21st century is the century of knowledge, says Prime Minister Modi
India has the potential to become the manufacturing hub for the world: PM Narendra Modi
In history, whenever knowledge has been the driving force of the world, India has provided leadership: PM Modi
Today India is demographically the youngest country in the world, with young dreams full of energy: PM Narendra Modi
The current generation of youngsters don't want to be job seekers. The youth wants to be job creators: PM Modi
Global agencies say India is the fastest growing economy in the world: PM

मंच पर विराजमान सभी वरिष्‍ठ महानुभाव, नौजवान साथियों, और इस समय online नॉर्थ ईस्‍ट के कई विद्यार्थी भी इस समारोह में शरीक हैं। मैं उन सबका भी स्‍वागत करता हूं।

सब से पहले मैं आपसे क्षमा चाहता हूँ क्योंकि मुझे आने में बहुत विलंब हुआ, क्‍योंकि आज सुबह सिक्किम से मुझे चलना था। लेकिन weather साथ नहीं दे रहा था। बार बार समय बदलना पड़ रहा था। लेकिन आखिकार पहुंच ही गया। कभी-कभी देर होती है, लेकिन पहुंचता हूं। आज यहां दो महत्‍वपूर्ण कार्यक्रम हैं। एक तो IIIT का, नये भवन का शिलान्‍यास और दूसरा ICT Academy की शुरूआत। हम सुनते आए हैं कि 21वीं सदी हिन्‍दुस्‍तान की सदी है, लेकिन 21वीं सदी हिन्‍दुस्‍तान की सदी है इसका कारण क्‍या है। तो पूरा विश्‍व ये मानता है कि 21वीं सदी ये ज्ञान की सदी है। information की सदी है और इसलिए information , knowledge के क्षेत्र में जो अगुवाई करेगा वो दुनिया की अगुवाई करेगा। वो लीडरशिप करेगा और दूसरा महत्‍वपूर्ण कारण है आज भारत विश्‍व का सबसे युवा देश है। 65 प्रतिशत जनसख्‍ंया इस देश में 35 साल से कम उम्र की है, कई तो 35 से भी नीचे है। जिस देश मे सदियों से यह परंपरा रही है कि जब-जब मानव जाति नाजुक दौर से गुजरी है हमेशा हमेशा भारत ने नेतृत्‍व किया है और 21वीं सदी में demographic dividend ये हमारी ताकत है इतनी बड़ी संख्‍या में जिस देश के पास नौजवान हों उसके सपने भी नौजवान होते हैं और जवान सपनों में समर्पण का भाव भी होता है, ऊर्जा भी होती है। भारत इस परिस्थिति का फायदा कैसे उठाए, इस अवसर को भारत किस प्रकार से दुनिया के विश्‍व के पटल पर एक शक्ति के रूप में उभर सकें। ये अवसर भी है, चुनौती भी है और जिंदगी बिना चुनौतियों के कभी सफल नहीं होती है। जो चुनौतियों को पार करता है वो ही अवसर को पाता है और वही अवसर को सिद्धि में परिवर्तित कर सकता है। आज पूरे विश्‍व में जितने भी मानको पर चर्चा होती है चाहे वर्ल्‍ड बैंक का रिपोर्ट देख लीजिए। IMF का रिपोर्ट देख लीजिए। credit rating agency, global level की कुछ कहें, एक बात साफ साफ उभर करके आती है और सर्व दूर से एक ही प्रकार से आती है और वो ये कि आज बड़े देशों की सबसे तेज गति से आगे बढ़ने वाली कोई economy है। वो economy का नाम है हिन्‍दुस्‍तान।

आए दिन खबरें आती है कि दुनिया में ये हो रहा है। वो हो रहा है। पूरे विश्‍व में आर्थिक मंदी का माहौल है। विश्‍व आर्थिक संकट में घिरा हुआ है। ऐसे संकट के काल में एक अकेला हिन्‍दुस्‍तान अपने पैरों पर स्थिर खड़ा है और तेज गति से आगे भी बढ़ रहा है और ये भी विश्‍व मानता है कि आने वाले दिनों में भारत इससे भी अधिक गति से आगे बढ़ने वाला है। ये जो अवसर आया है। इस अवसर का फायदा अगर उठाना है। तो हमें हमारी युवा शक्ति पर ध्‍यान केन्द्रित करना होगा और इसलिए सरकार ने जिन बातों पर ध्‍यान दिया है वे बिखरी हुई चीजें नहीं हैं। सरकार में हैं कुछ करना पड़ता है चलो कुछ करते रहें ऐसा भी नहीं हैं। एक के बाद एक कदम एक दूसरे के साथ जुड़े हुए हैं, interlinked हैं। एक के बाद एक कदम अंतिम परिणाम को प्राप्‍त करने का अवसर है। पहली बार इस देश में skill development एक अलग department बनाया गया। पहले क्‍या था। हर department अपने-अपने तरीके से skill department का काम करता था। लेकिन जब इतने बड़े department के एक कोने में skill department चलता है तो उसमें focus नहीं रहता था। चीजें चलती थी, कागज पर सब दिखता था। लेकिन धरती पर नजर नहीं आता था। हमने अलग skill department बनाया और पूरे देश में 21वीं सदी के अनुकूल किस प्रकार का मैन पावर तैयार करना चाहिए, किस प्रकार का Human resource development करना चाहिए और न सिर्फ हिन्‍दुस्‍तान वैश्विक संदर्भ में global perspective में आप कल्‍पना कर सकते हैं जब दुनिया पूरी बूढ़ी हो, दुनिया के पास पैसे हों। उद्योग कारखाने लगे हुए हों। लेकिन चलाने के लिए नौजवान न हो तो क्‍या होगा। पूरी विश्‍व को 2030 के बाद बहुत बड़ी मात्रा में human resource की आवश्‍यकता पड़ने वाली है। globally man power पहुंचाने का काम अगर कोई कर सकता है तो हिन्‍दुस्‍तान कर सकता है। दूनिया के हर कोने में भारत का नौजवान जा करके उस देश के जीवन में बहुत बड़ा योगदान कर सकता है। वो दिन दूर नहीं है। जब पूरे global requirement को अगर ध्‍यान में रखें तो आज से हमारा प्रयास है कि हिन्‍दुस्‍तान में वो Human resource development हो वो man power तैयार हो जो आने वाले दिनों में global requirement को पूरी कर पाएं।

दूसरी तरफ भारत सिर्फ सेवादार बना रहे क्‍या ? ये बात हमें मंजूर नहीं है और इसलिए हमारे देश में Make in India का अभियान चलाया है। आज देश पेट्रोलियम पैदावार के बाद सबसे ज्‍यादा इम्‍पोर्ट जो पहली तीन चार चीजें हैं देश में जिसमे हमारी सबसे ज्‍यादा धन हमारे विदेश में जाता है। उसमें एक है electronic goods का import। चाहे लैपटॉप हो, चाहे मोबाइल फोन हो, चाहे electronic medical devices हो। अब जिस देश में ऐसी बढि़या IIT हो जिस गुवाहाटी के IT के, जो गुवाहाटी यहाँ के IIT के कारण पहचाना जाता है। यहां के IIT ने गुवाहाटी को एक नई पहचान दी है। लेकिन उस देश में electronic goods भी हमें इम्‍पोर्ट करना पड़े । ये अच्‍छी बात है क्‍या। Thermometer भी बाहर से लाना है। बीपी कम हुआ ठीक हुआ नहीं ठीक हुआ वो भी foreign का instrument तय करेगा क्‍या।

दोस्‍तों ये चीजे बदलनी है। मैं आज आपके बीच आया हूं चुनौती को ले करके, कम से कम electronic goods ये तो हम बना सकते हैं ऐसा नहीं हम दुनिया को दे सकते हैं। इस देश के पास टेलेंट की कमी नहीं है, इरादों की भी कमी नहीं है। हर नौजवान के पास कुछ न कुछ करने का इरादा है तो क्‍यों न हम हमारे देश की इस requirement को ध्यान में रखते हुए मेक इन इंडिया की बात को आगे बढ़ाएं। और दुनिया ने भारत के लोगों का लोहा माना है। आज सिलिकॉन मेले में जाइए। Address तो यूएसए का है। लेकिन चेहरा हिन्‍दुस्‍तानी है। हर तीसरी चौथी कंपनी का सीईओ हिन्‍दुस्‍तानी है। 50 परसेंट 60 परसेंट काम करने वाले नौजवान हिन्‍दुस्‍तानी है। इस देश के पास टेलेंट भी है।

