬಹಳ ಕಳವಳಕಾರಿ ವಿಷಯವಾಗಿದೆ. ರಾಜಸ್ಥಾನದಲ್ಲೂ ಇದೇ ರೀತಿಯ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ, ಅಲ್ಲಿ ಸಾಲದ ಹೊರೆ ಹೆಚ್ಚುತ್ತಿದೆ ಮತ್ತು ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ.

ಸ್ನೇಹಿತರೇ,

ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ನೀತಿ, ಸಂಕಲ್ಪ ಹಾಗೂ ಸಮರ್ಪಣೆ ಈ ಮೂರರ ಪಾತ್ರವೂ ನಿರ್ಣಾಯಕವಾಗಿದೆ. ಸರ್ಕಾರ ಮತ್ತು ವ್ಯವಸ್ಥೆಯನ್ನು ನಡೆಸುವವರ ನೀತಿಗಳು, ಉದ್ದೇಶಗಳು ಮತ್ತು ಸಮರ್ಪಣೆಯು ಅಭಿವೃದ್ಧಿ ಇರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ಉದಾಹರಣೆಗೆ, ಬಡವರಿಗೆ ಶಾಶ್ವತ ಮನೆಗಳನ್ನು ಒದಗಿಸುವ ಯೋಜನೆ ಇದೆ. 2014ಕ್ಕಿಂತ ಮೊದಲು ಇದ್ದ ಸರ್ಕಾರವು ಹತ್ತು ವರ್ಷಗಳಲ್ಲಿ ನಗರ ಬಡವರಿಗೆ ಮನೆಗಳನ್ನು ಒದಗಿಸುವ ಎರಡು ಯೋಜನೆಗಳನ್ನಷ್ಟೇ ಜಾರಿಗೊಳಿಸಿತು. ಈ ಯೋಜನೆಗಳ ಅಡಿಯಲ್ಲಿ, ಒಂದು ದಶಕದಲ್ಲಿ ದೇಶಾದ್ಯಂತ ಕೇವಲ 8 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಆದಾಗ್ಯೂ, ಈ ಮನೆಗಳ ಸ್ಥಿತಿ ತುಂಬಾ ಕೆಟ್ಟದಾಗಿತ್ತು, ಹೆಚ್ಚಿನ ನಗರ ಬಡವರು ಅವುಗಳನ್ನು ತೆಗೆದುಕೊಳ್ಳಲು ನಿರಾಕರಿಸಿದರು. ಈಗ ನೀವು ಊಹಿಸಿಕೊಳ್ಳಿ, ಕೊಳೆಗೇರಿಯಲ್ಲಿ ವಾಸಿಸುವ ವ್ಯಕ್ತಿಯು ಸಹ ಆ ಮನೆಯನ್ನು ತೆಗೆದುಕೊಳ್ಳಲು ನಿರಾಕರಿಸಿದರೆ ಆ ಮನೆ ಇನ್ನೆಷ್ಟು ಕೆಟ್ಟದಾಗಿರಬಹುದು! ಯುಪಿಎ ಸರ್ಕಾರದ ಅವಧಿಯಲ್ಲಿ ಯಾರೂ ತೆಗೆದುಕೊಳ್ಳಲು ಸಿದ್ಧರಿರದ 2 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಮಹಾರಾಷ್ಟ್ರದಲ್ಲಿಯೂ ಆ ಸಮಯದಲ್ಲಿ ನಿರ್ಮಿಸಲಾದ 50,000 ಕ್ಕೂ ಹೆಚ್ಚು ಮನೆಗಳು ಖಾಲಿ ಇದ್ದವು. ಹೀಗೆ ಹಣವನ್ನು ವ್ಯರ್ಥ ಮಾಡಲಾಯಿತು. ಜನರ ಸಮಸ್ಯೆಗಳ ಬಗ್ಗೆಯೂ  ಆಗಿನ ಸರ್ಕಾರ ಯಾಔುದೇ ಕಾಳಜಿ ವಹಿಸಲಿಲ್ಲ.

