Historic MoA for Ken Betwa Link Project signed
India’s development and self-reliance is dependent on water security and water connectivity : PM
Water testing is being taken up with utmost seriousness: PM

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜೀ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ ಜೀ, ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಜೀ, ಜಲಶಕ್ತಿ ಸಹಾಯಕ ಸಚಿವರಾದ ಶ್ರೀ ರತ್ತನ್ ಲಾಲ್ ಕಟಾರಿಯಾ ಜೀ, ಎಲ್ಲಾ ಗೌರವಾನ್ವಿತ ಅಧಿಕಾರಿಗಳೇ, ಈ ಆಂದೋಲನವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊಂದಿರುವ ದೇಶಾದ್ಯಂತದ ಗ್ರಾಮಗಳ ಸರಪಂಚರೇ ಮತ್ತು ಪಂಚರೇ, ಜನಪ್ರತಿನಿಧಿಗಳೇ, ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ !.

ದೇಶದ ವಿವಿಧ ಭಾಗಗಳಲ್ಲಿ ನಿಸರ್ಗ ಮತ್ತು ನೀರಿಗೆ ಸಂಬಂಧಿಸಿದಂತೆ ಕೆಲಸ ಮಾಡುವ ಮತ್ತು ಈ ಆಂದೋಲನದಲ್ಲಿ ಪ್ರತಿಯೊಬ್ಬರನ್ನೂ ಸೇರಿಸಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುವ ನಾಯಕರ ಮಾತುಗಳನ್ನು ಕೇಳುವ ಅವಕಾಶ ಇಂದು ನನಗೆ ದೊರಕಿತ್ತು. ಅವರ ಮಾತುಗಳನ್ನು ಕೇಳಿದ ಬಳಿಕ ನನಗೆ ಹೊಸ ಪ್ರೇರಣೆ, ಶಕ್ತಿ ಮತ್ತು ಹೊಸ ಚಿಂತನೆಗಳು ದೊರಕಿವೆ. ಈ ಪ್ರತಿನಿಧಿಗಳ ಜೊತೆಗಿನ ಈ ಸಂವಾದವನ್ನು ಯಾರೆಲ್ಲಾ ಕೇಳಿರುವರೋ ಅವರು ಹೊಸತೇನನ್ನಾದರೂ ಕಲಿತಿರುತ್ತಾರೆ. ನಾನು ಕೂಡಾ ಕಲಿತಿದ್ದೇನೆ ಮತ್ತು ನನ್ನ ಅಧಿಕಾರಿಗಳು ಕೂಡಾ ಕಲಿತಿದ್ದಾರೆ ಮತ್ತು ಜನತೆ ಕೂಡಾ ಕಲಿಯಲಿದ್ದಾರೆ.

ನೀರಿನ ಮಹತ್ವಕ್ಕೆ ಸಂಬಂಧಿಸಿದ ಜಾಗೃತಿ ಹೆಚ್ಚುತ್ತಿರುವುದರ ಬಗ್ಗೆ ನಾನು ಸಂತೋಷಗೊಂಡಿದ್ದೇನೆ. ಮತ್ತು ಈ ನಿಟ್ಟಿನಲ್ಲಿ ಪ್ರಯತ್ನಗಳೂ ಹೆಚ್ಚುತ್ತಿವೆ. ಇಂದು ಅಂತಾರಾಷ್ಟ್ರೀಯ ಜಲ ದಿನ, ಇದನ್ನು ಜಗತ್ತಿನಾದ್ಯಂತ ನೀರಿನ ಮಹತ್ವ ಕುರಿತ ಜಾಗೃತಿ ಮೂಡಿಸುವುದಕ್ಕಾಗಿ ಅಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಎರಡು ಪ್ರಮುಖ ಸಂಗತಿಗಳಿಗಾಗಿ ನಾವಿಲ್ಲಿ ಸೇರಿದ್ದೇವೆ. ಇಂದು ಆಂದೋಲನಕ್ಕೆ ಚಾಲನೆ ನೀಡಲಾಗುತ್ತಿದೆ ಮತ್ತು ಇದರ ಬಗ್ಗೆ ನಾನು ನನ್ನ “ಮನ್ ಕಿ ಬಾತ್” ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದೇನೆ. “ಮಳೆಯನ್ನು ಹಿಡಿಯಿರಿ” ಆಂದೋಲನದ ಜೊತೆಗೆ ಕೆನ್ ಬೆಟ್ವಾ ಸಂಪರ್ಕ ಕಾಲುವೆಗಾಗಿ ಮುಂದಡಿ ಇಡಲಾಗಿದ್ದು, ಇದು ಭಾರತದಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಮಾತ್ರವಲ್ಲ ಜಗತ್ತಿನೆದುರು ಒಂದು ಉದಾಹರಣೆಯಾಗಿ ನಿಲ್ಲಲಿದೆ. ಉತ್ತರ ಪ್ರದೇಶದ ಮತ್ತು ಮಧ್ಯಪ್ರದೇಶದ ಮಿಲಿಯಾಂತರ ಕುಟುಂಬಗಳ ಹಿತಾಸಕ್ತಿಯನ್ನು ಕಾಪಾಡುವ ಹಿನ್ನೆಲೆಯಲ್ಲಿ ಇಂದು ಒಪ್ಪಂದವೊಂದಕ್ಕೆ ಬರಲಾಗಿದ್ದು, ಅಟಲ್ ಜೀ ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಇದು ಒಂದು ದೊಡ್ಡ ಹೆಜ್ಜೆಯಾಗಲಿದೆ. ಕೊರೋನಾ ಇರದಿದ್ದರೆ, ನಾನು ವೈಯಕ್ತಿಕವಾಗಿ ಬುಂದೇಲ್ ಖಂಡದ ಝಾನ್ಸಿಗೆ ಬಂದು ಉತ್ತರ ಪ್ರದೇಶ ಅಥವಾ ಮಧ್ಯಪ್ರದೇಶದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೆ. ಇದರಿಂದ ಲಕ್ಷಾಂತರ ಜನರಿಗೆ ಬಂದು ಈ ಮಹತ್ವದ ಉಪಕ್ರಮಕ್ಕಾಗಿ ನಮ್ಮನ್ನು ಆಶೀರ್ವದಿಸುವುದಕ್ಕೆ ಸಾಧ್ಯವಾಗುತ್ತಿತ್ತು.