भारत ने Mars Mission किया। ऑरबिट में हम पहुंचे। दूनिया में हम पहले देश हैं जो Mars Orbit Mission में पहले ही ट्रायल में सफल हो गये। दुनिया के और देशों में सफलता 20-20-25 बार ट्रायल करने पर मिली। भारत को पहली बार मिल गई। और खर्चा कितना आप गुवाहाटी में एक किलोमीटर ऑटो रिक्‍शा में जाए तो दस रुपया लगता होगा। हम मार्स मिशन में सिर्फ सात रुपए किलोमीटर पर गए। हॉलीवुड की फिल्‍म का जो खर्चा होता है उससे कम खर्चें में हम मार्स मिशन पर पहुंचे। ये कैसे संभव हुआ। हमारे नौजवानों के talent के कारण, तजुर्बे के कारण। कुछ कर गुजरने के इरादे के कारण। जिस देश के पास ये सामर्थ्‍य हो तो वो देश का प्रधानमंत्री make in India का सपना क्‍यों न देखे। हमारा दूसरा क्षेत्र है Defence. क्‍या भारत अपनी सुरक्षा के लिए आजादी के 70 साल के बाद भी औरों पर dependent रहे। अश्रु गैस है न अश्रु गैस, रोने के लिए भी tear gas, वो भी बाहर से लाना पड़ता है। ये स्‍थिति अब बदलनी है दोस्‍तों। हम हमारी रक्षा के लिए जो आवश्‍यकताएं हैं वो तो हम बनाएं। इतना ही नहीं दुनिया को हम supply भी करे, ये ताकत हमारी होनी चाहिए।

हम मोबाइल के बिना जी नहीं सकते और आप में से कई लोग है, मेरे से जुड़े हुए हैं, फेसबुक पर, ट्वीटर पर। कुछ लोग मेरी Narendra Modi app पर भी कुछ न कुछ लिखते रहते हैं गुवाहाटी से। लेकिन मोबाइल फोन बाहर से लाना पड़ता है और इसलिए दोस्‍तों हमारे जो IITs है। हमारी IIIT है। हमारी technical institutions है। वहां make in India का मुझे माहौल create करना है। अभी से विद्यार्थी के मन में विचार होना चाहिए कि मैं शस्‍त्रार्थों की दुनिया में भारत को ये अमानत दूंगा ताकि दुनिया हमें कुछ न कर पाए।

हम ICT के क्षेत्र में जा रहे हैं। ICT हम व्‍यापार-धंधे के लिए नए-नए सॉफ्टवेयर बनाने की ताकत create कर रहे हैं, लेकिन दुनिया के सामने सबसे बड़ी चुनौती है और सारी दुनिया के सामने है। वो चुनौती है, cyber security की। हर कोई परेशान है, कहीं कोई हाई-जैक तो नहीं कर लेगा। मेरी पूरी फाइल चली तो नहीं जाएगी। मैं research कर रहा हूं, कोई उठा तो नहीं ले जाएगा। दुनिया को कोई ठप्‍प तो नहीं कर देगा। हवाई जहाज उड़ता होगा और cyber attack करके उसको वही रोक दिया जा सकता है और फिर वो नीचे ही आएगा। ये संकट है, दुनिया डरी हुई है। technology ने जहां-जहां पर हमको पहुंचाया है तो उसके साथ हमारे सामने चुनौतियां भी आई हैं। क्‍या हमारे विद्यार्थी, हमारे नौजवान विश्‍व को cyber security देने के लिए नेतृत्‍व नहीं कर सकते क्‍या? अगर दुनिया में किसी को भी cyber security की जरूरत होगी, भारत के नौजवान पर उसको भरोसा करना पड़ेगा, तब जाकर के उसका काम होगा। ये नहीं कर सकते क्‍या?

और इसलिए दोस्‍तों skill development से लेकर के make in India. दो दिन पहले आप में से कई लोग शायद मेरे साथ वीडियो कॉंफ्रेंस में जुड़े हुए होंगे। जब मैं दो दिन पहले दिल्‍ली में ‘स्‍टार्ट-अप’ का आरंभ किया। जब मैं पहले ‘स्‍टार्ट-अप’ कह रहा था तो कुछ लोगों को तो पता ही नही पड़ता, क्‍या कह रहा है ये। ‘स्‍टार्ट-अप इंडिया, स्‍टैंड-अप इंडिया’. जब लालकिले से हमने कहा तो ऐसे ही आकर के चला गया विषय। पता ही नहीं चला, कहीं रजिस्‍टर्ड ही नहीं हुआ। लेकिन अभी जब ‘स्‍टार्ट-अप’ का कार्यक्रम हुआ, लाखों नौजवानों ने रजिस्‍ट्रेशन कराया। एक नया mood बना है, देश में। नौजवान सोच रहा है मैं रोजगार के लिए apply नहीं करूंगा, मैं अपने पैरों पर नई चीज खोजकर के दुनिया के बाजार में ले आऊंगा, नए तरीके से ले आऊंगा।

‘स्‍टार्ट-अप’ का एक माहौल बना है। वर्तमान में जो नई पीढ़ी है वो job-seeker नहीं बनना चाहती है, वो job-creator बनना चाहती है और सरकार ‘स्‍टार्ट-अप इंडिया, स्‍टैंड-अप इंडिया’ के भरोसे उसे बल देना चाहती है और इसलिए अभी आपने देखा होगा, हमने कई नई योजनाएं घोषित की है, नए initiative लिए हैं क्‍योंकि भारत दुनिया का ‘स्‍टार्ट-अप’ का capital बन सकता है जिस देश के पास इतनी talent हो, वो दुनिया का capital बन सकता है और मैंने ये देखा, आपने भी शायद टीवी पर इन चीजों को ध्‍यान से देखा होगा, नहीं देखा होगा तो इंटरनेट पर सारी चीजें इन दिनों available है। 22-25-27-30 साल के नौजवान अरबों-खरबों रुपयों का व्‍यापार करने लगे हैं और दो-तीन साल में करने लगे हैं और पांच हजार- दस हजार- 25 हजार लोगों को रोजगार दे रहे हैं just अपना दिमाग और technology का उपयोग करते हुए।

और जमाना App का है, हर चीज का App बनता है और दुनिया जुड़ जाती है। मैं भी अब जुड़ गया लेकिन हमारे नौजवानों की जो बुद्धिमत्‍ता है वो कुछ कर गुजरने की बुद्धिमत्‍ता है और इसलिए skill development से लेकर के ‘स्‍टार्ट-अप’ तक की यात्रा Make in India. पहले Make for India और बाद में Make for Global, ये requirement को पूरा करने के लिए हम आगे बढ़ना चाहते हैं और उसमें technical force एक बहुत बड़ी आवश्‍यकता है। हर हाथ में हुनर होना चाहिए। कभी-कभी हम लोग रोते बैठते हैं। हमारे देश में कुछ ये भी आदत है। समस्‍याएं होती है। हर किसी के नसीब में मक्‍खन पर लकीर करने का सौभाग्‍य नहीं होता है। पत्‍थर पर लकीर करने की ताकत होनी चाहिए और अगर हम अपने आप को युवा कहते हैं तो उसकी पहली शर्त यह होती है कि वो मक्‍खन पर लकीर करने के रास्‍ते न ढूंढे, वो पत्‍थर पर लकीर करने की ताकत के लिए सोचे। अगर यही इरादे लेकर के हम चलते हैं तो हम अपनी तो जिन्‍दगी बनाते हैं लेकिन कइयों की जिन्‍दगी में बदलाव लाने के लिए कारण भी बनते हैं।