 

ಸಹೋದರ-ಸಹೋದರಿಯರೇ,

2014ರಲ್ಲಿ, ನೀವು ನಮಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದೀರಿ. ಅಧಿಕಾರಕ್ಕೆ ಬಂದ ನಂತರ, ನಾವು ಸರಿಯಾದ ಉದ್ದೇಶಗಳೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದ್ದೇವೆ ಮತ್ತು ನೀತಿಗಳನ್ನು ಸಹ ಬದಲಾಯಿಸಿದ್ದೇವೆ. ಕಳೆದ 9 ವರ್ಷಗಳಲ್ಲಿ, ನಮ್ಮ ಸರ್ಕಾರವು ಹಳ್ಳಿಗಳು ಮತ್ತು ನಗರಗಳಲ್ಲಿ ಬಡವರಿಗಾಗಿ 4 ಕೋಟಿಗೂ ಹೆಚ್ಚು ಶಾಶ್ವತ ಮನೆಗಳನ್ನು ನಿರ್ಮಿಸಿದೆ. ಈ ಪೈಕಿ 75 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಗರ ಪ್ರದೇಶದ ಬಡವರಿಗಾಗಿ ನಿರ್ಮಿಸಲಾಗಿದೆ. ಈ ಹೊಸ ಮನೆಗಳ ನಿರ್ಮಾಣದಲ್ಲಿ ನಾವು ಪಾರದರ್ಶಕತೆಯನ್ನು ತಂದಿದ್ದೇವೆ ಮತ್ತು ಅವುಗಳ ಗುಣಮಟ್ಟವನ್ನು ಸುಧಾರಿಸಿದ್ದೇವೆ. ನಮ್ಮ ಸರ್ಕಾರ ಮತ್ತೊಂದು ಮಹತ್ವದ ಕೆಲಸ ಮಾಡಿದೆ. ಸರ್ಕಾರ ನಿರ್ಮಿಸಿ ಬಡವರಿಗೆ ನೀಡುತ್ತಿರುವ ಹೆಚ್ಚಿನ ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ನೋಂದಾಯಿಸಲಾಗುತ್ತಿದೆ. ಈ ಮನೆಗಳ ಮೌಲ್ಯ ಲಕ್ಷಾಂತರ ರೂಪಾಯಿಗಳಷ್ಟಿದೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಕೋಟ್ಯಂತರ ಸಹೋದರಿಯರು ಲಕ್ಷಾಧೀಶರಾಗಿದ್ದಾರೆ. ಇದೇ ಮೊದಲ ಬಾರಿಗೆ ಆಸ್ತಿಯನ್ನು ಅವರ ಹೆಸರಿನಲ್ಲಿ ನೋಂದಾಯಿಸಲಾಗುತ್ತಿದೆ. ಇಂದು ಸ್ವಂತ ಮನೆಗಳನ್ನು ಪಡೆದ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಅಭಿನಂದಿಸುತ್ತೇನೆ. ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಮತ್ತು ಈ ವರ್ಷದ ಗಣೇಶ ಉತ್ಸವವು ಅವರ ಪಾಲಿಗೆ ಭವ್ಯವಾಗಿರಲಿದೆ.

ಸಹೋದರ ಸಹೋದರಿಯರೇ,

ಬಡವರಾಗಿರಲಿ ಅಥವಾ ಮಧ್ಯಮ ವರ್ಗದ ಕುಟುಂಬವಾಗಿರಲಿ, ಪ್ರತಿಯೊಬ್ಬರ ಕನಸನ್ನು ಈಡೇರಿಸುವುದು ಮೋದಿಯವರ ಭರವಸೆಯಾಗಿದೆ. ಒಂದು ಕನಸು ನನಸಾದಾಗ, ಆ ಯಶಸ್ಸಿನ ಗರ್ಭದಿಂದ ನೂರಾರು ಹೊಸ ಸಂಕಲ್ಪಗಳು ಹುಟ್ಟುತ್ತವೆ. ಈ ನಿರ್ಣಯಗಳು ವ್ಯಕ್ತಿಯ ಜೀವನದಲ್ಲಿ ದೊಡ್ಡ ಶಕ್ತಿಯಾಗುತ್ತವೆ. ನಿಮ್ಮ ಮಕ್ಕಳು, ನಿಮ್ಮ ವರ್ತಮಾನ ಮತ್ತು ನಿಮ್ಮ ಭವಿಷ್ಯದ ಪೀಳಿಗೆಯ ಬಗ್ಗೆ ನಾವು ಕಾಳಜಿ ವಹಿಸುತ್ತೇವೆ.