ಸಹೋದರರೇ ಮತ್ತು ಸಹೋದರಿಯರೇ,

21 ಶತಮಾನದ ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಾಗುವಂತೆ ಮಾಡುವುದು ಬಹಳ ಪ್ರಮುಖ ಸಂಗತಿಯಾಗಿದೆ. ಪ್ರತೀ ಮನೆಗೂ, ಪ್ರತೀ ಕೃಷಿ ಭೂಮಿಗೂ ನೀರು ಅವಶ್ಯಕ. ಅದು ಜೀವನದ ಮತ್ತು ಆರ್ಥಿಕತೆಯ ಪ್ರತೀ ವಿಷಯಕ್ಕೂ ಬಹಳ ಮುಖ್ಯ. ಇಂದು ನಾವು ತ್ವರಿತಗತಿಯ ಬೆಳವಣಿಗೆಯ ಬಗ್ಗೆ ಮಾತನಾಡುವಾಗ ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡುತ್ತಿರುವಾಗ, ಜಲ ಸುರಕ್ಷತೆ, ಭದ್ರತೆ ಇಲ್ಲದೆ ಮತ್ತು ಸಮರ್ಪಕ ಜಲ ನಿರ್ವಹಣೆ ಇಲ್ಲದೆ ಅದು ಸಾಧ್ಯವಾಗದು. ಅಭಿವೃದ್ಧಿ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ ಭಾರತದ ಚಿಂತನೆ ನಮ್ಮ ಜಲಮೂಲಗಳನ್ನು ಮತ್ತು ನಮ್ಮ ಜಲ ಸಂಪರ್ಕಗಳನ್ನು ಅವಲಂಬಿಸಿದೆ. ಪರಿಸ್ಥಿತಿಯ ಗಂಭೀರತೆಯ ಹಿನ್ನೆಲೆಯಲ್ಲಿ ಬಹಳಷ್ಟನ್ನು ದಶಕಗಳ ಹಿಂದೆಯೇ ಮಾಡಬೇಕಿತ್ತು. ನಾನು ನಿಮಗೆ ಗುಜರಾತಿನ ಅನುಭವದ ಆಧಾರದಲ್ಲಿ ಹೇಳುತ್ತೇನೆ, ನಾವು ಯೋಜನಾ ಬದ್ಧವಾಗಿ ಜನತೆಯ ಸಹಭಾಗಿತ್ವದಲ್ಲಿ ನೀರು ಸಂಗ್ರಹಕ್ಕೆ ಮುಂದಾದರೆ, ನಮಗೆ ನೀರಿನ ಕೊರತೆಯ ಸಮಸ್ಯೆ ಬರುವುದಿಲ್ಲ. ಮತ್ತು ನೀರು ಹಣಕ್ಕಿಂತಲೂ ಬಹಳ ಮುಖ್ಯವಾದ ಅಮೂಲ್ಯ ಶಕ್ತಿಯಾಗಿ ಮೂಡಿ ಬರುತ್ತದೆ. ಇದನ್ನು ಬಹಳ ಹಿಂದೆಯೇ ಮಾಡಬೇಕಾಗಿತ್ತು. ಆದರೆ ದುರದೃಷ್ಟವಶಾತ್ ಜನರ ಸಹಭಾಗಿತ್ವದೊಂದಿಗೆ ಅದು ಆಗಬೇಕಾದ ರೀತಿಯಲ್ಲಿ ಆಗಲಿಲ್ಲ. ಇದರ ಪರಿಣಾಮವಾಗಿ, ಭಾರತವು ಅಭಿವೃದ್ಧಿಯ ಪಥದಲ್ಲಿ ಮುಂದೆ ಸಾಗುತ್ತಿರುವಂತೆಯೇ ಜಲ ಬಿಕ್ಕಟ್ಟಿನ ಸವಾಲು ಹೆಚ್ಚುತ್ತಿದೆ. ದೇಶವು ಜಲ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸದಿದ್ದರೆ ಮತ್ತು ನೀರು ಪೋಲಾಗುವುದನ್ನು ತಡೆಯದಿದ್ದರೆ, ಬರಲಿರುವ ದಶಕಗಳಲ್ಲಿ ಪರಿಸ್ಥಿತಿ ತೀರಾ ಹದಗೆಡಲಿದೆ. ನಮ್ಮ ಪೂರ್ವಜರು ನಮಗೆ ನೀಡಿದ ನೀರನ್ನು ನಮ್ಮ ಭವಿಷ್ಯದ ಜನಾಂಗಗಳಿಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಇದಕ್ಕಿಂತ ದೊಡ್ಡ ಸದ್ಗುಣ ಬೇರೆ ಯಾವುದೂ ಇಲ್ಲ. ಆದುದರಿಂದ ನಾವು ನೀರು ಪೋಲಾಗಲು ಬಿಡುವುದಿಲ್ಲ, ದುರುಪಯೋಗವಾಗಲು ಅವಕಾಶ ನೀಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ಕೈಗೊಳ್ಳೋಣ ಮತ್ತು ನಾವು ನೀರಿನ ಜೊತೆಗೆ ಆಧ್ಯಾತ್ಮಿಕ ಬಾಂಧವ್ಯವನ್ನು ಬೆಳೆಸಿಕೊಳ್ಳೋಣ. ನಮ್ಮ ಪಾವಿತ್ರ್ಯ ನೀರಿನ ಸಂರಕ್ಷಣೆಯಲ್ಲಿ ನೆರವಿಗೆ ಬರಲಿದೆ. ಬರಲಿರುವ ತಲೆಮಾರುಗಳಿಗಾಗಿ ಇಂದಿನಿಂದ ಈಗಿನ ತಲೆಮಾರಿನವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕಾಗುತ್ತದೆ.

ಸಹೋದರರೇ ಮತ್ತು ಸಹೋದರಿಯರೇ.

ನಾವು ಈಗಿರುವ ಪರಿಸ್ಥಿತಿಯನ್ನು ಬದಲಾಯಿಸಬೇಕಾಗಿರುವುದು ಮಾತ್ರವಲ್ಲ, ನಾವು ಭವಿಷ್ಯದಲ್ಲಿ ಉದ್ಭವಿಸಬಹುದಾದ ಬಿಕ್ಕಟ್ಟಿಗೂ ಪರಿಹಾರಗಳನ್ನು ಕಂಡು ಹುಡುಕಬೇಕು. ಆದುದರಿಂದ ನಮ್ಮ ಸರಕಾರ ತನ್ನ ನೀತಿಗಳಲ್ಲಿ ಮತ್ತು ನಿರ್ಧಾರಗಳಲ್ಲಿ ನೀರಿನ ನಿರ್ವಹಣೆ ಮತ್ತು ಆಡಳಿತಕ್ಕೆ ಹೆಚ್ಚಿನ ಆದ್ಯತೆಯನ್ನು ಕೊಟ್ಟಿದೆ. ಕಳೆದ ಆರು ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಯ್ ಯೋಜನಾ, ಪ್ರತೀ ಕೃಷಿ ಭೂಮಿಗೂ ಜಲ ಆಂದೋಲನ-ಹರ್ ಖೇತ್ ಕೋ ಪಾನಿ, “ಹನಿ ನೀರಿಗೆ ಹೆಚ್ಚು ಬೆಳೆ” ಆಂದೋಲನ ಮತ್ತು ನಮಾಮಿ ಗಂಗೆ ಆಂದೋಲನ, ಜಲ ಜೀವನ್ ಆಂದೋಲನ, ಅಥವಾ ಅಟಲ್ ಭೂ ಜಲ್ ಯೋಜನಾ ಸಹಿತ ವಿವಿಧ ಯೋಜನೆಗಳಲ್ಲಿ ತ್ವರಿತವಾಗಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

