ಭರ್ವಾಡ್ ಸಮುದಾಯದ ಸೇವಾ ಸಮರ್ಪಣೆ, ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಗೋ ರಕ್ಷಣೆಯ ಬದ್ಧತೆಗೆ ಪ್ರಧಾನಮಂತ್ರಿ ಶ್ಲಾಘನೆ
ಗ್ರಾಮಗಳನ್ನು ಅಭಿವೃದ್ಧಿಪಡಿಸುವುದು ವಿಕಸಿತ ಭಾರತ ಕಟ್ಟುವತ್ತ ಮೊದಲ ಹೆಜ್ಜೆಯಾಗಲಿದೆ: ಪ್ರಧಾನಮಂತ್ರಿ
ಆಧುನಿಕತೆಯ ಮೂಲಕ ಸಮುದಾಯವನ್ನು ಸಬಲೀಕರಣಗೊಳಿಸಲು ಶಿಕ್ಷಣವೇ ಪ್ರಬಲ ಅಸ್ತ್ರ: ಪ್ರಧಾನಮಂತ್ರಿ
"ಸಬ್ ಕಾ ಪ್ರಾಯಸ್" ದೇಶದ ಬಹುದೊಡ್ಡ ಶಕ್ತಿ: ಪ್ರಧಾನಮಂತ್ರಿ

ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!

ಮೊಟ್ಟ ಮೊದಲನೆಯದಾಗಿ, ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ, ಎಲ್ಲಾ ಗೌರವಾನ್ವಿತ ಸಂತರು ಮತ್ತು ಮಹಾಂತರಿಗೆ ಮತ್ತು ಈ ಪವಿತ್ರ ಸಂಪ್ರದಾಯ ಸಂರಕ್ಷಿಸಲು ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿಟ್ಟಿರುವ ಎಲ್ಲರಿಗೂ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಇಂದು, ನಮ್ಮ ಸಂತೋಷವು ಹಲವು ಪಟ್ಟು ಹೆಚ್ಚಾಗಿದೆ. ಈ ಬಾರಿ, ಮಹಾಕುಂಭವು ಐತಿಹಾಸಿಕ ಮಾತ್ರವಲ್ಲದೆ ನಮಗೆ ಬಹಳ ಹೆಮ್ಮೆಯ ಕ್ಷಣವೂ ಆಗಿತ್ತು. ಏಕೆಂದರೆ, ಈ ಶುಭ ಸಂದರ್ಭದಲ್ಲಿ, ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಲಾಗಿದೆ. ಇದು ಮಹತ್ವದ ಸಾಧನೆ ಮತ್ತು ನಮಗೆಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ರಾಮ್ ಬಾಪು ಜಿ ಮತ್ತು ನಮ್ಮ ಸಮುದಾಯದ ಎಲ್ಲಾ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಕಳೆದ 1 ವಾರದಲ್ಲಿ, ಭಾವನಗರದ ಪುಣ್ಯಭೂಮಿಯು ಶ್ರೀಕೃಷ್ಣನ ವೃಂದಾವನವಾಗಿ ರೂಪಾಂತರವಾದಂತೆ ಭಾಸವಾಯಿತು, ಇದನ್ನು ಇನ್ನಷ್ಟು ವಿಶೇಷವಾಗಿಸಲು, ನಮ್ಮ ಪೂಜ್ಯ ಸಹೋದರರ ಭಾಗವತ ಕಥೆಯೂ ನಡೆಯಿತು. ಭಕ್ತಿ ಹರಿಯುವ ರೀತಿ ಮತ್ತು ಜನರು ಕೃಷ್ಣನ ಪ್ರೀತಿಯಲ್ಲಿ ಮುಳುಗಿದ ರೀತಿ ನಿಜವಾಗಿಯೂ ದೈವಿಕ ವಾತಾವರಣ ಸೃಷ್ಟಿಸಿತು. ನನ್ನ ಪ್ರೀತಿಯ ಕುಟುಂಬ, ಬವಾಲಿಯಾಲಿ ಧಾಮ್ ಕೇವಲ ಧಾರ್ಮಿಕ ತಾಣವಾಗದೆ, ಇದು ಭರ್ವಾಡ್ ಸಮುದಾಯ ಮತ್ತು ಇತರ ಅನೇಕರಿಗೆ ನಂಬಿಕೆ, ಸಂಸ್ಕೃತಿ ಮತ್ತು ಏಕತೆಯ ಸಂಕೇತವಾಗಿದೆ.

 

ನಾಗ ಲಖಾ ಠಾಕರ್ ಅವರ ಕೃಪೆಯಿಂದ, ಈ ಪವಿತ್ರ ಸ್ಥಳವು ಯಾವಾಗಲೂ ಭರ್ವಾಡ್ ಸಮುದಾಯಕ್ಕೆ ನಿಜವಾದ ಮಾರ್ಗದರ್ಶನ ಮತ್ತು ಉದಾತ್ತ ಸ್ಫೂರ್ತಿಯ ಅಪಾರ ಪರಂಪರೆ ಒದಗಿಸಿದೆ. ಇಂದು, ಈ ಪವಿತ್ರ ಸ್ಥಳದಲ್ಲಿ ಶ್ರೀ ನಾಗ ಲಖಾ ಠಾಕರ್ ದೇವಾಲಯದ ಮರುಪ್ರತಿಷ್ಠಾಪನೆಯು ನಮ್ಮ ಪಾಲಿಗೆ ಸುವರ್ಣ ಅವಕಾಶವಾಗಿದೆ. ಕಳೆದ ವಾರದಿಂದಲೂ ಭವ್ಯ ಆಚರಣೆಯ ವಾತಾವರಣ ತುಂಬಿದೆ. ಸಮುದಾಯದ ಉತ್ಸಾಹ ಮತ್ತು ಸಂಸತ ಗಮನಾರ್ಹವಾಗಿವೆ - ನಾನು ಎಲ್ಲೆಡೆಯಿಂದ ಪ್ರಶಂಸೆಗಳನ್ನು ಕೇಳುತ್ತಲೇ ಇದ್ದೇನೆ. ನನ್ನ ಹೃದಯದಲ್ಲಿ, ನಾನು ನಿಮ್ಮೆಲ್ಲರ ನಡುವೆ ಇರಬೇಕೆಂದು ನನಗೆ ಅನಿಸುತ್ತಿದೆ, ಆದರೆ ಸಂಸತ್ತಿನಲ್ಲಿ ನನ್ನ ಕೆಲಸಗಳ ಬದ್ಧತೆಗಳಿಂದಾಗಿ, ಅದನ್ನು ಬಿಡುವುದು ಕಷ್ಟಕರವಾಗಿದೆ. ಆದಾಗ್ಯೂ, ನಮ್ಮ ಸಾವಿರಾರು ಸಹೋದರಿಯರು ಪ್ರದರ್ಶಿಸಿದ ಭವ್ಯವಾದ 'ರಾಸ್'(ನೃತ್ಯ)ದ ಬಗ್ಗೆ ಕೇಳಿದಾಗ, ನನಗೆ ಅಪಾರ ಸಂತೋಷವಾಗುತ್ತಿದೆ - ಅವರು ನಿಜವಾಗಿಯೂ ವೃಂದಾವನವನ್ನು ಅಲ್ಲಿಯೇ ಜೀವಂತಗೊಳಿಸಿದ್ದಾರೆ!

ನಂಬಿಕೆ, ಸಂಸ್ಕೃತಿ ಮತ್ತು ಸಂಪ್ರದಾಯದ ಮಿಶ್ರಣವು ನಿಜಕ್ಕೂ ಹೃದಯಸ್ಪರ್ಶಿ ಮತ್ತು ಉತ್ತೇಜನಕಾರಿಯಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕಲಾವಿದರು,  ಸಹೋದರ ಸಹೋದರಿಯರು ಈ ಸಂದರ್ಭವನ್ನು ರೋಮಾಂಚಕವಾಗಿಸಿದರು,  ತಮ್ಮ ಪ್ರದರ್ಶನಗಳ ಮೂಲಕ ಸಮಾಜಕ್ಕೆ ಅರ್ಥಪೂರ್ಣ ಸಂದೇಶಗಳನ್ನು ನೀಡಿದರು. ಭಾಯಿ ಜಿ ತಮ್ಮ ಕಥೆ ಹೇಳುವ ಮೂಲಕ ತಮ್ಮ ಬುದ್ಧಿವಂತಿಕೆಯಿಂದ ನಮ್ಮನ್ನು ಬೆಳಗಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಾನು ಎಷ್ಟೇ ಬಾರಿ ನನ್ನ ಕೃತಜ್ಞತೆ ವ್ಯಕ್ತಪಡಿಸಿದರೂ ಅದು ಎಂದಿಗೂ ಸಾಕಾಗುವುದಿಲ್ಲ.