 

ಸ್ನೇಹಿತರೇ,

ಅಧಿಕಾರ ಬರುತ್ತದೆ ಮತ್ತು ಹೋಗುತ್ತದೆ, ಆದರೆ ಸಮಾಜ ಮತ್ತು ದೇಶ ಉಳಿಯುತ್ತದೆ. ಆದ್ದರಿಂದ, ನಿಮ್ಮ ಇಂದಿನ ಮತ್ತು ನಿಮ್ಮ ನಾಳೆಯನ್ನು ಉತ್ತಮಗೊಳಿಸುವುದು ನಮ್ಮ ಪ್ರಯತ್ನವಾಗಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಬದ್ಧತೆಯು ಈ ಭಾವನೆಯ ಅಭಿವ್ಯಕ್ತಿಯಾಗಿದೆ. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ಮಹಾರಾಷ್ಟ್ರದಲ್ಲಿ, ಅನೇಕ ವಿಭಿನ್ನ ಪಕ್ಷಗಳು ಒಂದೇ ಗುರಿಯೊಂದಿಗೆ ಒಗ್ಗೂಡಿವೆ. ಎಲ್ಲರ ಭಾಗವಹಿಸುವಿಕೆಯೊಂದಿಗೆ, ಮಹಾರಾಷ್ಟ್ರವು ವೇಗವಾಗಿ ಪ್ರಗತಿ ಸಾಧಿಸಬಹುದು ಮತ್ತು ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು ಎಂಬುದು ಇದರ ಉದ್ದೇಶವಾಗಿದೆ. ಮಹಾರಾಷ್ಟ್ರವು ಸದಾ ನಮಗೆ ಪ್ರೀತಿ ಮತ್ತು ಆಶೀರ್ವಾದಗಳನ್ನು ನೀಡಿದೆ. ಈ ಪ್ರೀತಿ ಮುಂದುವರಿಯಲಿ ಎಂಬ ಆಶಯದೊಂದಿಗೆ, ಅಭಿವೃದ್ಧಿ ಯೋಜನೆಗಳಿಗಾಗಿ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಭಾರತ್ ಮಾತಾ ಕಿ - ಜೈ!

ಭಾರತ್ ಮಾತಾ ಕಿ - ಜೈ!

ಧನ್ಯವಾದಗಳು!

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Solar powers India as electricity demand hits record high of 256 GW

Media Coverage

Solar powers India as electricity demand hits record high of 256 GW
NM on the go

Nm on the go

Always be the first to hear from the PM. Get the App Now!
...
Today, Sikkim has beautifully showcased the spirit of “Ek Bharat, Shreshtha Bharat”: PM Modi in Gangtok
April 28, 2026
Known for Serenity and Enterprise, Sikkim Sees Rapid Progress :PM
One of the best things I noticed all along the way, was the cleanliness of Sikkim's roads: PM
No garbage as far as the eye can see,cleanliness in the air too, cleanliness on the roads as well, the people of Sikkim, are true protectors of nature, its brand ambassadors: PM
We are placing maximum focus on connectivity and infrastructure in Sikkim; In recent years, hundreds of kilometers of highways have been constructed here, Work is progressing rapidly to connect every village with roads: PM
Another vast horizon of possibilities for Sikkim lies in sports;The youth here have showcased their capability and talent on grand stages: PM
Our government is committed to ensuring that alongside robust health infrastructure, people also receive affordable medical treatment: PM
Previously, we provided Ayushman cards to ensure free healthcare for the poor; Now, this facility is being extended to all senior citizens aged 70 years and above, medicines are available at highly affordable prices at Jan Aushadhi Kendras: PM
Sikkim's model of organic and natural farming serves as an inspiration for the entire nation : PM
The lifestyle of Sikkim and Sikkim’s resolve have today become an integral part of the nation's vision: PM

भारत माता की जय।

भारत माता की जय।

भारत माता की जय।

सिक्किम के राज्यपाल श्री ओम माथुर जी, यहां के लोकप्रिय, ऊर्जावान युवा और मेरे परम मित्र श्री प्रेम सिंह तमांग जी, संसद में मेरे साथी श्री दोरजी शेरिंग लेपचा जी, डॉ. इन्द्र हांग सुब्बा जी, श्री दिली राम थापा जी और सिक्किम के मेरे प्यारे भाइयों और बहनों।

समग्र सिक्किम वासी लाई स्वर्ण जयंती को धेरै धेरै बधाई तथा शुभकामना, नमस्ते, टाशी डिले!

खाम-रि-मो! तपाईंहरू कॉस्तो हुनु-हुन्छ ?