तो भारत में हमारी जितनी भी academic institutions है, technical institutions है, हमारी Universities है। चाहे हमारी आईआईटी हो या हमारी आईटीआई हो, छोटी से छोटी technical इकाई से लेकर के, top most technical venture, इन दोनों के अंदर एकसूत्रता होनी चाहिए और हम देश की आवश्‍यकताओं की पूर्ति करने के लिए सामर्थ्‍यवान बने। समस्‍याएं अपने आप उसका रास्‍ता भी खोजकर के आती है। कोई समस्‍या ऐसी नहीं होती जिसकी कोख में समाधान भी पलता न हो। सिर्फ पहचानने वाला चाहिए। हर समस्‍या की कोख में समाधान भी पलता है, उस समाधान को पकड़ने वाला चाहिए, समस्‍या का समाधान निकल आता है।

मैं चाहूंगा मेरे नौजवान चीजों को देखे तो उसके मन में पहले ये न आए कि यार ऐसा क्यों है। जो सो है सो है, यार ये है ऐसा करेंगे तो ये नहीं रहेगा। हम बदलाव ला सकते हैं। हमारी विचार प्रक्रिया को हम बदले।

पिछले दिनों राष्‍ट्रपति भवन में स्‍कूल के कुछ बच्‍चों को बुलाया गया था। हमारे राष्‍ट्रपति जी ऐसे लोगों को काफी encourage करने के अनेक कार्यक्रम करते रहते हैं। तो उन्‍होंने कहा, मोदी जी एक बार आइए, जरा देखिए। आठवीं, नौवीं, दसवीं कक्षा के बच्‍चे थे और मैंने देखा कि ‘स्‍वच्‍छ भारत’ के विषय में technology क्‍या role कर सकती है, कौन-सी innovative equipment create किया जा सकता है जो स्‍वच्‍छ भारत के लिए next requirement जो process है उसको पूरा कर सके। आठवीं-नौवी कक्षा के बच्‍चों ने ऐसी-ऐसी चीजें बनाई थी, मैं हैरान था। इसका मतलब यह हुआ कि हर समस्‍या का समाधान करने के लिए हमारे पास सामर्थ्‍य होता है।

अगर इंडिया के पास million problem है तो हिन्‍दुस्‍तान के पास billion brain भी है और इसलिए दोस्‍तों नया भवन तो मिलेगा। हिन्‍दुस्‍तान के पूर्वी छोर में ये ज्ञान का सूरज ऐसा तेज होकर के निकले कि पूरे हिन्‍दुस्‍तान को ज्ञान से प्रकाशित कर दे, ये मेरी आप सबको शुभकामनाएं हैं। बहुत-बहुत धन्‍यवाद।

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India likely clocked 8%+ growth in early 2026, and remains resilient despite oil shock fears: World Bank official

Media Coverage

India likely clocked 8%+ growth in early 2026, and remains resilient despite oil shock fears: World Bank official
NM on the go

Nm on the go

Always be the first to hear from the PM. Get the App Now!
...
ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05, 2026
The launch of projects across healthcare, aviation, tourism and infrastructure marks a new development push for Daman that will transform lives across the UT: PM
The data released today reflects the strength of India's economy, with growth of 7.7% in FY 2025–26 and 7.8% in the quarter ending March 31: PM
Even amid severe global challenges, the collective efforts of 1.4 billion Indians have ensured that India is not only sustaining itself but also staying ahead of the curve: PM
The National Family Health Survey clearly reflects the government's focus on healthcare. While most deliveries in India earlier took place outside hospitals, today over 90% of all deliveries occur in hospitals: PM
Thanks to Mission Indradhanush, child immunization coverage in India has risen from 60% before 2014 to nearly 90% today: PM

ಭಾರತ್ ಮಾತಾ ಕಿ ಜೈ!

ಭಾರತ್ ಮಾತಾ ಕಿ ಜೈ!

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಆಡಳಿತಾಧಿಕಾರಿ ಪ್ರಫುಲ್ ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಕಲಾಬೆನ್ ದೇಲ್ಕರ್, ದಮನ್ ಪುರಸಭೆಯ ಅಧ್ಯಕ್ಷೆ ದೀಪಿಕಾ ತಂಡೇಲ್ ಜೀ, ದಮನ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಧರ್ಮ ಬಾಬು ಪಟೇಲ್, ಸಿಲ್ವಾಸ್ಸಾ ಪುರಸಭೆಯ ಅಧ್ಯಕ್ಷ ಸೋಮನಾಥ್ ದೇವ್ರೆ ಜೀ, ದಾದ್ರಾ ನಗರ ಹವೇಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಿಶಾ ಭಾವ್ಸರ್ ಜೀ, ದಿಯು ಪುರಸಭೆಯ ಅಧ್ಯಕ್ಷ ಹರೀಶ್ ಕಪಾಡಿಯಾ ಜೀ, ದಿಯು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೋಟಿಯಾ ರಂಜಿತಾಬೆನ್ ಮತ್ತು ಇಲ್ಲಿ ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು  ಸಹೋದರಿಯರೇ,

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

 

ಸ್ನೇಹಿತರೇ,

ಕೆಲವು ವರ್ಷಗಳ ಹಿಂದೆ, ನಾನು ನಿಮ್ಮ ಬಳಿಗೆ ಬಂದಾಗ, ನಮ್ಮ ದಮನ್ ವೇಗವಾಗಿ ಮಿನಿ ಇಂಡಿಯಾ ಆಗುತ್ತಿದೆ ಎಂದು ಹೇಳಿದ್ದೆ, ಮತ್ತು ಇಂದು ನಾನು ನೋಡುತ್ತಿದ್ದೇನೆ, ಎಡಭಾಗದಲ್ಲಿ ಇಡೀ ಬಂಗಾಳ ಮತ್ತು ಬಲಭಾಗದಲ್ಲಿ ಇಡೀ ಅಸ್ಸಾಂ ಇದೆ. ದಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ. ಇಲ್ಲಿ ವಾಸಿಸುವ ವಿವಿಧ ಪ್ರದೇಶಗಳ ಜನರು, ನಿಮ್ಮಲ್ಲಿರುವ ವೈವಿಧ್ಯತೆಯು ಇಡೀ ಭಾರತದ ಸುಂದರ ನೋಟವನ್ನು ನೀಡುತ್ತದೆ. ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ತುಂಬಾ ಆಭಾರಿ.

