ಈ ಉಪಕ್ರಮಗಳು ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ಜನರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತವೆ: ಪ್ರಧಾನಮಂತ್ರಿ
ಇಂದು, ರೈಲ್ವೆಯನ್ನು ಆಧುನೀಕರಿಸಲು ದೇಶಾದ್ಯಂತ ತೀವ್ರ ಅಭಿಯಾನ ನಡೆಯುತ್ತಿದೆ, ಈ ಅಭಿಯಾನದಲ್ಲಿ ಪಶ್ಚಿಮ ಬಂಗಾಳ ಹಿಂದೆ ಬೀಳಬಾರದು ಎಂಬುದು ನಮ್ಮ ಸಂಕಲ್ಪವಾಗಿದೆ, ಅದಕ್ಕಾಗಿಯೇ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ರೈಲ್ವೆ ಮೂಲಸೌಕರ್ಯವನ್ನು ವೇಗವಾಗಿ ವಿಸ್ತರಿಸುತ್ತಿದೆ: ಪ್ರಧಾನಮಂತ್ರಿ
ಕೋಲ್ಕತ್ತಾ ಮತ್ತು ಹಾಲ್ದಿಯಾದಂತಹ ಬಂದರುಗಳು ಬಹಳ ಹಿಂದಿನಿಂದಲೂ ಪೂರ್ವ ಭಾರತದ ಪ್ರಮುಖ ವ್ಯಾಪಾರ ಕೇಂದ್ರಗಳಾಗಿವೆ; ಹಾಲ್ದಿಯಾ ಡಾಕ್ ಕಾಂಪ್ಲೆಕ್ಸ್ ಯಾಂತ್ರೀಕರಣಗೊಳ್ಳುತ್ತಿದೆ, ಇದು ಸರಕು ಸಾಗಣೆ ಕಾರ್ಯಾಚರಣೆಯನ್ನು ವೇಗಗೊಳಿಸುತ್ತದೆ, ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ವ್ಯಾಪಾರಕ್ಕೆ ಹೊಸ ಸೌಲಭ್ಯಗಳನ್ನು ಒದಗಿಸುತ್ತದೆ: ಪ್ರಧಾನಮಂತ್ರಿ
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, "ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ" ಎಂದು ಹೇಳಿದರು.
"ಈ ಪರಿವರ್ತಕ ಯೋಜನೆಗಳಿಗಾಗಿ ನಾನು ಪಶ್ಚಿಮ ಬಂಗಾಳ ಮತ್ತು ಇಡೀ ಪೂರ್ವ ಭಾರತದ ಜನರನ್ನು ಅಭಿನಂದಿಸುತ್ತೇನೆ" ಎಂದು ಶ್ರೀ ಮೋದಿ ಹೇಳಿದರು.

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಇಂದು ಕೋಲ್ಕತ್ತಾದ ಈ ಮಣ್ಣಿನಿಂದ ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯಲಾಗುತ್ತಿದೆ. 18 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಯೋಜನೆಗಳು ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಹೊಸ ಆವೇಗ ನೀಡುತ್ತವೆ. ವ್ಯಾಪಾರ ಮತ್ತು ಕೈಗಾರಿಕೆಗಳನ್ನು ಉತ್ತೇಜಿಸುತ್ತವೆ, ಲಕ್ಷಾಂತರ ಜನರ ಜೀವನವನ್ನು ಸುಲಭಗೊಳಿಸುತ್ತವೆ ಮತ್ತು ಅವರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ. ಖರಗ್‌ಪುರ-ಮೋರೆಗ್ರಾಮ್ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡ ನಂತರ, ಪಶ್ಚಿಮ ಬಂಗಾಳದ ಅನೇಕ ಭಾಗಗಳಲ್ಲಿ ಆರ್ಥಿಕ ಚಟುವಟಿಕೆಗಳು ವೇಗಗೊಳ್ಳುತ್ತವೆ. ದುಬ್ರಾಜ್‌ಪುರ ಬೈಪಾಸ್ ಮತ್ತು ಕಾಂಗ್‌ಶಬತಿ ಮತ್ತು ಶಿಲಾಬತಿ ನದಿಗಳ ಮೇಲೆ ನಿರ್ಮಿಸಲಾಗುತ್ತಿರುವ ದೊಡ್ಡ ಸೇತುವೆಗಳು ಸಂಪರ್ಕವನ್ನು ಮತ್ತಷ್ಟು ಸುಧಾರಿಸುತ್ತವೆ. ಈ ಯೋಜನೆಗಳಿಗಾಗಿ ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತದ ಜನರಿಗೆ ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

 