साथियों,

मैं कल दोपहर बाद गंगटोक पहुंचा था, और यहां मेरे आने से पहले, मैं बंगाल चुनावों की गहमा-गहमी में जरा व्यस्त था। यहां आते ही एक नई अनुभूति, एक नया आनंद, चारों तरफ उत्सव का माहौल, मन खुशियों से भर गया। रात में हुई बारिश, फिर सुबह की ठंडक और ये खिली हुई धूप, सिक्किम के रंग ही निराले हैं।

साथियों,

पूरब का स्वर्ग सिक्किम, ऑर्किड्स का गार्डन सिक्किम, इसका अप्रतिम सौंदर्य, यहां की शांति, यहां का आध्यात्मिक आनंद, ये अनुभूति बड़े सौभाग्य से मिलती है। आज मैं यहां के ऑर्किड्स को भी देखने गया था। मेरे लिए जितना समय तय हुआ था, मैं ज्यादा ही समय वहां बिता रहा था। और मैं देशभर के टूरिस्टों को, प्रकृति प्रेमी टूरिस्टों को, अगर उन्होंने सिक्किम का ये ऑर्किड नहीं देखा है, तो कुछ भी नहीं देखा है। और मुझे विश्वास है कि इस बार टूरिस्ट, सिक्किम के टूरिज्म के सारे आंकड़े इस बार पार कर देंगे। ऑर्किड में मैंने देखा प्रकृति के वो रंग, उनका उल्लास, मेरा मन अभी भी उसी में डूबा हुआ है।

साथियों,

आज हमें सिक्किम की 50 वर्ष की यात्रा का उत्सव मनाने का अवसर मिला है। जब अवसर इतना ऐतिहासिक हो और इतने दिव्य माहौल में हो रहा हो, तो उसकी भव्यता कई गुना बढ़ जाती है। पालजोर का ये स्टेडियम आज उसी अद्भुत आभा से भरा हुआ है। यहां जो सांस्कृतिक कार्यक्रम हुए, कलाकारों की मुग्ध कर देने वाली प्रस्तुतियां हुईं। सिक्किम के आप लोगों का जो उत्साह दिखा, सामने पहाड़ों और आसमान में प्रकृति की सुंदर छटा दिखी। ऐसा लग रहा था, जैसे प्रकृति और संस्कृति साथ मिलकर जीवंत हो उठी। वाकई ये स्मूर्तियां हमेशा मेरे दिल में बनी रहेगी। और मैं जो भी कोरियोग्राफी करने वाले लोग होंगे, जो भी गाने वाले लोग होंगे, सबको बधाई देता हूं। और आज का ये कार्यक्रम मैं चाहूंगा कि ये टीवी, मीडिया वाले, दूरदर्शन वाले देश को बार-बार दिखाएं। जब देश में राजनीतिक स्वार्थ के चलते भाषावाद, प्रांतवाद, ऊंच-नीच, देश में भेदभाव के लिए लगातार कोशिश हो रही है, आज सिक्किम ने ‘एक भारत श्रेष्ठ भारत’ के दर्शन करा दिए। उन्होंने इस छोटे से कार्यक्रम में पूरा हिंदुस्तान आंखों के सामने खड़ा कर दिया। और अभी भी जो उन्होंने बैठने की रचना की है, मुझे ऊपर से दिखता है, पूरा हिंदुस्तान है, और जो जिस प्रदेश का है, वैसे ही परिवेश है, उधर गुजरात तो गुजराती कपड़ों में लोग बैठे हैं। वाकई-वाकई आपने दिल जीत लिया है। ये मोदी का नहीं, पूरे हिंदुस्तान का दिल जीत लिया है आज। यही तो भारत भक्ति होती है, यही तो देशभक्ति होती है। नई पीढ़ी में इसी से देशभक्ति के भाव जगते हैं। बहुत-बहुत बधाई आप लोगों को।

साथियों,

सिक्किम आने पर मुझे इसलिए भी बहुत खुशी है, क्योंकि पिछली बार मैं खराब मौसम के कारण यहां तक नहीं पहुंच पाया था। मुझे बागडोगरा से ऑनलाइन ही आपसे जुड़ना पड़ा था। आपसे यहां आकर ना मिल पाने की वो कसक मेरे मन में बनी हुई थी। और जब भी प्रेम सिंह जी मिलते थे ना, तो मेरी आंखें झुक जाती थी कि आपने इतनी मेहनत की, मैं आ नहीं पाया, और इसलिए मैं इंतजार में था, वो इंतजार भी आज इस अवसर के माध्यम से पूरा हुआ है।

साथियों,

सिक्किम के लोगों से मिलना मुझे हमेशा एक अलग सुकून देता है। आपकी ये सौम्यता, आपकी ये सादगी, आपके चेहरों की मुस्कान अद्भुत है। यहां आने से पहले भी मैं सिक्किम के कई प्रतिभाशाली लोगों से मिला। सिक्किम के प्रबुद्ध लोग, पद्म सम्मान विजेता, आर्टिस्ट और फुटबॉलर्स उनसे अलग-अलग विषयों पर मेरी बात हुई।