ಸ್ನೇಹಿತರೇ,

ಈ ಎಲ್ಲಾ ಪ್ರಯತ್ನಗಳ ನಡುವೆ, ನಮ್ಮ ದೇಶದಲ್ಲಿ ಮಳೆ ನೀರು ಬಹಳ ದೊಡ್ಡ ಪ್ರಮಾಣದಲ್ಲಿ ನಿರುಪಯುಕ್ತವಾಗುತ್ತಿದೆ. ಅಥವಾ ಪೋಲು ಮಾಡಲಾಗುತ್ತಿದೆ. ಮಳೆ ನೀರನ್ನು ಭಾರತವು ಉತ್ತಮ ರೀತಿಯಲ್ಲಿ ನಿರ್ವಹಿಸಿದರೆ, ಅಂತರ್ಜಲದ ಮೇಲಿನ ದೇಶದ ಅವಲಂಬನೆ ಕಡಿಮೆಯಾಗುತ್ತದೆ. ಆದುದರಿಂದ “ಮಳೆ ನೀರು ಹಿಡಿಯಿರಿ” ಯಂತಹ ಯಶಸ್ವೀ ಆಂದೋಲನಗಳು ಬಹಳ ಮುಖ್ಯ. ಈ ಬಾರಿ ಜಲ ಶಕ್ತಿ ಅಭಿಯಾನದ ಮಹತ್ವ ಎಂದರೆ ಅದು ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಮುಂಗಾರು ಮಳೆಗೆ ಇನ್ನು ಕೆಲವು ವಾರಗಳಿವೆ ಮತ್ತು ನಾವು ಈಗಿನಿಂದಲೇ ನೀರು ಸಂರಕ್ಷಣೆಗೆ ತಯಾರಿಗಳನ್ನು ಆರಂಭಿಸಬೇಕು. ನಮ್ಮ ತಯಾರಿಗಳಲ್ಲಿ ಕೊರತೆ ಇರಬಾರದು ಮತ್ತು ಯಾವ ರೀತಿಯಲ್ಲೂ ಅದು ಹಿಂದುಳಿಯಬಾರದು. ಕೆರೆ ಕಟ್ಟೆಗಳ ಸ್ವಚ್ಚತೆ, ಬಾವಿಗಳನ್ನು ಸ್ವಚ್ಚಗೊಳಿಸುವಿಕೆ, ಚರಂಡಿಗಳ ಹೂಳೆತ್ತುವಿಕೆ ಕಾರ್ಯಗಳು ಮುಂಗಾರು ಆರಂಭಕ್ಕೆ ಮೊದಲು ಪೂರ್ಣಗೊಳ್ಳಬೇಕು. ನಾವು ನೀರು ಹಿಡಿದಿಡುವ ಸಾಮರ್ಥ್ಯವನ್ನು ಹೆಚ್ಚಿಸಬೇಕು ಮತ್ತು ಮಳೆ ನೀರು ಹರಿಯುವಲ್ಲಿ ಇರುವ ಅಡೆ ತಡೆಗಳನ್ನು ನಿವಾರಿಸಬೇಕು. ಮತ್ತು ಇದಕ್ಕೆ ಯಾವುದೇ ಪ್ರಮುಖವಾದಂತಹ ಇಂಜಿನಿಯರಿಂಗ್ ತಂತ್ರದ ಅವಶ್ಯಕತೆ ಇಲ್ಲ. ವಿನ್ಯಾಸವನ್ನು ರೂಪಿಸಲು ಯಾವುದೇ ಉನ್ನತ ಇಂಜಿನಿಯರ್ ಬೇಕಿಲ್ಲ. ಗ್ರಾಮಗಳ ಜನರಿಗೆ ಈ ಬಗ್ಗೆ ತಿಳಿದಿದೆ ಮತ್ತು ಅವರು ಅವರದನ್ನು ಸುಲಭದಲ್ಲಿ ಮಾಡುತ್ತಾರೆ. ಅಲ್ಲಿ ಏನು ಅವಶ್ಯಕತೆ ಇದೆ ಎಂದರೆ ಮೇಲುಸ್ತುವಾರಿ ಮಾಡಲು ಒಬ್ಬರು ಇರಬೇಕು ಮತ್ತು ತಂತ್ರಜ್ಞಾನವನ್ನು ಗರಿಷ್ಟ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಮಳೆ ಬರುವವರೆಗೆ ಎಂ.ಜಿ.ನರೇಗಾದ ಪ್ರತೀ ರೂಪಾಯಿಯೂ ಈ ಕಾರ್ಯಕ್ಕೆ ಬಳಕೆಯಾಗಬೇಕು ಎಂದು ನಾನು ಆಶಿಸುತ್ತೇನೆ.

ನೀರು ಮತ್ತು ಎಂ.ಜಿ. ನರೇಗಾ ಹಣಕಾಸಿಗೆ ಸಂಬಂಧಿಸಿ ಏನೆಲ್ಲಾ ಸಿದ್ಧತೆಗಳು ಮಾಡಬೇಕಾಗಿವೆಯೋ ಆ ಮೊತ್ತವನ್ನು ಬೇರೆಡೆ ವಿನಿಯೋಗಿಸಬಾರದು. ಮತ್ತು ಆದುದರಿಂದ ನಾನು ಈ ಆಂದೋಲನವನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರವನ್ನು ಕೋರಲು ಇಚ್ಛಿಸುತ್ತೇನೆ. ಎಲ್ಲಾ ಸರಪಂಚರು, ಡಿ.ಎಂ.ಗಳು, ಜಿಲ್ಲಾಧಿಕಾರಿಗಳು, ಮತ್ತು ಇತರ ಸಹೋದ್ಯೋಗಿಗಳ ಪಾತ್ರವೂ ಬಹಳ ಮುಖ್ಯವಾದುದು. ಇಂದು ಗ್ರಾಮ ಸಭಾಗಳ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಹಾಗು ಅಲ್ಲಿ ಜಲ ಪ್ರತಿಜ್ಞೆಯನ್ನು ಕೈಗೊಳ್ಳಲಾಗಿದೆ. ಈ ಜಲ ಪ್ರತಿಜ್ಞೆ ಜನರ ತೀರ್ಮಾನವಾಗಬೇಕು, ಜನರ ಸ್ವಭಾವವಾಗಬೇಕು. ನೀರಿನ ಬಗೆಗಿನ ನಮ್ಮ ವರ್ತನೆ ಬದಲಾದರೆ ನಿಸರ್ಗ ಕೂಡಾ ನಮಗೆ ಸಹಾಯ ಮಾಡುತ್ತದೆ. ಶಾಂತಿಯ ಕಾಲದಲ್ಲಿ ಹೆಚ್ಚು ಬೆವರು ಸುರಿಸುವ ಸೇನೆಯು ಯುದ್ಧದಲ್ಲಿ ಅತಿ ಕಡಿಮೆ ರಕ್ತವನ್ನು ಸುರಿಸುತ್ತದೆ ಎಂಬುದೊಂದು ಮಾತಿದೆ. ಈ ನಿಯಮ ನೀರಿಗೂ ಅನ್ವಯಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಕಷ್ಟಪಟ್ಟು ಕೆಲಸ ಮಾಡಿ ಮಳೆಗಾಲಕ್ಕೆ ಮೊದಲು ನೀರು ಸಂಗ್ರಹ ಮತ್ತು ಸಂರಕ್ಷಣೆಗೆ ಯೋಜನೆಗಳನ್ನು ಹಾಕಿಕೊಂಡರೆ ಎಲ್ಲಾ ಕಾಮಗಾರಿಗಳ ಸ್ಥಾಗಿತ್ಯಕ್ಕೆ ಕಾರಣವಾಗುವ, ಜನಸಾಮಾನ್ಯರಿಗೆ ತೊಂದರೆಯನ್ನು ಮಾಡುವ, ಜಾನುವಾರುಗಳ ವಲಸೆಗೆ ಕಾರಣವಾಗುವ ಕ್ಷಾಮ, ಬರಗಾಲಗಳ ಕಾಲದಲ್ಲಿ ಸಂಭವಿಸುವ ಬಿಲಿಯಾಂತರ ರೂಪಾಯಿಯಷ್ಟು ಬೃಹತ್ ಪ್ರಮಾಣದ ಹಾನಿಯನ್ನು ತಡೆಗಟ್ಟಬಹುದು. ಯುದ್ಧದ ಸಮಯದಲ್ಲಿ ಅನುಕೂಲಕ್ಕೆ ಬರುವ ಶಾಂತಿಯ ಸಮಯದಲ್ಲಿ ಬೆವರು ಸುರಿಸುವ ಮಂತ್ರದಂತೆ ಮಳೆಗಾಲಕ್ಕೆ ಮೊದಲು ನಾವು ಜೀವವುಳಿಸಲು ಹೆಚ್ಚು ಪ್ರಯತ್ನಗಳನ್ನು ಮಾಡಿದಷ್ಟೂ ಅದರ ಪ್ರಯೋಜನ ಅಷ್ಟೇ ಪ್ರಮಾಣದಲ್ಲಿ ಹೆಚ್ಚುತ್ತದೆ.