ಈ ಪವಿತ್ರ ಸಂದರ್ಭದಲ್ಲಿ ಭಾಗವಹಿಸಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮಹಾಂತ್ ಶ್ರೀ ರಾಮ್ ಬಾಪು ಜಿ ಮತ್ತು ಬವಾಲಿಯಾಲಿ ಧಾಮ್ ಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ಆದಾಗ್ಯೂ, ಈ ಶುಭ ದಿನದಂದು ನಾನು ನಿಮ್ಮೆಲ್ಲರೊಂದಿಗೆ ಇರಲು ಸಾಧ್ಯವಾಗದ ಕಾರಣ ನಾನು ಕ್ಷಮೆ ಕೋರುತ್ತೇನೆ.  ಆದರೂ ನಾನು ನಿಮಗೆ ಭರವಸೆ ನೀಡುತ್ತೇನೆ, ಭವಿಷ್ಯದಲ್ಲಿ ನಾನು ಆ ಸ್ಥಳಕ್ಕೆ ಭೇಟಿ ನೀಡಿದಾಗಲೆಲ್ಲಾ, ನಾನು ಖಂಡಿತವಾಗಿಯೂ ಭಕ್ತಿಯಿಂದ ತಲೆಬಾಗಿ ನಮಿಸಲು  ಬರುತ್ತೇನೆ.

 

ನನ್ನ ಪ್ರೀತಿಯ ಕುಟುಂಬ ಸದಸ್ಯರೆ,

ಭರ್ವಾಡ್ ಸಮುದಾಯ ಮತ್ತು ಬವಾಲಿಯಾಲಿ ಧಾಮದೊಂದಿಗಿನ ನನ್ನ ಸಂಪರ್ಕವು ಬಹಳ ಹಿಂದಿನಿಂದಲೂ ಇದೆ. ಭರ್ವಾಡ್ ಸಮುದಾಯದ ಸೇವಾ ಮನೋಭಾವ, ಪ್ರಕೃತಿಯ ಮೇಲಿನ ಅವರ ಪ್ರೀತಿ ಮತ್ತು ಗೋಸೇವೆಯ ಮೇಲಿನ ಅವರ ಭಕ್ತಿಯನ್ನು ಕೇವಲ ಪದಗಳಲ್ಲಿ ಹೇಳುವುದು ಕಷ್ಟ. ನಮ್ಮ ಬಾಯಲ್ಲಿ ಯಾವಾಗಲೂ ಬರುವ ಒಂದು ನುಡಿಗಟ್ಟು ಹೀಗಿದೆ:

नगा लाखा नर भला,

पच्छम धरा के पीर।

खारे पानी मीठे बनाये,

सूकी सूखी नदियों में बहाये नीर।

(ನಾಗ ಲಖ, ಉದಾತ್ತ ವ್ಯಕ್ತಿ,

ಪಶ್ಚಿಮ ಭೂಮಿಯ ಸಂತ.

ಅವರು ಉಪ್ಪುನೀರನ್ನು ಸಿಹಿಗೊಳಿಸಿದರು,

ಮತ್ತು ಹರಿಯುವ ತೊರೆಗಳನ್ನು ಒಣಗಿದ ನದಿಗಳಿಗೆ ತಂದರು.)

ಇವು ಕೇವಲ ಪದಗಳಲ್ಲ. ಆ ಕಾಲದಲ್ಲೂ ಸಹ ನಿಸ್ವಾರ್ಥ ಸೇವೆ ಮತ್ತು ಅಸಾಧ್ಯವಾದುದನ್ನು ಸಾಧಿಸುವ ಸಾಮರ್ಥ್ಯ (ಗುಜರಾತಿ ಭಾಷೆಯಲ್ಲಿ ಹೇಳುವಂತೆ, नेवा के पानी मोभे लगा लिए ಅಂದರೆ, ಬತ್ತಿದ ಬಾವಿಯಿಂದ ನೀರು ಸೇದುವುದು) ಅವರ ಕಾರ್ಯಗಳಲ್ಲಿ ಗೋಚರಿಸುತ್ತಿದ್ದವು. ಅವರು ಇಟ್ಟ ಪ್ರತಿಯೊಂದು ಹೆಜ್ಜೆಯೂ ಸೇವೆಯ ಪರಿಮಳ ಹರಡಿತು, ಶತಮಾನಗಳ ನಂತರವೂ ಜನರು ಅವರನ್ನು ನೆನಪಿಸಿಕೊಳ್ಳುತ್ತಲೇ ಇದ್ದಾರೆ - ಅದುವೇ ಒಂದು ದೊಡ್ಡ ಸಾಧನೆ. ಪೂಜ್ಯ ಇಸು ಬಾಪು ಅವರ ನಿಸ್ವಾರ್ಥ ಸೇವೆಯನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಅವರ ಸಮರ್ಪಣೆಯನ್ನು ನಾನು ನನ್ನ ಸ್ವಂತ ಕಣ್ಣುಗಳಿಂದ ನೋಡಿದ್ದೇನೆ. ಗುಜರಾತ್‌ಗೆ ಬರ ಹೊಸದಲ್ಲ. 10 ವರ್ಷಗಳಲ್ಲಿ 7 ವರ್ಷಗಳ ಕಾಲ ಗುಜರಾತ್ ಅನ್ನು ಬರಗಾಲ ಅಪ್ಪಳಿಸುತ್ತಿದ್ದ ಸಮಯವಿತ್ತು. ಗುಜರಾತ್‌ನಲ್ಲಿ, "ಏನು ಬೇಕಾದರೂ ಮಾಡಿ, ಆದರೆ ಧಂಧುಕಾದಲ್ಲಿ(ಬರಪೀಡಿತ ಪ್ರದೇಶ) ನಿಮ್ಮ ಮಗಳನ್ನು ಮದುವೆಯಾಗಬೇಡಿ" ಎಂದು ಹೇಳಲಾಗುತ್ತಿತ್ತು. (ಗುಜರಾತಿಯಲ್ಲಿ: बंदूके देजो पण धंधूके न देता, ಅಂದರೆ "ಧಂಧುಕಾದಲ್ಲಿ ನಿಮ್ಮ ಮಗಳನ್ನು ಮದುವೆ ಮಾಡುವುದಕ್ಕಿಂತ ಅವಳನ್ನು ಗುಂಡಿಕ್ಕಿ ಕೊಲ್ಲುವುದು ಉತ್ತಮ"). ಈ ಮಾತು ಅಸ್ತಿತ್ವದಲ್ಲಿತ್ತು, ಏಕೆಂದರೆ ಧಂಧುಕಾ ಆಗಾಗ್ಗೆ ತೀವ್ರ ಬರಗಾಲದಿಂದ ಬಳಲುತ್ತಿತ್ತು. ಧಂಧುಕಾ ಮತ್ತು ರಣಪುರ್ ಸಹ ಕುಡಿಯುವ ನೀರಿಗಾಗಿ ಪರಾದಾಡುತ್ತಿದ್ದ ಸ್ಥಳಗಳಾಗಿದ್ದವು. ಆ ಸಮಯದಲ್ಲಿ, ಪೂಜ್ಯ ಇಸು ಬಾಪು ಅವರ ನಿಸ್ವಾರ್ಥ ಸೇವೆ ಸ್ಪಷ್ಟವಾಗಿತ್ತು. ಅವರು ಬಳಲುತ್ತಿರುವ ಜನರಿಗೆ ಸೇವೆ ಸಲ್ಲಿಸಿದ ರೀತಿ ಇಂದಿಗೂ ಸ್ಮರಣೀಯವಾಗಿದೆ. ನಾನು ಮಾತ್ರವಲ್ಲ, ಇಡೀ ಗುಜರಾತ್ ರಾಜ್ಯವು ಅವರ ಕೆಲಸವನ್ನು ದೈವಿಕವೆಂದು ಪರಿಗಣಿಸುತ್ತದೆ. ಜನರು ಅವರ ಕೊಡುಗೆಗಳನ್ನು ಹೊಗಳುವುದನ್ನು ನಿಲ್ಲಿಸುವುದಿಲ್ಲ. ಅದು ಅಲೆಮಾರಿ ಸಮುದಾಯಗಳಿಗೆ ಸೇವೆ ಸಲ್ಲಿಸುವುದಿರಲಿ, ಅವರ ಮಕ್ಕಳಿಗೆ ಶಿಕ್ಷಣ ಖಚಿತಪಡಿಸುವುದಿರಲಿ, ಪರಿಸರ ಕಾರಣಗಳಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಳ್ಳುವುದಿರಲಿಲ್ಲಿ ಅಥವಾ ಗಿರ್ ಹಸುಗಳನ್ನು ನೋಡಿಕೊಳ್ಳುವುದಿರಲಿ, ಅವರು ಮಾಡಿದ ಎಲ್ಲ ಸೇವೆಯಲ್ಲಿ ಅವರ ಬದ್ಧತೆಯನ್ನು ಕಾಣಬಹುದು. ಅವರ ಕೆಲಸದ ಮೂಲಕ, ನಿಸ್ವಾರ್ಥ ಸೇವೆಯ ಆಳವಾದ ಬೇರೂರಿರುವ ಸಂಪ್ರದಾಯವನ್ನು ನಾವು ಸ್ಪಷ್ಟವಾಗಿ ನೋಡಬಹುದು.