साथियों,

कल शाम को जो रोड शो हुआ, मैं उसे भी अब तक भूल नहीं पाया हूं, और शायद कभी नहीं भूल पाऊंगा। हाथों में हमारा ये प्यारा तिरंगा। लगातार भारत माता का जयकारा, और वंदे मातरम का उद्घोष, पूरा वातावरण ‘एक भारत श्रेष्ठ भारत’ की तस्वीरों से रंगा हुआ था। गंजू लामा द्वार से लोकभवन के रास्ते तक, जिस तरह सिक्किम के मेरे भाई-बहन अपना प्यार देने उमड़े, जिस तरह सभी जातीय समुदायों ने स्वागत किया, हर समुदाय की अपनी वेशभूषा, अपना-अपना संगीत, अपनी-अपनी परंपराएं, पूरा माहौल ही एक बड़े महोत्सव में बदल गया था। ये दृश्य ऐसा था, जैसे प्रकृति की गोद में अलग-अलग रंग खिले हों। बड़ी संख्या में मेरी माताएं-बहनें, बच्चे और बुजुर्ग भी अपना आशीर्वाद देने आए थे। और जो एक सबसे अच्छी बात मुझे पूरे रास्ते भर दिखी, वो थी सिक्किम की सड़कों की स्वच्छता, आप सबको सैल्यूट। दूर-दूर तक कोई गंदगी नहीं, वायु में भी स्वच्छता, सड़कों पर भी स्वच्छता, सिक्किम के आप लोग प्रकृति के पक्के वाले संरक्षक हैं, ब्रैंड एंबेसेडर हैं। मैं फिर देशवासियों को कहता हूं, सिक्किम आइए। कितना साफ-सुथरा, स्वच्छ बनाए रखा है सिक्किम को।

भाइयों-बहनों,

कल रोड शो जो हुआ, और अभी इस आयोजन के लिए मैं आप सभी का और सभी कलाकारों का हृदय से बहुत-बहुत आभार प्रकट करता हूं, आपका अभिनंदन करता हूं। मैं सिक्किम के लोगों को, और सभी देशवासियों को 50 वर्ष की इस महत्वपूर्ण यात्रा के इस उत्सव की बहुत-बहुत बधाई देता हूं। मैं आपको विश्वास दिलाता हूं, आपके प्यार, आपका स्नेह, आपके आशीर्वाद का ये कर्ज, इसे चुकाने के लिए मैं कोई कोर-कसर बाकी नहीं छोडूंगा।

साथियों,

सिक्किम की यात्रा मानवीय मूल्यों की यात्रा है। ये विकास और विरासत को साथ लेकर चलने की यात्रा है। सिक्किम की अनेक पीढ़ियों ने इस यात्रा को आगे बढ़ाया है। गत् 50 वर्ष में जिन-जिन लोगों ने सिक्किम को आगे बढ़ाया है, यहां तक पहुंचाया है, उन सबको मैं आज हृदय से बहुत-बहुत बधाई देता हूं, उनका अभिनंदन करता हूं। जिस समय, जिसको जो करना था, उसने किया, उसने सिक्किम को दिया। अब, इसकी ज़िम्मेदारी हमारे पर है, हमारे ऊपर है। सिक्किम की सरकार, मेरे मित्र प्रेम सिंह जी के नेतृत्व में पूरी ईमानदारी से सिक्किम की विरासत को संजोने और विकास को गति देने का काम कर रही है। हमारे लिए सिक्किम, नॉर्थ ईस्ट केवल देश का एक अहम हिस्सा ही नहीं है, बल्कि ये भारत की ‘अष्ट लक्ष्मी’ हैं। नॉर्थ ईस्ट ये हिंदुस्तान की ‘अष्ट लक्ष्मी’ हैं। इसलिए, हम ‘एक्ट ईस्ट’ की पॉलिसी पर तो काम कर ही रहे हैं, हमने नॉर्थ ईस्ट के लिए ‘एक्ट फास्ट’ का संकल्प भी लिया है। और इसलिए ‘एक्ट ईस्ट’, ‘एक्ट फास्ट’। आज भी यहाँ हजारों करोड़ रुपए की 30 से ज्यादा परियोजनाओं का लोकार्पण और शिलान्यास हुआ है। इनमें रोड, पावर, टूरिज्म, हेल्थ, एजुकेशन, हर तरह के प्रोजेक्ट शामिल हैं। नॉर्थ सिक्किम के क्षेत्रों में 2023 के बाद जो चुनौतियां आईं, उन्हें भी ध्यान में रखा गया है। जहां-जहां कनेक्टिविटी प्रभावित हुई, वहां उसे फिर से मजबूत करने पर फोकस किया गया है। मैं इनके लिए सिक्किम के आप सभी लोगों को बहुत-बहुत बधाई देता हूं।