ಸಹೋದರರೇ ಮತ್ತು  ಸಹೋದರಿಯರೇ,

ದಮನ್ ಮತ್ತು ದಿಯುಗೆ ಹಲವು ಬಾರಿ ಬರುವ ಅವಕಾಶ ನನಗೆ ಸಿಕ್ಕಿದೆ. ನಾನು ದಾದ್ರಾ ಮತ್ತು ನಗರ ಹವೇಲಿಗೆ ಕೂಡಾ ಭೇಟಿ ನೀಡುತ್ತಲೇ ಇರುತ್ತೇನೆ, ಮತ್ತು ನಾನು ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಿಲ್ಲದಿದ್ದಾಗ, ನಾನು ಇಲ್ಲಿಗೆ ಹಲವು ಬಾರಿ ಬರುತ್ತಿದ್ದೆ. ಆದರೆ ಈಗ ನಾನು ಇಲ್ಲಿಗೆ ಬಂದು ಉತ್ತಮ ಆಡಳಿತ, ಆಡಳಿತ ಮಾದರಿಯನ್ನು ನೋಡಿದಾಗ, ಅದು ತುಂಬಾ ಚೆನ್ನಾಗಿದೆ ಎಂಬ ಭಾವನೆ ತರುತ್ತದೆ. ಕಳೆದ ಬಾರಿಗೆ ಹೋಲಿಸಿದಾಗ  ಈ ಬಾರಿ ಈ ಪ್ರದೇಶವು ಅಭಿವೃದ್ಧಿಯ ಹಾದಿಯಲ್ಲಿ ಮೈಲುಗಳಷ್ಟು ಮುಂದೆ ಸಾಗಿದೆ ಎಂದು ನನಗೆ ಅನಿಸುತ್ತದೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ದಶಕಗಳಿಂದ ಅಭಿವೃದ್ಧಿಯ ಕನಸು ಕಂಡಿದ್ದವು. ಹಿಂದೆ ಕನಸು ಕಂಡಿದ್ದ ತಲೆಮಾರುಗಳ ಜನರು ನಿಧನರಾದರು. ಆದರೆ ಇಂದು ಇಂದಿನ ಪೀಳಿಗೆ ತಮ್ಮ ಹೆತ್ತವರು ಮತ್ತು ಅಜ್ಜಿಯರು ಕಂಡ ಕನಸುಗಳು ಈಗ ತಮ್ಮ ಕಣ್ಣ ಮುಂದೆಯೇ ನನಸಾಗುತ್ತಿರುವುದನ್ನು ನೋಡುತ್ತಿದ್ದಾರೆ. ಇಂದು, ಸಂಪರ್ಕ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ. ಈ ಅಭಿವೃದ್ಧಿ ಕಾರ್ಯಗಳು ದಮನ್ ಮತ್ತು ಇಡೀ ಕೇಂದ್ರಾಡಳಿತ ಪ್ರದೇಶದ ಜನರಿಗೆ ಜೀವನವನ್ನು ಸುಲಭಗೊಳಿಸುತ್ತದೆ. ಅವು ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. ಈ ಕೆಲಸಗಳ ಹಿಂದೆ, ಪ್ರಫುಲ್ ಭಾಯಿ ಪಟೇಲ್ ಅವರ ಮತ್ತು ಅವರ ತಂಡದ ಕಠಿಣ ಪರಿಶ್ರಮದ ದೃಷ್ಟಿಕೋನವು ಸ್ಪಷ್ಟವಾಗಿ ಗೋಚರಿಸುತ್ತದೆ. ಇದಕ್ಕಾಗಿ, ನಾನು ಪ್ರಫುಲ್ ಭಾಯಿ ಮತ್ತು ಅವರ ಇಡೀ ತಂಡವನ್ನು ಸಹ ಶ್ಲಾಘಿಸುತ್ತೇನೆ. ಲಕ್ಷದ್ವೀಪ ಮತ್ತು ದಾದ್ರಾ-ನಗರ ಹವೇಲಿಯ ಜನರಿಗೆ ನಾನು ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೇ,

ಇಂದು ನಾನು ನಿಮ್ಮ ನಡುವೆ ಬಂದಿರುವಂತೆಯೇ, ಒಂದು ಒಳ್ಳೆಯ ಸುದ್ದಿ ಬಂದಿದೆ. ನಾನು ಇಂದು ಬೆಳಿಗ್ಗೆ ದೆಹಲಿಯಿಂದ ಹೊರಟಿದ್ದೆ, ಆದರೆ ಇದೀಗ ಬಂದಿರುವ ಅಂಕಿಅಂಶಗಳು, ಬಂದಿರುವ ಸುದ್ದಿಗಳು ನಿಜಕ್ಕೂ ಸಂತೋಷಕರವಾಗಿವೆ ಮತ್ತು ನಾನು ಈ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಇಂದು ಬಂದಿರುವ ಅಂಕಿಅಂಶಗಳು ಭಾರತದ ಆರ್ಥಿಕತೆಯ ಅಡಿಪಾಯ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ. 2025-26ನೇ ವರ್ಷದಲ್ಲಿ, ಅಂದರೆ, ಇದೀಗ ಕೊನೆಗೊಂಡಿರುವ ಹಣಕಾಸು ವರ್ಷದಲ್ಲಿ, ಭಾರತವು ಶೇಕಡಾ 7.7, 7.7 ರ ಬೆಳವಣಿಗೆಯ ದರವನ್ನು ಸಾಧಿಸಿದೆ ಮತ್ತು ಮಾರ್ಚ್ 31 ರಂದು ಕೊನೆಗೊಂಡ ಕೊನೆಯ ತ್ರೈಮಾಸಿಕವು ಭಾರತದ ಬೆಳವಣಿಗೆಯನ್ನು ಶೇಕಡಾ 7.8, 7.8 ರಷ್ಟು ಎಂದು ದಾಖಲಿಸಿದೆ. ಮತ್ತು ಇದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು, ಇದು ಅದರ ವೇಗ. ಇಂದು ದೇಶವು ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿ ಓಡುತ್ತಿದೆ, ಇಂದು ದೇಶವು ಅಂತಹ ಬೃಹತ್ ಮೂಲಸೌಕರ್ಯ ಅಭಿವೃದ್ಧಿಯನ್ನು ವೀಕ್ಷಿಸುತ್ತಿದೆ, ಬಡವರ ಕಲ್ಯಾಣಕ್ಕಾಗಿ ಅಂತಹ ದೊಡ್ಡ ಪ್ರಮಾಣದ ಕೆಲಸವನ್ನು ಮಾಡಲಾಗುತ್ತಿದೆ ಮತ್ತು ಈ ಎಲ್ಲಾ ಪ್ರಯತ್ನಗಳ ಫಲಿತಾಂಶವೆಂದರೆ ಇಂದು ದೇಶವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ. ಮತ್ತು ನಮಗೆಲ್ಲರಿಗೂ ತಿಳಿದಿದೆ, ಜಗತ್ತು ಬಿಕ್ಕಟ್ಟುಗಳಲ್ಲಿ ಮುಳುಗಿದೆ, ಇಡೀ ಪ್ರಪಂಚದ ಆರ್ಥಿಕತೆಗಳು ಪ್ರಶ್ನಾರ್ಥಕ ಚಿಹ್ನೆಗಳ ಅಡಿಯಲ್ಲಿ ಹೂತುಹೋಗಿವೆ, ಆದರೆ ಜಾಗತಿಕ ಬಿಕ್ಕಟ್ಟಿನ ಈ ಕೆಟ್ಟ ಸಮಯದಲ್ಲಿಯೂ ಸಹ, 1.4 ಶತಕೋಟಿ ದೇಶವಾಸಿಗಳ ಸಾಮೂಹಿಕ ಪ್ರಯತ್ನಗಳಿಂದ, ಭಾರತವು ತನ್ನನ್ನು ತಾನು ಉಳಿಸಿಕೊಳ್ಳಲು ಮಾತ್ರವಲ್ಲದೆ ಮುಂದೆ ಬರುವಲ್ಲಿಯೂ ಯಶಸ್ವಿಯಾಗಿದೆ. ಆರ್ಥಿಕ ಕ್ಷೇತ್ರದಲ್ಲಿ ಈ ಹೊಸ ಎತ್ತರವನ್ನು ಸಾಧಿಸಿದ್ದಕ್ಕಾಗಿ ನಾನು ದೇಶವಾಸಿಗಳಿಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಪ್ರಪಂಚದಾದ್ಯಂತ ಚಾಲ್ತಿಯಲ್ಲಿರುವ ಈ ಬಿಕ್ಕಟ್ಟುಗಳನ್ನು ಎದುರಿಸುವಾಗ, ದೇಶವು ದೃಢ ಸಂಕಲ್ಪದೊಂದಿಗೆ, ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯ ಹಾದಿಯಲ್ಲಿ ವೇಗವಾಗಿ ಮುಂದುವರಿಯುತ್ತದೆ ಎಂದು ನಾನು ಮತ್ತೊಮ್ಮೆ ರಾಷ್ಟ್ರಕ್ಕೆ ಭರವಸೆ ನೀಡುತ್ತೇನೆ. ಇದು ದೇಶವಾಸಿಗಳಿಗೆ ನನ್ನ ಭರವಸೆ.