 

ನನ್ನ ಪ್ರೀತಿಯ ಕುಟುಂಬ ಸದಸ್ಯರೆ,

ಭರ್ವಾಡ ಸಮುದಾಯವು ಎಂದಿಗೂ ಕಠಿಣ ಪರಿಶ್ರಮ ಮತ್ತು ತ್ಯಾಗದಿಂದ ಹಿಂದೆ ಸರಿದಿಲ್ಲ - ಅವರು ಸದಾ ಕಾಲವೂ ಮುಂಚೂಣಿಯಲ್ಲಿದ್ದಾರೆ. ನಾನು ನಿಮ್ಮ ನಡುವೆ ಬಂದಾಗಲೆಲ್ಲಾ ನಾನು ಪ್ರಾಮಾಣಿಕವಾಗಿ ಮಾತನಾಡಿದ್ದೇನೆ ಎಂದು ನಿಮಗೆಲ್ಲರಿಗೂ ತಿಳಿದಿದೆ. ನಾನು ಒಮ್ಮೆ ಭರ್ವಾಡ ಸಮುದಾಯಕ್ಕೆ ಕೋಲುಗಳನ್ನು ಹೊತ್ತೊಯ್ಯುವ ಯುಗ ಮುಗಿದಿದೆ ಎಂದು ಹೇಳಿದ್ದೆ - ನೀವು ಸಾಕಷ್ಟು ಸಮಯದಿಂದ ಕೋಲುಗಳನ್ನು ಹೊತ್ತುಕೊಂಡಿದ್ದೀರಿ, ಆದರೆ ಈಗ ಲೇಖನಿಯ ಯುಗ. ಇಂದು ಗುಜರಾತ್‌ನಲ್ಲಿ ನನ್ನ ಸೇವೆಯ ವರ್ಷಗಳಲ್ಲಿ, ಭರ್ವಾಡ ಸಮುದಾಯದ ಹೊಸ ಪೀಳಿಗೆಯು ಈ ಬದಲಾವಣೆಯನ್ನು ಸ್ವೀಕರಿಸಿದೆ ಎಂದು ನಾನು ಹೆಮ್ಮೆಯಿಂದ ಹೇಳಲೇಬೇಕು. ಮಕ್ಕಳು ಈಗ ಅಧ್ಯಯನ ಮಾಡುತ್ತಿದ್ದಾರೆ, ಪ್ರಗತಿ ಹೊಂದುತ್ತಿದ್ದಾರೆ. ಮೊದಲು ನಾನು "ಕೋಲು ಕೆಳಗಿಟ್ಟು ಪೆನ್ನು ಎತ್ತಿಕೊಳ್ಳಿ" ಎಂದು ಹೇಳುತ್ತಿದ್ದೆ. ಈಗ, ನಾನು ಹೇಳುತ್ತೇನೆ, "ನನ್ನ ಹೆಣ್ಣು ಮಕ್ಕಳ ಕೈಯಲ್ಲಿ ಕಂಪ್ಯೂಟರ್‌ಗಳು ಸಹ ಇರಬೇಕು." ಈ ಬದಲಾಗುತ್ತಿರುವ ಕಾಲದಲ್ಲಿ, ನಾವು ಬಹಳಷ್ಟು ಸಾಧಿಸಬಹುದು - ಇದು ನಮಗೆ ಸ್ಫೂರ್ತಿ ನೀಡುತ್ತದೆ. ನಮ್ಮ ಸಮುದಾಯವು ಪ್ರಕೃತಿಯ ರಕ್ಷಕ. ನೀವು ನಿಜವಾಗಿಯೂ "ಅತಿಥಿ ದೇವೋ ಭವ"(ಅತಿಥಿ ದೇವರು) ಎಂಬ ಮನೋಭಾವ ಜೀವಂತಗೊಳಿಸಿದ್ದೀರಿ. ನಮ್ಮ ಗ್ರಾಮೀಣ ಮತ್ತು ಬಲ್ವಾ ಸಮುದಾಯಗಳ ಸಂಪ್ರದಾಯಗಳ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ವೃದ್ಧಾಶ್ರಮಗಳಲ್ಲಿ ಭರ್ವಾಡ ಸಮುದಾಯದ ಹಿರಿಯರನ್ನು ನೀವು ಕಾಣುವುದಿಲ್ಲ. ಅವರ ಸಂಸ್ಕೃತಿಯಲ್ಲಿ ಅವಿಭಕ್ತ ಕುಟುಂಬಗಳ ಪರಿಕಲ್ಪನೆ ಮತ್ತು ಹಿರಿಯರ ಸೇವೆಯನ್ನು ದೇವರ ಸೇವೆ ಎಂದು ಪರಿಗಣಿಸಲಾಗುತ್ತದೆ. ಅವರು ತಮ್ಮ ಹಿರಿಯರನ್ನು ವೃದ್ಧಾಶ್ರಮಗಳಿಗೆ ಕಳುಹಿಸುವುದಿಲ್ಲ - ಅವರು ಅವರನ್ನು ನೋಡಿಕೊಳ್ಳುತ್ತಾರೆ. ಈ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ರವಾನಿಸುವುದು ಗಮನಾರ್ಹ ಸಾಧನೆಯಾಗಿದೆ. ತಲೆಮಾರುಗಳಿಂದ, ಭರ್ವಾಡ ಸಮುದಾಯದ ನೈತಿಕ ಮತ್ತು ಕೌಟುಂಬಿಕ ಮೌಲ್ಯಗಳನ್ನು ಬಲಪಡಿಸುವ ಪ್ರಯತ್ನಗಳು ನಡೆದಿವೆ.

ನಮ್ಮ ಸಮಾಜವು ತನ್ನ ಸಂಪ್ರದಾಯಗಳನ್ನು ಉಳಿಸಿಕೊಂಡು ಆಧುನಿಕತೆಯತ್ತ ವೇಗವಾಗಿ ಮುನ್ನಡೆಯುತ್ತಿರುವುದನ್ನು ನೋಡಿ ನನಗೆ ಅಪಾರ ತೃಪ್ತಿ ಸಿಕ್ಕಿದೆ. ಅಲೆಮಾರಿ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವುದು ಸಹ ಒಂದು ಉತ್ತಮ ಸೇವೆಯಾಗಿದೆ. ನಮ್ಮ ಸಮುದಾಯವನ್ನು ಆಧುನಿಕತೆಯೊಂದಿಗೆ ಸಂಪರ್ಕಿಸುವುದು ಮತ್ತು ಪ್ರಪಂಚದೊಂದಿಗೆ ಸಂಯೋಜಿಸಲು ಅವಕಾಶಗಳನ್ನು ಸೃಷ್ಟಿಸುವುದು ಸಹ ಒಂದು ನಿರ್ಣಾಯಕ ಜವಾಬ್ದಾರಿಯಾಗಿದೆ. ಈಗ, ನಮ್ಮ ಹೆಣ್ಣು ಮಕ್ಕಳು ಕ್ರೀಡೆಯಲ್ಲೂ ಶ್ರೇಷ್ಠತೆ ಸಾಧಿಸುವುದನ್ನು ನಾನು ನೋಡಲು ಬಯಸುತ್ತೇನೆ. ನಾವು ಈ ಗುರಿಯತ್ತ ಕೆಲಸ ಮಾಡಬೇಕು. ಇದು ಕೂಡ ಒಂದು ಉತ್ತಮ ಸೇವೆಯಾಗಿದೆ. ನಾನು ಗುಜರಾತ್‌ನಲ್ಲಿದ್ದಾಗ, ಖೇಲ್ ಮಹಾಕುಂಭ (ಕ್ರೀಡಾ ಉತ್ಸವ)ದಲ್ಲಿ ಯುವತಿಯರು ಶಾಲೆಗೆ ಹೋಗುವುದನ್ನು ಮತ್ತು ಕ್ರೀಡೆಗಳಲ್ಲಿ ಪದಕಗಳನ್ನು ಗೆಲ್ಲುವುದನ್ನು ನಾನು ನೋಡಿದೆ. ದೇವರು ಅವರಿಗೆ ವಿಶೇಷ ಶಕ್ತಿಯನ್ನು ನೀಡಿದ್ದಾನೆ. ಹಾಗಾಗಿ, ನಾವು ಅವರ ಪ್ರಗತಿಯತ್ತಲೂ ಗಮನ ಹರಿಸಬೇಕು. ನಾವು ನಮ್ಮ ಜಾನುವಾರುಗಳ ಬಗ್ಗೆ ಕಾಳಜಿ ವಹಿಸುತ್ತೇವೆ - ನಮ್ಮ ಜಾನುವಾರುಗಳು ಅನಾರೋಗ್ಯಕ್ಕೆ ಒಳಗಾದರೆ, ಅವುಗಳ ಆರೋಗ್ಯ ಖಚಿತಪಡಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ. ಈಗ, ನಾವು ನಮ್ಮ ಮಕ್ಕಳ ಬಗ್ಗೆ ಅದೇ ಸಮರ್ಪಣೆ ಮತ್ತು ಕಾಳಜಿ ಹೊಂದಿರಬೇಕು. ಬವಾಲಿಯಾಲಿ ಧಾಮ್ ಪಶುಸಂಗೋಪನೆಯಲ್ಲಿ, ವಿಶೇಷವಾಗಿ ಗಿರ್ ಹಸು ತಳಿ ಸಂರಕ್ಷಿಸುವಲ್ಲಿ ಉತ್ತಮ ಸಾಧನೆ ಮಾಡಿದೆ, ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇಂದು, ಗಿರ್ ಹಸುವನ್ನು ವಿಶ್ವಾದ್ಯಂತ ಪ್ರಶಂಸಿಸಲಾಗುತ್ತಿದೆ.