साथियों,

हमारे सिक्किम की बहुत बड़ी ताकत उसकी टूरिज़्म इकोनॉमी है। सिक्किम का क्षेत्रफल देश के कुल क्षेत्रफल का एक परसेंट से भी कम है, लेकिन देश की 25 परसेंट से ज्यादा फ्लोरल diversity हमारे सिक्किम में मिलती है। यहाँ पक्षियों की करीब 500 प्रजातियाँ, बटरफ़्लाइज़ की करीब 700 प्रजातियाँ, खूबसूरत फॉरेस्ट कवर, कंचनजंगा का अद्भुत आकर्षण, कितना कुछ है। इसलिए हर कोई बार-बार सिक्किम आना चाहता है।

साथियों,

सिक्किम के टूरिज्म से यहां बहुत बड़ी संख्या में लोगों की आय जुड़ी हुई है। और टूरिज्म तभी बढ़ता है, उस राज्य का इंफ्रास्ट्रक्चर जब बढ़िया हो, तब बढ़ता है। इसीलिए हम सिक्किम की कनेक्टिविटी और यहां इंफ्रास्ट्रक्चर पर सबसे ज्यादा फोकस कर रहे हैं। बीते वर्षों में यहाँ सैकड़ों किलोमीटर हाइवेज का निर्माण हुआ है। गाँव-गाँव तक सड़कों को पहुंचाने के लिए तेजी से काम चल रहा है। ऐसे आधुनिक इंफ्रास्ट्रक्चर पहले जिनकी कल्पना भी नहीं होती थी, आज वो हकीकत बन रहे हैं। बागडोगरा से गंगटोक तक एक्सप्रेसवे का निर्माण हो, सेवोक-रंगपो रेल लाइन हो, ये प्रोजेक्ट सिक्किम को पूरे देश से जोड़ने का जरिया बन रहे हैं। यहां नए नेशनल हाईवेज, उसका निर्माण भी कराया जा रहा है। गंगटोक जैसे शहरों में रिंग रोड जैसी परियोजनाएं भविष्य के लिए जरूरी हैं। इस दिशा में भी काम आगे बढ़ रहा है।

भाइयों-बहनों,

बीजेपी सरकार जो काम आज कर रही है, वो पहले भी हो सकते थे, लेकिन काँग्रेस की सरकारों ने हमेशा सिक्किम के विकास को पीछे धकेला। सेवोक-रंगपो रेल लाइन का ही उदाहरण लीजिए, इस प्रोजेक्ट को 2008-2009 में मंजूरी मिली थी, लेकिन जमीन पर काम नहीं हुआ, कागज पर लटका रहा। परियोजना फाइलों में ही पड़ी रही। केंद्र में बीजेपी सरकार आने के बाद विकास को फिर से गति मिली है। पहली बार सिक्किम तक रेल पहुँचने जा रही है।

साथियों,

पर्यटन को बढ़ावा देने के लिए हमें नए ideas की भी जरूरत होती है। आज हम इसी सोच के साथ काम कर रहे हैं। भालेढूंगा, येन-येंग और पेलिंग में रोपवे का निर्माण इसी का उदाहरण है। भालेढूंगा में स्काइवॉक का भी निर्माण कराया जा रहा है। और अब सिंहशोर Bridge पर ग्लास डेक स्काइवॉक भी बनाने की तैयारी है। नाथूला और नामली जैसी जगहों पर बार्डर एक्सपीरियंस को बेहतर बनाने का काम भी हो रहा है।

साथियों,

हमारी सरकार के इन प्रयासों से आपका जीवन आसान होगा, सिक्किम आने वाले पर्यटकों की संख्या और बढ़ेगी, और आपकी आमदनी में भी वृद्धि होगी। और मैं देशभर के टूरिस्टों को हमेशा आग्रह करता हूं। आप यात्रा के लिए जाएं, आप एडवेंचर टूरिज्म के लिए जाएं, आप एनवायरमेंट टूरिज्म के लिए जाएं, लेकिन जहां जाए, वहां जो लोकल उत्पाद होते हैं, आपकी यात्रा के बजट का 5% वहां से कुछ ना कुछ खरीदना कंपलसरी होना चाहिए। लोकल को वोकल बनाने का रास्ता यहीं से शुरू होता है। आप जहां जाए, वहीं का खाना खाएं, जहां जाए वहीं की चीजें खरीदें, Souvenir के तौर पर ले जाएं। ताकि यहां के लोगों को दूर-दूर पहाड़ों में रहने वाले छोटे-छोटे समूहों को ये जो इतनी बड़ी मात्रा में मेरी बहनें आई हैं, ये इतनी बढ़िया-बढ़िया चीजें बनाती हैं सेल्फ हेल्प ग्रुप में, वो खरीदने वाले लोग देश भर से आने चाहिए और इससे यहां रोजगार के अवसर भी बढ़ेंगे।