ಸಹೋದರರೇ ಮತ್ತು ಸಹೋದರಿಯರೇ,

ನಮ್ಮ ದೇಶದಲ್ಲಿ ನದಿ ನೀರು ನಿರ್ವಹಣೆ ಮತ್ತು ಮಳೆ ನೀರು ಸಂರಕ್ಷಣೆ ಬಗ್ಗೆ ದಶಕಗಳಿಂದ ಚರ್ಚೆಗಳು ನಡೆದಿವೆ. ಹಲವು ಕಡೆ ಅಣೆಕಟ್ಟುಗಳನ್ನು ಕಟ್ಟಿರುವುದನ್ನು ನಾವು ನೋಡಬಹುದು, ಆದರೆ ಅದರ ಹೂಳೆತ್ತುವ ಕಾರ್ಯ ಆಗಿಲ್ಲ. ನಾವು ಇಂಜಿನಿಯರುಗಳ ಮಾರ್ಗದರ್ಶನದಲ್ಲಿ ಅಣೆಕಟ್ಟುಗಳ ಹೂಳೆತ್ತಿದರೆ, ಅವುಗಳು ಹೆಚ್ಚು ನೀರನ್ನು ಸಂಗ್ರಹಿಸುತ್ತವೆ.ಮತ್ತು ಆ ನೀರು ಹೆಚ್ಚು ಸಮಯಕ್ಕೆ ಬರುತ್ತದೆ. ಅದೇ ರೀತಿ ನಾವು ನಮ್ಮ ನದಿಗಳಲ್ಲಿಯೂ ಮತ್ತು ಕಾಲುವೆಗಳಲ್ಲಿಯೂ ಹೂಳೆತ್ತಬೇಕು. ದೇಶವನ್ನು ಜಲ ಬಿಕ್ಕಟ್ಟಿನಿಂದ ಪಾರು ಮಾಡಲು ಈ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಾಚರಿಸುವುದು ನಮ್ಮ ಸಂಯುಕ್ತ ಜವಾಬ್ದಾರಿಯಾಗಿದೆ. ಕೆನ್ –ಬೆಟ್ವಾ ಸಂಪರ್ಕ ಯೋಜನೆ ಈ ಚಿಂತನೆಯ ಭಾಗ. ನಾನು ಉಭಯ ಮುಖ್ಯಮಂತ್ರಿಗಳನ್ನು, ಸರಕಾರಗಳನ್ನು ಮತ್ತು ಮಧ್ಯ ಪ್ರದೇಶ ಹಾಗು ಉತ್ತರ ಪ್ರದೇಶಗಳ ಜನರನ್ನು ಅಭಿನಂದಿಸುತ್ತೇನೆ. ಇಂದು ಈ ಇಬ್ಬರು ನಾಯಕರು ಮತ್ತು ಸರಕಾರಗಳು ಎಂತಹ ದೊಡ್ಡ ಕೆಲಸ ಮಾಡಿರುವರೆಂದರೆ ಭಾರತದ ಜಲ ಸಂಬಂಧಿತ ಉಜ್ವಲ ಭವಿಷ್ಯದಲ್ಲಿ ಈ ಕೆಲಸ ಸುವರ್ಣಾಕ್ಷರದಲ್ಲಿ ಬರೆದಿಡಲ್ಪಡಲಿದೆ. ಇದು ಕ್ಷುಲ್ಲಕ ಕೆಲಸ ಅಲ್ಲ. ಇದು ಅವರಿಬ್ಬರು ಸಹಿ ಹಾಕಿದ ಸಣ್ಣ ಕಾಗದವಲ್ಲ. ಅವರು ಬುಂದೇಲ್ ಖಂಡದ ಜನತೆಗೆ ಇಂದು ಹೊಸ ಜೀವನ ರೇಖೆಯನ್ನು ಕೊಟ್ಟಿದ್ದಾರೆ ಮತ್ತು ಅದರ ಭವಿಷ್ಯ ಬದಲಾಯಿಸಲು ಹೊರಟಿದ್ದಾರೆ. ಅದುದರಿಂದ ಈ ಇಬ್ಬರು ಮುಖ್ಯಮಂತ್ರಿಗಳು, ಸರಕಾರಗಳು ಮತ್ತು ಈ ಎರಡು ರಾಜ್ಯಗಳ ಜನತೆ ಅಭಿನಂದನಾರ್ಹರು. ಆದರೆ ಕೆನ್ –ಬೆಟ್ವಾದ ಕಾಮಗಾರಿ ನಮ್ಮ ಜೀವಿತಾವಧಿಯೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವತ್ತ ಗರಿಷ್ಟ ಪ್ರಯತ್ನಗಳನ್ನು ಮಾಡುವುದು ಮತ್ತು ಆ ವಲಯದಲ್ಲಿ ನೀರು ಹರಿಯುವಂತೆ ನೋಡಿಕೊಳ್ಳುವುದು ಬುಂದೇಲ್ ಖಂಡದ ನನ್ನ ಸಹೋದರರ ಜವಾಬ್ದಾರಿ. ನಮ್ಮ ಕೃಷಿ ಭೂಮಿಯನ್ನು ಹಸಿರು ಮಾಡಲು ನಾವೆಲ್ಲರೂ ಕೈಜೋಡಿಸೋಣ. ಈ ಯೋಜನೆಯು ಲಕ್ಷಾಂತರ ಜನರು ಮತ್ತು ಕೃಷಿಕರು ನೀರು ಪಡೆದುಕೊಳ್ಳುವ ಜಿಲ್ಲೆಗಳಲ್ಲಿ ವಿದ್ಯುತ್ ಉತ್ಪಾದನೆಯನ್ನೂ ಮಾಡಲಿದೆ. ಅದು ಬಾಯಾರಿಕೆಯನ್ನು ನೀಗಿಸಲಿದೆ ಮತ್ತು ಪ್ರಗತಿಯನ್ನು ಖಾತ್ರಿಪಡಿಸಲಿದೆ.

ಸಹೋದರರೇ ಮತ್ತು ಸಹೋದರಿಯರೇ,

ನಮ್ಮ ಪ್ರಯತ್ನಗಳು ಭಗೀರಥನ ಪ್ರಯತ್ನಗಳಂತೆ ಪ್ರಾಮಾಣಿಕವಾಗಿದ್ದರೆ, ವಿಶ್ವಾಸಪೂರ್ಣವಾಗಿದ್ದರೆ ಯಾವುದೇ ಗುರಿಗಳನ್ನು ಸಾಧಿಸಬಹುದು. ಇಂದು ಇಂತಹದೇ ಪ್ರಯತ್ನಗಳು ಜಲ್ ಜೀವನ ಆಂದೋಲನದಲ್ಲಿ ಕಂಡು ಬರುತ್ತಿವೆ. ಬರೇ ಒಂದೂವರೆ ವರ್ಷಕ್ಕೆ ಮೊದಲು ನಮ್ಮ ದೇಶದ 19 ಕೋಟಿ ಗ್ರಾಮ ವಾಸಿ ಕುಟುಂಬಗಳಲ್ಲಿ ಬರೇ 3.5 ಕೋಟಿ ಕುಟುಂಬಗಳಿಗೆ ಮಾತ್ರವೇ ಕೊಳವೆ ಮೂಲಕ ಕುಡಿಯುವ ನೀರು ಲಭಿಸುತಿತ್ತು. ಜಲ ಜೀವನ ಆಂದೋಲನ ಆರಂಭಗೊಂಡ ಬಳಿಕ ಇಷ್ಟು ಕಡಿಮೆ ಅವಧಿಯಲ್ಲಿ 4 ಕೋಟಿ ಹೊಸ ಕುಟುಂಬಗಳಿಗೆ ಕೊಳವೆ ಮೂಲಕ ಕುಡಿಯುವ ನೀರು ಪೂರೈಕೆಯಾಯಿತು ಎಂಬುದು ನನಗೆ ಸಂತೋಷದ ಸಂಗತಿ. ಈ ಆಂದೋಲನದ ಬಹಳ ಪ್ರಮುಖವಾದ ಸಂಗತಿ ಎಂದರೆ ಜನರ ಸಹಭಾಗಿತ್ವ. ಮತ್ತು ಸ್ಥಳೀಯಾಡಳಿತ ಮಾದರಿ ಅದರ ಕೇಂದ್ರ ಬಿಂದುವಿನಲ್ಲಿರುವುದು. ನಾನು ನನ್ನ ಅನುಭವದ ಆಧಾರದಲ್ಲಿ ಹೇಳುವುದೇನೆಂದರೆ ಹೆಚ್ಚು ಹೆಚ್ಚು ಮಂದಿ ಸಹೋದರಿಯರು ಮುಂದೆ ಬಂದು ಜವಾಬ್ದಾರಿ ತೆಗೆದುಕೊಂಡರೆ ಆಂದೋಲನಕ್ಕೆ ಹೆಚ್ಚು ಶಕ್ತಿ ಬರುತ್ತದೆ. ಯಾಕೆಂದರೆ ನಮ್ಮ ತಾಯಂದಿರು ಮತ್ತು ಸಹೋದರಿಯರು ನೀರಿನ ಮಹತ್ವವನ್ನು ತಿಳಿದುಕೊಂಡಷ್ಟು ಬೇರಾರೂ ತಿಳಿದುಕೊಂಡಿರಲಾರರು. ಮನೆಯಲ್ಲಿ ನೀರಿನ ಅಭಾವ ಇದ್ದಾಗ ತಾಯಂದಿರು ಮತ್ತು ಸಹೋದರಿಯರು ಅದರ ಸಮಸ್ಯೆಯನ್ನು ಅರಿತುಕೊಂಡಿರುತ್ತಾರೆ. ನಾವು ನೀರಿನ ನಿರ್ವಹಣೆಯನ್ನು ನಮ್ಮ ತಾಯಂದಿರಿಗೆ ಮತ್ತು ಸಹೋದರಿಯರಿಗೆ ಹಸ್ತಾಂತರಿಸಿದರೆ ನಾವು ಯೋಚನೆ ಕೂಡಾ ಮಾಡಿರಲಾರದಷ್ಟು ಪರಿವರ್ತನೆಯನ್ನು ತರುತ್ತಾರೆ. ಈ ಇಡೀ ಕಾರ್ಯಕ್ರಮವನ್ನು ಗ್ರಾಮಗಳು ನಿಭಾಯಿಸುತ್ತಿವೆ ಎಂಬುದು ಎಲ್ಲಾ ಪಂಚಾಯತ್ ರಾಜ್ ಸಹೋದ್ಯೋಗಿಗಳಿಗೆ ಗೊತ್ತಿದೆ. ನಾನೀಗಾಗಲೇ ಹೇಳಿದಂತೆ ಅದನ್ನು ನಮ್ಮ ಮಹಿಳೆಯರ ನಾಯಕತ್ವದಲ್ಲಿ ಮುಂದುವರೆಸಿಕೊಂಡು ಹೋಗಿ. ಮತ್ತು ಆಗ ನೀವು ಪಲಿತಾಂಶಗಳನ್ನು ನೋಡುತ್ತೀರಿ. ಶಾಲೆಗಳಿಗೆ, ಅಂಗನವಾಡಿಗಳಿಗೆ, ಆಶ್ರಮಗಳಿಗೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಹಾಗು ಸಮುದಾಯ ಕೇಂದ್ರಗಳಿಗೆ ಆದ್ಯತೆಯಾಧಾರದಲ್ಲಿ ಕೊಳವೆ ಮೂಲಕ ಕುಡಿಯುವ ನೀರು ಖಾತ್ರಿಪಡಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ.