ನನ್ನ ಪ್ರೀತಿಯ ಕುಟುಂಬ ಸದಸ್ಯರೆ,

ಸಹೋದರ ಸಹೋದರಿಯರೆ, ನಾವು ಬೇರೆಯಲ್ಲ, ನಾವೆಲ್ಲರೂ ಒಡನಾಡಿಗಳು. ನಾವು ಯಾವಾಗಲೂ ಒಂದೇ ಕುಟುಂಬದ ಸದಸ್ಯರು ಎಂದು ನನಗೆ ಅನಿಸಿದೆ. ನಾನು ಯಾವಾಗಲೂ ನಿಮ್ಮೊಂದಿಗೆ ಕುಟುಂಬದ ಸದಸ್ಯನಾಗಿ ಇದ್ದೇನೆ. ಇಂದು ಬವಾಲಿಯಾಲಿ ಧಾಮದಲ್ಲಿ ನೆರೆದಿರುವ ಲಕ್ಷಾಂತರ ಜನರನ್ನು ನಾನು ನೋಡುತ್ತಿದ್ದಂತೆ, ನಿಮ್ಮಿಂದ ಏನನ್ನಾದರೂ ಕೇಳುವ ಹಕ್ಕು ನನಗಿದೆ ಎಂದು ನನಗೆ ಅನಿಸುತ್ತದೆ. ನಾನು ನಿಮ್ಮಿಂದ ಏನನ್ನಾದರೂ ಕೇಳಲು ಬಯಸುತ್ತೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂಬ ನಂಬಿಕೆಯಿಂದ ನಾನು ವಿನಂತಿಸುತ್ತಿದ್ದೇನೆ. ನಾವು ಈಗಿರುವಂತೆಯೇ ಇರಲು ಸಾಧ್ಯವಿಲ್ಲ - ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವತ್ತ ನಾವು ಒಂದು ದೊಡ್ಡ ಹೆಜ್ಜೆ ಇಡಬೇಕು, ಕೆಲಸ ಮಾಡಬೇಕು. ನಿಮ್ಮ ಬೆಂಬಲವಿಲ್ಲದೆ ನನ್ನ ಕೆಲಸ ಅಪೂರ್ಣವಾಗಿ ಉಳಿಯುತ್ತದೆ. ಈ ಗುರಿಗಾಗಿ ಇಡೀ ಸಮುದಾಯವು ಒಟ್ಟಾಗಿ ಬರಬೇಕು. ನಾನು ಒಮ್ಮೆ ಕೆಂಪುಕೋಟೆಯಿಂದ 'ಸಬ್ಕಾ ಪ್ರಯಾಸ್'(ಸಾಮೂಹಿಕ ಪ್ರಯತ್ನ) ಎಂದು ಒತ್ತಿ ಹೇಳಿದ್ದನ್ನು ನೀವು ನೆನಪಿಸಿಕೊಳ್ಳಬಹುದು. 'ಸಬ್ಕಾ ಪ್ರಯಾಸ್' ನಮ್ಮ ದೊಡ್ಡ ಶಕ್ತಿ. 'ವಿಕಸಿತ ಭಾರತ'ದತ್ತ ಮೊದಲ ಹೆಜ್ಜೆ ನಮ್ಮ ಹಳ್ಳಿಗಳ ಅಭಿವೃದ್ಧಿಯೊಂದಿಗೆ ಪ್ರಾರಂಭವಾಗುತ್ತದೆ. ಪ್ರಕೃತಿ ಮತ್ತು ಜಾನುವಾರುಗಳಿಗೆ ಸೇವೆ ಸಲ್ಲಿಸುವುದು ನಮ್ಮ ಪವಿತ್ರ ಕರ್ತವ್ಯ. ಅದನ್ನು ಗಮನದಲ್ಲಿಟ್ಟುಕೊಂಡು, ನಾವು ಕೈಗೊಳ್ಳಬೇಕಾದ ಇನ್ನೊಂದು ಪ್ರಮುಖ ಕಾರ್ಯವಿದೆ. ಭಾರತ ಸರ್ಕಾರವು ಕಾಲಬಾಯಿ ರೋಗವನ್ನು ಎದುರಿಸಲು ಸಂಪೂರ್ಣವಾಗಿ ಉಚಿತ ಕಾರ್ಯಕ್ರಮವನ್ನು ನಡೆಸುತ್ತಿದೆ - ಈ ರೋಗವನ್ನು ನಾವು ನಮ್ಮ ಸ್ಥಳೀಯ ಭಾಷೆಯಲ್ಲಿ ಖುರ್ಪಕ-ಮುಹ್ಪಕ ಎಂದು ಕರೆಯುತ್ತೇವೆ. ನಮ್ಮ ಜಾನುವಾರುಗಳನ್ನು ಸಂಪೂರ್ಣವಾಗಿ ರಕ್ಷಿಸಲು, ನಿಯಮಿತ ಲಸಿಕೆ ಹಾಕುವುದು ಅತ್ಯಗತ್ಯ. ಇದು ಕರುಣಾಳು ಕಾರ್ಯವಾಗಿದೆ, ಸರ್ಕಾರವು ಈ ಲಸಿಕೆಗಳನ್ನು ಉಚಿತವಾಗಿ ನೀಡುತ್ತದೆ. ನಮ್ಮ ಎಲ್ಲಾ ಸಮುದಾಯದ ಜಾನುವಾರುಗಳು ನಿಯಮಿತವಾಗಿ ಈ ಲಸಿಕೆಯನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಆಗ ಮಾತ್ರ ನಮಗೆ ಶ್ರೀಕೃಷ್ಣನ ನಿರಂತರ ಆಶೀರ್ವಾದ ಸಿಗುತ್ತದೆ ಮತ್ತು ನಮ್ಮ ಜಾನುವಾರುಗಳು ನಮ್ಮ ಸಹಾಯಕ್ಕೆ ಬರುತ್ತವೆ.

ನಮ್ಮ ಸರ್ಕಾರ ಕೈಗೊಂಡ ಮತ್ತೊಂದು ಪ್ರಮುಖ ಉಪಕ್ರಮವೆಂದರೆ, ಜಾನುವಾರು ಸಾಕಣೆದಾರರಿಗೆ ಆರ್ಥಿಕ ನೆರವು ನೀಡುವುದು. ಈ ಹಿಂದೆ, ರೈತರಿಗೆ ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು ಲಭ್ಯವಿತ್ತು, ಆದರೆ ಈಗ ನಾವು ಜಾನುವಾರು ಸಾಕಣೆದಾರರಿಗೂ ಕ್ರೆಡಿಟ್ ಕಾರ್ಡ್‌ಗಳನ್ನು ಪರಿಚಯಿಸಿದ್ದೇವೆ. ಈ ಕ್ರೆಡಿಟ್ ಕಾರ್ಡ್‌ನೊಂದಿಗೆ, ಜಾನುವಾರು ಮಾಲೀಕರು ತಮ್ಮ ವ್ಯವಹಾರಗಳನ್ನು ವಿಸ್ತರಿಸಲು ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದ ಸಾಲಗಳನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಸ್ಥಳೀಯ ಹಸು ತಳಿಗಳನ್ನು ಸಂರಕ್ಷಿಸಲು ಮತ್ತು ವಿಸ್ತರಿಸಲು ರಾಷ್ಟ್ರೀಯ ಗೋಕುಲ್ ಮಿಷನ್ ಪ್ರಗತಿಯಲ್ಲಿದೆ. ನಿಮಗೆ ನನ್ನ ವಿನಮ್ರ ವಿನಂತಿ ಇದು, ನಾನು ದೆಹಲಿಯಲ್ಲಿ ಈ ಉಪಕ್ರಮಗಳಲ್ಲಿ ಕೆಲಸ ಮಾಡುತ್ತಿದ್ದೇನೆ, ಆದರೆ ನೀವು ಅವುಗಳ ಲಾಭ ಪಡೆಯದಿದ್ದರೆ, ಏನರ್ಥ? ನೀವು ಈ ಕಾರ್ಯಕ್ರಮಗಳಿಂದ ಪ್ರಯೋಜನ ಪಡೆಯಬೇಕು. ಹಾಗೆ ಮಾಡುವುದರಿಂದ, ಲಕ್ಷಾಂತರ ಪ್ರಾಣಿಗಳು ಮತ್ತು ಜೀವಿಗಳ ಆಶೀರ್ವಾದವನ್ನು ನಾನು ಪಡೆಯುತ್ತೇನೆ. ಆದ್ದರಿಂದ, ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಲು ನಾನು ನಿಮ್ಮನ್ನು ವಿನಂತಿಸುತ್ತೇನೆ.