साथियों,

सिक्किम में इको-वेलनेस टूरिज़्म का भी बहुत स्कोप है, हम इसे भी प्रमोट कर रहे हैं। स्थानीय लोगों को टूरिज़्म से ज्यादा से ज्यादा आय हो, इसके लिए 1 हजार होमस्टे भी बिल्ड किए जा रहे हैं। Adventure टूरिज़्म के लिए भी इंफ्रास्ट्रक्चर को सपोर्ट किया जा रहा है।

साथियों,

सिक्किम के लिए संभावनाओं का एक और आसमान स्पोर्ट्स में भी है, खेलकूद में भी है। यहाँ के युवाओं ने स्पोर्ट्स में अपनी क्षमता और प्रतिभा को बड़े-बड़े मंचों पर साबित किया है। फुटबाल, बॉक्सिंग, आर्चरी, इन खेलों में यहाँ से निकले खिलाड़ियों ने सिक्किम और देश का नाम रोशन किया है।

साथियों,

इन प्रतिभाओं को आगे बढ़ाने के लिए हम ‘खेलो इंडिया’ और ‘फिट इंडिया’ जैसे मूवमेंट चला रहे हैं। यहाँ की State Sports Academy को भी पुनर्जीवित किया गया है। सिक्किम प्रिमियर लीग जैसी sports events को बढ़ावा दिया जा रहा है, ताकि ज्यादा से ज्यादा संख्या में खिलाड़ियों को खेलने का मौका मिले, उनके खेलने में सुधार आए।

साथियों,

यहाँ जसलाल प्रधान जी के नाम पर state-of-the-art boxing academy का भी प्रस्ताव है। इंटीग्रेटेड स्पोर्ट्स और कल्चरल विलेज जैसे प्रोजेक्ट भी आगे बढ़ रहे हैं। इससे सिक्किम के युवाओं को बेहतर सुविधाएं मिलेंगी, और वे अपने खेल को और चमका भी पाएंगे।

साथियों,

आज जिन प्रोजेक्ट्स का लोकार्पण और शिलान्यास हुआ है, उनमें हेल्थ सेक्टर से जुड़े कई बड़े काम भी शामिल हैं। एक समय था, जब सिक्किम और नॉर्थ ईस्ट को कांग्रेस की सरकारों ने पूरी तरह नजर अंदाज कर रखा था। यहाँ स्वास्थ्य सेवाएं बहुत सीमित होती थीं। इस कारण से टूरिस्ट भी यहाँ आने में संकोच करते थे, लेकिन आज वो चुनौती भी खत्म हो रही है। आज सिक्किम में करीब 200 आयुष्मान आरोग्य मंदिर काम कर रहे हैं। आज यहाँ 4 डिस्ट्रिक्ट हॉस्पिटल्स हैं, Tertiary care हॉस्पिटल है, वेलनेस सेंटर्स हैं, यहाँ आयुष सुविधाओं का भी हजारों लोग लाभ ले रहे हैं। ड्रेजॉन्ग नामग्यल सोवा रिग्पा हॉस्पिटल के लोकार्पण के बाद सिक्किम के हेल्थकेयर सिस्टम को और बूस्ट मिलेगा।

भाइयों-बहनों,

हेल्थ इंफ्रास्ट्रक्चर के साथ-साथ लोगों को सस्ता इलाज भी मिले, हमारी सरकार इसके लिए भी कमिटेड है। पहले हमने गरीबों को मुफ्त इलाज के लिए आयुष्मान कार्ड दिये थे। अब ये सुविधा 70 वर्ष और उससे ऊपर वाले उम्र के सभी बुजुर्गों को भी दी जा रही है। साथ ही, जन औषधि केन्द्रों पर दवाएं भी बेहद सस्ते दामों पर उपलब्ध हैं। इन प्रयासों से यहाँ के लोगों का जीवन तो आसान हुआ ही है, इलाज पर होने वाला आपका खर्च भी कम हो रहा है।