ಸ್ನೇಹಿತರೆ,

ಇಂದು ದೇಶದಲ್ಲಿ ರೈಲ್ವೆಗಳನ್ನು ಆಧುನೀಕರಿಸಲು ತ್ವರಿತ ಅಭಿಯಾನ ನಡೆಯುತ್ತಿದೆ. ಈ ಅಭಿಯಾನದಲ್ಲಿ ಪಶ್ಚಿಮ ಬಂಗಾಳ ಹಿಂದುಳಿಯಬಾರದು ಎಂಬುದು ನಮ್ಮ ಸಂಕಲ್ಪ! ಆದ್ದರಿಂದ, ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ರೈಲ್ವೆ ಮೂಲಸೌಕರ್ಯ ವಿಸ್ತರಿಸಲು ಬಲವಾದ ಪ್ರಯತ್ನಗಳನ್ನು ಮಾಡುತ್ತಿದೆ. ಇಂದು ಕಲೈಕುಂಡ ಮತ್ತು ಕನಿಮಹುಲಿ ವಿಭಾಗಗಳಲ್ಲಿನ ಸ್ವಯಂಚಾಲಿತ ಬ್ಲಾಕ್ ಸಿಗ್ನಲಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಇದು ಜನನಿಬಿಡ ರೈಲು ಮಾರ್ಗಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ, ಪ್ರಯಾಣವನ್ನು ಸುರಕ್ಷಿತಗೊಳಿಸುತ್ತದೆ ಮತ್ತು ಪ್ರಯಾಣಿಕರಿಗೆ ವೇಗ ಮತ್ತು ಅನುಕೂಲತೆ ಹೆಚ್ಚಿಸುತ್ತದೆ.

ಸ್ನೇಹಿತರೆ,

ರಸ್ತೆ ಮತ್ತು ರೈಲು ಸಂಪರ್ಕವು ಮುಖ್ಯವಾದಂತೆಯೇ, ಬಂದರುಗಳು ಮತ್ತು ಜಲ ಸಾರಿಗೆಯೂ ನಿರ್ಣಾಯಕ ಪಾತ್ರ ವಹಿಸುತ್ತದೆ. ದಶಕಗಳಿಂದ ಈ ವಿಷಯದಲ್ಲಿ ಪೂರ್ವ ಭಾರತದ ಸಾಮರ್ಥ್ಯವನ್ನು ನಿರ್ಲಕ್ಷಿಸಲಾಗಿತ್ತು. ಆದರೆ ಇಂದು ಜಲಮಾರ್ಗಗಳು ವ್ಯಾಪಾರ ಮತ್ತು ಕೈಗಾರಿಕಾ ಪ್ರಗತಿಗೆ ಹೊಸ ಮಾರ್ಗಗಳನ್ನು ತೆರೆಯುತ್ತಿವೆ. ಈ ದಿಕ್ಕಿನಲ್ಲಿ, ಪ್ರಮುಖ ಬಂದರು ಮೂಲಸೌಕರ್ಯ ಯೋಜನೆಗಳನ್ನು ಇಂದು ಉದ್ಘಾಟಿಸಲಾಗಿದೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಕೋಲ್ಕೊತಾ ಮತ್ತು ಹಲ್ದಿಯಾದಂತಹ ಬಂದರುಗಳು ಪೂರ್ವ ಭಾರತದಲ್ಲಿ ಬಹಳ ಹಿಂದಿನಿಂದಲೂ ಪ್ರಮುಖ ವ್ಯಾಪಾರ ಕೇಂದ್ರಗಳಾಗಿವೆ. ಹಲ್ದಿಯಾ ಡಾಕ್ ಕಾಂಪ್ಲೆಕ್ಸ್ ಅನ್ನು ಯಾಂತ್ರೀಕರಿಸಲಾಗುತ್ತಿದೆ. ಇದು ಸರಕು ಕಾರ್ಯಾಚರಣೆಗಳನ್ನು ವೇಗಗೊಳಿಸುತ್ತದೆ, ಬಂದರು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ವ್ಯಾಪಾರಕ್ಕಾಗಿ ಹೊಸ ಸೌಲಭ್ಯಗಳನ್ನು ಸೃಷ್ಟಿಸುತ್ತದೆ. ಕೋಲ್ಕೊತಾ ಡಾಕ್ ವ್ಯವಸ್ಥೆಯಲ್ಲಿನ ಬಾಸ್ಕ್ಯೂಲ್ ಸೇತುವೆಯ ನವೀಕರಣವೂ ನಡೆಯುತ್ತಿದೆ. ಖಿದ್ದರ್‌ಪೋರ್ ಡಾಕ್‌ನಲ್ಲಿ ಸರಕು ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸುವತ್ತಲೂ ನಾವು ಗಮನ ಹರಿಸುತ್ತಿದ್ದೇವೆ. ಈ ಎಲ್ಲಾ ಯೋಜನೆಗಳು ಪೂರ್ವ ಭಾರತದ ಸರಕು ಸಾಗಣೆ ವ್ಯವಸ್ಥೆಯನ್ನು ಬಲಪಡಿಸುತ್ತವೆ