ನಾನು ಈ ಹಿಂದೆ ಉಲ್ಲೇಖಿಸಿರುವ ಮತ್ತು ಇಂದು ಪುನರಾವರ್ತಿಸುವ ಇನ್ನೊಂದು ಪ್ರಮುಖ ವಿಷಯವೆಂದರೆ, ಸಸಿ ನೆಡುವ ಮಹತ್ವ. ಈ ವರ್ಷ, ನಾನು ವಿಶ್ವಾದ್ಯಂತ ಪ್ರಶಂಸಿಸಲ್ಪಟ್ಟ ಅಭಿಯಾನ ಪ್ರಾರಂಭಿಸಿದೆ: 'ಏಕ್ ಪೇಢ್ ಮಾ ಕೆ ನಾಮ್' (ತಾಯಿಯ ಹೆಸರಿನಲ್ಲಿ 1 ಮರ). ನಿಮ್ಮ ತಾಯಿ ಜೀವಂತವಾಗಿದ್ದರೆ, ಅವರ ಸಮ್ಮುಖದಲ್ಲಿ ಒಂದು ಸಸಿ ನೆಡಿ. ಅವರು ನಿಧನರಾಗಿದ್ದರೆ, ಅವರ ನೆನಪಿಗಾಗಿ 1 ಸಸಿ ನೆಡಿ, ಅವರ ಛಾಯಾಚಿತ್ರವನ್ನು ಅದರ ಮುಂದೆ ಇರಿಸಿ. ಭರ್ವಾಡ ಸಮುದಾಯವು ಬಲವಾದ, ದೀರ್ಘಕಾಲ ಬದುಕುವ ಹಿರಿಯರಿಗೆ ಹೆಸರುವಾಸಿಯಾಗಿದೆ, ಅವರಲ್ಲಿ ಹಲವರು 90ರಿಂದ 100 ವರ್ಷಗಳ ಕಾಲ ಬದುಕುತ್ತಾರೆ. ನಾವು ಅವರಿಗೆ ಸೇವೆ ಸಲ್ಲಿಸಲು ಹೆಮ್ಮೆಪಡುತ್ತೇವೆ. ಈಗ ನಮ್ಮ ತಾಯಂದಿರ ಹೆಸರಿನಲ್ಲಿ ಸಸಿಗಳನ್ನು ನೆಡುವುದರಲ್ಲಿ ನಾವು ಹೆಮ್ಮೆಪಡಬೇಕು. ನಾವು ಭೂಮಿ ತಾಯಿಗೆ ಹಾನಿ ಮಾಡಿದ್ದೇವೆ ಎಂದು ಒಪ್ಪಿಕೊಳ್ಳಬೇಕು, ನಾವು ನೀರನ್ನು ಹೊರತೆಗೆದಿದ್ದೇವೆ, ರಾಸಾಯನಿಕಗಳನ್ನು ಸೇರಿಸಿದ್ದೇವೆ, ಅವಳ ಬಾಯಾರಿಕೆಯನ್ನು ಬಿಟ್ಟಿದ್ದೇವೆ ಮತ್ತು ಅವಳ ಮಣ್ಣನ್ನು ವಿಷಪೂರಿತಗೊಳಿಸಿದ್ದೇವೆ. ಭೂಮಿ ತಾಯಿಯ ಆರೋಗ್ಯ ಮರುಸ್ಥಾಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಇದಕ್ಕಾಗಿ, ಜಾನುವಾರು ಗೊಬ್ಬರವು ನಮ್ಮ ಭೂಮಿಗೆ ಸಂಪತ್ತಿನಂತೆ. ಅದು ಮಣ್ಣನ್ನು ಪೋಷಿಸುತ್ತದೆ ಮತ್ತು ಬಲಪಡಿಸುತ್ತದೆ. ಅದಕ್ಕಾಗಿಯೇ ನೈಸರ್ಗಿಕ ಕೃಷಿ ನಿರ್ಣಾಯಕವಾಗಿದೆ. ಭೂಮಿ ಹೊಂದಿರುವವರು ಮತ್ತು ಅವಕಾಶ ಹೊಂದಿರುವವರು ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಬೇಕು. ಗುಜರಾತ್ ರಾಜ್ಯಪಾಲ ಆಚಾರ್ಯ ಅವರು ನೈಸರ್ಗಿಕ ಕೃಷಿ ಉತ್ತೇಜಿಸಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದ್ದರಿಂದ, ನಿಮ್ಮೆಲ್ಲರಿಗೂ ನನ್ನ ವಿನಂತಿ ಏನೆಂದರೆ, ನಮ್ಮಲ್ಲಿ ಯಾವುದೇ ಭೂಮಿ ಇದೆಯೋ ಅದು ದೊಡ್ಡದಾಗಿರಲಿ ಅಥವಾ ಚಿಕ್ಕದಾಗಿರಲಿ, ನಾವು ನೈಸರ್ಗಿಕ ಕೃಷಿಯತ್ತ ಗಮನ ಹರಿಸಬೇಕು, ಭೂಮಿ ತಾಯಿಗೆ ಸೇವೆ ಸಲ್ಲಿಸಬೇಕು.

ಪ್ರಿಯ ಸಹೋದರ ಮತ್ತು ಸಹೋದರಿಯರೆ,

ಮತ್ತೊಮ್ಮೆ, ನಾನು ಭರ್ವಾಡ್ ಸಮುದಾಯಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ನಾಗಾ ಲಖಾ ಠಾಕರ್ ಅವರ ಆಶೀರ್ವಾದ ನಮ್ಮೆಲ್ಲರ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇನೆ. ಬವಾಲಿಯಾಲಿ ಧಾಮ್‌ನೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೂ ಸಮೃದ್ಧಿ ಮತ್ತು ಪ್ರಗತಿ ಸಿಗಲಿ, ಇದು ಠಾಕರ್ ಅವರ ಪಾದಗಳಿಗೆ ಎರಗಿ ನಾನು ಪ್ರಾರ್ಥಿಸುತ್ತಿದ್ದೇನೆ. ನಮ್ಮ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳು ಶಿಕ್ಷಣ ಪಡೆದು ಪ್ರಗತಿ ಹೊಂದುವುದನ್ನು ಮತ್ತು ನಮ್ಮ ಸಮುದಾಯವು ಬಲವಾಗಿ ಬೆಳೆಯುವುದನ್ನು ನೋಡುವುದಕ್ಕಿಂತ ಹೆಚ್ಚಿನದನ್ನು ನಾವು ಏನು ಕೇಳಬಹುದು? ಈ ಶುಭ ಸಂದರ್ಭದಲ್ಲಿ, ಭಾಯಿ ಅವರ ಮಾತುಗಳನ್ನು ಗೌರವಿಸೋಣ ಮತ್ತು ನಮ್ಮ ಸಮುದಾಯವು ತನ್ನ ಶಕ್ತಿ ಉಳಿಸಿಕೊಂಡು ಆಧುನಿಕತೆಯತ್ತ ಸಾಗುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅವುಗಳನ್ನು ಮುಂದಕ್ಕೆ ಕೊಂಡೊಯ್ಯೋಣ. ನನಗೆ ನಿಜವಾಗಿಯೂ ಅಪಾರ ಸಂತೋಷವಾಗಿದೆ. ನಾನು ಖುದ್ದಾಗಿ ಬರಲು ಸಾಧ್ಯವಾದರೆ, ಅದು ಇನ್ನೂ ಹೆಚ್ಚಿನ ಸಂತೋಷ ತರುತ್ತಿತ್ತು.

ಜೈ ಠಾಕರ್!

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
'Operation Sindoor on, if they fire, we fire': India's big message to Pakistan

Media Coverage

'Operation Sindoor on, if they fire, we fire': India's big message to Pakistan
NM on the go

Nm on the go

Always be the first to hear from the PM. Get the App Now!
...
PM Modi's address to the nation
May 12, 2025
Today, every terrorist knows the consequences of wiping Sindoor from the foreheads of our sisters and daughters: PM
Operation Sindoor is an unwavering pledge for justice: PM
Terrorists dared to wipe the Sindoor from the foreheads of our sisters; that's why India destroyed the very headquarters of terror: PM
Pakistan had prepared to strike at our borders,but India hit them right at their core: PM
Operation Sindoor has redefined the fight against terror, setting a new benchmark, a new normal: PM
This is not an era of war, but it is not an era of terrorism either: PM
Zero tolerance against terrorism is the guarantee of a better world: PM
Any talks with Pakistan will focus on terrorism and PoK: PM

ಪ್ರಿಯ ದೇಶವಾಸಿಗಳೇ,

ನಮಸ್ಕಾರ !...

ಕಳೆದ ಕೆಲ ದಿನಗಳಲ್ಲಿ ದೇಶದ ಶಕ್ತಿ ಮತ್ತು ಸಂಯಮ ಎರಡನ್ನೂ ನಾವೆಲ್ಲರೂ ನೋಡಿದ್ದೇವೆ. ಮೊದಲನೆಯದಾಗಿ, ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಭಾರತದ ಬಲಿಷ್ಠ ಪಡೆಗಳಿಗೆ, ನಮ್ಮ ಸಶಸ್ತ್ರ ಪಡೆಗಳಿಗೆ, ನಮ್ಮ ಗುಪ್ತಚರ ಸಂಸ್ಥೆಗಳಿಗೆ ಮತ್ತು ನಮ್ಮ ವಿಜ್ಞಾನಿಗಳಿಗೆ ನಮಸ್ಕರಿಸುತ್ತೇನೆ.

ಆಪರೇಷನ್ ಸಿಂಧೂರದ ಉದ್ದೇಶಗಳನ್ನು ಸಾಧಿಸಲು ನಮ್ಮ ವೀರ ಸೈನಿಕರು ಅಪಾರ ಧೈರ್ಯವನ್ನು ಪ್ರದರ್ಶಿಸಿದರು.