साथियों,

आज आर्थिक प्रगति और संसाधनों को लेकर विश्व का नज़रिया तेजी से बदल रहा है। आज दुनिया sustainable lifestyle की बात कर रही है। आज क्लीन एनर्जी पर दुनिया का फोकस है। आज organic फूड्स को प्राथमिकता दी जा रही है। मुझे खुशी है कि हमारा नॉर्थ ईस्ट और सिक्किम इस futuristic ग्रोथ का बड़ा केंद्र है। सिक्किम ने पूरे देश को दिशा दिखाई है। सिक्किम ने तो 10 साल पहले, 2016 में ही पूरे राज्य को organic state घोषित कर दिया था। हमारा डेमाजोंग अब केवल राइस उत्पादन के लिए नहीं जाना जाता, उसकी पहचान अब organic राइस के लिए होने लगी है। बड़ी इलायची, अदरक, हल्दी, एवोकाडो, कीवी, ऐसे कितने ही उत्पाद देश और दुनिया के बाजार तक पहुँच रहे हैं। सिक्किम में medicinal plants की भी सैकड़ों प्रजातियाँ पाई जाती हैं। ये भी स्थानीय लोगों की आय बढ़ाने का जरिया बन रही है।

साथियों,

Organic और प्राकृतिक खेती का सिक्किम का मॉडल, ये पूरे देश के लिए एक प्रेरणा है। सिक्किम की लाइफस्टाइल, सिक्किम के संकल्प, आज ये देश के विज़न का हिस्सा बन चुके हैं। यहां प्राकृतिक खेती को बढ़ावा देने अब ऑर्गेनिक प्रोसेसिंग प्लांट भी शुरू किये गए हैं। इससे किसानों को बाजार से सीधा जुड़ने का मौका मिल रहा है।

साथियों,

सिक्किम की आर्थिक प्रगति में एक बहुत बड़ी भूमिका यहाँ के सेल्फ हेल्प ग्रुप्स और इन महिलाओं की भी है। इन सेल्फ हेल्प ग्रुप्स के प्रॉडक्ट्स बड़े बाज़ारों तक पहुंचे, डिजिटल इंडिया इसमें एक बड़ी भूमिका निभा रहा है। “स्वयं सिक्किम” जैसे प्लेटफॉर्म आज इन महिलाओं को सशक्त बना रहे हैं।

साथियों,

क्लीन एनर्जी के क्षेत्र में सिक्किम की व्यापक क्षमता मौजूद है। यहाँ के पर्यावरण को भी संरक्षित रखते हुए, हमें सिक्किम के इस potential का और इस्तेमाल करना है। मैं जानता हूं, पर्यावरण संरक्षण, ये सिक्किम के लोगों का स्वभाव है। जब देश ने ‘एक पेड़ मां के नाम’ की पहल शुरू की थी, सिक्किम के लोगों ने कर्तव्य भाव से आगे बढ़ाया, और मुख्यमंत्री जी ने यहां के लोग को प्रेरणा देकर के “मेरो रुख मेरो संतति” पहल भी चला रहे हैं। इसके तहत हर शिशु के जन्म पर 108 पेड़ लगाए जाते हैं। मुझे लगता है ये पहल पूरी दुनिया के लिए एक प्रेरणा है। हमें पर्यावरण से जुड़े अपने प्रयासों को और निष्ठा से आगे बढ़ाना है। ये हमारी ऐसी विरासत है, जो हमें अगली पीढ़ी के लिए सुरक्षित रखना है।

साथियों,

सिक्किम और तेज गति से आगे बढ़े, विकसित भारत के सपने को गति दे, हमें इसके लिए मिलकर मेहनत करनी है। हमें सिक्किम को नई ऊंचाइयों पर लेकर जाना है। इसी संकल्प के साथ एक बार फिर, आप सभी को इस अवसर पर शुभकामनाएं देता हूं। आप सभी के उज्ज्वल भविष्य की कामना करता हूं। और आज 50 वर्ष की यात्रा अब हमें दो पड़ाव पूरे करने हैं। जब

सिक्किम की यात्रा के 100 साल होंगे तब क्या करेंगे? सिक्किम की यात्रा के 75 साल होंगे तब तक क्या करेंगे? और देश की आजादी के 100 साल होंगे, विकसित भारत का सपना जो है, 2047 उसके लिए आज से तैयारी शुरू कर करके संकल्प के साथ हम आगे बढ़े। इसी भावना के साथ फिर एक बार हृदय से मैं आप सबका बहुत-बहुत आभार व्यक्त करता हूं। बहुत-बहुत धन्यवाद। मेरे साथ बोलिए-

भारत माता की जय। भारत माता की जय। भारत माता की जय।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम। वंदे मातरम। वंदे मातरम।

वंदे मातरम।