 

ಸ್ನೇಹಿತರೇ,

ಇಂದು ಅಭಿವೃದ್ಧಿಯು ಬಹಳ ಮುಖ್ಯ ಮತ್ತು  ನಮ್ಮ ಅಭಿವೃದ್ಧಿ ಮಾದರಿ ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ. ಇಂದು, ವಿಶ್ವ ಪರಿಸರ ದಿನದಂದು, ನಮ್ಮ ಕೇಂದ್ರಾಡಳಿತ ಪ್ರದೇಶವು ಈ ನಿರ್ಣಯವನ್ನು ಸಾಕಾರಗೊಳಿಸುತ್ತಿದೆ. ಇಂದು, ಒಂದೆಡೆ, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಶಂಕುಸ್ಥಾಪನೆ ಮಾಡಲಾಗಿದೆ. ಅದೇ ಸಮಯದಲ್ಲಿ, ತಾಯಿಯ ಹೆಸರಿನಲ್ಲಿ ಸುಮಾರು ಒಂದು ಲಕ್ಷ ಒಂದು ಗಿಡಗಳು, ಒಂದು ಲಕ್ಷ ಸಸಿಗಳನ್ನು ಸಹ ಇಲ್ಲಿ ನೆಡಲಾಗುತ್ತಿದೆ. ಸರಕಾರಿ ಕಟ್ಟಡಗಳಲ್ಲಿ ಸೌರಶಕ್ತಿಯ 100 ಪ್ರತಿಶತ ಬಳಕೆಯ ಸಾಧನೆಯನ್ನು ಸಾಧಿಸಿರುವ ಕೇಂದ್ರಾಡಳಿತ ಪ್ರದೇಶ ಇದಾಗಿದೆ ಎಂದು ನನಗೆ ಹೆಮ್ಮೆ ಇದೆ. ಇಂದು, ದಿಯುನಲ್ಲಿ, ಸಂಪೂರ್ಣ ಹಗಲಿನ ವಿದ್ಯುತ್ ಬೇಡಿಕೆಯನ್ನು ಸೌರಶಕ್ತಿಯಿಂದಲೇ ಪೂರೈಸಲಾಗುತ್ತಿದೆ ಮತ್ತು ನಾವು ಇದನ್ನು ಮತ್ತಷ್ಟು ಮುಂದುವರಿಸಬೇಕಾಗಿದೆ. ಸೌರಶಕ್ತಿಯ ಮೂಲಕ ಮನೆಗಳಲ್ಲಿಯೂ ವಿದ್ಯುತ್ ಲಭ್ಯವಿರಬೇಕು ಮತ್ತು ಅಷ್ಟೇ ಅಲ್ಲ, ಕುಟುಂಬಗಳು ಹೆಚ್ಚುವರಿ ವಿದ್ಯುತ್‌ನಿಂದ ಆದಾಯವನ್ನು ಗಳಿಸಬೇಕು. ಇದಕ್ಕಾಗಿ, ಮೇಲ್ಛಾವಣಿಯ ಸೌರ ಸ್ಥಾವರಗಳನ್ನು ಸ್ಥಾಪಿಸುವ ಉಪಕ್ರಮವು ಪ್ರಾರಂಭವಾಗಿದೆ. ಈ ಸಾಧನೆಗಳಿಗಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ಇದರೊಂದಿಗೆ, ದಮನ್‌ನ ಜನರು ಇತ್ತೀಚಿನ ದಿನಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಇದು ಸ್ವಚ್ಛತೆ ಹೇಗೆ ದಮನ್‌ನ ಸಾರ್ವಜನಿಕ ಜೀವನದ ಸಂಸ್ಕೃತಿಯ ಭಾಗವಾಗಿ ಮಾರ್ಪಟ್ಟಿದೆ ಎಂಬುದನ್ನು ತೋರಿಸುತ್ತದೆ ಮತ್ತು ಈ ಸಂಸ್ಕೃತಿಯು ಸ್ವಚ್ಛತಾ ಪ್ರಯತ್ನಗಳಲ್ಲಿ ಗೋಚರಿಸುತ್ತದೆ. ಈ ಭಾಗವಹಿಸುವ ಪ್ರಯತ್ನಗಳಿಗಾಗಿ ನಾನು ದಮನ್ ಜನರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ದಾದ್ರಾ ನಗರ ಹವೇಲಿ, ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಭಾರತದ ಗುರುತು ಮತ್ತು ಪರಂಪರೆಯೂ ಆಗಿದೆ. ಆದ್ದರಿಂದ, ಅದರ ಅಭಿವೃದ್ಧಿಗಾಗಿ ನಮ್ಮ ಗುರಿಗಳು ಸಾಮಾನ್ಯವಲ್ಲ. ಕಳೆದ ವರ್ಷ ನಾನು ಸಿಲ್ವಾಸ್ಸಾಗೆ ಬಂದಾಗ, ನಾನು ನಿಮಗೆ ಸಿಂಗಾಪುರದ ಉದಾಹರಣೆಯನ್ನು ನೀಡಿದ್ದೇನೆ ಎಂದು ನನಗೆ ನೆನಪಿದೆ. ಒಂದು ಕಾಲದಲ್ಲಿ ಸಿಂಗಾಪುರವು ಒಂದು ಸಣ್ಣ ಮೀನುಗಾರಿಕಾ ಹಳ್ಳಿಯಾಗಿತ್ತು ಎಂದು ನಾನು ಹೇಳಿದ್ದೆ. ಆದರೆ ಸಿಂಗಾಪುರದ ಜನರು ಕನಸು ಕಂಡರು, ಅವರು ದೊಡ್ಡ ಗುರಿಗಳನ್ನು ಹೊಂದಿದ್ದರು ಮತ್ತು ಇಂದು ಅದೇ ಸಿಂಗಾಪುರವು ವಿಶ್ವದ ಅತಿದೊಡ್ಡ ವ್ಯಾಪಾರ ಕೇಂದ್ರವಾಗಿದೆ. ಇಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಕೂಡ ಅದೇ ಕನಸನ್ನು ಕಾಣುತ್ತಿವೆ. ನಮೋ ವಿಮಾನ ನಿಲ್ದಾಣ, ದಮನಗಂಗಾ ನದಿಗೆ ಕಟ್ಟಲಿರುವ ಐಕಾನಿಕ್ ಸೇತುವೆ, 'ಬೀಚ್ ಫ್ರಂಟ್' ನಲ್ಲಿ ಕಟ್ಟಲಾಗುವ ಸಮಾವೇಶ ಕೇಂದ್ರದಂತಹ ಯೋಜನೆಗಳು, ಇಂತಹ ಮೂಲಸೌಕರ್ಯಗಳ ಮೂಲಕ ನಾವು ಭವಿಷ್ಯಕ್ಕಾಗಿ ದೊಡ್ಡ ನಿರ್ಣಯಗಳಿಗೆ ಅಡಿಪಾಯ ಹಾಕುತ್ತಿದ್ದೇವೆ. ಈ ಯೋಜನೆಗಳ ಮೂಲಕ, ನಿಮ್ಮ ಚಲನೆ ಸುಲಭವಾಗುತ್ತದೆ. ಇಲ್ಲಿ ವ್ಯವಹಾರಕ್ಕೆ ಹೊಸ ಸಾಧ್ಯತೆಗಳು ಸೃಷ್ಟಿಯಾಗುತ್ತವೆ. ದಮನ್ ನ ಎರಡೂ ಬದಿಗಳಲ್ಲಿ ಅಭಿವೃದ್ಧಿಯ ವೇಗವು ಹೆಚ್ಚುತ್ತದೆ.

 

ಸ್ನೇಹಿತರೇ,

ಇಲ್ಲಿ ಆತಿಥ್ಯ ಆರ್ಥಿಕತೆಗೆ ಸಂಬಂಧಿಸಿದ ಅವಕಾಶಗಳು ಹೆಚ್ಚಾಗುತ್ತವೆ ಮತ್ತು ಅದರೊಂದಿಗೆ, ಸಾರಿಗೆ ನಗರದಂತಹ ಸೌಲಭ್ಯಗಳು ವ್ಯಾಪಾರ ಮತ್ತು ಲಾಜಿಸ್ಟಿಕ್ಸ್‌ಗೆ ಹೊಸ ವೇಗವನ್ನು ನೀಡುತ್ತವೆ.