ಇಂದು ನಾನು ಅವರ ಧೈರ್ಯಕ್ಕೆ, ಅವರ ಪರಾಕ್ರಮಕ್ಕೆ, ಅವರ ಶೌರ್ಯಕ್ಕೆ... ನಮ್ಮ ದೇಶದ ಪ್ರತಿಯೊಬ್ಬ ತಾಯಿಗೆ, ದೇಶದ ಪ್ರತಿಯೊಬ್ಬ ಸಹೋದರಿಗೆ ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನಾನು ಈ ಶೌರ್ಯವನ್ನು ದೇಶದ ಪ್ರತಿಯೊಬ್ಬ ಮಗಳಿಗೂ ಅರ್ಪಿಸುತ್ತೇನೆ.

ಸ್ನೇಹಿತರೇ,

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ತೋರಿಸಿದ ಬರ್ಬರತೆ ದೇಶ ಮತ್ತು ಜಗತ್ತನ್ನು ಬೆಚ್ಚಿಬೀಳಿಸಿತ್ತು. ಮುಗ್ಧ ನಾಗರಿಕರು ರಜಾದಿನಗಳನ್ನು ಆಚರಿಸುತ್ತಾ ಅವರ ಕುಟುಂಬಗಳ ಮುಂದಿದ್ದರು. ಆದರೆ, ಮಕ್ಕಳ ಮುಂದೆ ಕ್ರೂರವಾಗಿ ಕೊಲ್ಲುವುದರೊಂದಿಗೆ ಧರ್ಮದ ಬಗ್ಗೆ ಕೇಳುವುದು ಭಯೋತ್ಪಾದನೆಯ ಅತ್ಯಂತ ಭೀಕರ ಮುಖವಾಗಿತ್ತು. ಅದು ಕ್ರೌರ್ಯ. ಇದು ದೇಶದ ಸಾಮರಸ್ಯವನ್ನು ಮುರಿಯುವ ಪ್ರಯತ್ನವೂ ಆಗಿತ್ತು.

ನನಗೆ ವೈಯಕ್ತಿಕವಾಗಿ, ಈ ನೋವು ಅಪಾರವಾಗಿತ್ತು. ಈ ಭಯೋತ್ಪಾದಕ ದಾಳಿಯ ನಂತರ, ಇಡೀ ರಾಷ್ಟ್ರ, ಪ್ರತಿಯೊಬ್ಬ ನಾಗರಿಕ, ಪ್ರತಿಯೊಂದು ಸಮಾಜ, ಪ್ರತಿಯೊಂದು ವರ್ಗ, ಪ್ರತಿಯೊಂದು ರಾಜಕೀಯ ಪಕ್ಷ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಕ್ಕಾಗಿ ಒಂದೇ ಧ್ವನಿಯಲ್ಲಿ ನಿಂತವು. ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಾವು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ.

ಇಂದು ಪ್ರತಿಯೊಬ್ಬ ಭಯೋತ್ಪಾದಕನಿಗೂ, ಪ್ರತಿಯೊಂದು ಭಯೋತ್ಪಾದಕ ಸಂಘಟನೆಗೂ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಹಣೆಯಿಂದ ಸಿಂಧೂರವನ್ನು ತೆಗೆದುಹಾಕುವುದರಿಂದ ಉಂಟಾಗುವ ಪರಿಣಾಮವೇನೆಂದು ತಿಳಿದಿದೆ.

ಸ್ನೇಹಿತರೇ,

ಆಪರೇಷನ್ ಸಿಂಧೂರ... ಇದು ಕೇವಲ ಹೆಸರಲ್ಲ, ಇದು ದೇಶದ ಕೋಟ್ಯಂತರ ಜನರ ಭಾವನೆಗಳ ಪ್ರತಿಬಿಂಬವಾಗಿದೆ.

'ಸಿಂಧೂರ' ಕಾರ್ಯಾಚರಣೆ... ನ್ಯಾಯದ ಅವಿಚ್ಛಿನ್ನ ಪ್ರತಿಜ್ಞೆಯಾಗಿದೆ. ಮೇ 6ರ ತಡರಾತ್ರಿ ಮತ್ತು ಮೇ 7ರ ಬೆಳಿಗ್ಗೆ ಈ ಪ್ರತಿಜ್ಞೆಯು ಫಲಿತಾಂಶವಾಗಿ ಬದಲಾಗುವುದನ್ನು ಇಡೀ ಜಗತ್ತು ನೋಡಿದೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಅಡಗುತಾಣಗಳು ಮತ್ತು ಅವರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಪಡೆಗಳು ನಿಖರವಾದ ದಾಳಿ ನಡೆಸಿವೆ.

ಭಾರತ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದೆಂದು ಭಯೋತ್ಪಾದಕರು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ, ದೇಶವು ಒಗ್ಗಟ್ಟಾದಾಗ ದೇಶ ಮೊದಲು ಎಂಬ ಮನೋಭಾವದಿಂದ ತುಂಬಿದಾಗ ರಾಷ್ಟ್ರವು ಸರ್ವೋಚ್ಚವಾಗಿರುತ್ತದೆ, ನಂತರ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ, ಫಲಿತಾಂಶಗಳನ್ನು ಸಾಧಿಸಲಾಗುತ್ತದೆ.

ಭಾರತದ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದಾಗ, ಭಯೋತ್ಪಾದಕ ಸಂಘಟನೆಗಳ ಕಟ್ಟಡಗಳು ನಾಶವಾದವು. ಅಷ್ಟೇ ಅಲ್ಲದೆ, ಅವುಗಳ ನೈತಿಕ ಸ್ಥೈರ್ಯವೂ ಕಂಪನವಾಯಿತು.

ಬಹಾವಲ್ಪುರ್ ಮತ್ತು ಮುರಿಡ್ಕೆಯಂತಹ ಭಯೋತ್ಪಾದಕ ಅಡಗುತಾಣಗಳು ಒಂದು ರೀತಿಯಲ್ಲಿ ಜಾಗತಿಕ ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿವೆ. ಜಗತ್ತಿನ ಎಲ್ಲೆಡೆ ನಡೆದ ಯಾವುದೇ ಪ್ರಮುಖ ಭಯೋತ್ಪಾದಕ ದಾಳಿ... ಅದು ಸೆಪ್ಟೆಂಬರ್ 11 ಆಗಿರಲಿ ಅಥವಾ ಲಂಡನ್ ಟ್ಯೂಬ್ ಬಾಂಬ್ ದಾಳಿಯಾಗಿರಲಿ ಅಥವಾ ದಶಕಗಳಲ್ಲಿ ಭಾರತದಲ್ಲಿ ನಡೆದಿರುವ ಪ್ರಮುಖ ಭಯೋತ್ಪಾದಕ ದಾಳಿಗಳಾಗಿರಲಿ ಅಥವಾ ಎಲ್ಲೋ, ಮತ್ತೊಂದರಲ್ಲೋ , ಈ ಭಯೋತ್ಪಾದಕ ಅಡಗುತಾಣಗಳೊಂದಿಗೆ ಸಂಬಂಧ ಹೊಂದಿವೆ. ಭಯೋತ್ಪಾದಕರು ನಮ್ಮ ಸಹೋದರಿಯರ ಸಿಂಧೂರವನ್ನು ನಾಶಪಡಿಸಿದ್ದರು. ಅದಕ್ಕಾಗಿಯೇ ಭಾರತವು ಈ ಭಯೋತ್ಪಾದನೆಯ ಪ್ರಧಾನ ಕಚೇರಿಗಳನ್ನು ನಾಶಪಡಿಸಿತು.

ಭಾರತ ನಡೆಸಿದ ಈ ದಾಳಿಗಳಲ್ಲಿ 100 ಕ್ಕೂ ಹೆಚ್ಚು ಭೀಕರ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಕಳೆದ ಎರಡೂವರೆ ಮೂರು ದಶಕಗಳಿಂದ ಪಾಕಿಸ್ತಾನದಲ್ಲಿ ಮುಕ್ತವಾಗಿ ಸುತ್ತಾಡುತ್ತಿದ್ದ ಮತ್ತು ಭಾರತದ ವಿರುದ್ಧ ಪಿತೂರಿ ನಡೆಸುತ್ತಿದ್ದ ಅನೇಕ ಭಯೋತ್ಪಾದಕ ನಾಯಕರನ್ನು ಭಾರತ ಒಂದೇ ಏಟಿನಲ್ಲಿ ನಿರ್ಮೂಲನೆ ಮಾಡಿತು.

ಸ್ನೇಹಿತರೇ,

ಭಾರತದ ಈ ಕ್ರಮದಿಂದ ಪಾಕಿಸ್ತಾನ ತೀವ್ರ ನಿರಾಶೆಗೊಂಡಿದೆ.