 

ಸ್ನೇಹಿತರೆ,

ರಸ್ತೆಗಳು, ರೈಲ್ವೆಗಳು ಮತ್ತು ಬಂದರುಗಳಿಗೆ ಸಂಬಂಧಿಸಿದ ಈ ಹೊಸ ಯೋಜನೆಗಳು ಪಶ್ಚಿಮ ಬಂಗಾಳದ ಆಧುನಿಕ ಭವಿಷ್ಯಕ್ಕಾಗಿ ಹೊಸ ಮಾರ್ಗಗಳನ್ನು ತೆರೆಯುತ್ತಿವೆ. ರೈತರು, ವ್ಯಾಪಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು - ಎಲ್ಲರೂ ಪ್ರಯೋಜನ ಪಡೆಯುತ್ತಾರೆ. ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿಯೂ ಹೊಸ ಅವಕಾಶಗಳು ಉದ್ಭವಿಸುತ್ತವೆ. ಸ್ಥಳೀಯ ಕೈಗಾರಿಕೆಗಳು ಮತ್ತು ಸೇವೆಗಳು ವೇಗ ಪಡೆಯುತ್ತವೆ. ಭಾರತಕ್ಕೆ ಯಾವಾಗಲೂ ಮಾರ್ಗದರ್ಶನ ನೀಡುತ್ತಿರುವ ಬಂಗಾಳವು ಮತ್ತೊಮ್ಮೆ 'ಅಭಿವೃದ್ಧಿ ಹೊಂದಿದ ಬಂಗಾಳ'ವಾಗುವ ಮೂಲಕ ಆ ವೈಭವವನ್ನು ಸಾಧಿಸಬೇಕು ಎಂಬುದು ನಮ್ಮ ಸಂಕಲ್ಪವಾಗಿದೆ. ಬಲವಾದ ಸಂಪರ್ಕ ಮತ್ತು ಆಧುನಿಕ ಮೂಲಸೌಕರ್ಯವು ಅಭಿವೃದ್ಧಿ ಹೊಂದಿದ ಬಂಗಾಳಕ್ಕೆ ಭದ್ರ ಅಡಿಪಾಯ ರೂಪಿಸುತ್ತದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಈ ಹಾರೈಕೆಯೊಂದಿಗೆ, ಈ ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈಗ ಈ ಅಧಿಕೃತ ಕಾರ್ಯಕ್ರಮ ಮುಗಿದ ತಕ್ಷಣ, ನಾನು ಇಡೀ ಬಂಗಾಳವೇ ನೆರೆದಿರುವ ತೆರೆದ ಮೈದಾನಕ್ಕೆ ಹೋಗುತ್ತೇನೆ. ಬಂಗಾಳದ ಜನರನ್ನು ಭೇಟಿ ಮಾಡುವ ಮತ್ತು ಅವರಲ್ಲಿ ಬಹಳ ಮುಖ್ಯವಾದ ವಿಷಯಗಳನ್ನು ಚರ್ಚಿಸುವ ಸೌಭಾಗ್ಯ ನನಗೆ ಸಿಗುತ್ತದೆ. ಈ ಕಾರ್ಯಕ್ರಮ ಇಲ್ಲಿಗೆ ಸಾಕು.

 