ಸ್ನೇಹಿತರೇ,

ಈ ಪ್ರದೇಶದಲ್ಲಿ ನೀಲಿ ಆರ್ಥಿಕತೆಗಾಗಿ ನಾವು ಸಿದ್ಧಪಡಿಸಿರುವ ದೃಷ್ಟಿಕೋನವು ಹೈಟೆಕ್ ಮೂಲಸೌಕರ್ಯದ ಬಲದ ಮೂಲಕ ಮಾತ್ರ ಸಾಕಾರಗೊಳ್ಳುತ್ತದೆ. ಅದಕ್ಕಾಗಿಯೇ ಇಂದು ಲಕ್ಷದ್ವೀಪದ ಕಲ್ಪೇನಿ ಮತ್ತು ಕಡ್ಮತ್ ದ್ವೀಪಗಳಲ್ಲಿ ಆಧುನಿಕ ಬಂದರುಗಳ ಅಡಿಪಾಯ ಹಾಕಲಾಗುತ್ತಿದೆ. ಈ ಎಲ್ಲಾ ಪ್ರಯತ್ನಗಳು ನೀಲಿ ಆರ್ಥಿಕತೆಯಲ್ಲಿ ದೇಶದ ಬಲವನ್ನು ಹೆಚ್ಚಿಸುತ್ತವೆ ಮತ್ತು ನಾನು ಹೇಳಿದಂತೆ, ಇವು ಲಕ್ಷದ್ವೀಪದ ಭವಿಷ್ಯವನ್ನು ಬದಲಾಯಿಸುವ ಉಪಕ್ರಮಗಳಾಗಿವೆ.

ಸ್ನೇಹಿತರೇ,

ಬಿಜೆಪಿ ಸರ್ಕಾರದಲ್ಲಿ, ನಮ್ಮ ಎನ್‌ಡಿಎ ಸರ್ಕಾರದಲ್ಲಿ, ನಮಗೆ ಅಭಿವೃದ್ಧಿಯ ಮೊದಲ ಮಾನದಂಡವೆಂದರೆ - ಬಡವರು, ವಂಚಿತರು, ಬುಡಕಟ್ಟು ಜನಾಂಗದವರು ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಬದಲಾವಣೆ! ಇದಕ್ಕಾಗಿ, ಆರೋಗ್ಯ ಕ್ಷೇತ್ರವು ನಮ್ಮ ದೊಡ್ಡ ಆದ್ಯತೆಯಾಗಿದೆ. ಕಳೆದ ವರ್ಷಗಳಲ್ಲಿ, ದೇಶವು ಆರೋಗ್ಯ ರಕ್ಷಣೆಗಾಗಿ ಸಮಗ್ರ ದೃಷ್ಟಿಕೋನದೊಂದಿಗೆ ಮುಂದುವರೆದಿದೆ. ಚಿಕಿತ್ಸೆಗೆ ಸಂಬಂಧಿಸಿದ ಪ್ರತಿಯೊಂದು ಕಳವಳವನ್ನು ನಾವು ಪರಿಹರಿಸಿದ್ದೇವೆ. ಇಂದು ಬಡವರಿಗೂ ಸಹ ಆಯುಷ್ಮಾನ್ ಕಾರ್ಡ್ ಸೌಲಭ್ಯವಿದೆ. ಅವರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯ ಭರವಸೆ ಇದೆ. ರೋಗಗಳ ಸಕಾಲಿಕ ರೋಗನಿರ್ಣಯವನ್ನು ಖಚಿತಪಡಿಸಿಕೊಳ್ಳಲು, ಪ್ರಧಾನ ಮಂತ್ರಿ ಆಯುಷ್ಮಾನ್ ಆರೋಗ್ಯ ಮಂದಿರಗಳ ವ್ಯವಸ್ಥೆ ಇದೆ. ಜನೌಷಧಿ ಕೇಂದ್ರಗಳ ಮೂಲಕವೂ ಕೈಗೆಟುಕುವ ಔಷಧಿಗಳು ಲಭ್ಯವಿವೆ. ಈ ಸೌಲಭ್ಯಗಳನ್ನು ಇನ್ನಷ್ಟು ಉತ್ತಮ ಮತ್ತು ಆಧುನಿಕವಾಗಿಸಲು, ಇಂದು ಆರೋಗ್ಯ ಸೇವೆಗಳನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಮೂಲಕ ತಂತ್ರಜ್ಞಾನದೊಂದಿಗೆ ಸಂಪರ್ಕಿಸಲಾಗುತ್ತಿದೆ.

ಸ್ನೇಹಿತರೇ,

ಆಯುಷ್ಮಾನ್ ಕಾರ್ಡ್‌ಗಳು ಮತ್ತು ಜನೌಷಧಿ ಕೇಂದ್ರಗಳಿಂದಾಗಿ, ಬಡವರು ಮತ್ತು ಮಧ್ಯಮ ವರ್ಗದವರು ಸುಮಾರು 2.25 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡದಂತೆ ಉಳಿಸಿದ್ದಾರೆ.

 

ಸಹೋದರರೇ ಮತ್ತು  ಸಹೋದರಿಯರೇ,

ಕೇಂದ್ರ ಸರ್ಕಾರದ ನೀತಿಗಳು ಈ ಪ್ರದೇಶದ ಜನರಿಗೆ ಸಹ ಹೆಚ್ಚಿನ ಪ್ರಯೋಜನವನ್ನು ನೀಡಿವೆ. ಒಂದು ಕಾಲದಲ್ಲಿ, ಇಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳ ಕೊರತೆ ಇತ್ತು. ಇಲ್ಲಿ ವೈದ್ಯಕೀಯ ಕಾಲೇಜು ಕೂಡ ಇರಲಿಲ್ಲ. ಆದರೆ ಈಗ ವೈದ್ಯಕೀಯ ಕಾಲೇಜು ಇದೆ, ಮತ್ತು ಸ್ನಾತಕೋತ್ತರ ಅಧ್ಯಯನಗಳು ಸಹ ಪ್ರಾರಂಭವಾಗಿವೆ. ಸಿಲ್ವಾಸಾದ ನಮೋ ಆಸ್ಪತ್ರೆ ಕಳೆದ ವರ್ಷದಿಂದ ಸಾವಿರಾರು ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಂದು, ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಸಹ ಉದ್ಘಾಟಿಸಲಾಗಿದೆ. ಈ ಪ್ರದೇಶದ ಜನರು ಈಗ ಇನ್ನೂ ಉತ್ತಮ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

ಸ್ನೇಹಿತರೇ,

ನಮ್ಮ ಸರ್ಕಾರ ಆರೋಗ್ಯಕ್ಕೆ ಹೇಗೆ ಆದ್ಯತೆ ನೀಡುತ್ತಿದೆ ಎಂಬುದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಫಲಿತಾಂಶಗಳಲ್ಲಿಯೂ ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ, ಭಾರತದಲ್ಲಿ ಹೆಚ್ಚಿನ ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿರಲಿಲ್ಲ. ಇಂದು, ದೇಶದಲ್ಲಿ ಶೇ. 90 ಕ್ಕಿಂತ ಹೆಚ್ಚು ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿವೆ, ಇದು ತಾಯಂದಿರ ಮರಣ ಮತ್ತು ಶಿಶು ಮರಣವನ್ನು ಬಹಳ ಕಡಿಮೆ ಮಾಡಿದೆ. ಮಿಷನ್ ಇಂದ್ರಧನುಷ್ ಕಾರಣದಿಂದಾಗಿ, ಭಾರತವು ಮಕ್ಕಳ ಲಸಿಕೆ ಕ್ಷೇತ್ರದಲ್ಲಿಯೂ ಉತ್ತಮ ಪ್ರಗತಿಯನ್ನು ಸಾಧಿಸಿದೆ. 2014 ಕ್ಕಿಂತ ಮೊದಲು, ಕೇವಲ ಶೇ. 60 ರಷ್ಟು ಮಕ್ಕಳಿಗೆ ಮಾತ್ರ ಸಂಪೂರ್ಣವಾಗಿ ಲಸಿಕೆ ನೀಡಲಾಗುತ್ತಿತ್ತು. ಇಂದು ಈ ಅಂಕಿ ಅಂಶವು ಸುಮಾರು ಶೇ. 90 ಕ್ಕೆ ಏರಿದೆ. ಆರೋಗ್ಯ ಭದ್ರತಾ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಯಾಗಿದೆ. 2014 ಕ್ಕಿಂತ ಮೊದಲು, ಶೇ. 30 ಕ್ಕಿಂತ ಕಡಿಮೆ ಕುಟುಂಬಗಳು ಆರೋಗ್ಯ ವಿಮಾ ಯೋಜನೆಗಳೊಂದಿಗೆ ಸಂಪರ್ಕ ಹೊಂದಿದ್ದವು. ಇಂದು ಆಯುಷ್ಮಾನ್ ಭಾರತ್ ಆ ಅಂಕಿಅಂಶಗಳನ್ನು ಸಹ ಬದಲಾಯಿಸಿದೆ. ಈಗ ಶೇ. 60 ಕ್ಕೂ ಹೆಚ್ಚು ಕುಟುಂಬಗಳು ಈ ರಕ್ಷಣೆಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರದ ಈ ಪ್ರಯತ್ನಗಳಿಂದ ಯಾರಾದರೂ ಹೆಚ್ಚು ಪ್ರಯೋಜನ ಪಡೆದಿದ್ದರೆ, ಅದು ನನ್ನ ದೇಶದ ಮಹಿಳಾ ಶಕ್ತಿ.