ಸ್ನೇಹಿತರೇ,

ಜಲ ಜೀವನ ಆಂದೋಲನದಲ್ಲಿ ಇನ್ನೊಂದು ಸಂಗತಿ ಇದೆ. ಅದನ್ನು ಹೆಚ್ಚಾಗಿ ಚರ್ಚೆ ಮಾಡಿಲ್ಲ. ನೀರಿನಲ್ಲಿ ವಿಷಕಾರಿ ಅಂಶಗಳು ಮತ್ತು ಇತರ ಮಾಲಿನ್ಯಕಾರಕ ಅಂಶಗಳ ಬಹಳ ದೊಡ್ಡ ಸಮಸ್ಯೆ ಇದೆ. ಕಲುಷಿತ ನೀರಿನಿಂದಾಗಿ, ಹಲವಾರು ರೋಗಗಳು ಹರಡಿ ಜನರ ಜೀವನವನ್ನು ಹಾಳು ಮಾಡುತ್ತವೆ ಮತ್ತು ಎಲುಬು ಸಂಬಂಧಿ ರೋಗಗಳು ಬದುಕನ್ನು ದುಸ್ತರ ಮಾಡುತ್ತವೆ. ನಾವು ಈ ರೋಗಗಳನ್ನು ತಡೆಯಲು ಸಮರ್ಥರಾದರೆ, ನಾವು ಹಲವಾರು ಜೀವಗಳನ್ನು ಉಳಿಸಲು ಸಮರ್ಥರಾಗುತ್ತೇವೆ. ಇದಕ್ಕೆ ಜಲ ಪರೀಕ್ಷೆ ಕೂಡಾ ಬಹಳ ಮುಖ್ಯ. ಆದರೆ ನಾವು ಈ ಮಳೆ ನೀರನ್ನು ಬೃಹತ್ ಪ್ರಮಾಣದಲ್ಲಿ ಹಿಡಿದಿಟ್ಟುಕೊಂಡರೆ, ಇಂತಹ ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ. ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ಜಲ ಪರೀಕ್ಷೆಯ ನಿಟ್ಟಿನಲ್ಲಿ ಸರಕಾರ ಗಂಭೀರವಾಗಿ ಕಾರ್ಯಾಚರಿಸುತ್ತಿದೆ. ನಮ್ಮ ಹಳ್ಳಿಗಳಲ್ಲಿ, ಗ್ರಾಮಗಳಲ್ಲಿ ವಾಸಿಸುತ್ತಿರುವ ಸಹೋದರಿಯರು ಮತ್ತು ಸಹೋದರರನ್ನು ಈ ಜಲ ಪರೀಕ್ಷೆಯಲ್ಲಿ ಒಳಗೊಳಿಸಿಕೊಳ್ಳಲಾಗುತ್ತಿರುವುದು ನನಗೆ ಸಂತೋಷದ ಸಂಗತಿ. ಕೊರೊನಾ ಅವಧಿಯಲ್ಲಿ 4.5 ಲಕ್ಷಕ್ಕೂ ಅಧಿಕ ಮಹಿಳೆಯರನ್ನು ಜಲ ಪರೀಕ್ಷೆಗಾಗಿ ತರಬೇತಿ ಮಾಡಲಾಗಿದೆ. ಪ್ರತೀ ಹಳ್ಳಿಯಲ್ಲೂ ಕನಿಷ್ಟ ಐದು ಮಂದಿ ಮಹಿಳೆಯರಿಗೆ ನೀರು ಪರೀಕ್ಷೆಯ ತರಬೇತಿ ನೀಡಲಾಗುತ್ತಿದೆ. ಜಲ ಆಡಳಿತದಲ್ಲಿ ನಮ್ಮ ಸಹೋದರಿಯರು ಮತ್ತು ಪುತ್ರಿಯರ ಪಾತ್ರ ಹೆಚ್ಚಿದಂತೆ ಉತ್ತಮ ಫಲಿತಾಂಶಗಳು ಖಚಿತವಾಗಿ ಲಭ್ಯವಾಗುತ್ತವೆ.