ಅವರು ಹತಾಶೆಯಿಂದ ಸುತ್ತುವರೆದಿದ್ದಾರೆ ಮತ್ತು ಕೋಪಗೊಂಡಿದ್ದಾರೆ ಮತ್ತು ಈ ಹತಾಶೆಯಲ್ಲಿ ಅವರು ಮತ್ತೊಂದು ಧೈರ್ಯಶಾಲಿ ಕೃತ್ಯವನ್ನು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತದ ಕ್ರಮವನ್ನು ಬೆಂಬಲಿಸುವ ಬದಲು, ಪಾಕಿಸ್ತಾನ ಭಾರತದ ಮೇಲೆಯೇ ದಾಳಿ ಮಾಡಲು ಪ್ರಾರಂಭಿಸಿತು.

ಪಾಕಿಸ್ತಾನ ನಮ್ಮ ಶಾಲೆಗಳು ಮತ್ತು ಕಾಲೇಜುಗಳನ್ನು ಗುರಿಯಾಗಿಸಿಕೊಂಡಿತು. ಗುರುದ್ವಾರಗಳು, ದೇವಾಲಯಗಳು, ಸಾಮಾನ್ಯ ನಾಗರಿಕರ ಮನೆಗಳು. ಪಾಕಿಸ್ತಾನ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿತು. ಆದರೆ ಇದರಲ್ಲಿ ಪಾಕಿಸ್ತಾನದ ಮನಸ್ಥಿತಿ ಬಹಿರಂಗವಾಯಿತು. ಪಾಕಿಸ್ತಾನದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಭಾರತದ ಮುಂದೆ ಹೇಗೆ ಒಣಹುಲ್ಲಿನಂತೆ ಬಿದ್ದವು ಎಂಬುದನ್ನು ಜಗತ್ತು ನೋಡಿತು.

ಭಾರತದ ಬಲಿಷ್ಠ ವಾಯು ರಕ್ಷಣಾ ವ್ಯವಸ್ಥೆಯು ಅವುಗಳನ್ನು ಆಕಾಶದಲ್ಲಿಯೇ ನಾಶಪಡಿಸಿತು. ಪಾಕಿಸ್ತಾನ ಗಡಿಯಲ್ಲಿ ದಾಳಿ ಮಾಡಲು ಸಿದ್ಧತೆ ನಡೆಸುತ್ತಿತ್ತು. ಆದರೆ ಭಾರತ ಪಾಕಿಸ್ತಾನದ ಎದೆಗೆ ಹೊಡೆದಿದೆ. ಭಾರತೀಯ ಡ್ರೋನ್‌ಗಳು... ಭಾರತೀಯ ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದವು. ಪಾಕಿಸ್ತಾನಿ ವಾಯುಪಡೆಯ ಆ ವಾಯುನೆಲೆಗಳು ಹಾನಿಗೊಳಗಾದವು.

ಅದರ ಬಗ್ಗೆ ಪಾಕಿಸ್ತಾನ ತುಂಬಾ ಹೆಮ್ಮೆಪಡುತ್ತಿತ್ತು. ಮೊದಲ ಮೂರು ದಿನಗಳಲ್ಲಿ ಭಾರತ ಪಾಕಿಸ್ತಾನವನ್ನು ಊಹಿಸಿಯೂ ಇಲ್ಲದಷ್ಟು ನಾಶಮಾಡಿತು.

ಭಾರತದ ಆಕ್ರಮಣಕಾರಿ ಕ್ರಮದ ನಂತರ ಪಾಕಿಸ್ತಾನ ತಪ್ಪಿಸಿಕೊಳ್ಳಲು ದಾರಿಗಳನ್ನು ಹುಡುಕಲು ಪ್ರಾರಂಭಿಸಿತು. ಪಾಕಿಸ್ತಾನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಜಗತ್ತನ್ನು ಬೇಡಿಕೊಳ್ಳುತ್ತಿತ್ತು ಮತ್ತು ಈ ಬಲವಂತದ ಮೇರೆಗೆ, ತೀವ್ರವಾಗಿ ಥಳಿಸಿದ ನಂತರ, ಮೇ 10 ರ ಮಧ್ಯಾಹ್ನ, ಪಾಕಿಸ್ತಾನಿ ಸೇನೆಯು ನಮ್ಮ ಡಿಜಿಎಂಒಗಳು ಅವರನ್ನು ಸಂಪರ್ಕಿಸಿತು.

ಆ ಹೊತ್ತಿಗೆ ನಾವು ಭಯೋತ್ಪಾದನೆಯ ಮೂಲಸೌಕರ್ಯವನ್ನು ದೊಡ್ಡ ಪ್ರಮಾಣದಲ್ಲಿ ನಾಶಪಡಿಸಿದ್ದೆವು. ಭಯೋತ್ಪಾದಕರು ಕೊಲ್ಲಲ್ಪಟ್ಟರು. ನಾವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡಿದ್ದೆವು. ಹಾಗಾಗಿ, ಪಾಕಿಸ್ತಾನದಿಂದ ಮನವಿ ಬಂದಾಗ, ಇದನ್ನು ಪಾಕಿಸ್ತಾನದಿಂದ ಹೇಳಿದಾಗ, ಅವರ ಕಡೆಯಿಂದ ಇನ್ನು ಮುಂದೆ ಯಾವುದೇ ಭಯೋತ್ಪಾದಕ ಚಟುವಟಿಕೆ ಮತ್ತು ಮಿಲಿಟರಿ ಸಾಹಸ ಇರುವುದಿಲ್ಲ ಎಂದು ಹೇಳಿದ್ದರಿಂದ ಭಾರತವೂ ಅದನ್ನು ಪರಿಗಣಿಸಿತು.

ಮತ್ತು ನಾನು ಮತ್ತೊಮ್ಮೆ ಪುನರಾವರ್ತಿಸುತ್ತೇನೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಮತ್ತು ಸೇನಾ ನೆಲೆಗಳ ವಿರುದ್ಧದ ನಮ್ಮ ಪ್ರತೀಕಾರದ ಕ್ರಮವನ್ನು ನಾವು ಮುಂದೂಡಿದ್ದೇವೆ.

ಮುಂದಿನ ದಿನಗಳಲ್ಲಿ ಈ ಮಾನದಂಡದ ಆಧಾರದ ಮೇಲೆ ನಾವು ಪಾಕಿಸ್ತಾನದ ಪ್ರತಿಯೊಂದು ಹೆಜ್ಜೆಯನ್ನೂ ಅಳೆಯುತ್ತೇವೆ.

ದೇಶವಾಸಿಗಳೇ,

ಭಾರತದ ಮೂರೂ ಸೇನೆಗಳು, ನಮ್ಮ ವಾಯುಪಡೆ, ನಮ್ಮ ಸೇನೆ ಮತ್ತು ನಮ್ಮ ನೌಕಾಪಡೆ, ನಮ್ಮ ಗಡಿ ಭದ್ರತಾ ಪಡೆ-ಬಿಎಸ್‌ ಎಫ್‌, ಭಾರತದ ಅರೆ ಸೇನಾ ಪಡೆ ಸತತವಾಗಿ ನಿಗಾ ವಹಿಸಿವೆ. ಸರ್ಜಿಕಲ್‌ ಸ್ಟ್ರೈಕ್‌ ಮತ್ತು ವಾಯು ದಾಳಿಯ ಬಳಿಕ ಈಗ ಆಪರೇಷನ್‌ ಸಿಂಧೂರ್ ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯಾಗಿದೆ. ಆಪರೇಷನ್ ಸಿಂಧೂರವು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಹೊಸ ಆರಂಭವನ್ನು ಮಾಡಿದೆ. ಹೊಸ ಮಾನದಂಡವನ್ನು ಹೊಸ ಅಧ್ಯಾಯವನ್ನು ಸ್ಥಾಪಿಸಿದೆ. ಮೊದಲನೆಯದು , ಭಾರತದ ಮೇಲೆ ಭಯೋತ್ಪಾದಕ ದಾಳಿಯಾದರೆ ದಿಟ್ಟ ಉತ್ತರವನ್ನು ನೀಡಲಾಗುವುದು. ನಾವು ನಮ್ಮ ರೀತಿಯಲ್ಲಿ ನಮ್ಮ ಷರತ್ತುಗಳ ಮೇಲೆ ಉತ್ತರಗಳನ್ನು ನೀಡುತ್ತೇವೆ. ಭಯೋತ್ಪಾದನೆಯ ಮೂಲವನ್ನು ಬುಡ ಸಮೇತವಾಗಿ ನಿಗ್ರಹಗೊಳಿಸಲು ಕಠಿಣ ಕಾರ್ಯಾಚರಣೆಯನ್ನು ಕೈಗೊಳ್ಳುತ್ತೇವೆ. ಎರಡನೇಯದು ಯಾವುದೇ ಪರಮಾಣು ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಪರಮಾಣು ಬೆದರಿಕೆಯ ಅಡಿಯಲ್ಲಿ ಬೆಳೆಯುತ್ತಿರುವ ಭಯೋತ್ಪಾದಕ ತಾಣಗಳ ಮೇಲೆ ಭಾರತವು, ನಿಖರವಾದ ಮತ್ತು ನಿರ್ಣಾಯಕವಾದ ದಾಳಿಗಳನ್ನು ಕೈಗೊಳ್ಳಲಿದೆ. ಮೂರನೇಯದು , ಭಯೋತ್ಪಾದನೆ ಹಾಗೂ ಭಯೋತ್ಪಾದನೆಗೆ ಸಹಕರಿಸುವ ಎಲ್ಲ ಶಕ್ತಿಗಳನ್ನು ಸಹ ಒಂದೇ ದೃಷ್ಟಿಯಲ್ಲಿ ನೋಡಲಾಗುವುದು. ಅವರು ಸಹ ದೇಶದ ಆತಂಕವಾದಿಗಳಾಗಿದ್ದಾರೆ .