ಸ್ನೇಹಿತರೆ,

ರಸ್ತೆಗಳು, ರೈಲ್ವೆಗಳು ಮತ್ತು ಬಂದರುಗಳಿಗೆ ಸಂಬಂಧಿಸಿದ ಈ ಹೊಸ ಯೋಜನೆಗಳು ಪಶ್ಚಿಮ ಬಂಗಾಳದ ಆಧುನಿಕ ಭವಿಷ್ಯಕ್ಕಾಗಿ ಹೊಸ ಮಾರ್ಗಗಳನ್ನು ತೆರೆಯುತ್ತಿವೆ. ರೈತರು, ವ್ಯಾಪಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು - ಎಲ್ಲರೂ ಪ್ರಯೋಜನ ಪಡೆಯುತ್ತಾರೆ. ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿಯೂ ಹೊಸ ಅವಕಾಶಗಳು ಉದ್ಭವಿಸುತ್ತವೆ. ಸ್ಥಳೀಯ ಕೈಗಾರಿಕೆಗಳು ಮತ್ತು ಸೇವೆಗಳು ವೇಗ ಪಡೆಯುತ್ತವೆ. ಭಾರತಕ್ಕೆ ಯಾವಾಗಲೂ ಮಾರ್ಗದರ್ಶನ ನೀಡುತ್ತಿರುವ ಬಂಗಾಳವು ಮತ್ತೊಮ್ಮೆ 'ಅಭಿವೃದ್ಧಿ ಹೊಂದಿದ ಬಂಗಾಳ'ವಾಗುವ ಮೂಲಕ ಆ ವೈಭವವನ್ನು ಸಾಧಿಸಬೇಕು ಎಂಬುದು ನಮ್ಮ ಸಂಕಲ್ಪವಾಗಿದೆ. ಬಲವಾದ ಸಂಪರ್ಕ ಮತ್ತು ಆಧುನಿಕ ಮೂಲಸೌಕರ್ಯವು ಅಭಿವೃದ್ಧಿ ಹೊಂದಿದ ಬಂಗಾಳಕ್ಕೆ ಭದ್ರ ಅಡಿಪಾಯ ರೂಪಿಸುತ್ತದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಈ ಹಾರೈಕೆಯೊಂದಿಗೆ, ಈ ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈಗ ಈ ಅಧಿಕೃತ ಕಾರ್ಯಕ್ರಮ ಮುಗಿದ ತಕ್ಷಣ, ನಾನು ಇಡೀ ಬಂಗಾಳವೇ ನೆರೆದಿರುವ ತೆರೆದ ಮೈದಾನಕ್ಕೆ ಹೋಗುತ್ತೇನೆ. ಬಂಗಾಳದ ಜನರನ್ನು ಭೇಟಿ ಮಾಡುವ ಮತ್ತು ಅವರಲ್ಲಿ ಬಹಳ ಮುಖ್ಯವಾದ ವಿಷಯಗಳನ್ನು ಚರ್ಚಿಸುವ ಸೌಭಾಗ್ಯ ನನಗೆ ಸಿಗುತ್ತದೆ. ಈ ಕಾರ್ಯಕ್ರಮ ಇಲ್ಲಿಗೆ ಸಾಕು.

ತುಂಬು ಧನ್ಯವಾದಗಳು!

ಎಲ್ಲರಿಗೂ ಶುಭಾಶಯಗಳು!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Mapping the subsurface: How ICAR’s ‘Soil Intelligence’ is reshaping India’s mega infrastructure boom

Media Coverage

Mapping the subsurface: How ICAR’s ‘Soil Intelligence’ is reshaping India’s mega infrastructure boom
NM on the go

Nm on the go

Always be the first to hear from the PM. Get the App Now!
...
ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
September 11, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ವಿನೋಬಾ ಭಾವೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರ ಸ್ಫೂರ್ತಿದಾಯಕ 'ಜೈ ಜಗತ್' ಕರೆ ಎಲ್ಲ ಎಲ್ಲೆಗಳನ್ನು ಮೀರಿ, ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನ ನೀಡಿತು ಎಂದು ಪ್ರಧಾನಮಂತ್ರಿಗಳು ಉದ್ಗರಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ವಿವಿಧ ಬಗೆಯ ಪ್ರಯತ್ನ ಮಾಡಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸಮಾನತೆ, ಘನತೆ ಮತ್ತು ಸೇವೆಯ ಬಗೆಗಿನ ಅವರ ಅಚಲ ನಂಬಿಕೆಯು ಅತ್ಯಂತ ತಳಮಟ್ಟದ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಬಲ ನೀಡಿತು ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.

'ಜೈ ಜಗತ್' ಎಂಬ ಅವರ ಸ್ಫೂರ್ತಿದಾಯಕ ಕರೆಯು ಪ್ರತಿ ಗಡಿಯನ್ನೂ ಮೀರಿ ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನವನ್ನು ನೀಡಿತು.

ತಮ್ಮ ವಿವಿಧ ಪ್ರಯತ್ನಗಳ ಮೂಲಕ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಶ್ರಮಿಸಿದರು.

ಸಮಾನತೆ, ಘನತೆ ಮತ್ತು ಸೇವೆಯ ಮೇಲಿನ ಅವರ ಅಚಲ ನಂಬಿಕೆಯು ಅತ್ಯಂತ ದುರ್ಬಲ ವರ್ಗದವರಲ್ಲಿ ಬಲ ತುಂಬಿತು.”