ನನಗೆ ವಿಶ್ವಾಸವಿದೆ ನಾವು ಸಾರ್ವಜನಿಕ ಸಹಭಾಗಿತ್ವದಲ್ಲಿ ದೇಶದ ನೀರನ್ನು ಉಳಿಸಿಕೊಳ್ಳುತ್ತೇವೆ, ಸಂರಕ್ಷಿಸುತ್ತೇವೆ ಮತ್ತು ಅವರ ಬಲದಲ್ಲಿ ನಾವು ಮತ್ತೆ ದೇಶವನ್ನು ಉಜ್ವಲವಾಗಿ ಕಟ್ಟುತ್ತೇವೆ. ನಾನು ದೇಶದ ಎಲ್ಲಾ ಯುವ ಜನತೆಯಲ್ಲಿ, ತಾಯಂದಿರು ಮತ್ತು ಸಹೋದರಿಯರಲ್ಲಿ, ಮಕ್ಕಳಲ್ಲಿ, ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ , ಸಾಮಾಜಿಕ ಸಂಸ್ಥೆಗಳಲ್ಲಿ , ಸರಕಾರಿ ಇಲಾಖೆಗಳಲ್ಲಿ , ಎಲ್ಲಾ ರಾಜ್ಯ ಸರಕಾರಗಳಲ್ಲಿ ಮನವಿ ಮಾಡುತ್ತೇನೆ ಜಲ ಶಕ್ತಿ ಅಭಿಯಾನವನ್ನು ಯಶಸ್ವಿಗೊಳಿಸಿ ಎಂಬುದಾಗಿ. ನಾವು ಮುಂದಿನ ನೂರು ದಿನಗಳಲ್ಲಿ ನಮ್ಮಲ್ಲಿಗೆ ಅತಿಥಿಗಳು ಬರುವಾಗ ಮಾಡುವಂತೆ ಅಥವಾ ಹಳ್ಳಿಗೆ ಮದುವೆ ದಿಬ್ಬಣ ಬರುವಾಗ ಜಲ ಸಂಗ್ರಹಕ್ಕಾಗಿ ಮಾಡುವಂತಹ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಹಳ್ಳಿಗಳಲ್ಲಿ ಮಳೆಗಾಲ ಬರುವುದಕ್ಕೆ ಮೊದಲು ಇಂತಹದೇ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅಲ್ಲಿ ಉತ್ಸಾಹ ಇರಬೇಕು. ನೀವು ಒಂದೇ ಒಂದು ಹನಿಯೂ ಪೋಲಾಗದಂತೆ ನೋಡಿಕೊಳ್ಳಬೇಕು. ಎರಡನೆಯದಾಗಿ ಅಲ್ಲಿ ನೀರು ಸಾಕಷ್ಟು ಇದ್ದಾಗ , ನಾವು ಅದರ ದುರ್ಬಳಕೆ ಮಾಡುವ ಅಭ್ಯಾಸ ಹೊಂದಿರುತ್ತೇವೆ. ಜಲ ಸಂರಕ್ಷಣೆ, ಸಂಗ್ರಹವು ಅದರ ಬಳಕೆಯಷ್ಟೇ ಮಹತ್ವದ್ದು. ನಾವಿದನ್ನು ಎಂದೂ ಮರೆಯಬಾರದು.

ವಿಶ್ವ ಜಲ ದಿನಾಚರಣೆ ಸಂದರ್ಭದ ಈ ಜಾಗೃತಿ ಕಾರ್ಯಕ್ರಮಕ್ಕಾಗಿ ನಾನು ಮತ್ತೊಮ್ಮೆ ಪ್ರತಿಯೊಬ್ಬರನ್ನೂ ಅಭಿನಂದಿಸುತ್ತೇನೆ, ಅದರಲ್ಲೂ ಇದನ್ನೊಂದು ಆಂದೋಲನ ಮಾಡಿಕೊಂಡಿರುವ ಸರಪಂಚರು ಮತ್ತು ಯುವ ಜನತೆಗೆ ವಿಶೇಷ ಅಭಿನಂದನೆಗಳು. ಈ ಆಂದೋಲನದಲ್ಲಿ ಕೈಜೋಡಿಸಿದ ಹಲವಾರು ಜನರು ದೇಶದ ಮೂಲೆ ಮೂಲೆಗಳಲ್ಲಿದ್ದಾರೆ ಮತ್ತು ಐದು ಮಂದಿಯ ಜೊತೆಗೆ ಮಾತನಾಡುವ ಅವಕಾಶ ನನಗೆ ಸಿಕ್ಕಿದೆ. ಜಲ ಸಂರಕ್ಷಣೆಯ ಪ್ರಯತ್ನಗಳನ್ನು ನಾವು ಮಾಡೋಣ, ನಮ್ಮ ಭೂಗ್ರಹ, ಬದುಕು ಮತ್ತು ಆರ್ಥಿಕತೆ ಪುನಶ್ಚೇತನಗೊಳ್ಳುವ ಮೂಲಕ ನಮಗೆ ಯಶಸ್ಸು ದೊರೆಯಲಿದೆ ಮತ್ತು ನಾವು ಶಕ್ತಿಶಾಲೀ ರಾಷ್ಟ್ರವಾಗಿ ಮುನ್ನಡೆಯೋಣ. ಈ ನಿರೀಕ್ಷೆಗಳೊಂದಿಗೆ, ನಿಮ್ಮೆಲ್ಲರಿಗೂ ಬಹಳ ಬಹಳ ಧನ್ಯವಾದಗಳು.

ಘೋಷಣೆ: ಇದು ಪ್ರಧಾನ ಮಂತ್ರಿ ಅವರ ಭಾಷಣದ ಸರಿಸುಮಾರಾದ ಭಾಷಾಂತರ. ಮೂಲ ಭಾಷಣವನ್ನು ಹಿಂದಿಯಲ್ಲಿ ಮಾಡಲಾಗಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
IIT Delhi tops India in QS Rankings 2027; 52 Indian institutions feature

Media Coverage

IIT Delhi tops India in QS Rankings 2027; 52 Indian institutions feature
NM on the go

Nm on the go

Always be the first to hear from the PM. Get the App Now!
...
Text of Prime Minister addresses the Indian Community in Paris
June 18, 2026

नमस्ते!

बों जू!

ऐसा लग रहा है, आप सब छुट्टी के मूड में हैं।

साथियों,

ये पेरिस शहर, Lights का शहर है, रंगों का शहर है, यहां Art है, Ideas हैं, और innovation की प्रेरणा भी है। इस शहर को भारत के अलग-अलग राज्यों से आए आप सभी लोग और भी खूबसूरत बना देते हैं। नए नए रंगों से भर देते हैं।

कोई तमिल है, कोई पंजाबी है, कोई गुजराती है, तो कोई मराठी है, और कोई बंगाली है। भारत के हर कोने का प्रतिनिधित्व यहां दिखाई देता है।

साथियों,

मैं जब 14 जून को नीस पहुंचा था तो सबसे पहले भारत इनोवेट्स कार्यक्रम में शामिल हुआ था। आज जब मैं फ्रांस से वापसी की तैयारी में हूं तो लग रहा है जैसे भारत कनेक्ट्स कार्यक्रम में आ गया हूं।

फ्रांस में रहने वाले आप लोगों ने 21वीं सदी के भारत-फ्रांस रिश्तों को जिस तरह कनेक्ट किया है, वो हमारी Strategic Partnership की बहुत बड़ी ताकत बन रही है। मैं आप सभी के लिए भारत से 140 करोड़ देशवासियों की शुभकामनाएं लेकर आया हूं। इस आत्मीय स्वागत के लिए, मैं आप सभी का हृदय से आभार व्यक्त करता हूं।

साथियों,

आज मैं ऐसे समय में फ्रांस आया हूं जब कुछ ही दिन पहले हमारी सरकार के 12 वर्ष पूरे हुए हैं। चुने हुए प्रधानमंत्री के रूप निरंतर 12 साल तक देश की सेवा करना मेरे जीवन का बहुत बड़ा सौभाग्य रहा है। यह भारत के लोकतंत्र की शक्ति है जिसने एक चायवाले को यहां तक पहुंचा दिया।

साथियों,

बीते 12 वर्ष, 140 करोड़ भारतीयों के अद्भुत सामर्थ्य के रहे हैं। 12 साल के इस कालखंड में भारत का GDP दोगुना हुआ है। Airports की संख्या दोगुनी हुई है। Universities की संख्या भी दोगुनी हो गई है। Highway Construction की स्पीड तीन गुना बढ़ गई। और Metro Network, चार गुणा बड़ा हो गया है।

मैं आपको कुछ और फैक्ट्स दूंगा, उससे आप अंदाजा लगा पाएंगे कि भारत किस स्पीड और कितने बड़े स्केल पर काम कर रहा है। पिछले 12 वर्षों में भारत का Defence Export 35 गुणा यानि Thirty Five Times बढ़ गया है।

औऱ एक फैक्ट सुनिए भारत में मोबाइल मैन्यूफैक्टरिंग यूनिट्स में, 100 गुणा की बढ़ोतरी हुई है। 100 times. भारत अब दुनिया का दूसरा सबसे बड़ा mobile phone manufacturer है। इसी गति, इसी प्रगति का नतीजा है कि आज भारत दुनिया की Fastest Growing Major Economy है।

साथियों,

आज भारत की कहानी सिर्फ Economic Progress की कहानी नहीं है। सिर्फ यहाँ अटक नहीं जाती है। ये Social Transformation की भी कहानी है।