ಸ್ನೇಹಿತರೇ,

ಹಿಂದೆ ಈ ಪ್ರದೇಶದ ಯುವಜನರು ಉನ್ನತ ಶಿಕ್ಷಣಕ್ಕಾಗಿ ಹೊರಗೆ ಹೋಗಬೇಕಾಗಿತ್ತು. ಆದರೆ ಇಂದು, ಒಂದಲ್ಲ, ಹಲವು ರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಇಲ್ಲಿ ಸ್ಥಾಪನೆಯಾಗಿವೆ. ಇತ್ತೀಚಿನ ವರ್ಷಗಳಲ್ಲಿ, ಇಲ್ಲಿ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಸಹ ನಿರ್ಮಿಸಲಾಗಿದೆ. 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶವು ಶಿಕ್ಷಣ ಕ್ಷೇತ್ರದಲ್ಲಿ ಕ್ರಮೇಣ ಮುಂದುವರಿಯುತ್ತಿದೆ ಎಂದು ನನಗೆ ಸಂತೋಷವಾಗಿದೆ. ಸ್ವಾಮಿ ವಿವೇಕಾನಂದ ಶಿಕ್ಷಣ ಕೇಂದ್ರದಂತಹ ಅನೇಕ ನಿರ್ಮಾಣಗಳು ಇಲ್ಲಿ ನಡೆಯುತ್ತಿವೆ.

 

 

ಸಹೋದರರೇ ಮತ್ತು  ಸಹೋದರಿಯರೇ,

ಈ ಶಿಕ್ಷಣ ಕ್ರಾಂತಿಯಲ್ಲಿ ನಮ್ಮ ಹೆಣ್ಣುಮಕ್ಕಳು ಹಿಂದುಳಿಯಬಾರದು ಎಂಬುದು ನಮ್ಮ ಸಂಕಲ್ಪ. ಇದಕ್ಕಾಗಿ ಅನೇಕ ದೊಡ್ಡ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸರಸ್ವತಿ ಸೈಕಲ್ ಯೋಜನೆ ಮತ್ತು ಸರಸ್ವತಿ ವಿದ್ಯಾ ಯೋಜನೆಯಂತಹ ಯೋಜನೆಗಳು ಇಲ್ಲಿನ ಹೆಣ್ಣುಮಕ್ಕಳಿಗೆ ಸಾಕಷ್ಟು ಸಹಾಯ ಮಾಡುತ್ತಿವೆ.

ಸ್ನೇಹಿತರೇ,

ಇಂದು ಭಾರತವು ದೇಶದ ಯುವಜನರು ಪದವಿಯ ಜೊತೆಗೆ ಸರಿಯಾದ ಸ್ಥಾನಮಾನಗಳನ್ನು ಪಡೆಯಬೇಕೆಂದು ಪ್ರಯತ್ನಿಸುತ್ತಿದೆ. ಸ್ಥಳೀಯ ಪ್ರತಿಭೆಗಳನ್ನು ಜಾಗತಿಕ ಅವಕಾಶಗಳೊಂದಿಗೆ ಸಂಪರ್ಕಿಸುವಂತಹ ಮಾನ್ಯತೆಯನ್ನು ಅವರು ಪಡೆಯಬೇಕು. ವಿನ್ಯಾಸ, ಕಾನೂನು, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ, ಐಟಿ, ಡ್ರೋನ್ ಮತ್ತು ನವೀಕರಿಸಬಹುದಾದ ಇಂಧನದಂತಹ ಕ್ಷೇತ್ರಗಳಲ್ಲಿ, ನಮ್ಮ ಪ್ರಸ್ತುತ ಸಿದ್ಧತೆಯು ಭಾರತದ ಕಾರ್ಯಪಡೆಯನ್ನು ಬಲಪಡಿಸುತ್ತದೆ. ಆದ್ದರಿಂದ, ವೃತ್ತಿಪರ ಸಂಸ್ಥೆಗಳ ವಿಸ್ತರಣೆ ಬಹಳ ಮುಖ್ಯವಾಗಿದೆ.

ಸ್ನೇಹಿತರೇ,

ಇಂದು ಎನ್.ಐ.ಎಫ್.ಟಿ. (NIFT)  ಯ ಹದಿನೆಂಟನೇ ಕ್ಯಾಂಪಸ್‌ಗೆ ಅಡಿಪಾಯ ಹಾಕಲಾಗಿದೆ. ಈ ಸಂಸ್ಥೆಯು ಇಲ್ಲಿನ ಯುವಜನರನ್ನು ಜಾಗತಿಕ ಮಾನ್ಯತೆಯೊಂದಿಗೆ ಜೋಡಿಸುತ್ತದೆ. ಐಟಿಐ ದಮನ್‌ನಲ್ಲಿ ಡ್ರೋನ್ ತಂತ್ರಜ್ಞರಂತಹ ಹೊಸ ಕೋರ್ಸ್‌ಗಳು ಸಹ ಪ್ರಾರಂಭವಾಗಿವೆ. ಪಿಎಂ ವಿಶ್ವಕರ್ಮ ಮತ್ತು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮಗಳು ಸಹ ಯುವಜನರಿಗೆ ಪ್ರಯೋಜನವನ್ನು ನೀಡುತ್ತಿವೆ.

ಸ್ನೇಹಿತರೇ,

ದೇಶದಲ್ಲಿ ಕ್ರೀಡೆಗಳು ಹೊಸ ಚಿಂತನೆಯೊಂದಿಗೆ ಮುಂದುವರೆದಿವೆ. ನಮ್ಮ ಕ್ರೀಡೆಗಳು ಇನ್ನು ಮುಂದೆ ದೊಡ್ಡ ನಗರಗಳು ಅಥವಾ ದೊಡ್ಡ ಕ್ರೀಡಾಂಗಣಗಳಿಗೆ ಸೀಮಿತವಾಗಿರಲಾರವು. ಖೇಲೋ ಇಂಡಿಯಾದಂತಹ ಪ್ರಯತ್ನಗಳು ಯುವಜನರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹೊಸ ವೇದಿಕೆಯನ್ನು ನೀಡಿವೆ. ಈ ಕಾರಣದಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ, ಸಣ್ಣ ಪ್ರದೇಶಗಳ ಮಕ್ಕಳು ರಾಷ್ಟ್ರೀಯ ಮಟ್ಟದಲ್ಲಿ ಮುಂದೆ ಬರುತ್ತಿದ್ದಾರೆ ಮತ್ತು ಈ ಪ್ರದೇಶವು ಸಹ ಅದರಿಂದ ಪ್ರಯೋಜನ ಪಡೆದಿದೆ. ಡಿಯು ಇಂದು ಬೀಚ್ ಕ್ರೀಡೆಗಳ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಘೋಘ್ಲಾ ಬೀಚ್‌ನಲ್ಲಿ ನಡೆದ ಬೀಚ್ ಕ್ರೀಡಾಕೂಟವು ಈ ಪ್ರದೇಶದತ್ತ ದೇಶದ ಗಮನವನ್ನು ಸೆಳೆದಿದೆ. ಇಂದು ಇಲ್ಲಿ ಆಧುನಿಕ ಕ್ರೀಡಾ ಮೂಲಸೌಕರ್ಯವನ್ನು ನಿರಂತರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಖಾನ್ವೆಲ್‌ನಲ್ಲಿರುವ ಫುಟ್‌ಬಾಲ್ ಕೇಂದ್ರ ಮತ್ತು ದಮನ್‌ನಲ್ಲಿರುವ ವಾಲಿಬಾಲ್ ತರಬೇತಿ ಕೇಂದ್ರವು ಇಲ್ಲಿನ ಕ್ರೀಡಾ ಸಂಸ್ಕೃತಿಯನ್ನು ಬಲಪಡಿಸುತ್ತಿವೆ.