ಇಡೀ ವಿಶ್ವ, ಪಾಕಿಸ್ತಾನದ ಹೇಯ ಕೃತ್ಯವನ್ನು ಮತ್ತೊಮ್ಮೆ ನೋಡಿದೆ. ಆಪರೇಷನ್‌ ಸಿಂಧೂರ್‌ ದಾಳಿಯಲ್ಲಿ ಸಾವಿಗೀಡಾದ ಭಯೋತ್ಪಾದಕರಿಗೆ ವಿದಾಯ ನೀಡುವಲ್ಲಿ ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ನಿರತರಾಗಿದ್ದರು. ಪಾಕ್‌ ನ ಪ್ರಾಯೋಜಿತ ಭಯೋತ್ಪಾದನೆಗೆ ಇದೊಂದು ಬಹುದೊಡ್ಡ ಸಾಕ್ಷಿಯಾಗಿದೆ.

ನಾವು ಭಾರತ ಮತ್ತು ನಮ್ಮ ನಾಗರಿಕರನ್ನು ಯಾವುದೇ ರೀತಿಯ ಅಪಾಯದಿಂದ ರಕ್ಷಿಸುವುದಕ್ಕೋಸ್ಕರ ನಿರಂತರವಾಗಿ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತೇವೆ.

ಸ್ನೇಹಿತರೆ,

ಯುದ್ಧದ ಮೈದಾನದಲ್ಲಿ ನಾವು ಪ್ರತಿ ಬಾರಿ ಪಾಕಿಸ್ತಾನವನ್ನು ದೂಳೀಪಟ ಮಾಡಿದ್ದೇವೆ ಮತ್ತು ಈ ಬಾರಿ ಆಪರೇಷನ್‌ ಸಿಂಧೂರ್‌, ಹೊಸ ಆಯಾಮಕ್ಕೆ ಸೇರ್ಪಡೆಯಾಗಿದೆ.

ನಾವು ಮರುಭೂಮಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ನಮ್ಮ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದೇವೆ ಮತ್ತು ಜತೆಗೇ, ಹೊಸ ತಲೆಮಾರಿನ ಯುದ್ಧಕ್ರಮದಲ್ಲೂ ನಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸಿದ್ದೇವೆ.

ಈ ಆಪರೇಷನ್‌ ಮೂಲಕ, ನಮ್ಮ ಮೇಡ್‌ ಇನ್‌ ಇಂಡಿಯಾ ಶಸ್ತ್ರಾಸ್ತ್ರಗಳ ದಕ್ಷತೆಯೂ ಸಾಬೀತಾಗಿದೆ.

21ನೇ ಶತಮಾನದ ಯುದ್ಧದಲ್ಲಿ ಮೇಡ್‌ ಇನ್‌ ಇಂಡಿಯಾ ರಕ್ಷಣಾ ಸಲಕರಣೆಗಳ ಸಮಯ ಈಗ ಬಂದಿದೆ ಎನ್ನುವುದನ್ನು ಇಂದು ವಿಶ್ವ ನೋಡುತ್ತಿದೆ.

ಸ್ನೇಹಿತರೇ,

ಎಲ್ಲ ರೀತಿಯ ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಒಗ್ಗೂಡಿರುವುದು ನಮ್ಮ ಅತ್ಯಂತ ದೊಡ್ಡ ಶಕ್ತಿಯಾಗಿದೆ.

ನಿಶ್ಚಿತವಾಗಿ ಈ ಸಮಯ ಯುದ್ಧದ ಕಾಲವಲ್ಲ,

ಆದರೆ ಈ ಕಾಲ ಭಯೋತ್ಪಾದನೆಯ ಸಮಯವೂ ಅಲ್ಲ.

ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರುವುದು ಉತ್ತಮ ಜಗತ್ತನ್ನು ಸುನಿಶ್ಚಿತಗೊಳಿಸುತ್ತದೆ.

ದೇಶವಾಸಿಗಳೇ,

ಪಾಕಿಸ್ತಾನಿ ಯೋಧರು, ಪಾಕಿಸ್ತಾನದ ಸರ್ಕಾರ ಯಾವ ರೀತಿಯಲ್ಲಿ ಭಯೋತ್ಪಾದನೆಗೆ ಪುಷ್ಟಿ ನೀಡುತ್ತಿವೆ ಎಂದರೆ, ಒಂದು ದಿನ ಅದು ಪಾಕಿಸ್ತಾನವನ್ನೇ ಅಂತ್ಯಗೊಳಿಸುತ್ತದೆ.

ಪಾಕಿಸ್ತಾನಕ್ಕೆ ಇದರಿಂದ ರಕ್ಷಿಸಿಕೊಳ್ಳಬೇಕು ಎಂದಾದರೆ ಅದು ತನ್ನ ಭಯೋತ್ಪಾದನೆಗೆ ಮೂಲಸೌಕರ್ಯ ಒದಗಿಸುವ ವ್ಯವಸ್ಥೆಯನ್ನು ನಿರ್ಮೂಲನೆಗೊಳಿಸಬೇಕು. ಇದನ್ನು ಬಿಟ್ಟು ಶಾಂತಿಯ ಬೇರೆ ಯಾವುದೇ ಮಾರ್ಗವಿಲ್ಲ.

ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಎನ್ನುವುದು ಭಾರತದ ಅತ್ಯಂತ ಸ್ಪಷ್ಟ ನಿಲುವಾಗಿದೆ.

ಭಯೋತ್ಪಾದನೆ ಮತ್ತು ವ್ಯಾಪಾರ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಮತ್ತು,

ನೀರು ಮತ್ತು ರಕ್ತ ಒಟ್ಟಿಗೇ ಹರಿಯಲು ಸಾಧ್ಯವಿಲ್ಲ.

ನಮ್ಮ ಪ್ರಕಟಿತ ನೀತಿಯೆಂದರೆ, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯುತ್ತದೆ ಎಂದಾದರೆ, ಅದು ಭಯೋತ್ಪಾದನೆಯ ಕುರಿತಾಗಿಯೇ ಆಗಿರುತ್ತದೆ. ಪಾಕಿಸ್ತಾನದೊಂದಿಗೆ ಮಾತುಕತೆಯಾಗುವುದಾದರೆ ಪಾಕ್‌ ಆಕ್ರಮಿತ ಕಾಶ್ಮೀರ-ಪಿಓಕೆಯ ಕುರಿತಾಗಿಯೇ ಇರುತ್ತದೆ ಎನ್ನುವುದನ್ನು ನಾನು ಇಂದು ಜಾಗತಿಕ ಸಮುದಾಯಕ್ಕೂ ತಿಳಿಸುತ್ತೇನೆ.

ಪ್ರೀತಿಯ ದೇಶವಾಸಿಗಳೇ,

ಇಂದು ಬುದ್ಧ ಪೂರ್ಣಿಮೆಯಾಗಿದೆ. ಭಗವಾನ್‌ ಬುದ್ಧ ನಮಗೆ ಶಾಂತಿಯ ಮಾರ್ಗವನ್ನು ತೋರಿಸಿಕೊಟ್ಟಿದ್ದಾನೆ. ಶಾಂತಿಯ ಮಾರ್ಗ ಸಹ ಶಕ್ತಿಯಿಂದ ಕೂಡಿದ್ದು ಸಾಗುತ್ತದೆ. ಮಾನವೀಯತೆ, ಶಾಂತಿ ಮತ್ತು ಸಮೃದ್ಧಿಯೆಡೆಗೆ ಮುನ್ನಡೆಯುತ್ತದೆ.

ಪ್ರತಿ ಭಾರತೀಯನು ಶಾಂತಿಯಿಂದ ಬದುಕಬೇಕು, ವಿಕಸಿತ ಭಾರತದ ಕನಸುಗಳನ್ನು ಪೂರ್ಣಗೊಳಿಸಬೇಕು.

ಇದರಿಂದಾಗಿ, ಭಾರತ ಶಕ್ತಿಶಾಲಿಯಾಗುವುದು ಅಗತ್ಯವಾಗಿದೆ.

ಮತ್ತು ಅವಶ್ಯಕತೆಯಿರುವಾಗ ಈ ಶಕ್ತಿಯ ಬಳಕೆ ಮಾಡುವುದು ಕೂಡ ಅಗತ್ಯ.

ಕೆಲವು ದಿನಗಳಿಂದ ಭಾರತವು ಇದನ್ನೇ ಮಾಡಿದೆ.

ನಾನು ಮತ್ತೊಮ್ಮೆ ಭಾರತದ ಸೇನೆ ಮತ್ತು ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸುತ್ತೇನೆ. ನಮ್ಮ ದೇಶವಾಸಿಗಳ ಧೈರ್ಯ ಮತ್ತು ಏಕತೆಗೆ ವಂದಿಸುತ್ತೇನೆ.

ಧನ್ಯವಾದ,

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!

ಭಾರತ ಮಾತಾ ಕೀ ಜೈ!!!