पिछले 12 साल में देश में 25 करोड़ लोग गरीबी से बाहर निकले हैं। यानि एक ऐसी प्रगति जिसका लाभ समाज के अंतिम व्यक्ति तक पहुंच रहा है। फ्रांस में जितने घर हैं, उससे भी अधिक पक्के घर बीते 12 वर्ष में हमने जरूरतमंदों के लिए बनाए हैं।

अब हर परिवार के पास, गरीब से गरीब क्यों न हो, Bank Account है। Financial Inclusion एक सरकारी कार्यक्रम नहीं, बल्कि सामाजिक परिवर्तन का अभियान बना है।

साथियों,

इन 12 वर्षों की उपलब्धियों में, एक उपलब्धि ऐसी भी है जिसे किसी आंकड़े से, या अंकों से, नहीं मापा जा सकता। वह है 140 करोड़ भारतीयों का आत्मविश्वास।

आज का भारत और आज के भारत का युवा बहुत बड़े सपने देख रहा है। भारत का किसान नई संभावनाओं के साथ आगे बढ़ रहा है। भारत की महिलाएं नए नेतृत्व का परिचय दे रही हैं। इसलिए ये सिर्फ Achievements के 12 साल नहीं हैं, ये भारत की एस्पिरेशन्स को नई बुलंदी देने का कालखंड रहा है।

साथियों,

एक समय था जब दूर-दराज के गांवों तक आधुनिक सुविधाएं पहुंचाना वाकई बहुत मुश्किल भरा था। आज उन्हीं गांवों में बिजली भी है, इंटरनेट भी है, और डिजिटल सेवाओं की पूरी दुनिया भी है। आज एक क्लिक पर, कभी भी, कहीं भी बैंकिंग सेवाएं उपलब्ध हैं।

आज मोबाइल फोन, भारत के नागरिकों को अनेक सुविधाओं से कनेक्ट कर रहा है। हमारे किसान, हमारे मछुआरे, हमारे dairy farmers, हमारी महिलाएं, हमारे स्टूडेंट्स, सभी टेक्नोलॉजी के माध्यम से सशक्त हो रहे हैं, और अपने लिए नए अवसर बना रहे हैं।

साथियों,

आपने 125 करोड़ से अधिक Aadhaar IDs के बारे में सुना है। लेकिन आज भारत सिर्फ पहचान को डिजिटल नहीं बना रहा। आज करीब 90 करोड़ भारतीयों की Unique Digital Health IDs बनाई जा चुकी हैं। जिससे मेडिकल रिकॉर्ड सुरक्षित और accessible बन गए हैं। इससे हेल्थकेयर डिलीवरी और अधिक आसान और efficient हो रही है।

साथियों,

इन उपलब्धियों की सबसे बड़ी विशेषता यह है कि इनमें से अधिकांश चीजें कुछ वर्ष पहले तक कल्पना जैसी लगती थीं। कौन सोच सकता था कि गांव-गांव तक हाई-स्पीड इंटरनेट पहुंचेगा ? कौन सोच सकता था कि दूर-सुदूर के गांवों में भी QR code जीवन का हिस्सा बन जायेगा ? गांव में कोई बहन, ड्रोन से खेती करने में मदद करेगी, ये भी असंभव लगता था।

लेकिन आज यह सब, भारत के करोड़ों लोगों के जीवन का सामान्य हिस्सा बनता जा रहा है। और आपको गर्व होगा साथियों, यही नए भारत की पहचान है।

जो कभी सपना था, वह आज सच्चाई है। जो कभी नामुमकिन लगता था, वो आज मुमकिन हुआ है, औऱ ये करने के पीछे सबसे बड़ी ताकत क्या है? किसकी वजह से ये सब संभव हुआ है? यह मोदी के कारण नहीं, वो ताकत है- भारत का लोकतंत्र, भारत की डेमोक्रेसी। इस डेमोक्रेसी में सबका साथ है, सबका विकास है।

साथियों,

आज से 50 या 100 साल बाद जब भारत के इस कालखंड की समीक्षा होगी, तो ये बात उभरकर सामने आएगी कि इस कालखंड को भारत की Aspirations ने ड्राइव किया। यह भारत के एस्पिरेशन्स का नया युग है।

जहां बिजली पहुंची है, वहां लोग सिर्फ बिजली नहीं चाहते, वे Smart Living चाहते हैं। जहां ट्रेन पहुंची है, वहां लोग High-Speed Connectivity चाहते हैं। जहां हाईवे बने हैं, वहां लोग World-Class Expressways चाहते हैं। जहां इंटरनेट पहुंचा है, वहां लोग AI और Digital Innovation में नेतृत्व चाहते हैं।

यानि आज भारत के लोग अपने जीवन को भी Next Level पर ले जाना चाहते हैं, और भारत को भी Next Level पर ले जाना उनका मकसद है, उनका संकल्प है, उनके सपने है।

और साथियों,

यही Aspirations आज भारत की विकास यात्रा की सबसे बड़ी शक्ति हैं। मैं आपको भारत की Space Journey का उदाहरण दूंगा।

भारत ने चंद्रयान को चंद्रमा के South Pole पर उतारा। दुनिया ने इसे एक बहुत बड़ी उपलब्धि माना। लेकिन भारत इसे अपनी मंजिल मानकर रुका नहीं। आज देश गगनयान की तैयारी कर रहा है। भारत अंतरिक्ष में अपना Space Station बनाने की दिशा में आगे बढ़ रहा है।

हमारे Space Startups Global Space Economy में अपनी जगह बनाने के लिए पुरजोश काम कर रहे हैं, आगे बढ़ रहे हैं।

साथियों,

Green Energy के क्षेत्र में भी भारत की यही एस्पिरेशंस दिखाई देती है। Solar Power में भारत की उपलब्धियों की दुनिया भर में लगातार चर्चा हो रही हैं। लेकिन भारत अगली छलांग की तैयारी कर रहा है।

Green Hydrogen में बड़े निवेश हो रहे हैं। Advanced Nuclear Energy पर तेजी से काम हो रहा है। आपने भारत के Fast Breeder nuclear Reactor से जुड़ी प्रोग्रेस के बारे में भी सुना ज़रूर होगा। ये भारत के न्यूक्लियर एनर्जी लैंडस्केप में क्रांतिकारी परिवर्तन करने का बहुत बड़ा अचीवमेंट हमारे सीसेन्टिस्टों ने किया है।

साथियों,

आज का भारत भविष्य का पूरा Ecosystem बना रहा है। भारत एक साथ हर उस क्षेत्र में निवेश कर रहा है, जो आने वाले दशकों की दिशा तय करेगा।

अभी आपने कुछ दिन पहले ही देखा है नीस में भारत इनोवेट्स का एक आयोजन किया। ये इवेंट भारत के डीप टेक सामर्थ्य को दुनिया तक पहुंचाने का एक और माध्यम था। इसमें भारत के 120 Deep-Tech Startups उपस्थित थे। Bharat Innovates में करीब एक हजार चार सौ B2B Meetings हुईं है। कई Startups के लिए Investment Commitments आगे बढ़ीं, Commercial Orders के लिए रास्ते खुले। French और European Universities तथा Incubators के साथ Engagements बढ़ रही हैं।

Student Exchanges, Joint Research, और Innovation Support के नए रास्ते बने। इसलिए Bharat Innovates सिर्फ एक Summit नहीं रहा। यह Innovation Diplomacy का एक नया मॉडल बना है।

और आज ही पेरिस में VivaTech इवेंट के जरिए, इस यात्रा को हमने और आगे बढ़ाया। नीस में हमने Ideas को Capital से जोड़ा और पेरिस में Indian Innovation को Global Scale से जोड़ा। आज दुनिया देख रही है भारत केवल भविष्य के लिए तैयार नहीं हो रहा है। भारत भविष्य को आकार दे रहा है।

साथियों,

एक समय था, जब देशों के बीच रिश्ते केवल व्यापार से तय होते थे। आज व्यापार के साथ-साथ Trust यानि भरोसा भी उतना ही महत्वपूर्ण हो गया है।