 

ಸ್ನೇಹಿತರೇ,

ಇಂದು ದೇಶದ ಆದ್ಯ ಗಮನ ಪ್ರವಾಸೋದ್ಯಮದ ಮೇಲೂ ಇದೆ. ಪ್ರವಾಸೋದ್ಯಮವು ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಬೇಕು ಎಂಬುದು ನಮ್ಮ ಪ್ರಯತ್ನ. ಸಣ್ಣ ಸ್ಥಳಗಳನ್ನು ಸಹ ದೊಡ್ಡ ಅವಕಾಶಗಳೊಂದಿಗೆ ಸಂಪರ್ಕಿಸಬೇಕು. 'ದೇಖೋ ಅಪ್ನಾ ದೇಶ್' ನಂತಹ ಪ್ರಯತ್ನಗಳು ದೇಶದ ವೈವಿಧ್ಯತೆಯ ಬಗ್ಗೆ ತಿಳಿದುಕೊಳ್ಳಲು ಜನರನ್ನು ಪ್ರೇರೇಪಿಸಿವೆ. ಇಂದು ಭಾರತದಲ್ಲಿ ಪರಂಪರೆ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಸಾಹಸ ಪ್ರವಾಸೋದ್ಯಮಗಳು ಹೊಸ ಶಕ್ತಿಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ, ಪ್ರವಾಸೋದ್ಯಮವು ಅಪಾರ ಸಾಧ್ಯತೆಗಳನ್ನು ಹೊಂದಿರುವ ವಲಯವಾಗಿದೆ. ಈ ಪ್ರದೇಶವು ನೈಸರ್ಗಿಕ ಸೌಂದರ್ಯದಿಂದ ಆಶೀರ್ವದಿಸಲ್ಪಟ್ಟಿದೆ. ಅದಕ್ಕಾಗಿಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ದೇಶವು ಕೆಲಸ ಮಾಡಿದ ನೀತಿಗಳು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗೆ ಹೆಚ್ಚಿನ ಪ್ರಯೋಜನವನ್ನು ನೀಡಿವೆ. 2021 ರಲ್ಲಿ, ಸುಮಾರು 6 ಲಕ್ಷ ಪ್ರವಾಸಿಗರು ಇಲ್ಲಿಗೆ ಬಂದರು. 2025 ರಲ್ಲಿ, ಈ ಸಂಖ್ಯೆ ಸುಮಾರು 50 ಲಕ್ಷಕ್ಕೆ ಏರಿತು. ಅಂದರೆ ಕೆಲವೇ ವರ್ಷಗಳಲ್ಲಿ, ಪ್ರವಾಸಿಗಳ  ಸಂಖ್ಯೆ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಉತ್ತಮ ಮೂಲಸೌಕರ್ಯ, ಉತ್ತಮ ಸೌಲಭ್ಯಗಳು ಮತ್ತು ಸ್ವಚ್ಛ ಕಡಲತೀರಗಳಿಂದಾಗಿ ಇದು ಸಾಧ್ಯವಾಗಿದೆ. ದಮನ್ ರಾತ್ರಿ ಮಾರುಕಟ್ಟೆ, ರಾಮಸೇತು ಸಮುದ್ರ ಮುಂಭಾಗ, ನಮೋಪಥ ಸಮುದ್ರ ಮುಂಭಾಗ, ನಾನಿ ದಮನ್ ಕೋಟೆ, ಗಂಗೇಶ್ವರ ದೇವಾಲಯ ಸಂಕೀರ್ಣ, ಇಂತಹ ಹಲವಾರು ಸ್ಥಳಗಳು ಇಂದು ಈ ಇಡೀ ಪ್ರದೇಶದ ಹೊಸ ಗುರುತಾಗುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳ ಕನಸುಗಳನ್ನು ನನಸಾಗಿಸಲು, ನಾವು ಇಲ್ಲಿ ಕೈಗಾರಿಕಾ ಬಲವನ್ನು ಹೆಚ್ಚಿಸಬೇಕಾಗಿದೆ. ಈ ಕೇಂದ್ರಾಡಳಿತ ಪ್ರದೇಶವು ಮಾನವ ನಿರ್ಮಿತ ಫೈಬರ್ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಗುರುತನ್ನು ಸಾಧಿಸಿದೆ ಎಂಬುದು ಹೆಮ್ಮೆಯ ವಿಷಯ. ದಾದ್ರಾ ಮತ್ತು ನಗರ ಹವೇಲಿಯನ್ನು ರಾಷ್ಟ್ರೀಯ ಮಾನವ ನಿರ್ಮಿತ ಫೈಬರ್ ರಾಜಧಾನಿ ಎಂದು ಗುರುತಿಸಲಾಗಿದೆ. ಈ ಪ್ರದೇಶವು ಪ್ಲಾಸ್ಟಿಕ್ ರಫ್ತಿನಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ. ಇಲ್ಲಿನ ಕೈಗಾರಿಕೆಗಳು ಮತ್ತು ಎಂ.ಎಸ್.ಎಂ.ಇ. ( MSME)  ಗಳನ್ನು ಬೆಂಬಲಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡಿದೆ. ಇಲ್ಲಿನ ಎಂ.ಎಸ್.ಎಂ.ಇ. ಗಳು ಮತ್ತು ಇತರ ಕೈಗಾರಿಕೆಗಳಿಗೆ ಕೋಟ್ಯಂತರ ರೂಪಾಯಿಗಳಿಗಿಂತ ಹೆಚ್ಚಿನ ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ಈ ಪ್ರದೇಶವು ಉತ್ಪಾದನಾ ಕೇಂದ್ರವಾಗಲಿದೆ ಎಂದು ನನಗೆ ವಿಶ್ವಾಸವಿದೆ.

ಸ್ನೇಹಿತರೇ,

ಸೂಕ್ಷ್ಮ ಆಡಳಿತವು ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಸಂಯೋಜಿಸಲ್ಪಟ್ಟಾಗ, ರೂಪಾಂತರವು ವೇಗವಾಗಿ ವಾಸ್ತವವಾಗಿ ರೂಪುಗೊಳ್ಳುತ್ತದೆ. ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ ನಮ್ಮ ಪ್ರಯತ್ನಗಳ ಪರಿಣಾಮವನ್ನು ನೋಡಿದಾಗ ತೃಪ್ತಿ ಸಿಗುತ್ತದೆ. ಈ ನೆಲದ ಜನರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಇಲ್ಲಿನ ಯುವಜನರು, ಇಲ್ಲಿನ ತಾಯಂದಿರು ಮತ್ತು ಸಹೋದರಿಯರು, ರೈತರು, ಕುಶಲಕರ್ಮಿಗಳು, ಕಾರ್ಮಿಕರು ಮತ್ತು ಉದ್ಯಮಿಗಳು ಮುಂಬರುವ ವರ್ಷಗಳಲ್ಲಿ ಈ ಅಭಿವೃದ್ಧಿ ಪ್ರಯಾಣವನ್ನು ಮತ್ತಷ್ಟು ಮುಂದೆ ಕೊಂಡೊಯ್ಯುತ್ತಾರೆ. ನಿಮ್ಮ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರವು ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಈ ನಂಬಿಕೆಯೊಂದಿಗೆ, ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಮತ್ತೊಮ್ಮೆ ನಿಮಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನ್ನೊಂದಿಗೆ ಹೇಳಿ, ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ!

ತುಂಬಾ ಧನ್ಯವಾದಗಳು.