हर देश Reliable Supply Chains चाहता है। हर देश Stable Partnerships चाहता है। हर देश ऐसे साथियों की तलाश में है, जिन पर लंबे समय तक भरोसा किया जा सके। और ऐसे समय में, भारत विश्व में एक Trusted Partner के रूप में उभर रहा है।

एवियां में G7 बैठक के दौरान मैंने trust based partnerships बनाने पर ज़ोर दिया। ग्लोबल साउथ के देशों के साथ equal पार्टनर्स के रूप में आगे बढ़ने का आह्वान किया। भारत का G7 समिट में संदेश था Global Governance तभी प्रभावी होगी जब वह Inclusive होगी। Global Growth तभी Sustainable होगी जब वह शेयर्ड होगी। और Global Technology तभी मानवता के लिए उपयोगी होगी जब वह Trusted होगी।

साथियों,

भारत और दुनिया के बीच व्यापारिक रिश्तों में नई ऊर्जा नज़र आ रही है। फ्रांस के साथ भारत का ट्रेड लगतार बढ़ रहा है। पिछले कुछ वर्षों में भारत ने दुनिया के अनेक देशों के साथ Free Trade Agreements किए हैं। यूरोपियन यूनियन हो, यूनाइटेड किंगडम हो दुनिया के हर देश, हर रीजन के साथ भारत समझौते कर रहा है।

अगले महीने से भारत और UK के बीच ट्रेड एग्रीमेंट भी लागू हो जाएगा। यह एग्रीमेंट भारत के farmers, workers और innovators को अनेक नए अवसर प्रदान करेगा।

साथियों,

आज दुनिया Uncertainty और Disruption के दौर से गुजर रही है। ऐसे समय में भारत और फ्रांस की साझेदारी विश्वास, स्थिरता और सहयोग का एक मजबूत स्तंभ बन रहा है।

इस वर्ष हमने भारत और फ्रांस के संबंधों को Special Global Strategic Partnership का दर्जा दिया था। नीस में मेरे मित्र President Macron और मैंने हमारे संबंधों को force for global good बनाने पर चर्चा की। Defence से लेकर space और नुक्लियर तक AI और क्रिटीकल मिनरल्स से लेकर high speed railway तक, हर क्षेत्र में हम मिलकर आगे बढ़ेंगे।

साथियों,

Solar energy हो, या AI के क्षेत्र में सहयोग हो, भारत और फ्रांस मिलकर ऐसे समाधान विकसित कर रहे हैं जो पूरी मानवता के हित में हैं। पिछले वर्ष पेरिस में और इस वर्ष दिल्ली में हमने AI Summit को Co-chair किया।

अब हम साथ मिलकर अगले वर्ष “तृष्णा” satellite को लॉन्च करने जा रहें हैं। यह “तृष्णा” satellite जो विश्व में फूड और वाटर सिक्युरिटी सुनिश्चित करने में योगदान देगा।

और साथियों,

यह सभी गवर्नमेंट टू गवर्नमेंट पहलो में आप सभी का योगदान बहुत महत्वपूर्ण है। ये आप हैं जो भारत और यूरोप के बीच सबसे मजबूत सेतु हैं। आप दोनों समाजों को समझते हैं। दोनों बाजारों को समझते हैं। आने वाले समय में Talent, Trade, Technology, Tourism और Investment के नए अवसरों को आगे बढ़ाने में आपकी भूमिका लगातार बढ़ने वाली हैं।

साथियों,

भारत और फ्रांस के रिश्तों को साझा इतिहास, साझा मूल्यों और साझा विश्वास ने आगे बढ़ाया है। विश्व युद्धों के दौरान फ्रांस की धरती पर बलिदान देने वाले भारतीय सैनिकों की स्मृतियां आज भी हमें जोड़ती हैं।

मुझे पहले नव शापेल में श्रद्धांजलि देने का अवसर मिला, पिछले वर्ष प्रेसिडेंट मैक्रों के साथ मार्सेय के वॉर मेमोरियल जाने का अवसर भी मिला। ये हमारी साझा विरासत है।

फ्रांस, भारतीयों के योगदान को संजोता भी है और सराहता भी है। भारतीय मूल की नूर इनायत खान हों, जिन्होंने फ्रांस की Resistance के लिए अपना जीवन बलिदान किया, या महाराजा रणजीत सिंह के साथ काम करने वाले जनरल जां फ्रांस्वा अलार हों ये सभी भारत और फ्रांस की साझा विरासत के प्रतीक हैं।

भारत के राज्य पुडुचेरी में भी फ्रेंच विरासत की झलक दिखाई देती है। वहां का Architecture, वहां की कला-संस्कृति और खान-पान सभी में हमारे संबंधों की महेक है।

साथियों,

इस समय फ्रांस समेत पूरी दुनिया में International Yoga Day की तैयारी भी चल रही है। इस अवसर पर मैं, फ्रांस में योग को आगे बढ़ाने वाले श्रीमान महेश घाट्राड्याल जी को भी आदरपूर्वक श्रद्धांजलि देता हूं। मैं पद्म पुरस्कार से सम्मानित, शार्लोत शोपां जी को भी प्रणाम करता हूं। जिन्होंने सौ वर्ष की आयु में भी, योग के माध्यम से फ़्रांस को भारत की विरासत से जोड़ा है। उनका जीवन यह सिद्ध करता है: Yoga does not add years to life, it adds life to years.

साथियों,

मैं फ्रेद नेग्री जी को भी आदरपूर्वक श्रद्धापूर्वक याद करता हूं। भारतीय विरासत को संरक्षित करने में उनका योगदान अतुल्य रहा है।

साथियों,

भारत और फ्रांस को कनेक्ट करने वाली एक और चीज है, और वो है फुटबॉल। इस वक्त यहां फुटबॉल फीवर पूरे जोर पर है। फ्रांस में इसकी दीवानगी, चप्पे-चप्पे पर दिखती है। लेकिन भारत में भी फुटबॉल का क्रेज़ सिर चढ़कर बोलता है।

खासतौर पर फ्रांस की टीम के फैन्स भारत में बहुत अधिक हैं। फ़्रांस ने इस वर्ल्ड कप की शुरुआत एक जोरदार जीत से शुरू की है। मैं फ्रांस की टीम को बहुत-बहुत शुभकामनाएं देता हूं।

साथियों,

जाने से पहले, आप सभी के लिए कुछ और अच्छी खबरें भी लेकर के आया हूँ। वो आपके लिए हैं। पिछले वर्ष, मार्सेय में कॉन्सुलेट खोला गया, इससे काफी अधिक सुविधा मिल रही है। कुछ हफ्ते पहले, Indian Nationals के लिए French Airports पर Visa-free Transit की व्यवस्था शुरू हो गई है।

Students और Professionals की Mobility बढ़ाना हो, या Educational Qualifications की Mutual Recognition की बात हो, या फिर French Universities के भारत में Campus खोलना हो, इन सभी पर हम मिलकर आगे बढ़ रहें हैं।

अब फ्रांस में UPI के उपयोग का दायरा भी और बढ़ने जा रहा है। यानि भारत-फ्रांस कनेक्ट भी Instant और आपसी Payment भी Instant!

साथियों,

इन सभी पहलों से, हम भारत और फ़्रांस को और करीब ला रहें हैं। और मैं फिर कहूंगा इस साझेदारी की नींव, इस रिश्ते की असली ताकत आप सभी हैं। आप सब मेरे देशवासी हैं।

आज जब भारत तेज़ी से विकसित भारत के लक्ष्य की ओर बढ़ रहा है, तो मैं आप सभी से भारत के साथ और गहराई से जुडने का आग्रह करूंगा। इससे भारत की विकास यात्रा को नई शक्ति मिलेगी, और आपको अपनी पुरखों की धरती की सेवा करने का अवसर भी मिलेगा।

इन्हीं शब्दों के साथ आप सभी के प्रेम आपके उत्साह और इस आत्मीय स्वागत के लिए मैं एक बार फिर आप सभी का आभार व्यक्त करता हूं।

भारत माता की जय!

बहुत बहुत धन्यवाद।